Homeಮುಖಪುಟಚಂಪಾರೊಂದಿಗೆ ಹೆಜ್ಜೆ ಹಾಕಿದ ನೆನಪು..

ಚಂಪಾರೊಂದಿಗೆ ಹೆಜ್ಜೆ ಹಾಕಿದ ನೆನಪು..

- Advertisement -
- Advertisement -

1979 ಮಾರ್ಚ್ 10ರಂದು ಬೆಂಗಳೂರಿನ ದೇವಾಂಗ ಸಂಘದಲ್ಲಿ ನಡೆದ ಮೊದಲನೇ ಬಂಡಾಯ ಸಾಹಿತ್ಯ ಸಮ್ಮೇಳನಕ್ಕೆ ಕೋಲಾರದಿಂದ ನಾನು, ಕೋಟಿಗಾನಹಳ್ಳಿ ರಾಮಯ್ಯ, ಲಕ್ಷ್ಮೀಪತಿ ಕೋಲಾರ, ಎಚ್ಚೆನ್, ಸೋಮಶೇಖರ ಗೌಡ, ಹ.ಸೋಮಶೇಖರ್ ಬಂದಿದ್ದೆವು. ನಾವು ಸತತವಾಗಿ ಓದುತಿದ್ದ ’ಸಂಕ್ರಮಣ’ ಪತ್ರಿಕೆಯ ಮೂಲಕ ನಮಗೆ ಅಪಾರ ಮೆಚ್ಚುಗೆಯಾಗಿದ್ದ ಚಂಪಾರನ್ನು ಅಂದೇ ಮೊದಲು ನೋಡಿದ್ದು. ಅವರ ಮೊನಚು, ವ್ಯಂಗ್ಯಗಳಿಂದಾಗಿ ಮಿಕ್ಕೆಲ್ಲ ಸಾಹಿತಿಗಳಿಗಿಂತಲೂ ಚಂಪಾ ನಮಗೆ ಹೆಚ್ಚು ಹತ್ತಿರವಾಗಿದ್ದರು. ಮಿಕ್ಕವರ ಸಾಹಿತ್ಯ ಅದರ ಸಂಕೀರ್ಣತೆಯಿಂದಾಗಿ ಆ ಹದಿಹರೆಯದ ವಯಸ್ಸಿನಲ್ಲಿ ನಮಗೆ ಅಷ್ಟೇನು ಅರ್ಥವಾಗುತ್ತಿರಲಿಲ್ಲ. ಅವರು ಬಂಡಾಯ ಸಮ್ಮೇಳನದ ಸಭಾಂಗಣದ ಮುಂದೆ, ಅದಾಗ ತಾನೇ ಬರೆದುತಂದಿದ್ದ ’ನಳಕವಿಯ ಮಸ್ತಕಾಭಿಷೇಕ’ ನಾಟಕದ ಪೋಸ್ಟರ್‌ಅನ್ನು ಕಂಬಕ್ಕೆ ಕಟ್ಟುತ್ತಿದ್ದರು. ದೂರದಿಂದ ಚಂಪಾ ಅವರನ್ನು ನಮಗೆ ಎಟುಕಲಾರದ ಬಹಳ ದೊಡ್ಡ ಸಾಹಿತಿ ಎಂದು ಊಹಿಸಿಕೊಂಡಿದ್ದೆವು, ಅಲ್ಲಿ ಅವರ ಸರಳತೆಯನ್ನು ಕಂಡು ದಂಗಾದೆವು!

ನಂತರದ ಬಂಡಾಯ ಸಾಹಿತ್ಯದ ಒಡನಾಟದಲ್ಲಿ ಚಂಪಾ ತೀರಾ ಹತ್ತಿರವಾಗಿಬಿಟ್ಟರು. ನಾನು ’ಲಂಕೇಶ್ ಪತ್ರಿಕೆ’ಯಲ್ಲಿ ಬರೆಯಲು ಆರಂಭಿಸಿದ ಮೇಲಂತೂ ತೀರಾ ಆಪ್ತರಾಗಿ, ಅವರು ಲಂಕೇಶರ ಜತೆ ಜಗಳವಾಡಿಕೊಂಡು ಹೊರಹೋದ ಮೇಲೂ ಅವರ ನನ್ನ ಬಾಂಧವ್ಯ ಕಡಿಮೆಯಾಗಲಿಲ್ಲ. ಲಂಕೇಶರು ನಿಧನರಾದ ನಂತರ, ನಾವೆಲ್ಲ ’ಅಗ್ನಿ’ ಪತ್ರಿಕೆಯಲ್ಲಿ ಬರೆಯಲು ಆರಂಭಿಸಿದ ಮೇಲೆ ಅಗ್ನಿ ಶ್ರೀಧರ್ ಮತ್ತಿತರ ಸಾಹಿತಿ ಹೋರಾಟಗಾರರೊಂದಿಗೆ ಅನೇಕ ಪ್ರತಿಭಟನೆ, ಹೋರಾಟಗಳನ್ನು ಹಮ್ಮಿಕೊಂಡೆವು, ಅದರಲ್ಲಿ ಪ್ರಮುಖ ಪಾತ್ರ ಚಂಪಾ ಅವರದೇ ಆಗಿತ್ತು.

