Homeಮುಖಪುಟಚಂಪಾರೊಂದಿಗೆ ಹೆಜ್ಜೆ ಹಾಕಿದ ನೆನಪು..

ಚಂಪಾರೊಂದಿಗೆ ಹೆಜ್ಜೆ ಹಾಕಿದ ನೆನಪು..

- Advertisement -
- Advertisement -

1979 ಮಾರ್ಚ್ 10ರಂದು ಬೆಂಗಳೂರಿನ ದೇವಾಂಗ ಸಂಘದಲ್ಲಿ ನಡೆದ ಮೊದಲನೇ ಬಂಡಾಯ ಸಾಹಿತ್ಯ ಸಮ್ಮೇಳನಕ್ಕೆ ಕೋಲಾರದಿಂದ ನಾನು, ಕೋಟಿಗಾನಹಳ್ಳಿ ರಾಮಯ್ಯ, ಲಕ್ಷ್ಮೀಪತಿ ಕೋಲಾರ, ಎಚ್ಚೆನ್, ಸೋಮಶೇಖರ ಗೌಡ, ಹ.ಸೋಮಶೇಖರ್ ಬಂದಿದ್ದೆವು. ನಾವು ಸತತವಾಗಿ ಓದುತಿದ್ದ ’ಸಂಕ್ರಮಣ’ ಪತ್ರಿಕೆಯ ಮೂಲಕ ನಮಗೆ ಅಪಾರ ಮೆಚ್ಚುಗೆಯಾಗಿದ್ದ ಚಂಪಾರನ್ನು ಅಂದೇ ಮೊದಲು ನೋಡಿದ್ದು. ಅವರ ಮೊನಚು, ವ್ಯಂಗ್ಯಗಳಿಂದಾಗಿ ಮಿಕ್ಕೆಲ್ಲ ಸಾಹಿತಿಗಳಿಗಿಂತಲೂ ಚಂಪಾ ನಮಗೆ ಹೆಚ್ಚು ಹತ್ತಿರವಾಗಿದ್ದರು. ಮಿಕ್ಕವರ ಸಾಹಿತ್ಯ ಅದರ ಸಂಕೀರ್ಣತೆಯಿಂದಾಗಿ ಆ ಹದಿಹರೆಯದ ವಯಸ್ಸಿನಲ್ಲಿ ನಮಗೆ ಅಷ್ಟೇನು ಅರ್ಥವಾಗುತ್ತಿರಲಿಲ್ಲ. ಅವರು ಬಂಡಾಯ ಸಮ್ಮೇಳನದ ಸಭಾಂಗಣದ ಮುಂದೆ, ಅದಾಗ ತಾನೇ ಬರೆದುತಂದಿದ್ದ ’ನಳಕವಿಯ ಮಸ್ತಕಾಭಿಷೇಕ’ ನಾಟಕದ ಪೋಸ್ಟರ್‌ಅನ್ನು ಕಂಬಕ್ಕೆ ಕಟ್ಟುತ್ತಿದ್ದರು. ದೂರದಿಂದ ಚಂಪಾ ಅವರನ್ನು ನಮಗೆ ಎಟುಕಲಾರದ ಬಹಳ ದೊಡ್ಡ ಸಾಹಿತಿ ಎಂದು ಊಹಿಸಿಕೊಂಡಿದ್ದೆವು, ಅಲ್ಲಿ ಅವರ ಸರಳತೆಯನ್ನು ಕಂಡು ದಂಗಾದೆವು!

ನಂತರದ ಬಂಡಾಯ ಸಾಹಿತ್ಯದ ಒಡನಾಟದಲ್ಲಿ ಚಂಪಾ ತೀರಾ ಹತ್ತಿರವಾಗಿಬಿಟ್ಟರು. ನಾನು ’ಲಂಕೇಶ್ ಪತ್ರಿಕೆ’ಯಲ್ಲಿ ಬರೆಯಲು ಆರಂಭಿಸಿದ ಮೇಲಂತೂ ತೀರಾ ಆಪ್ತರಾಗಿ, ಅವರು ಲಂಕೇಶರ ಜತೆ ಜಗಳವಾಡಿಕೊಂಡು ಹೊರಹೋದ ಮೇಲೂ ಅವರ ನನ್ನ ಬಾಂಧವ್ಯ ಕಡಿಮೆಯಾಗಲಿಲ್ಲ. ಲಂಕೇಶರು ನಿಧನರಾದ ನಂತರ, ನಾವೆಲ್ಲ ’ಅಗ್ನಿ’ ಪತ್ರಿಕೆಯಲ್ಲಿ ಬರೆಯಲು ಆರಂಭಿಸಿದ ಮೇಲೆ ಅಗ್ನಿ ಶ್ರೀಧರ್ ಮತ್ತಿತರ ಸಾಹಿತಿ ಹೋರಾಟಗಾರರೊಂದಿಗೆ ಅನೇಕ ಪ್ರತಿಭಟನೆ, ಹೋರಾಟಗಳನ್ನು ಹಮ್ಮಿಕೊಂಡೆವು, ಅದರಲ್ಲಿ ಪ್ರಮುಖ ಪಾತ್ರ ಚಂಪಾ ಅವರದೇ ಆಗಿತ್ತು.

