Homeಮುಖಪುಟನ್ಯಾ. ರಂಜನ್ ಗೊಗೊಯ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾಕೆಯ ಇಡೀ ಕುಟುಂಬದ ಮೇಲೆ ಪೆಗಾಸಸ್...

ನ್ಯಾ. ರಂಜನ್ ಗೊಗೊಯ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾಕೆಯ ಇಡೀ ಕುಟುಂಬದ ಮೇಲೆ ಪೆಗಾಸಸ್ ಕಣ್ಗಾವಲು!

- Advertisement -
- Advertisement -

‘ಪೆಗಾಸಸ್’ ತಂತ್ರಾಂಶವನ್ನು ಬಳಸಿಕೊಂಡು ಭಾರತದ ವಿರೋಧ ಪಕ್ಷಗಳ ನಾಯಕರು, ಪತ್ರಕರ್ತರು, ಸಚಿವರ ಫೋನ್‌ಗಳನ್ನು ಟ್ಯಾಪ್‌ ಮಾಡಲಾಗುತ್ತಿದೆ ಎಂದು ಪ್ಯಾರಿಸ್ ಮೂಲದ ಪಾರ್ಬಿಡನ್ ಸ್ಟೋರಿಸ್ ತನಿಖಾ ವರದಿ ಬಹಿರಂಗ ಪಡಿಸಿದೆ. ಈಗಾಗಲೇ ಹ್ಯಾಕ್ ಮಾಡಲಾಗಿರುವ ಕೆಲವು ಪತ್ರಕರ್ತರ ಹೆಸರನ್ನು ವರದಿಯು ಬಿಡುಗಡೆ ಮಾಡಿದೆ. ಜೊತೆಗೆ ಪೆಗಾಸಸ್‌ ಹ್ಯಾಕ್‌ ಮಾಡಿರುವವರ ಪಟ್ಟಿಯಲ್ಲಿ ನ್ಯಾಯಾಧೀಶರ ಹೆಸರಲ್ಲಿ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಹೆಸರು ಕೇಳಿಬಂದಿದೆ.

ಏಪ್ರಿಲ್ 2019 ರಲ್ಲಿ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರ ಮೇಲೆ ಲೈಂಗಿಕ ಕಿರುಕುಳ ಆರೋಪ  ಮಾಡಿದ್ದ ಸುಪ್ರೀಂಕೋರ್ಟ್ ಸಿಬ್ಬಂದಿಗೆ ಸಂಬಂಧಿಸಿದ ಮೂರು ಮೊಬೈಲ್ ನಂಬರ್‌ಗಳನ್ನು ಹ್ಯಾಕ್ ಮಾಡಲಾಗಿದೆ.

ಇಸ್ರೇಲಿ ಕಂಪನಿ ಎನ್‌ಎಸ್‌ಒ ಗ್ರೂಪ್‌ನ ಪೆಗಾಸಸ್ ಗೂಢಚರ್ಯೆ ತಂತ್ರಾಂಶ ಬಳಸಿಕೊಂಡು ಭಾರತದಲ್ಲಿ 300 ಕ್ಕೂ ಹೆಚ್ಚು ಜನರ ಮೊಬೈಲ್ ಫೋನ್ ಸಂಖ್ಯೆಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಪ್ಯಾರಿಸ್ ಮೂಲದ ಫಾರ್ಬಿಡನ್ ಸ್ಟೋರೀಸ್‌ ಸಂಸ್ಥೆ ನಡೆಸಿದ ತನಿಖೆಯಿಂದ ಬಹಿರಂಗಗೊಂಡಿದೆ. ಈ ಕಂಪನಿಯು ಅಧಿಕೃತ ಸರ್ಕಾರಗಳಿಗೆ ಮಾತ್ರ ಮಾರಾಟ ಮಾಡುತ್ತದೆ. ಖಾಸಗಿ ಸಂಸ್ಥೆಗಳಿಗೆ ಅಲ್ಲ ಎಂದು ಮಾಹಿತಿ ನೀಡಲಾಗಿದೆ. ಆದರೂ ಕಂಪನಿಯು ತನ್ನ ಉತ್ಪನ್ನವನ್ನು ಯಾವ ಸರ್ಕಾರಗಳಿಗೆ ಮಾರುತ್ತದೆ ಎಂಬುದನ್ನು ಖಚಿತಪಡಿಸುವುದಿಲ್ಲ.

ಇದನ್ನೂ ಓದಿ: ಪೆಗಾಸಸ್ ಪ್ರಾಜೆಕ್ಟ್: ಶೀಘ್ರದಲ್ಲೇ ನ್ಯಾಯಾಧೀಶರ ಹೆಸರು ಬಹಿರಂಗ!

