Homeಮುಖಪುಟಚಂಪಾರೊಂದಿಗೆ ಹೆಜ್ಜೆ ಹಾಕಿದ ನೆನಪು..

ಚಂಪಾರೊಂದಿಗೆ ಹೆಜ್ಜೆ ಹಾಕಿದ ನೆನಪು..

- Advertisement -
- Advertisement -

1979 ಮಾರ್ಚ್ 10ರಂದು ಬೆಂಗಳೂರಿನ ದೇವಾಂಗ ಸಂಘದಲ್ಲಿ ನಡೆದ ಮೊದಲನೇ ಬಂಡಾಯ ಸಾಹಿತ್ಯ ಸಮ್ಮೇಳನಕ್ಕೆ ಕೋಲಾರದಿಂದ ನಾನು, ಕೋಟಿಗಾನಹಳ್ಳಿ ರಾಮಯ್ಯ, ಲಕ್ಷ್ಮೀಪತಿ ಕೋಲಾರ, ಎಚ್ಚೆನ್, ಸೋಮಶೇಖರ ಗೌಡ, ಹ.ಸೋಮಶೇಖರ್ ಬಂದಿದ್ದೆವು. ನಾವು ಸತತವಾಗಿ ಓದುತಿದ್ದ ’ಸಂಕ್ರಮಣ’ ಪತ್ರಿಕೆಯ ಮೂಲಕ ನಮಗೆ ಅಪಾರ ಮೆಚ್ಚುಗೆಯಾಗಿದ್ದ ಚಂಪಾರನ್ನು ಅಂದೇ ಮೊದಲು ನೋಡಿದ್ದು. ಅವರ ಮೊನಚು, ವ್ಯಂಗ್ಯಗಳಿಂದಾಗಿ ಮಿಕ್ಕೆಲ್ಲ ಸಾಹಿತಿಗಳಿಗಿಂತಲೂ ಚಂಪಾ ನಮಗೆ ಹೆಚ್ಚು ಹತ್ತಿರವಾಗಿದ್ದರು. ಮಿಕ್ಕವರ ಸಾಹಿತ್ಯ ಅದರ ಸಂಕೀರ್ಣತೆಯಿಂದಾಗಿ ಆ ಹದಿಹರೆಯದ ವಯಸ್ಸಿನಲ್ಲಿ ನಮಗೆ ಅಷ್ಟೇನು ಅರ್ಥವಾಗುತ್ತಿರಲಿಲ್ಲ. ಅವರು ಬಂಡಾಯ ಸಮ್ಮೇಳನದ ಸಭಾಂಗಣದ ಮುಂದೆ, ಅದಾಗ ತಾನೇ ಬರೆದುತಂದಿದ್ದ ’ನಳಕವಿಯ ಮಸ್ತಕಾಭಿಷೇಕ’ ನಾಟಕದ ಪೋಸ್ಟರ್‌ಅನ್ನು ಕಂಬಕ್ಕೆ ಕಟ್ಟುತ್ತಿದ್ದರು. ದೂರದಿಂದ ಚಂಪಾ ಅವರನ್ನು ನಮಗೆ ಎಟುಕಲಾರದ ಬಹಳ ದೊಡ್ಡ ಸಾಹಿತಿ ಎಂದು ಊಹಿಸಿಕೊಂಡಿದ್ದೆವು, ಅಲ್ಲಿ ಅವರ ಸರಳತೆಯನ್ನು ಕಂಡು ದಂಗಾದೆವು!

ನಂತರದ ಬಂಡಾಯ ಸಾಹಿತ್ಯದ ಒಡನಾಟದಲ್ಲಿ ಚಂಪಾ ತೀರಾ ಹತ್ತಿರವಾಗಿಬಿಟ್ಟರು. ನಾನು ’ಲಂಕೇಶ್ ಪತ್ರಿಕೆ’ಯಲ್ಲಿ ಬರೆಯಲು ಆರಂಭಿಸಿದ ಮೇಲಂತೂ ತೀರಾ ಆಪ್ತರಾಗಿ, ಅವರು ಲಂಕೇಶರ ಜತೆ ಜಗಳವಾಡಿಕೊಂಡು ಹೊರಹೋದ ಮೇಲೂ ಅವರ ನನ್ನ ಬಾಂಧವ್ಯ ಕಡಿಮೆಯಾಗಲಿಲ್ಲ. ಲಂಕೇಶರು ನಿಧನರಾದ ನಂತರ, ನಾವೆಲ್ಲ ’ಅಗ್ನಿ’ ಪತ್ರಿಕೆಯಲ್ಲಿ ಬರೆಯಲು ಆರಂಭಿಸಿದ ಮೇಲೆ ಅಗ್ನಿ ಶ್ರೀಧರ್ ಮತ್ತಿತರ ಸಾಹಿತಿ ಹೋರಾಟಗಾರರೊಂದಿಗೆ ಅನೇಕ ಪ್ರತಿಭಟನೆ, ಹೋರಾಟಗಳನ್ನು ಹಮ್ಮಿಕೊಂಡೆವು, ಅದರಲ್ಲಿ ಪ್ರಮುಖ ಪಾತ್ರ ಚಂಪಾ ಅವರದೇ ಆಗಿತ್ತು.

