Homeಕರ್ನಾಟಕ'ಪಿಟಿಸಿಎಲ್‌ ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

- Advertisement -
- Advertisement -

‘ಪಿಟಿಸಿಎಲ್‌ (PTCL) ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ‘ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ’ ಮುಖಂಡರು ಘೋಷಿಸಿದರು.

ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಮುಖಂಡರು, “ಪಿಟಿಸಿಎಲ್‌ (ಕೆಲವೊಂದು ಜಮೀನುಗಳ ಪರಭಾರೆ ನಿಷೇಧ) ಕಾಯ್ದೆ ತಿದ್ದುಪಡಿ ನಂತರವೂ ಸಂವಿಧಾನದ ಆಶಯದ ವಿರುದ್ಧ ತುಳಿತಕ್ಕೊಳಗಾದ ಲಕ್ಷಾಂತರ ಪರಿಶಿಷ್ಠ ಜಾತಿ/ಪರಿಶಿಷ್ಟಪಂಗಡದ ಜನರು ತಮ್ಮ ಬದುಕನ್ನು ಕಟ್ಟಿಕೊಳ್ಳಲು ಮಂಜೂರು ಮಾಡಿದ್ದ ಜಮೀನುಗಳನ್ನು ಕಾನೂನುಬಾಹಿರ, ನಯವಂಚನೆಯ ಮೂಲಕ ಕಬಳಿಸುತ್ತಿದ್ದಾರೆ” ಎಂದು ಆಕ್ರೋಶ ಹೊರಹಾಕಿದರು.

“ಭೂಮಿ ವಂಚಿತ ಕುಟುಂಬಗಳ ಬದುಕಿನ ಜೊತೆ ಆಟ ಆಡುತ್ತಾ, ಉದ್ದೇಶಪೂರ್ವಕವಾಗಿ ಅನ್ಯಾಯ ಮಾಡುತ್ತಿರುವ ಎಸಿ, ಡಿಸಿ, ಹೈಕೋರ್ಟ್, ಸುಪ್ರೀಂಕೋರ್ಟ್ ನ್ಯಾಯಾಲಯಗಳ ವಿರುದ್ಧ ಹಾಗೂ ಇಷ್ಟೆಲ್ಲಾ ಅನ್ಯಾಯ ಆಗುತ್ತಿದ್ದರೂ, ಸಮಸ್ಯೆ ಸರಿಪಡಿಸದೆ ಕೊಟ್ಟ ಮಾತನ್ನು ಉಳಿಸಿಕೊಳ್ಳದೆ ಸರ್ಕಾರ ಕಣ್ಣು ಮುಚ್ಚಿಕೊಂಡು ನಾಟಕ ಮಾಡುತ್ತಿದೆ” ಎಂದು ಹೋರಾಟಗಾರರು ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

“ಕಾಂಗ್ರೆಸ್ ಸರ್ಕಾರ ಅಧಿಕಾರ ಬಂದು 3 ವರ್ಷವಾದರೂ ಸಮಸ್ಯೆ ಬಗೆಹರಿಸುವ ಕೆಲಸ ಮಾಡುತ್ತಿಲ್ಲ. ಅದ್ದರಿಂದ, ಸರ್ಕಾರಕ್ಕೆ ಕೊನೆಯ ಎಚ್ಚರಿಕೆಯಾಗಿ, 10 ದಿನಗಳ ಕಾಲ ಅವಕಾಶ ಕೊಟ್ಟು ನಮ್ಮ ಬದುಕಿಗೋಸ್ಕರ ಹಾಗೂ ನಮ್ಮ ಭೂಮಿಗೋಸ್ಕರ ನಾವು ಮತ್ತೆ ಆಹೋರಾತ್ರಿ ಧರಣಿ ಸತ್ಯಾಗ್ರಹ ಮಾಡಲೇಬೇಕಾದ ಅನಿವಾರ್ಯತೆ ಇದೆ. ರಾಜ್ಯದ ಎಲ್ಲ ಭೂಮಿ ಕಳೆದುಕೊಂಡ ಬಾಧಿತರು ಮತ್ತು ಹಿರಿಯ ಹೋರಾಟಗಾರರ ಮಾರ್ಗದರ್ಶನದಂತೆ ಧರಣಿಗೆ ತೀರ್ಮಾನಿಸಲಾಗಿದೆ” ಎಂದು ಘೋಷಿಸಿದರು.

