Homeಮುಖಪುಟನ್ಯಾ. ರಂಜನ್ ಗೊಗೊಯ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾಕೆಯ ಇಡೀ ಕುಟುಂಬದ ಮೇಲೆ ಪೆಗಾಸಸ್...

ನ್ಯಾ. ರಂಜನ್ ಗೊಗೊಯ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದಾಕೆಯ ಇಡೀ ಕುಟುಂಬದ ಮೇಲೆ ಪೆಗಾಸಸ್ ಕಣ್ಗಾವಲು!

- Advertisement -
- Advertisement -

‘ಪೆಗಾಸಸ್’ ತಂತ್ರಾಂಶವನ್ನು ಬಳಸಿಕೊಂಡು ಭಾರತದ ವಿರೋಧ ಪಕ್ಷಗಳ ನಾಯಕರು, ಪತ್ರಕರ್ತರು, ಸಚಿವರ ಫೋನ್‌ಗಳನ್ನು ಟ್ಯಾಪ್‌ ಮಾಡಲಾಗುತ್ತಿದೆ ಎಂದು ಪ್ಯಾರಿಸ್ ಮೂಲದ ಪಾರ್ಬಿಡನ್ ಸ್ಟೋರಿಸ್ ತನಿಖಾ ವರದಿ ಬಹಿರಂಗ ಪಡಿಸಿದೆ. ಈಗಾಗಲೇ ಹ್ಯಾಕ್ ಮಾಡಲಾಗಿರುವ ಕೆಲವು ಪತ್ರಕರ್ತರ ಹೆಸರನ್ನು ವರದಿಯು ಬಿಡುಗಡೆ ಮಾಡಿದೆ. ಜೊತೆಗೆ ಪೆಗಾಸಸ್‌ ಹ್ಯಾಕ್‌ ಮಾಡಿರುವವರ ಪಟ್ಟಿಯಲ್ಲಿ ನ್ಯಾಯಾಧೀಶರ ಹೆಸರಲ್ಲಿ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಹೆಸರು ಕೇಳಿಬಂದಿದೆ.

ಏಪ್ರಿಲ್ 2019 ರಲ್ಲಿ ಮಾಜಿ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರ ಮೇಲೆ ಲೈಂಗಿಕ ಕಿರುಕುಳ ಆರೋಪ  ಮಾಡಿದ್ದ ಸುಪ್ರೀಂಕೋರ್ಟ್ ಸಿಬ್ಬಂದಿಗೆ ಸಂಬಂಧಿಸಿದ ಮೂರು ಮೊಬೈಲ್ ನಂಬರ್‌ಗಳನ್ನು ಹ್ಯಾಕ್ ಮಾಡಲಾಗಿದೆ.

ಇಸ್ರೇಲಿ ಕಂಪನಿ ಎನ್‌ಎಸ್‌ಒ ಗ್ರೂಪ್‌ನ ಪೆಗಾಸಸ್ ಗೂಢಚರ್ಯೆ ತಂತ್ರಾಂಶ ಬಳಸಿಕೊಂಡು ಭಾರತದಲ್ಲಿ 300 ಕ್ಕೂ ಹೆಚ್ಚು ಜನರ ಮೊಬೈಲ್ ಫೋನ್ ಸಂಖ್ಯೆಗಳನ್ನು ಹ್ಯಾಕ್ ಮಾಡಲಾಗಿದೆ ಎಂದು ಪ್ಯಾರಿಸ್ ಮೂಲದ ಫಾರ್ಬಿಡನ್ ಸ್ಟೋರೀಸ್‌ ಸಂಸ್ಥೆ ನಡೆಸಿದ ತನಿಖೆಯಿಂದ ಬಹಿರಂಗಗೊಂಡಿದೆ. ಈ ಕಂಪನಿಯು ಅಧಿಕೃತ ಸರ್ಕಾರಗಳಿಗೆ ಮಾತ್ರ ಮಾರಾಟ ಮಾಡುತ್ತದೆ. ಖಾಸಗಿ ಸಂಸ್ಥೆಗಳಿಗೆ ಅಲ್ಲ ಎಂದು ಮಾಹಿತಿ ನೀಡಲಾಗಿದೆ. ಆದರೂ ಕಂಪನಿಯು ತನ್ನ ಉತ್ಪನ್ನವನ್ನು ಯಾವ ಸರ್ಕಾರಗಳಿಗೆ ಮಾರುತ್ತದೆ ಎಂಬುದನ್ನು ಖಚಿತಪಡಿಸುವುದಿಲ್ಲ.

ಇದನ್ನೂ ಓದಿ: ಪೆಗಾಸಸ್ ಪ್ರಾಜೆಕ್ಟ್: ಶೀಘ್ರದಲ್ಲೇ ನ್ಯಾಯಾಧೀಶರ ಹೆಸರು ಬಹಿರಂಗ!

