Homeಮುಖಪುಟಚಂಪಾರೊಂದಿಗೆ ಹೆಜ್ಜೆ ಹಾಕಿದ ನೆನಪು..

ಚಂಪಾರೊಂದಿಗೆ ಹೆಜ್ಜೆ ಹಾಕಿದ ನೆನಪು..

- Advertisement -
- Advertisement -

1979 ಮಾರ್ಚ್ 10ರಂದು ಬೆಂಗಳೂರಿನ ದೇವಾಂಗ ಸಂಘದಲ್ಲಿ ನಡೆದ ಮೊದಲನೇ ಬಂಡಾಯ ಸಾಹಿತ್ಯ ಸಮ್ಮೇಳನಕ್ಕೆ ಕೋಲಾರದಿಂದ ನಾನು, ಕೋಟಿಗಾನಹಳ್ಳಿ ರಾಮಯ್ಯ, ಲಕ್ಷ್ಮೀಪತಿ ಕೋಲಾರ, ಎಚ್ಚೆನ್, ಸೋಮಶೇಖರ ಗೌಡ, ಹ.ಸೋಮಶೇಖರ್ ಬಂದಿದ್ದೆವು. ನಾವು ಸತತವಾಗಿ ಓದುತಿದ್ದ ’ಸಂಕ್ರಮಣ’ ಪತ್ರಿಕೆಯ ಮೂಲಕ ನಮಗೆ ಅಪಾರ ಮೆಚ್ಚುಗೆಯಾಗಿದ್ದ ಚಂಪಾರನ್ನು ಅಂದೇ ಮೊದಲು ನೋಡಿದ್ದು. ಅವರ ಮೊನಚು, ವ್ಯಂಗ್ಯಗಳಿಂದಾಗಿ ಮಿಕ್ಕೆಲ್ಲ ಸಾಹಿತಿಗಳಿಗಿಂತಲೂ ಚಂಪಾ ನಮಗೆ ಹೆಚ್ಚು ಹತ್ತಿರವಾಗಿದ್ದರು. ಮಿಕ್ಕವರ ಸಾಹಿತ್ಯ ಅದರ ಸಂಕೀರ್ಣತೆಯಿಂದಾಗಿ ಆ ಹದಿಹರೆಯದ ವಯಸ್ಸಿನಲ್ಲಿ ನಮಗೆ ಅಷ್ಟೇನು ಅರ್ಥವಾಗುತ್ತಿರಲಿಲ್ಲ. ಅವರು ಬಂಡಾಯ ಸಮ್ಮೇಳನದ ಸಭಾಂಗಣದ ಮುಂದೆ, ಅದಾಗ ತಾನೇ ಬರೆದುತಂದಿದ್ದ ’ನಳಕವಿಯ ಮಸ್ತಕಾಭಿಷೇಕ’ ನಾಟಕದ ಪೋಸ್ಟರ್‌ಅನ್ನು ಕಂಬಕ್ಕೆ ಕಟ್ಟುತ್ತಿದ್ದರು. ದೂರದಿಂದ ಚಂಪಾ ಅವರನ್ನು ನಮಗೆ ಎಟುಕಲಾರದ ಬಹಳ ದೊಡ್ಡ ಸಾಹಿತಿ ಎಂದು ಊಹಿಸಿಕೊಂಡಿದ್ದೆವು, ಅಲ್ಲಿ ಅವರ ಸರಳತೆಯನ್ನು ಕಂಡು ದಂಗಾದೆವು!

ನಂತರದ ಬಂಡಾಯ ಸಾಹಿತ್ಯದ ಒಡನಾಟದಲ್ಲಿ ಚಂಪಾ ತೀರಾ ಹತ್ತಿರವಾಗಿಬಿಟ್ಟರು. ನಾನು ’ಲಂಕೇಶ್ ಪತ್ರಿಕೆ’ಯಲ್ಲಿ ಬರೆಯಲು ಆರಂಭಿಸಿದ ಮೇಲಂತೂ ತೀರಾ ಆಪ್ತರಾಗಿ, ಅವರು ಲಂಕೇಶರ ಜತೆ ಜಗಳವಾಡಿಕೊಂಡು ಹೊರಹೋದ ಮೇಲೂ ಅವರ ನನ್ನ ಬಾಂಧವ್ಯ ಕಡಿಮೆಯಾಗಲಿಲ್ಲ. ಲಂಕೇಶರು ನಿಧನರಾದ ನಂತರ, ನಾವೆಲ್ಲ ’ಅಗ್ನಿ’ ಪತ್ರಿಕೆಯಲ್ಲಿ ಬರೆಯಲು ಆರಂಭಿಸಿದ ಮೇಲೆ ಅಗ್ನಿ ಶ್ರೀಧರ್ ಮತ್ತಿತರ ಸಾಹಿತಿ ಹೋರಾಟಗಾರರೊಂದಿಗೆ ಅನೇಕ ಪ್ರತಿಭಟನೆ, ಹೋರಾಟಗಳನ್ನು ಹಮ್ಮಿಕೊಂಡೆವು, ಅದರಲ್ಲಿ ಪ್ರಮುಖ ಪಾತ್ರ ಚಂಪಾ ಅವರದೇ ಆಗಿತ್ತು.

