Homeಕರ್ನಾಟಕ'ಪಿಟಿಸಿಎಲ್‌ ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

- Advertisement -
- Advertisement -

‘ಪಿಟಿಸಿಎಲ್‌ (PTCL) ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ‘ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ’ ಮುಖಂಡರು ಘೋಷಿಸಿದರು.

ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಮುಖಂಡರು, “ಪಿಟಿಸಿಎಲ್‌ (ಕೆಲವೊಂದು ಜಮೀನುಗಳ ಪರಭಾರೆ ನಿಷೇಧ) ಕಾಯ್ದೆ ತಿದ್ದುಪಡಿ ನಂತರವೂ ಸಂವಿಧಾನದ ಆಶಯದ ವಿರುದ್ಧ ತುಳಿತಕ್ಕೊಳಗಾದ ಲಕ್ಷಾಂತರ ಪರಿಶಿಷ್ಠ ಜಾತಿ/ಪರಿಶಿಷ್ಟಪಂಗಡದ ಜನರು ತಮ್ಮ ಬದುಕನ್ನು ಕಟ್ಟಿಕೊಳ್ಳಲು ಮಂಜೂರು ಮಾಡಿದ್ದ ಜಮೀನುಗಳನ್ನು ಕಾನೂನುಬಾಹಿರ, ನಯವಂಚನೆಯ ಮೂಲಕ ಕಬಳಿಸುತ್ತಿದ್ದಾರೆ” ಎಂದು ಆಕ್ರೋಶ ಹೊರಹಾಕಿದರು.

“ಭೂಮಿ ವಂಚಿತ ಕುಟುಂಬಗಳ ಬದುಕಿನ ಜೊತೆ ಆಟ ಆಡುತ್ತಾ, ಉದ್ದೇಶಪೂರ್ವಕವಾಗಿ ಅನ್ಯಾಯ ಮಾಡುತ್ತಿರುವ ಎಸಿ, ಡಿಸಿ, ಹೈಕೋರ್ಟ್, ಸುಪ್ರೀಂಕೋರ್ಟ್ ನ್ಯಾಯಾಲಯಗಳ ವಿರುದ್ಧ ಹಾಗೂ ಇಷ್ಟೆಲ್ಲಾ ಅನ್ಯಾಯ ಆಗುತ್ತಿದ್ದರೂ, ಸಮಸ್ಯೆ ಸರಿಪಡಿಸದೆ ಕೊಟ್ಟ ಮಾತನ್ನು ಉಳಿಸಿಕೊಳ್ಳದೆ ಸರ್ಕಾರ ಕಣ್ಣು ಮುಚ್ಚಿಕೊಂಡು ನಾಟಕ ಮಾಡುತ್ತಿದೆ” ಎಂದು ಹೋರಾಟಗಾರರು ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

“ಕಾಂಗ್ರೆಸ್ ಸರ್ಕಾರ ಅಧಿಕಾರ ಬಂದು 3 ವರ್ಷವಾದರೂ ಸಮಸ್ಯೆ ಬಗೆಹರಿಸುವ ಕೆಲಸ ಮಾಡುತ್ತಿಲ್ಲ. ಅದ್ದರಿಂದ, ಸರ್ಕಾರಕ್ಕೆ ಕೊನೆಯ ಎಚ್ಚರಿಕೆಯಾಗಿ, 10 ದಿನಗಳ ಕಾಲ ಅವಕಾಶ ಕೊಟ್ಟು ನಮ್ಮ ಬದುಕಿಗೋಸ್ಕರ ಹಾಗೂ ನಮ್ಮ ಭೂಮಿಗೋಸ್ಕರ ನಾವು ಮತ್ತೆ ಆಹೋರಾತ್ರಿ ಧರಣಿ ಸತ್ಯಾಗ್ರಹ ಮಾಡಲೇಬೇಕಾದ ಅನಿವಾರ್ಯತೆ ಇದೆ. ರಾಜ್ಯದ ಎಲ್ಲ ಭೂಮಿ ಕಳೆದುಕೊಂಡ ಬಾಧಿತರು ಮತ್ತು ಹಿರಿಯ ಹೋರಾಟಗಾರರ ಮಾರ್ಗದರ್ಶನದಂತೆ ಧರಣಿಗೆ ತೀರ್ಮಾನಿಸಲಾಗಿದೆ” ಎಂದು ಘೋಷಿಸಿದರು.