ರಾಜಕುಮಾರ್ ಅವರನ್ನು ವೀರಪ್ಪನ್ ಕಿಡ್ನಾಪ್ ಮಾಡಿದಾಗ ಈ ಸಂಬಂಧ ನೆಡುಮಾರನ್ ಅವರನ್ನು ನೋಡಲು ಅಗ್ನಿ ಶ್ರೀಧರ್ ನೇತೃತ್ವದಲ್ಲಿ ದೇವನೂರು ಮಹದೇವ, ಅಗ್ರಹಾರ ಕೃಷ್ಣಮೂರ್ತಿ, ಎಲ್.ಹನುಮಂತಯ್ಯ ಮುಂತಾಗಿ ನಾವೆಲ್ಲ ಬಸ್ ಮಾಡಿಕೊಂಡು ಚೆನೈಗೆ ಹೋಗಿದ್ದೆವು. ಅದಕ್ಕೂ ಕ್ಯಾಪ್ಟನ್ ಚಂಪಾ ಅವರೇ ಆಗಿದ್ದರು.

ಅಮೆರಿಕದ ಬಾಲ್ಟಿಮೋರ್‌ನಲ್ಲಿ ನಡೆದ ’ಅಕ್ಕ’ ಸಮ್ಮೇಳನಕ್ಕೆ ಅನೇಕ ಸಾಹಿತಿ ಕಲಾವಿದರೊಂದಿಗೆ ಚಂಪಾ, ಜನ್ನಿ, ನಾನು ಕೂಡ ಹೋಗಿದ್ದೆವು. ಅಲ್ಲೇ ನೆಲೆಸಿರುವ ಸಿರೂರ್ ಹನುಮಂತ ರೆಡ್ಡಿ ನಮ್ಮೊಂದಿಗೆ ಸೇರಿಕೊಂಡರು. ಗೋಷ್ಠಿಯೊಂದರಲ್ಲಿ ಎಸ್.ಎಲ್.ಬೈರಪ್ಪನವರನ್ನು ಹಾಡಿ ಹೊಗಳುವ ಭಜನಾ ಕಾರ್ಯಕ್ರಮವೊಂದು ನಡೆಯುತಿತ್ತು. “ಸರ್.. ನಿಮ್ಮ ’ಪರ್ವ’ ಕಾದಂಬರಿ ಮಹಾಭಾರತದ ಮರುಸೃಷ್ಟಿ.. ಕನ್ನಡದಲ್ಲಿ ಇಂತಹದೊಂದು ಬರುವುದು ಅಪರೂಪ.. ಇದೇ ರೀತಿ ರಾಮಾಯಣದ ಮರುಸೃಷ್ಟಿ ಮಾಡಿ ಸರ್.. ನಿಮ್ಮಿಂದ ಮಾತ್ರ ಇದು ಸಾದ್ಯ..” ಎಂದು ಒಬ್ಬ ವಟು ಹೇಳಿದಾಕ್ಷಣ ಬೇರೆಲ್ಲಾ ವಟುಗಳು ’ವಟವಟ’ ಎನ್ನತೊಡಗಿದವು. ಬೈರಪ್ಪನವರು “ರಾಮಾಯಣ ಮರುಸೃಷ್ಟಿ ಸಾಧವಾಗಲಾರದು..” ಎನ್ನುತಿದ್ದಂತೆ ಹಿಂದೆ ನಮ್ಮೊಂದಿಗೆ ಕುಂತಿದ್ದ ಚಂಪಾ “ನೀವ್ಯಾರೂ ಕುವೆಂಪು ಅವರ ರಾಮಾಯಣ ದರ್ಶನಂ ಓದಿಲ್ಲೇನ್ರಿ.. ಅದು ರಾಮಾಯಣದ ಮರುಸೃಷ್ಟಿ ಅಲ್ಲೇನು” ಎನ್ನುತಿದ್ದಂತೆ ಬೈರಪ್ಪನವರ ವಂದಿಮಾಗಧ ವಟುಗಳು ಮೌನವಾದರು. ನಾವು ಆ ಭಜನಾ ಕಾರ್ಯಕ್ರಮವನ್ನು ಪ್ರತಿಭಟಿಸಿ ಹೊರಬಂದೆವು. ಅಂದು ಇಡೀ ರಾತ್ರಿ ತೀರ್ಥಸೇವನೆ ಮಾಡುತ್ತಾ ಚಂಪಾ ಅವರ ಜೋಕುಗಳಿಗೆ ಮನಸಾರೆ ನಕ್ಕೆವು.