ರಾಜಕುಮಾರ್ ಅವರನ್ನು ವೀರಪ್ಪನ್ ಕಿಡ್ನಾಪ್ ಮಾಡಿದಾಗ ಈ ಸಂಬಂಧ ನೆಡುಮಾರನ್ ಅವರನ್ನು ನೋಡಲು ಅಗ್ನಿ ಶ್ರೀಧರ್ ನೇತೃತ್ವದಲ್ಲಿ ದೇವನೂರು ಮಹದೇವ, ಅಗ್ರಹಾರ ಕೃಷ್ಣಮೂರ್ತಿ, ಎಲ್.ಹನುಮಂತಯ್ಯ ಮುಂತಾಗಿ ನಾವೆಲ್ಲ ಬಸ್ ಮಾಡಿಕೊಂಡು ಚೆನೈಗೆ ಹೋಗಿದ್ದೆವು. ಅದಕ್ಕೂ ಕ್ಯಾಪ್ಟನ್ ಚಂಪಾ ಅವರೇ ಆಗಿದ್ದರು.

ಅಮೆರಿಕದ ಬಾಲ್ಟಿಮೋರ್‌ನಲ್ಲಿ ನಡೆದ ’ಅಕ್ಕ’ ಸಮ್ಮೇಳನಕ್ಕೆ ಅನೇಕ ಸಾಹಿತಿ ಕಲಾವಿದರೊಂದಿಗೆ ಚಂಪಾ, ಜನ್ನಿ, ನಾನು ಕೂಡ ಹೋಗಿದ್ದೆವು. ಅಲ್ಲೇ ನೆಲೆಸಿರುವ ಸಿರೂರ್ ಹನುಮಂತ ರೆಡ್ಡಿ ನಮ್ಮೊಂದಿಗೆ ಸೇರಿಕೊಂಡರು. ಗೋಷ್ಠಿಯೊಂದರಲ್ಲಿ ಎಸ್.ಎಲ್.ಬೈರಪ್ಪನವರನ್ನು ಹಾಡಿ ಹೊಗಳುವ ಭಜನಾ ಕಾರ್ಯಕ್ರಮವೊಂದು ನಡೆಯುತಿತ್ತು. “ಸರ್.. ನಿಮ್ಮ ’ಪರ್ವ’ ಕಾದಂಬರಿ ಮಹಾಭಾರತದ ಮರುಸೃಷ್ಟಿ.. ಕನ್ನಡದಲ್ಲಿ ಇಂತಹದೊಂದು ಬರುವುದು ಅಪರೂಪ.. ಇದೇ ರೀತಿ ರಾಮಾಯಣದ ಮರುಸೃಷ್ಟಿ ಮಾಡಿ ಸರ್.. ನಿಮ್ಮಿಂದ ಮಾತ್ರ ಇದು ಸಾದ್ಯ..” ಎಂದು ಒಬ್ಬ ವಟು ಹೇಳಿದಾಕ್ಷಣ ಬೇರೆಲ್ಲಾ ವಟುಗಳು ’ವಟವಟ’ ಎನ್ನತೊಡಗಿದವು. ಬೈರಪ್ಪನವರು “ರಾಮಾಯಣ ಮರುಸೃಷ್ಟಿ ಸಾಧವಾಗಲಾರದು..” ಎನ್ನುತಿದ್ದಂತೆ ಹಿಂದೆ ನಮ್ಮೊಂದಿಗೆ ಕುಂತಿದ್ದ ಚಂಪಾ “ನೀವ್ಯಾರೂ ಕುವೆಂಪು ಅವರ ರಾಮಾಯಣ ದರ್ಶನಂ ಓದಿಲ್ಲೇನ್ರಿ.. ಅದು ರಾಮಾಯಣದ ಮರುಸೃಷ್ಟಿ ಅಲ್ಲೇನು” ಎನ್ನುತಿದ್ದಂತೆ ಬೈರಪ್ಪನವರ ವಂದಿಮಾಗಧ ವಟುಗಳು ಮೌನವಾದರು. ನಾವು ಆ ಭಜನಾ ಕಾರ್ಯಕ್ರಮವನ್ನು ಪ್ರತಿಭಟಿಸಿ ಹೊರಬಂದೆವು. ಅಂದು ಇಡೀ ರಾತ್ರಿ ತೀರ್ಥಸೇವನೆ ಮಾಡುತ್ತಾ ಚಂಪಾ ಅವರ ಜೋಕುಗಳಿಗೆ ಮನಸಾರೆ ನಕ್ಕೆವು.