ನ್ಯಾಯಾಧೀಶರ ಮೇಲೆ ಆರೋಪ ಮಾಡಿದ್ದ ಮಹಿಳಾ ಸಿಬ್ಬಂದಿಯನ್ನು 2018 ರ ಡಿಸೆಂಬರ್‌ನಲ್ಲಿ ಸೇವೆಯಿಂದ ವಜಾಗೊಳಿಸಲಾಗಿತ್ತು. ಇದಾದ ಬಳಿಕ ಅವರು ಏಪ್ರಿಲ್ 20, 2019 ರಂದು ಲೈಂಗಿಕ ಕಿರುಕುಳ ಆರೋಪಗಳನ್ನು ಮಾಡಿದ್ದರು. ಇದಾದ ಕೆಲವೇ ದಿನಗಳ ಅವರ ಪೋನ್ ಅನ್ನು ಹ್ಯಾಕ್ ಮಾಡಲಾಗಿದೆ  ಎಂದು ವರದಿ ತಿಳಿಸಿದೆ.

ಇದೇ ವರದಿಯಲ್ಲಿ ಆಕೆ ದೂರು ನೀಡಿದ ಒಂದು ವಾರದಲ್ಲಿ ಆಕೆಯ ಪತಿ ಮತ್ತು ಅವರ ಇಬ್ಬರು ಸಹೋದರರು ಸೇರಿದಂತೆ ಎಂಟು ಮಂದಿಯ ದೂರವಾಣಿ ಸಂಖ್ಯೆಗಳನ್ನು ಸಹ ಹ್ಯಾಕ್ ಮಾಡಿ ಕಣ್ಗಾವಲಿನಲ್ಲಿ ಇರಿಸಲಾಗಿದೆ ಎಂದು ತಿಳಿಸಿದೆ.  ದೂರುದಾರ ಮತ್ತು ಅವರ ಕುಟುಂಬ ಸದಸ್ಯರಿಗೆ ಸಂಬಂಧಿಸಿದ ಒಟ್ಟು 11 ದೂರವಾಣಿ ಸಂಖ್ಯೆಗಳನ್ನು ಆಯ್ಕೆ ಮಾಡಿ ಹ್ಯಾಕ್ ಮಾಡಲಾಗಿದೆ.

“ಲೈಂಗಿಕ ಕಿರುಕುಳ ಪ್ರಕರಣ ಆದ ಕೂಡಲೇ ರಂಜನ್ ಗೊಗೊಯ್ ಸರಣಿಯಾಗಿ ಬಿಜೆಪಿಗೆ ಅನುಕೂಲಕರವಾದ ತೀರ್ಪು ಯಾಕೆ ಕೊಟ್ಟರು ಅನ್ನೋದು ಈಗ ಸ್ಪಷ್ಟವಾಯಿತು. ದೂರುದಾರಲೊಂದಿಗೆ ನಡೆಸಿರುವ ಎಲ್ಲಾ ಮಾತುಕತೆಯನ್ನು ಆಧಾರವಾಗಿ ಇಟ್ಟುಕೊಂಡು ಗೊಗೋಯ್‌ ಅವರಿಗೆ ಬೆದರಿಕೆ ಒಡ್ಡಿದ್ದಾರೆ. ಶಿಕ್ಷೆ ಬೇಕೆ ಅಥವಾ ರಾಜ್ಯಸಭೆಗೆ ಸ್ಥಾನ ಬೇಕೇ ಎಂಬ ಆಯ್ಕೆ ಇಟ್ಟಿದ್ದಾರೆ’ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಜನ ಚರ್ಚೆ ನಡೆಸಿದ್ದಾರೆ.

ಲೈಂಗಿಕ ದೌರ್ಜನ್ಯದ ಆರೋಪದ ನಂತರ, ನ್ಯಾಯಮೂರ್ತಿ ಗೊಗೊಯ್ ಅವರು ನವೆಂಬರ್ 17, 2019 ರವರೆಗೆ 46 ನೇ ಸಿಜೆಐ ಆಗಿ ತಮ್ಮ ಅವಧಿಯನ್ನು ಪೂರೈಸಿದರು. ಅವರು ನಿವೃತ್ತಿಯಾದ ಆರು ತಿಂಗಳಲ್ಲಿ, ಅವರನ್ನು ರಾಜ್ಯಸಭೆಗೆ ಕೇಂದ್ರ ಸರ್ಕಾರವು “ಶ್ರೇಷ್ಠ ಸದಸ್ಯ” ಎಂದು ನಾಮಕರಣ ಮಾಡಿತ್ತು.


ಇದನ್ನೂ ಓದಿ: ಇಸ್ರೇಲ್ ಮೂಲದ ಕಂಪೆನಿಯಿಂದ ಭಾರತದ 300 ಗಣ್ಯರ ಫೋನ್‌ಗಳು ಹ್ಯಾಕ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...