ಪ್ರಮುಖ ಬೇಡಿಕೆಗಳು

1) ಸರ್ಕಾರದ ಪಿಟಿಸಿಎಲ್‌ ತಿದ್ದುಪಡಿ ವಿರುದ್ದ ಸರ್ವಾಧಿಕಾರಿಗಳೆಂತೆ ವರ್ತಿಸುತ್ತಿರುವ ಕಂದಾಯ ಇಲಾಖೆಯ ಎಸಿ, ಡಿಸಿ ಹಾಗೂ ಸಂವಿಧಾನ ಆಶಯಗಳನ್ನು ರಕ್ಷಿಸಬೇಕಾದ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ನ್ಯಾಯಾಲಯಗಳಲ್ಲಿಯೂ ಸಹ ಆಗುತ್ತಿರುವ ಅನ್ಯಾಯವನ್ನು ಕಂಡಿಸುತ್ತೇವೆ, ಕಾಲಮಿತಿಯಿಂದ ಆಗುತ್ತಿರುವ ಅನ್ಯಾಯ ಸರಿಪಡಿಸಬೇಕು.

2) 2023 ತಿದ್ದುಪಡಿಯಲ್ಲಿ ಸೇರಿಸಿರುವ ಕಲಂ 5(1)ಡಿ ತೆಗೆಯಬೇಕು

3) ಪಿಟಿಸಿಎಲ್‌ ಕಾಯ್ದೆ ಕಲಂ 3(1) ಬಿ ಅಡಿಯಲ್ಲಿ ಬರುವ ಭೂಮಿಗಳಾದ ಎಲ್ಲ ರೀತಿಯ ಇನಾಂ ಭೂಮಿಗಳು (ತೋಟಿ ನೌಕರ ಇನಾಂ, ನಿರಗಂಟಿ,ತಳವಾರಿ, ಕುಲವಾಡಿಕೆ) ಕಿಮ್ಮತ್ತು, ಜಿ ಎಂ ಎಫ್, ಭೂ ಸುಧಾರಣೆ ಕಾಯ್ದೆ ಅಡಿಯಲ್ಲಿ ಆಗಿರುವ ಮಂಜೂರು, ಪ್ರತಿಕೂಲ ಸ್ವಾಧೀನ, ಸರ್ಕಾರದಿಂದ ಮಂಜೂರಾದ ಎಲ್ಲ ಬಗೆಯ ಭೂಮಿಗಳು ಪಿಟಿಸಿಎಲ್‌ ಕಾಯ್ದೆಯಲ್ಲಿ ಬರುತ್ತದೆ ಎಂದು ಸ್ಪಷ್ಟಪಡಿಸಬೇಕು; ಅವಶ್ಯಕತೆ ಇದ್ದರೆ ತಿದ್ದುಪಡಿ ಮಾಡಬೇಕು.

4) 2023 ರ ಪಿಟಿಸಿಎಲ್‌ ತಿದ್ದುಪಡಿ ಕಾಯ್ದೆಯನ್ನು ಸರ್ವನಾಶ ಮಾಡುತ್ತಿರುವ ಡಿಸಿ, ಎಸಿ, ತಹಶೀಲ್ದಾರ್, ಆರ್‌ಐ, ವಿಎ ಮತ್ತು ಕಂದಾಯ ಇಲಾಖೆಯ ಭ್ರಷ್ಟ ಅಧಿಕಾರಗಳ ಮೇಲೆ ಶಿಸ್ತುಕ್ರಮ ಕೈಗೊಳ್ಳಬೇಕು; ಸರ್ಕಾರದ ಮಂಜೂರಾತಿಯ ದಾಖಲೆಗಳ ಸಂರಕ್ಷಿಸಲು ಸೂಕ್ತ ಕ್ರಮವಹಿಸಬೇಕು.

5) ಸರ್ಕಾರದ ಪರ ವಾದಿಸುವ ಅಭಿಯೋಜಕರ (ವಕೀಲರ) ಬೇಜವಾಬ್ದಾರಿಯಿಂದ ಎಲ್ಲ ನ್ಯಾಯಾಲಯಗಳಲ್ಲಿ ಸಂವಿಧಾನ ಆಶಯದ ವಿರುದ್ಧ ಹಾಗೂ ಕಾಯ್ದೆಗಳ ವಿರುದ್ದವಾಗಿ ಆದೇಶ ಬರುತ್ತಿದೆ. ಇದಕ್ಕೆ ನೇರ ಕಾರಣವಾದವರನ್ನು ಅಮಾನತುಗೊಳಿಸಬೇಕು.

6) ಎಸ್‌ಸಿ/ಎಸ್‌ಟಿ ಸಮುದಾಯವನ್ನು ರಕ್ಷಿಸಬೇಕಾದ ಸಮಾಜ ಕಲ್ಯಾಣ ಇಲಾಖೆಯೇ ನೇರ ಹೊಣೆ. ಅದ್ದರಿಂದ ಇಲಾಖೆ ವತಿಯಿಂದ ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡಿ, ಮೇಲುಸ್ತುವಾರಿ ನೋಡಿಕೊಂಡು ನ್ಯಾಯ ಒದಗಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...