ರಾಜಕುಮಾರ್ ಅವರನ್ನು ವೀರಪ್ಪನ್ ಕಿಡ್ನಾಪ್ ಮಾಡಿದಾಗ ಈ ಸಂಬಂಧ ನೆಡುಮಾರನ್ ಅವರನ್ನು ನೋಡಲು ಅಗ್ನಿ ಶ್ರೀಧರ್ ನೇತೃತ್ವದಲ್ಲಿ ದೇವನೂರು ಮಹದೇವ, ಅಗ್ರಹಾರ ಕೃಷ್ಣಮೂರ್ತಿ, ಎಲ್.ಹನುಮಂತಯ್ಯ ಮುಂತಾಗಿ ನಾವೆಲ್ಲ ಬಸ್ ಮಾಡಿಕೊಂಡು ಚೆನೈಗೆ ಹೋಗಿದ್ದೆವು. ಅದಕ್ಕೂ ಕ್ಯಾಪ್ಟನ್ ಚಂಪಾ ಅವರೇ ಆಗಿದ್ದರು.

ಅಮೆರಿಕದ ಬಾಲ್ಟಿಮೋರ್‌ನಲ್ಲಿ ನಡೆದ ’ಅಕ್ಕ’ ಸಮ್ಮೇಳನಕ್ಕೆ ಅನೇಕ ಸಾಹಿತಿ ಕಲಾವಿದರೊಂದಿಗೆ ಚಂಪಾ, ಜನ್ನಿ, ನಾನು ಕೂಡ ಹೋಗಿದ್ದೆವು. ಅಲ್ಲೇ ನೆಲೆಸಿರುವ ಸಿರೂರ್ ಹನುಮಂತ ರೆಡ್ಡಿ ನಮ್ಮೊಂದಿಗೆ ಸೇರಿಕೊಂಡರು. ಗೋಷ್ಠಿಯೊಂದರಲ್ಲಿ ಎಸ್.ಎಲ್.ಬೈರಪ್ಪನವರನ್ನು ಹಾಡಿ ಹೊಗಳುವ ಭಜನಾ ಕಾರ್ಯಕ್ರಮವೊಂದು ನಡೆಯುತಿತ್ತು. “ಸರ್.. ನಿಮ್ಮ ’ಪರ್ವ’ ಕಾದಂಬರಿ ಮಹಾಭಾರತದ ಮರುಸೃಷ್ಟಿ.. ಕನ್ನಡದಲ್ಲಿ ಇಂತಹದೊಂದು ಬರುವುದು ಅಪರೂಪ.. ಇದೇ ರೀತಿ ರಾಮಾಯಣದ ಮರುಸೃಷ್ಟಿ ಮಾಡಿ ಸರ್.. ನಿಮ್ಮಿಂದ ಮಾತ್ರ ಇದು ಸಾದ್ಯ..” ಎಂದು ಒಬ್ಬ ವಟು ಹೇಳಿದಾಕ್ಷಣ ಬೇರೆಲ್ಲಾ ವಟುಗಳು ’ವಟವಟ’ ಎನ್ನತೊಡಗಿದವು. ಬೈರಪ್ಪನವರು “ರಾಮಾಯಣ ಮರುಸೃಷ್ಟಿ ಸಾಧವಾಗಲಾರದು..” ಎನ್ನುತಿದ್ದಂತೆ ಹಿಂದೆ ನಮ್ಮೊಂದಿಗೆ ಕುಂತಿದ್ದ ಚಂಪಾ “ನೀವ್ಯಾರೂ ಕುವೆಂಪು ಅವರ ರಾಮಾಯಣ ದರ್ಶನಂ ಓದಿಲ್ಲೇನ್ರಿ.. ಅದು ರಾಮಾಯಣದ ಮರುಸೃಷ್ಟಿ ಅಲ್ಲೇನು” ಎನ್ನುತಿದ್ದಂತೆ ಬೈರಪ್ಪನವರ ವಂದಿಮಾಗಧ ವಟುಗಳು ಮೌನವಾದರು. ನಾವು ಆ ಭಜನಾ ಕಾರ್ಯಕ್ರಮವನ್ನು ಪ್ರತಿಭಟಿಸಿ ಹೊರಬಂದೆವು. ಅಂದು ಇಡೀ ರಾತ್ರಿ ತೀರ್ಥಸೇವನೆ ಮಾಡುತ್ತಾ ಚಂಪಾ ಅವರ ಜೋಕುಗಳಿಗೆ ಮನಸಾರೆ ನಕ್ಕೆವು.