ನ್ಯಾಯಾಧೀಶರ ಮೇಲೆ ಆರೋಪ ಮಾಡಿದ್ದ ಮಹಿಳಾ ಸಿಬ್ಬಂದಿಯನ್ನು 2018 ರ ಡಿಸೆಂಬರ್‌ನಲ್ಲಿ ಸೇವೆಯಿಂದ ವಜಾಗೊಳಿಸಲಾಗಿತ್ತು. ಇದಾದ ಬಳಿಕ ಅವರು ಏಪ್ರಿಲ್ 20, 2019 ರಂದು ಲೈಂಗಿಕ ಕಿರುಕುಳ ಆರೋಪಗಳನ್ನು ಮಾಡಿದ್ದರು. ಇದಾದ ಕೆಲವೇ ದಿನಗಳ ಅವರ ಪೋನ್ ಅನ್ನು ಹ್ಯಾಕ್ ಮಾಡಲಾಗಿದೆ  ಎಂದು ವರದಿ ತಿಳಿಸಿದೆ.

ಇದೇ ವರದಿಯಲ್ಲಿ ಆಕೆ ದೂರು ನೀಡಿದ ಒಂದು ವಾರದಲ್ಲಿ ಆಕೆಯ ಪತಿ ಮತ್ತು ಅವರ ಇಬ್ಬರು ಸಹೋದರರು ಸೇರಿದಂತೆ ಎಂಟು ಮಂದಿಯ ದೂರವಾಣಿ ಸಂಖ್ಯೆಗಳನ್ನು ಸಹ ಹ್ಯಾಕ್ ಮಾಡಿ ಕಣ್ಗಾವಲಿನಲ್ಲಿ ಇರಿಸಲಾಗಿದೆ ಎಂದು ತಿಳಿಸಿದೆ.  ದೂರುದಾರ ಮತ್ತು ಅವರ ಕುಟುಂಬ ಸದಸ್ಯರಿಗೆ ಸಂಬಂಧಿಸಿದ ಒಟ್ಟು 11 ದೂರವಾಣಿ ಸಂಖ್ಯೆಗಳನ್ನು ಆಯ್ಕೆ ಮಾಡಿ ಹ್ಯಾಕ್ ಮಾಡಲಾಗಿದೆ.

“ಲೈಂಗಿಕ ಕಿರುಕುಳ ಪ್ರಕರಣ ಆದ ಕೂಡಲೇ ರಂಜನ್ ಗೊಗೊಯ್ ಸರಣಿಯಾಗಿ ಬಿಜೆಪಿಗೆ ಅನುಕೂಲಕರವಾದ ತೀರ್ಪು ಯಾಕೆ ಕೊಟ್ಟರು ಅನ್ನೋದು ಈಗ ಸ್ಪಷ್ಟವಾಯಿತು. ದೂರುದಾರಲೊಂದಿಗೆ ನಡೆಸಿರುವ ಎಲ್ಲಾ ಮಾತುಕತೆಯನ್ನು ಆಧಾರವಾಗಿ ಇಟ್ಟುಕೊಂಡು ಗೊಗೋಯ್‌ ಅವರಿಗೆ ಬೆದರಿಕೆ ಒಡ್ಡಿದ್ದಾರೆ. ಶಿಕ್ಷೆ ಬೇಕೆ ಅಥವಾ ರಾಜ್ಯಸಭೆಗೆ ಸ್ಥಾನ ಬೇಕೇ ಎಂಬ ಆಯ್ಕೆ ಇಟ್ಟಿದ್ದಾರೆ’ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಜನ ಚರ್ಚೆ ನಡೆಸಿದ್ದಾರೆ.

ಲೈಂಗಿಕ ದೌರ್ಜನ್ಯದ ಆರೋಪದ ನಂತರ, ನ್ಯಾಯಮೂರ್ತಿ ಗೊಗೊಯ್ ಅವರು ನವೆಂಬರ್ 17, 2019 ರವರೆಗೆ 46 ನೇ ಸಿಜೆಐ ಆಗಿ ತಮ್ಮ ಅವಧಿಯನ್ನು ಪೂರೈಸಿದರು. ಅವರು ನಿವೃತ್ತಿಯಾದ ಆರು ತಿಂಗಳಲ್ಲಿ, ಅವರನ್ನು ರಾಜ್ಯಸಭೆಗೆ ಕೇಂದ್ರ ಸರ್ಕಾರವು “ಶ್ರೇಷ್ಠ ಸದಸ್ಯ” ಎಂದು ನಾಮಕರಣ ಮಾಡಿತ್ತು.


ಇದನ್ನೂ ಓದಿ: ಇಸ್ರೇಲ್ ಮೂಲದ ಕಂಪೆನಿಯಿಂದ ಭಾರತದ 300 ಗಣ್ಯರ ಫೋನ್‌ಗಳು ಹ್ಯಾಕ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...