ನಂತರದ ದಿನಗಳಲ್ಲಿ ಚಂಪಾ ಅವರೊಂದಿಗೆ ಅನೇಕ ಟಿ.ವಿ. ಡಿಬೇಟ್‌ಗಳಲ್ಲಿ ಭಾಗವಹಿಸುತ್ತಿದ್ದೆ.
ನಾವಿಬ್ಬರೂ ಸೇರಿದರಂತೂ ಚಡ್ಡಿಗಳನ್ನು ಹಣ್ಣುಗಾಯಿ ನೀರುಗಾಯಿ ಮಾಡುತ್ತಿದ್ದೆವು. ’ಲಿಂಗಾಯತ ಧರ್ಮ’ದ ಹೋರಾಟದಲ್ಲೂ ಇಬ್ಬರೂ ಜತೆಜತೆಯಾಗಿ ಅನೇಕ ಸಭೆಗಳಲ್ಲಿ ಪಾಲ್ಗೊಂಡೆವು. ಚಂಪಾ
ಕುರಿತು ಮಾತಾಡಲು ಬರೆಯಲು ಇನ್ನೂ ಸಾಕಷ್ಟಿದೆ, ಮುಂದೆ ಬರೆಯುತ್ತೇನೆ. ಕವಿ, ನಾಟಕಕಾರ, ಹೋರಾಟಗಾರರಾದ ಚಂಪಾ ನಮ್ಮಂತವರ ಸಾಕ್ಷಿಪ್ರಜ್ಞೆಯಾಗಿದ್ದರು. ಎಂದೂ ಎಲ್ಲೂ ರಾಜಿಯಾಗದ ತಮ್ಮ ಸಾಹಿತ್ಯ ಮತ್ತು ಹೋರಾಟಗಳಿಂದಾಗಿ ಸದಾ ಜೀವಂತವಾಗಿದ್ದ ಚಂಪಾರಿಗೆ ಸಾವಿಲ್ಲ, ಇನ್ನು ಮುಂದೆ ನಡೆಯುವ ಹೋರಾಟಗಳಲ್ಲೂ ಅವರು ನಮ್ಮೊಂದಿಗೆ-ನಮ್ಮೊಳಗೆ ಜೀವಂತವಾಗಿ ಇರುತ್ತಾರೆ.

ಸಿ.ಎಸ್.ದ್ವಾರಕಾನಾಥ್

ಸಿ.ಎಸ್.ದ್ವಾರಕಾನಾಥ್
ವೃತ್ತಿಯಿಂದ ವಕೀಲರು. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರು. ಲಂಕೇಶ್ ಪತ್ರಿಕೆಯ ಒಡನಾಡಿಯಾಗಿದ್ದ ದ್ವಾರಕಾನಾಥ್, ’ಮೂಕ ನಾಯಕ’, ’ಗಾಂಧಿಮಟ್ಟಿದ ನಾಡಿನಲ್ಲಿ’, ’ಸಾಕ್ರೆಟಿಸ್ ಮತ್ತಿತರ ಕಥೆಗಳು’ ಕೃತಿಗಳನ್ನು ರಚಿಸಿದ್ದಾರೆ.


ಇದನ್ನೂ ಓದಿ: ಓಶೋ ಕಂಡಂತೆ ವಿವೇಕಾನಂದರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...