ನಂತರದ ದಿನಗಳಲ್ಲಿ ಚಂಪಾ ಅವರೊಂದಿಗೆ ಅನೇಕ ಟಿ.ವಿ. ಡಿಬೇಟ್‌ಗಳಲ್ಲಿ ಭಾಗವಹಿಸುತ್ತಿದ್ದೆ.
ನಾವಿಬ್ಬರೂ ಸೇರಿದರಂತೂ ಚಡ್ಡಿಗಳನ್ನು ಹಣ್ಣುಗಾಯಿ ನೀರುಗಾಯಿ ಮಾಡುತ್ತಿದ್ದೆವು. ’ಲಿಂಗಾಯತ ಧರ್ಮ’ದ ಹೋರಾಟದಲ್ಲೂ ಇಬ್ಬರೂ ಜತೆಜತೆಯಾಗಿ ಅನೇಕ ಸಭೆಗಳಲ್ಲಿ ಪಾಲ್ಗೊಂಡೆವು. ಚಂಪಾ
ಕುರಿತು ಮಾತಾಡಲು ಬರೆಯಲು ಇನ್ನೂ ಸಾಕಷ್ಟಿದೆ, ಮುಂದೆ ಬರೆಯುತ್ತೇನೆ. ಕವಿ, ನಾಟಕಕಾರ, ಹೋರಾಟಗಾರರಾದ ಚಂಪಾ ನಮ್ಮಂತವರ ಸಾಕ್ಷಿಪ್ರಜ್ಞೆಯಾಗಿದ್ದರು. ಎಂದೂ ಎಲ್ಲೂ ರಾಜಿಯಾಗದ ತಮ್ಮ ಸಾಹಿತ್ಯ ಮತ್ತು ಹೋರಾಟಗಳಿಂದಾಗಿ ಸದಾ ಜೀವಂತವಾಗಿದ್ದ ಚಂಪಾರಿಗೆ ಸಾವಿಲ್ಲ, ಇನ್ನು ಮುಂದೆ ನಡೆಯುವ ಹೋರಾಟಗಳಲ್ಲೂ ಅವರು ನಮ್ಮೊಂದಿಗೆ-ನಮ್ಮೊಳಗೆ ಜೀವಂತವಾಗಿ ಇರುತ್ತಾರೆ.

ಸಿ.ಎಸ್.ದ್ವಾರಕಾನಾಥ್

ಸಿ.ಎಸ್.ದ್ವಾರಕಾನಾಥ್
ವೃತ್ತಿಯಿಂದ ವಕೀಲರು. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರು. ಲಂಕೇಶ್ ಪತ್ರಿಕೆಯ ಒಡನಾಡಿಯಾಗಿದ್ದ ದ್ವಾರಕಾನಾಥ್, ’ಮೂಕ ನಾಯಕ’, ’ಗಾಂಧಿಮಟ್ಟಿದ ನಾಡಿನಲ್ಲಿ’, ’ಸಾಕ್ರೆಟಿಸ್ ಮತ್ತಿತರ ಕಥೆಗಳು’ ಕೃತಿಗಳನ್ನು ರಚಿಸಿದ್ದಾರೆ.


ಇದನ್ನೂ ಓದಿ: ಓಶೋ ಕಂಡಂತೆ ವಿವೇಕಾನಂದರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...