ರಾಜಕುಮಾರ್ ಅವರನ್ನು ವೀರಪ್ಪನ್ ಕಿಡ್ನಾಪ್ ಮಾಡಿದಾಗ ಈ ಸಂಬಂಧ ನೆಡುಮಾರನ್ ಅವರನ್ನು ನೋಡಲು ಅಗ್ನಿ ಶ್ರೀಧರ್ ನೇತೃತ್ವದಲ್ಲಿ ದೇವನೂರು ಮಹದೇವ, ಅಗ್ರಹಾರ ಕೃಷ್ಣಮೂರ್ತಿ, ಎಲ್.ಹನುಮಂತಯ್ಯ ಮುಂತಾಗಿ ನಾವೆಲ್ಲ ಬಸ್ ಮಾಡಿಕೊಂಡು ಚೆನೈಗೆ ಹೋಗಿದ್ದೆವು. ಅದಕ್ಕೂ ಕ್ಯಾಪ್ಟನ್ ಚಂಪಾ ಅವರೇ ಆಗಿದ್ದರು.

ಅಮೆರಿಕದ ಬಾಲ್ಟಿಮೋರ್‌ನಲ್ಲಿ ನಡೆದ ’ಅಕ್ಕ’ ಸಮ್ಮೇಳನಕ್ಕೆ ಅನೇಕ ಸಾಹಿತಿ ಕಲಾವಿದರೊಂದಿಗೆ ಚಂಪಾ, ಜನ್ನಿ, ನಾನು ಕೂಡ ಹೋಗಿದ್ದೆವು. ಅಲ್ಲೇ ನೆಲೆಸಿರುವ ಸಿರೂರ್ ಹನುಮಂತ ರೆಡ್ಡಿ ನಮ್ಮೊಂದಿಗೆ ಸೇರಿಕೊಂಡರು. ಗೋಷ್ಠಿಯೊಂದರಲ್ಲಿ ಎಸ್.ಎಲ್.ಬೈರಪ್ಪನವರನ್ನು ಹಾಡಿ ಹೊಗಳುವ ಭಜನಾ ಕಾರ್ಯಕ್ರಮವೊಂದು ನಡೆಯುತಿತ್ತು. “ಸರ್.. ನಿಮ್ಮ ’ಪರ್ವ’ ಕಾದಂಬರಿ ಮಹಾಭಾರತದ ಮರುಸೃಷ್ಟಿ.. ಕನ್ನಡದಲ್ಲಿ ಇಂತಹದೊಂದು ಬರುವುದು ಅಪರೂಪ.. ಇದೇ ರೀತಿ ರಾಮಾಯಣದ ಮರುಸೃಷ್ಟಿ ಮಾಡಿ ಸರ್.. ನಿಮ್ಮಿಂದ ಮಾತ್ರ ಇದು ಸಾದ್ಯ..” ಎಂದು ಒಬ್ಬ ವಟು ಹೇಳಿದಾಕ್ಷಣ ಬೇರೆಲ್ಲಾ ವಟುಗಳು ’ವಟವಟ’ ಎನ್ನತೊಡಗಿದವು. ಬೈರಪ್ಪನವರು “ರಾಮಾಯಣ ಮರುಸೃಷ್ಟಿ ಸಾಧವಾಗಲಾರದು..” ಎನ್ನುತಿದ್ದಂತೆ ಹಿಂದೆ ನಮ್ಮೊಂದಿಗೆ ಕುಂತಿದ್ದ ಚಂಪಾ “ನೀವ್ಯಾರೂ ಕುವೆಂಪು ಅವರ ರಾಮಾಯಣ ದರ್ಶನಂ ಓದಿಲ್ಲೇನ್ರಿ.. ಅದು ರಾಮಾಯಣದ ಮರುಸೃಷ್ಟಿ ಅಲ್ಲೇನು” ಎನ್ನುತಿದ್ದಂತೆ ಬೈರಪ್ಪನವರ ವಂದಿಮಾಗಧ ವಟುಗಳು ಮೌನವಾದರು. ನಾವು ಆ ಭಜನಾ ಕಾರ್ಯಕ್ರಮವನ್ನು ಪ್ರತಿಭಟಿಸಿ ಹೊರಬಂದೆವು. ಅಂದು ಇಡೀ ರಾತ್ರಿ ತೀರ್ಥಸೇವನೆ ಮಾಡುತ್ತಾ ಚಂಪಾ ಅವರ ಜೋಕುಗಳಿಗೆ ಮನಸಾರೆ ನಕ್ಕೆವು.

