Homeಕರ್ನಾಟಕ'ಪಿಟಿಸಿಎಲ್‌ ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

- Advertisement -
- Advertisement -

‘ಪಿಟಿಸಿಎಲ್‌ (PTCL) ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ‘ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ’ ಮುಖಂಡರು ಘೋಷಿಸಿದರು.

ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಮುಖಂಡರು, “ಪಿಟಿಸಿಎಲ್‌ (ಕೆಲವೊಂದು ಜಮೀನುಗಳ ಪರಭಾರೆ ನಿಷೇಧ) ಕಾಯ್ದೆ ತಿದ್ದುಪಡಿ ನಂತರವೂ ಸಂವಿಧಾನದ ಆಶಯದ ವಿರುದ್ಧ ತುಳಿತಕ್ಕೊಳಗಾದ ಲಕ್ಷಾಂತರ ಪರಿಶಿಷ್ಠ ಜಾತಿ/ಪರಿಶಿಷ್ಟಪಂಗಡದ ಜನರು ತಮ್ಮ ಬದುಕನ್ನು ಕಟ್ಟಿಕೊಳ್ಳಲು ಮಂಜೂರು ಮಾಡಿದ್ದ ಜಮೀನುಗಳನ್ನು ಕಾನೂನುಬಾಹಿರ, ನಯವಂಚನೆಯ ಮೂಲಕ ಕಬಳಿಸುತ್ತಿದ್ದಾರೆ” ಎಂದು ಆಕ್ರೋಶ ಹೊರಹಾಕಿದರು.

“ಭೂಮಿ ವಂಚಿತ ಕುಟುಂಬಗಳ ಬದುಕಿನ ಜೊತೆ ಆಟ ಆಡುತ್ತಾ, ಉದ್ದೇಶಪೂರ್ವಕವಾಗಿ ಅನ್ಯಾಯ ಮಾಡುತ್ತಿರುವ ಎಸಿ, ಡಿಸಿ, ಹೈಕೋರ್ಟ್, ಸುಪ್ರೀಂಕೋರ್ಟ್ ನ್ಯಾಯಾಲಯಗಳ ವಿರುದ್ಧ ಹಾಗೂ ಇಷ್ಟೆಲ್ಲಾ ಅನ್ಯಾಯ ಆಗುತ್ತಿದ್ದರೂ, ಸಮಸ್ಯೆ ಸರಿಪಡಿಸದೆ ಕೊಟ್ಟ ಮಾತನ್ನು ಉಳಿಸಿಕೊಳ್ಳದೆ ಸರ್ಕಾರ ಕಣ್ಣು ಮುಚ್ಚಿಕೊಂಡು ನಾಟಕ ಮಾಡುತ್ತಿದೆ” ಎಂದು ಹೋರಾಟಗಾರರು ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

“ಕಾಂಗ್ರೆಸ್ ಸರ್ಕಾರ ಅಧಿಕಾರ ಬಂದು 3 ವರ್ಷವಾದರೂ ಸಮಸ್ಯೆ ಬಗೆಹರಿಸುವ ಕೆಲಸ ಮಾಡುತ್ತಿಲ್ಲ. ಅದ್ದರಿಂದ, ಸರ್ಕಾರಕ್ಕೆ ಕೊನೆಯ ಎಚ್ಚರಿಕೆಯಾಗಿ, 10 ದಿನಗಳ ಕಾಲ ಅವಕಾಶ ಕೊಟ್ಟು ನಮ್ಮ ಬದುಕಿಗೋಸ್ಕರ ಹಾಗೂ ನಮ್ಮ ಭೂಮಿಗೋಸ್ಕರ ನಾವು ಮತ್ತೆ ಆಹೋರಾತ್ರಿ ಧರಣಿ ಸತ್ಯಾಗ್ರಹ ಮಾಡಲೇಬೇಕಾದ ಅನಿವಾರ್ಯತೆ ಇದೆ. ರಾಜ್ಯದ ಎಲ್ಲ ಭೂಮಿ ಕಳೆದುಕೊಂಡ ಬಾಧಿತರು ಮತ್ತು ಹಿರಿಯ ಹೋರಾಟಗಾರರ ಮಾರ್ಗದರ್ಶನದಂತೆ ಧರಣಿಗೆ ತೀರ್ಮಾನಿಸಲಾಗಿದೆ” ಎಂದು ಘೋಷಿಸಿದರು.

ಪ್ರಮುಖ ಬೇಡಿಕೆಗಳು

1) ಸರ್ಕಾರದ ಪಿಟಿಸಿಎಲ್‌ ತಿದ್ದುಪಡಿ ವಿರುದ್ದ ಸರ್ವಾಧಿಕಾರಿಗಳೆಂತೆ ವರ್ತಿಸುತ್ತಿರುವ ಕಂದಾಯ ಇಲಾಖೆಯ ಎಸಿ, ಡಿಸಿ ಹಾಗೂ ಸಂವಿಧಾನ ಆಶಯಗಳನ್ನು ರಕ್ಷಿಸಬೇಕಾದ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ನ್ಯಾಯಾಲಯಗಳಲ್ಲಿಯೂ ಸಹ ಆಗುತ್ತಿರುವ ಅನ್ಯಾಯವನ್ನು ಕಂಡಿಸುತ್ತೇವೆ, ಕಾಲಮಿತಿಯಿಂದ ಆಗುತ್ತಿರುವ ಅನ್ಯಾಯ ಸರಿಪಡಿಸಬೇಕು.

