Homeಕರ್ನಾಟಕ'ಪಿಟಿಸಿಎಲ್‌ ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

- Advertisement -
- Advertisement -

‘ಪಿಟಿಸಿಎಲ್‌ (PTCL) ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ‘ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ’ ಮುಖಂಡರು ಘೋಷಿಸಿದರು.

ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಮುಖಂಡರು, “ಪಿಟಿಸಿಎಲ್‌ (ಕೆಲವೊಂದು ಜಮೀನುಗಳ ಪರಭಾರೆ ನಿಷೇಧ) ಕಾಯ್ದೆ ತಿದ್ದುಪಡಿ ನಂತರವೂ ಸಂವಿಧಾನದ ಆಶಯದ ವಿರುದ್ಧ ತುಳಿತಕ್ಕೊಳಗಾದ ಲಕ್ಷಾಂತರ ಪರಿಶಿಷ್ಠ ಜಾತಿ/ಪರಿಶಿಷ್ಟಪಂಗಡದ ಜನರು ತಮ್ಮ ಬದುಕನ್ನು ಕಟ್ಟಿಕೊಳ್ಳಲು ಮಂಜೂರು ಮಾಡಿದ್ದ ಜಮೀನುಗಳನ್ನು ಕಾನೂನುಬಾಹಿರ, ನಯವಂಚನೆಯ ಮೂಲಕ ಕಬಳಿಸುತ್ತಿದ್ದಾರೆ” ಎಂದು ಆಕ್ರೋಶ ಹೊರಹಾಕಿದರು.

“ಭೂಮಿ ವಂಚಿತ ಕುಟುಂಬಗಳ ಬದುಕಿನ ಜೊತೆ ಆಟ ಆಡುತ್ತಾ, ಉದ್ದೇಶಪೂರ್ವಕವಾಗಿ ಅನ್ಯಾಯ ಮಾಡುತ್ತಿರುವ ಎಸಿ, ಡಿಸಿ, ಹೈಕೋರ್ಟ್, ಸುಪ್ರೀಂಕೋರ್ಟ್ ನ್ಯಾಯಾಲಯಗಳ ವಿರುದ್ಧ ಹಾಗೂ ಇಷ್ಟೆಲ್ಲಾ ಅನ್ಯಾಯ ಆಗುತ್ತಿದ್ದರೂ, ಸಮಸ್ಯೆ ಸರಿಪಡಿಸದೆ ಕೊಟ್ಟ ಮಾತನ್ನು ಉಳಿಸಿಕೊಳ್ಳದೆ ಸರ್ಕಾರ ಕಣ್ಣು ಮುಚ್ಚಿಕೊಂಡು ನಾಟಕ ಮಾಡುತ್ತಿದೆ” ಎಂದು ಹೋರಾಟಗಾರರು ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

“ಕಾಂಗ್ರೆಸ್ ಸರ್ಕಾರ ಅಧಿಕಾರ ಬಂದು 3 ವರ್ಷವಾದರೂ ಸಮಸ್ಯೆ ಬಗೆಹರಿಸುವ ಕೆಲಸ ಮಾಡುತ್ತಿಲ್ಲ. ಅದ್ದರಿಂದ, ಸರ್ಕಾರಕ್ಕೆ ಕೊನೆಯ ಎಚ್ಚರಿಕೆಯಾಗಿ, 10 ದಿನಗಳ ಕಾಲ ಅವಕಾಶ ಕೊಟ್ಟು ನಮ್ಮ ಬದುಕಿಗೋಸ್ಕರ ಹಾಗೂ ನಮ್ಮ ಭೂಮಿಗೋಸ್ಕರ ನಾವು ಮತ್ತೆ ಆಹೋರಾತ್ರಿ ಧರಣಿ ಸತ್ಯಾಗ್ರಹ ಮಾಡಲೇಬೇಕಾದ ಅನಿವಾರ್ಯತೆ ಇದೆ. ರಾಜ್ಯದ ಎಲ್ಲ ಭೂಮಿ ಕಳೆದುಕೊಂಡ ಬಾಧಿತರು ಮತ್ತು ಹಿರಿಯ ಹೋರಾಟಗಾರರ ಮಾರ್ಗದರ್ಶನದಂತೆ ಧರಣಿಗೆ ತೀರ್ಮಾನಿಸಲಾಗಿದೆ” ಎಂದು ಘೋಷಿಸಿದರು.