ನಂತರದ ದಿನಗಳಲ್ಲಿ ಚಂಪಾ ಅವರೊಂದಿಗೆ ಅನೇಕ ಟಿ.ವಿ. ಡಿಬೇಟ್‌ಗಳಲ್ಲಿ ಭಾಗವಹಿಸುತ್ತಿದ್ದೆ.
ನಾವಿಬ್ಬರೂ ಸೇರಿದರಂತೂ ಚಡ್ಡಿಗಳನ್ನು ಹಣ್ಣುಗಾಯಿ ನೀರುಗಾಯಿ ಮಾಡುತ್ತಿದ್ದೆವು. ’ಲಿಂಗಾಯತ ಧರ್ಮ’ದ ಹೋರಾಟದಲ್ಲೂ ಇಬ್ಬರೂ ಜತೆಜತೆಯಾಗಿ ಅನೇಕ ಸಭೆಗಳಲ್ಲಿ ಪಾಲ್ಗೊಂಡೆವು. ಚಂಪಾ
ಕುರಿತು ಮಾತಾಡಲು ಬರೆಯಲು ಇನ್ನೂ ಸಾಕಷ್ಟಿದೆ, ಮುಂದೆ ಬರೆಯುತ್ತೇನೆ. ಕವಿ, ನಾಟಕಕಾರ, ಹೋರಾಟಗಾರರಾದ ಚಂಪಾ ನಮ್ಮಂತವರ ಸಾಕ್ಷಿಪ್ರಜ್ಞೆಯಾಗಿದ್ದರು. ಎಂದೂ ಎಲ್ಲೂ ರಾಜಿಯಾಗದ ತಮ್ಮ ಸಾಹಿತ್ಯ ಮತ್ತು ಹೋರಾಟಗಳಿಂದಾಗಿ ಸದಾ ಜೀವಂತವಾಗಿದ್ದ ಚಂಪಾರಿಗೆ ಸಾವಿಲ್ಲ, ಇನ್ನು ಮುಂದೆ ನಡೆಯುವ ಹೋರಾಟಗಳಲ್ಲೂ ಅವರು ನಮ್ಮೊಂದಿಗೆ-ನಮ್ಮೊಳಗೆ ಜೀವಂತವಾಗಿ ಇರುತ್ತಾರೆ.

ಸಿ.ಎಸ್.ದ್ವಾರಕಾನಾಥ್

ಸಿ.ಎಸ್.ದ್ವಾರಕಾನಾಥ್
ವೃತ್ತಿಯಿಂದ ವಕೀಲರು. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರು. ಲಂಕೇಶ್ ಪತ್ರಿಕೆಯ ಒಡನಾಡಿಯಾಗಿದ್ದ ದ್ವಾರಕಾನಾಥ್, ’ಮೂಕ ನಾಯಕ’, ’ಗಾಂಧಿಮಟ್ಟಿದ ನಾಡಿನಲ್ಲಿ’, ’ಸಾಕ್ರೆಟಿಸ್ ಮತ್ತಿತರ ಕಥೆಗಳು’ ಕೃತಿಗಳನ್ನು ರಚಿಸಿದ್ದಾರೆ.


ಇದನ್ನೂ ಓದಿ: ಓಶೋ ಕಂಡಂತೆ ವಿವೇಕಾನಂದರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...