ಪ್ರಮುಖ ಬೇಡಿಕೆಗಳು

1) ಸರ್ಕಾರದ ಪಿಟಿಸಿಎಲ್‌ ತಿದ್ದುಪಡಿ ವಿರುದ್ದ ಸರ್ವಾಧಿಕಾರಿಗಳೆಂತೆ ವರ್ತಿಸುತ್ತಿರುವ ಕಂದಾಯ ಇಲಾಖೆಯ ಎಸಿ, ಡಿಸಿ ಹಾಗೂ ಸಂವಿಧಾನ ಆಶಯಗಳನ್ನು ರಕ್ಷಿಸಬೇಕಾದ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ನ್ಯಾಯಾಲಯಗಳಲ್ಲಿಯೂ ಸಹ ಆಗುತ್ತಿರುವ ಅನ್ಯಾಯವನ್ನು ಕಂಡಿಸುತ್ತೇವೆ, ಕಾಲಮಿತಿಯಿಂದ ಆಗುತ್ತಿರುವ ಅನ್ಯಾಯ ಸರಿಪಡಿಸಬೇಕು.

2) 2023 ತಿದ್ದುಪಡಿಯಲ್ಲಿ ಸೇರಿಸಿರುವ ಕಲಂ 5(1)ಡಿ ತೆಗೆಯಬೇಕು

3) ಪಿಟಿಸಿಎಲ್‌ ಕಾಯ್ದೆ ಕಲಂ 3(1) ಬಿ ಅಡಿಯಲ್ಲಿ ಬರುವ ಭೂಮಿಗಳಾದ ಎಲ್ಲ ರೀತಿಯ ಇನಾಂ ಭೂಮಿಗಳು (ತೋಟಿ ನೌಕರ ಇನಾಂ, ನಿರಗಂಟಿ,ತಳವಾರಿ, ಕುಲವಾಡಿಕೆ) ಕಿಮ್ಮತ್ತು, ಜಿ ಎಂ ಎಫ್, ಭೂ ಸುಧಾರಣೆ ಕಾಯ್ದೆ ಅಡಿಯಲ್ಲಿ ಆಗಿರುವ ಮಂಜೂರು, ಪ್ರತಿಕೂಲ ಸ್ವಾಧೀನ, ಸರ್ಕಾರದಿಂದ ಮಂಜೂರಾದ ಎಲ್ಲ ಬಗೆಯ ಭೂಮಿಗಳು ಪಿಟಿಸಿಎಲ್‌ ಕಾಯ್ದೆಯಲ್ಲಿ ಬರುತ್ತದೆ ಎಂದು ಸ್ಪಷ್ಟಪಡಿಸಬೇಕು; ಅವಶ್ಯಕತೆ ಇದ್ದರೆ ತಿದ್ದುಪಡಿ ಮಾಡಬೇಕು.

4) 2023 ರ ಪಿಟಿಸಿಎಲ್‌ ತಿದ್ದುಪಡಿ ಕಾಯ್ದೆಯನ್ನು ಸರ್ವನಾಶ ಮಾಡುತ್ತಿರುವ ಡಿಸಿ, ಎಸಿ, ತಹಶೀಲ್ದಾರ್, ಆರ್‌ಐ, ವಿಎ ಮತ್ತು ಕಂದಾಯ ಇಲಾಖೆಯ ಭ್ರಷ್ಟ ಅಧಿಕಾರಗಳ ಮೇಲೆ ಶಿಸ್ತುಕ್ರಮ ಕೈಗೊಳ್ಳಬೇಕು; ಸರ್ಕಾರದ ಮಂಜೂರಾತಿಯ ದಾಖಲೆಗಳ ಸಂರಕ್ಷಿಸಲು ಸೂಕ್ತ ಕ್ರಮವಹಿಸಬೇಕು.

5) ಸರ್ಕಾರದ ಪರ ವಾದಿಸುವ ಅಭಿಯೋಜಕರ (ವಕೀಲರ) ಬೇಜವಾಬ್ದಾರಿಯಿಂದ ಎಲ್ಲ ನ್ಯಾಯಾಲಯಗಳಲ್ಲಿ ಸಂವಿಧಾನ ಆಶಯದ ವಿರುದ್ಧ ಹಾಗೂ ಕಾಯ್ದೆಗಳ ವಿರುದ್ದವಾಗಿ ಆದೇಶ ಬರುತ್ತಿದೆ. ಇದಕ್ಕೆ ನೇರ ಕಾರಣವಾದವರನ್ನು ಅಮಾನತುಗೊಳಿಸಬೇಕು.

6) ಎಸ್‌ಸಿ/ಎಸ್‌ಟಿ ಸಮುದಾಯವನ್ನು ರಕ್ಷಿಸಬೇಕಾದ ಸಮಾಜ ಕಲ್ಯಾಣ ಇಲಾಖೆಯೇ ನೇರ ಹೊಣೆ. ಅದ್ದರಿಂದ ಇಲಾಖೆ ವತಿಯಿಂದ ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡಿ, ಮೇಲುಸ್ತುವಾರಿ ನೋಡಿಕೊಂಡು ನ್ಯಾಯ ಒದಗಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ.​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...