2) 2023 ತಿದ್ದುಪಡಿಯಲ್ಲಿ ಸೇರಿಸಿರುವ ಕಲಂ 5(1)ಡಿ ತೆಗೆಯಬೇಕು

3) ಪಿಟಿಸಿಎಲ್‌ ಕಾಯ್ದೆ ಕಲಂ 3(1) ಬಿ ಅಡಿಯಲ್ಲಿ ಬರುವ ಭೂಮಿಗಳಾದ ಎಲ್ಲ ರೀತಿಯ ಇನಾಂ ಭೂಮಿಗಳು (ತೋಟಿ ನೌಕರ ಇನಾಂ, ನಿರಗಂಟಿ,ತಳವಾರಿ, ಕುಲವಾಡಿಕೆ) ಕಿಮ್ಮತ್ತು, ಜಿ ಎಂ ಎಫ್, ಭೂ ಸುಧಾರಣೆ ಕಾಯ್ದೆ ಅಡಿಯಲ್ಲಿ ಆಗಿರುವ ಮಂಜೂರು, ಪ್ರತಿಕೂಲ ಸ್ವಾಧೀನ, ಸರ್ಕಾರದಿಂದ ಮಂಜೂರಾದ ಎಲ್ಲ ಬಗೆಯ ಭೂಮಿಗಳು ಪಿಟಿಸಿಎಲ್‌ ಕಾಯ್ದೆಯಲ್ಲಿ ಬರುತ್ತದೆ ಎಂದು ಸ್ಪಷ್ಟಪಡಿಸಬೇಕು; ಅವಶ್ಯಕತೆ ಇದ್ದರೆ ತಿದ್ದುಪಡಿ ಮಾಡಬೇಕು.

4) 2023 ರ ಪಿಟಿಸಿಎಲ್‌ ತಿದ್ದುಪಡಿ ಕಾಯ್ದೆಯನ್ನು ಸರ್ವನಾಶ ಮಾಡುತ್ತಿರುವ ಡಿಸಿ, ಎಸಿ, ತಹಶೀಲ್ದಾರ್, ಆರ್‌ಐ, ವಿಎ ಮತ್ತು ಕಂದಾಯ ಇಲಾಖೆಯ ಭ್ರಷ್ಟ ಅಧಿಕಾರಗಳ ಮೇಲೆ ಶಿಸ್ತುಕ್ರಮ ಕೈಗೊಳ್ಳಬೇಕು; ಸರ್ಕಾರದ ಮಂಜೂರಾತಿಯ ದಾಖಲೆಗಳ ಸಂರಕ್ಷಿಸಲು ಸೂಕ್ತ ಕ್ರಮವಹಿಸಬೇಕು.

5) ಸರ್ಕಾರದ ಪರ ವಾದಿಸುವ ಅಭಿಯೋಜಕರ (ವಕೀಲರ) ಬೇಜವಾಬ್ದಾರಿಯಿಂದ ಎಲ್ಲ ನ್ಯಾಯಾಲಯಗಳಲ್ಲಿ ಸಂವಿಧಾನ ಆಶಯದ ವಿರುದ್ಧ ಹಾಗೂ ಕಾಯ್ದೆಗಳ ವಿರುದ್ದವಾಗಿ ಆದೇಶ ಬರುತ್ತಿದೆ. ಇದಕ್ಕೆ ನೇರ ಕಾರಣವಾದವರನ್ನು ಅಮಾನತುಗೊಳಿಸಬೇಕು.

6) ಎಸ್‌ಸಿ/ಎಸ್‌ಟಿ ಸಮುದಾಯವನ್ನು ರಕ್ಷಿಸಬೇಕಾದ ಸಮಾಜ ಕಲ್ಯಾಣ ಇಲಾಖೆಯೇ ನೇರ ಹೊಣೆ. ಅದ್ದರಿಂದ ಇಲಾಖೆ ವತಿಯಿಂದ ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡಿ, ಮೇಲುಸ್ತುವಾರಿ ನೋಡಿಕೊಂಡು ನ್ಯಾಯ ಒದಗಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....

‘ಖಮೇನಿ ಹತ್ಯೆ ಬಗ್ಗೆ ಮೋದಿ ಸರ್ಕಾರದ ಮೌನ ತಟಸ್ಥವಲ್ಲ, ಬದಲಿಗೆ ಪದತ್ಯಾಗ’: ಸೋನಿಯಾ ಗಾಂಧಿ

ಮಂಗಳವಾರ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ಬಗ್ಗೆ ಮೋದಿಯವರ ಮೌನವು ತಟಸ್ಥವಲ್ಲ, ಬದಲಾಗಿ ತ್ಯಾಗವಾಗಿದೆ...