ಪ್ರಮುಖ ಬೇಡಿಕೆಗಳು

1) ಸರ್ಕಾರದ ಪಿಟಿಸಿಎಲ್‌ ತಿದ್ದುಪಡಿ ವಿರುದ್ದ ಸರ್ವಾಧಿಕಾರಿಗಳೆಂತೆ ವರ್ತಿಸುತ್ತಿರುವ ಕಂದಾಯ ಇಲಾಖೆಯ ಎಸಿ, ಡಿಸಿ ಹಾಗೂ ಸಂವಿಧಾನ ಆಶಯಗಳನ್ನು ರಕ್ಷಿಸಬೇಕಾದ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ನ್ಯಾಯಾಲಯಗಳಲ್ಲಿಯೂ ಸಹ ಆಗುತ್ತಿರುವ ಅನ್ಯಾಯವನ್ನು ಕಂಡಿಸುತ್ತೇವೆ, ಕಾಲಮಿತಿಯಿಂದ ಆಗುತ್ತಿರುವ ಅನ್ಯಾಯ ಸರಿಪಡಿಸಬೇಕು.

2) 2023 ತಿದ್ದುಪಡಿಯಲ್ಲಿ ಸೇರಿಸಿರುವ ಕಲಂ 5(1)ಡಿ ತೆಗೆಯಬೇಕು

3) ಪಿಟಿಸಿಎಲ್‌ ಕಾಯ್ದೆ ಕಲಂ 3(1) ಬಿ ಅಡಿಯಲ್ಲಿ ಬರುವ ಭೂಮಿಗಳಾದ ಎಲ್ಲ ರೀತಿಯ ಇನಾಂ ಭೂಮಿಗಳು (ತೋಟಿ ನೌಕರ ಇನಾಂ, ನಿರಗಂಟಿ,ತಳವಾರಿ, ಕುಲವಾಡಿಕೆ) ಕಿಮ್ಮತ್ತು, ಜಿ ಎಂ ಎಫ್, ಭೂ ಸುಧಾರಣೆ ಕಾಯ್ದೆ ಅಡಿಯಲ್ಲಿ ಆಗಿರುವ ಮಂಜೂರು, ಪ್ರತಿಕೂಲ ಸ್ವಾಧೀನ, ಸರ್ಕಾರದಿಂದ ಮಂಜೂರಾದ ಎಲ್ಲ ಬಗೆಯ ಭೂಮಿಗಳು ಪಿಟಿಸಿಎಲ್‌ ಕಾಯ್ದೆಯಲ್ಲಿ ಬರುತ್ತದೆ ಎಂದು ಸ್ಪಷ್ಟಪಡಿಸಬೇಕು; ಅವಶ್ಯಕತೆ ಇದ್ದರೆ ತಿದ್ದುಪಡಿ ಮಾಡಬೇಕು.

4) 2023 ರ ಪಿಟಿಸಿಎಲ್‌ ತಿದ್ದುಪಡಿ ಕಾಯ್ದೆಯನ್ನು ಸರ್ವನಾಶ ಮಾಡುತ್ತಿರುವ ಡಿಸಿ, ಎಸಿ, ತಹಶೀಲ್ದಾರ್, ಆರ್‌ಐ, ವಿಎ ಮತ್ತು ಕಂದಾಯ ಇಲಾಖೆಯ ಭ್ರಷ್ಟ ಅಧಿಕಾರಗಳ ಮೇಲೆ ಶಿಸ್ತುಕ್ರಮ ಕೈಗೊಳ್ಳಬೇಕು; ಸರ್ಕಾರದ ಮಂಜೂರಾತಿಯ ದಾಖಲೆಗಳ ಸಂರಕ್ಷಿಸಲು ಸೂಕ್ತ ಕ್ರಮವಹಿಸಬೇಕು.

5) ಸರ್ಕಾರದ ಪರ ವಾದಿಸುವ ಅಭಿಯೋಜಕರ (ವಕೀಲರ) ಬೇಜವಾಬ್ದಾರಿಯಿಂದ ಎಲ್ಲ ನ್ಯಾಯಾಲಯಗಳಲ್ಲಿ ಸಂವಿಧಾನ ಆಶಯದ ವಿರುದ್ಧ ಹಾಗೂ ಕಾಯ್ದೆಗಳ ವಿರುದ್ದವಾಗಿ ಆದೇಶ ಬರುತ್ತಿದೆ. ಇದಕ್ಕೆ ನೇರ ಕಾರಣವಾದವರನ್ನು ಅಮಾನತುಗೊಳಿಸಬೇಕು.

6) ಎಸ್‌ಸಿ/ಎಸ್‌ಟಿ ಸಮುದಾಯವನ್ನು ರಕ್ಷಿಸಬೇಕಾದ ಸಮಾಜ ಕಲ್ಯಾಣ ಇಲಾಖೆಯೇ ನೇರ ಹೊಣೆ. ಅದ್ದರಿಂದ ಇಲಾಖೆ ವತಿಯಿಂದ ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡಿ, ಮೇಲುಸ್ತುವಾರಿ ನೋಡಿಕೊಂಡು ನ್ಯಾಯ ಒದಗಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....