Homeಮುಖಪುಟತಮಿಳುನಾಡಿನವರು ಎಂಬ ಕಾರಣಕ್ಕೆ ತಮಿಳಿಸೈ ಜೊತೆ ಕೆಟ್ಟದಾಗಿ ವರ್ತನೆ: ಅಮಿತ್‌ ಶಾ ವಿರುದ್ಧ ದಯಾನಿಧಿ...

ತಮಿಳುನಾಡಿನವರು ಎಂಬ ಕಾರಣಕ್ಕೆ ತಮಿಳಿಸೈ ಜೊತೆ ಕೆಟ್ಟದಾಗಿ ವರ್ತನೆ: ಅಮಿತ್‌ ಶಾ ವಿರುದ್ಧ ದಯಾನಿಧಿ ಕಿಡಿ

- Advertisement -
- Advertisement -

ಬಿಜೆಪಿ ನಾಯಕಿ ಹಾಗೂ ತೆಲಂಗಾಣದ ಮಾಜಿ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ನಿಂದಿಸಿರುವ ರೀತಿಯಲ್ಲಿರುವ ವಿಡಿಯೋ ವೈರಲ್ ಆಗಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಮಾಜಿ ಕೇಂದ್ರ ಸಚಿವ ದಯಾನಿಧಿ ಮಾರನ್ ವಾಗ್ದಾಳಿ ನಡೆಸಿದ್ದು, ತಮಿಳುನಾಡಿನವರು ಎಂಬ ಕಾರಣಕ್ಕೆ ತಮಿಳಿಸೈ ಜೊತೆ ಕೆಟ್ಟದಾಗಿ ವರ್ತನೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾದ ವಿವಾದ ಮತ್ತು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ. ಇದರ ಬೆನ್ನಲ್ಲಿ ಪ್ರತಿಕ್ರಿಯಿಸಿದ ಮಾರನ್ ಘಟನೆಯನ್ನು ದುರದೃಷ್ಟಕರ ಎಂದು ಬಣ್ಣಿಸಿದ್ದಾರೆ.

ಗೃಹ ಸಚಿವ ಅಮಿತ್‌ ಅವರು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಥವಾ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರ ಜೊತೆ ಅದೇ ರೀತಿಯಾಗಿ ವರ್ತಿಸುತ್ತಾರೆಯೇ? ಅವರು ತಮಿಳುನಾಡಿನವರು ಎಂಬ ಕಾರಣಕ್ಕೆ ಆಕೆಯನ್ನು ಯಾವುದೇ ರೀತಿಯಲ್ಲಿ ನಡೆಸಿಕೊಳ್ಳಬಹುದೇ? ಇದು ಅತ್ಯಂತ ಅನಪೇಕ್ಷಿತವಾಗಿದೆ ಎಂದು ಮಾಜಿ ಕೇಂದ್ರ ಸಚಿವ ದಯಾನಿಧಿ ಮಾರನ್ ಹೇಳಿದ್ದಾರೆ.

ಈ ಕುರಿತು ವೈರಲ್‌ ಆಗಿರುವ ವಿಡಿಯೋದಲ್ಲಿ ತಮಿಳಿಸೈ ಅಮಿತ್ ಶಾ ಅವರನ್ನು ಅಭಿನಂದಿಸುತ್ತಿರುವುದನ್ನು ಕಾಣಬಹುದು. ಆ ಬಳಿಕ ಅಮಿತ್‌ ಶಾ ತಮಿಳಿಸೈ ಅವರನ್ನು ಮರಳಿ ಕರೆದು ಗಂಭೀರ ಚರ್ಚೆಯಲ್ಲಿ ತೊಡಗಿದ್ದಾರೆ. ತಮಿಳಿಸೈಗೆ ಅಮಿತ್‌ ಶಾಗೆ ಕೈ ಸನ್ನೆಯಲ್ಲಿ ವಾರ್ನ್‌ ಮಾಡುವುದು ಸೆರೆಯಾಗಿದೆ.

ಈ ಕುರಿತ ಪೋಟೋ ವೈರಲ್‌ ಆಗುತ್ತಿದ್ದಂತೆ ಸಾಮಾಜಿಕ ಜಾಲತಾಣದ ಬಳಕೆದಾರರು ಸಂಭಾಷಣೆಯ ಸ್ವರೂಪದ ಬಗ್ಗೆ ಹಲವು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳ ವೇದಿಕೆಗಳಲ್ಲಿ ತಮಿಳಿಸೈ ಮತ್ತು ಅಣ್ಣಾಮಲೈ ಬೆಂಬಲಿಗರ ನಡುವೆ ಜಟಾಪಟಿ ನಡೆದಿದೆ.

ತೆಲಂಗಾಣದ ಮಾಜಿ ರಾಜ್ಯಪಾಲರಾದ ತಮಿಳಿಸೈ ಅವರು ತಮಿಳುನಾಡು ಬಿಜೆಪಿ ಘಟಕದ ವಿರುದ್ಧ ಟೀಕೆ ಮಾಡಿದ್ದರು. ಅಪರಾಧ ಹಿನ್ನೆಲೆಯ ಜನ ಪಕ್ಷದಲ್ಲಿ ಸೇರಿದ್ದಾರೆ ಎಂದು ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದರು. ಅದರ ಬಗ್ಗೆ ಕೋಪಗೊಂಡಿದ್ದ ಅಮಿತ್ ಶಾ, ಪಕ್ಷದ ವಿಚಾರಗಳ ಬಗ್ಗೆ ಸಾರ್ವಜನಿಕ ವೇದಿಕೆಗಳಲ್ಲಿ ಮಾತನಾಡಬಾರದು ಎಂದು ವಾರ್ನ್‌ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನು ಓದಿ: ಅಜಿತ್‌ ಬಣವನ್ನು ಟೀಕಿಸಿದ ಆರೆಸ್ಸೆಸ್‌ ಮುಖವಾಣಿ: ಮತ್ತಷ್ಟು ಹಳಸಿದ ಅಜಿತ್-ಎನ್‌ಡಿಎ ಸಂಬಂಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...