ನಂತರದ ದಿನಗಳಲ್ಲಿ ಚಂಪಾ ಅವರೊಂದಿಗೆ ಅನೇಕ ಟಿ.ವಿ. ಡಿಬೇಟ್‌ಗಳಲ್ಲಿ ಭಾಗವಹಿಸುತ್ತಿದ್ದೆ.
ನಾವಿಬ್ಬರೂ ಸೇರಿದರಂತೂ ಚಡ್ಡಿಗಳನ್ನು ಹಣ್ಣುಗಾಯಿ ನೀರುಗಾಯಿ ಮಾಡುತ್ತಿದ್ದೆವು. ’ಲಿಂಗಾಯತ ಧರ್ಮ’ದ ಹೋರಾಟದಲ್ಲೂ ಇಬ್ಬರೂ ಜತೆಜತೆಯಾಗಿ ಅನೇಕ ಸಭೆಗಳಲ್ಲಿ ಪಾಲ್ಗೊಂಡೆವು. ಚಂಪಾ
ಕುರಿತು ಮಾತಾಡಲು ಬರೆಯಲು ಇನ್ನೂ ಸಾಕಷ್ಟಿದೆ, ಮುಂದೆ ಬರೆಯುತ್ತೇನೆ. ಕವಿ, ನಾಟಕಕಾರ, ಹೋರಾಟಗಾರರಾದ ಚಂಪಾ ನಮ್ಮಂತವರ ಸಾಕ್ಷಿಪ್ರಜ್ಞೆಯಾಗಿದ್ದರು. ಎಂದೂ ಎಲ್ಲೂ ರಾಜಿಯಾಗದ ತಮ್ಮ ಸಾಹಿತ್ಯ ಮತ್ತು ಹೋರಾಟಗಳಿಂದಾಗಿ ಸದಾ ಜೀವಂತವಾಗಿದ್ದ ಚಂಪಾರಿಗೆ ಸಾವಿಲ್ಲ, ಇನ್ನು ಮುಂದೆ ನಡೆಯುವ ಹೋರಾಟಗಳಲ್ಲೂ ಅವರು ನಮ್ಮೊಂದಿಗೆ-ನಮ್ಮೊಳಗೆ ಜೀವಂತವಾಗಿ ಇರುತ್ತಾರೆ.

ಸಿ.ಎಸ್.ದ್ವಾರಕಾನಾಥ್

ಸಿ.ಎಸ್.ದ್ವಾರಕಾನಾಥ್
ವೃತ್ತಿಯಿಂದ ವಕೀಲರು. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರು. ಲಂಕೇಶ್ ಪತ್ರಿಕೆಯ ಒಡನಾಡಿಯಾಗಿದ್ದ ದ್ವಾರಕಾನಾಥ್, ’ಮೂಕ ನಾಯಕ’, ’ಗಾಂಧಿಮಟ್ಟಿದ ನಾಡಿನಲ್ಲಿ’, ’ಸಾಕ್ರೆಟಿಸ್ ಮತ್ತಿತರ ಕಥೆಗಳು’ ಕೃತಿಗಳನ್ನು ರಚಿಸಿದ್ದಾರೆ.


ಇದನ್ನೂ ಓದಿ: ಓಶೋ ಕಂಡಂತೆ ವಿವೇಕಾನಂದರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...