Homeಮುಖಪುಟಮಧ್ಯಪ್ರದೇಶದ ದಲಿತ ದಂಪತಿಯ ಮೇಲಿನ ಅಮಾನವೀಯ ಹಲ್ಲೆಗೆ ತೀವ್ರ ಖಂಡನೆ: ಡಿಸಿ, ಎಸ್ಪಿ ಅಮಾನತು

ಮಧ್ಯಪ್ರದೇಶದ ದಲಿತ ದಂಪತಿಯ ಮೇಲಿನ ಅಮಾನವೀಯ ಹಲ್ಲೆಗೆ ತೀವ್ರ ಖಂಡನೆ: ಡಿಸಿ, ಎಸ್ಪಿ ಅಮಾನತು

- Advertisement -
- Advertisement -

ಮಧ್ಯಪ್ರದೇಶದ ಗುಣಾ ಜಿಲ್ಲೆಯಲ್ಲಿ ತಾವು ಬೆಳೆದ ಬೆಳೆಗಳನ್ನು ರಕ್ಷಿಸಿಕೊಳ್ಳಲು ಮುಂದಾದ ದಲಿತ ದಂಪತಿಯ ಮೇಲೆ ಹತ್ತಾರು ಪೊಲೀಸರು ಅಮಾನವೀಯವಾಗಿ ಥಳಿಸಿದ್ದಾರೆ. ಕ್ರೂರ ದೌರ್ಜನ್ಯಕ್ಕೆ ತುತ್ತಾದ ದಂಪತಿಗಳು ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ ವಿಡಿಯ ವೈರಲ್ ಆಗಿದೆ. ಈ ಕುರಿತು ಮಧ್ಯಪ್ರದೇಶ ಸರ್ಕಾರದ ವಿರುದ್ಧ ಸಾವಿರಾರು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗುಣಾ ಜಿಲ್ಲೆಯಲ್ಲಿ ಸರ್ಕಾರಕ್ಕೆ ಸೇರಿದ್ದ ಜಮೀನನ್ನು ಗುತ್ತಿಗೆಗೆ ತೆಗೆದುಕೊಂಡು ದಲಿತ ಕುಟುಂಬವೊಂದು ಬೆಳೆ ಬೆಳೆಯುತ್ತಿತ್ತು. ಇತ್ತೀಚೆಗೆ, ಆ ಪ್ರದೇಶದಲ್ಲಿ ಕಾಲೇಜನ್ನು ನಿರ್ಮಿಸಲು ಸರ್ಕಾರ ಆ ಜಮೀನನ್ನು ಸ್ವಾಧೀನಪಡಿಸಿಕೊಳ್ಳುಲು ಆದೇಶಿಸಿತ್ತು. ಈ ವೇಳೆ ದಲಿತ ದಂಪತಿಗಳಾದ ರಾಜ್‌ಕುಮಾರ್ ಅಹಿರ್ವಾರ್ ಮತ್ತು ಸಾವಿತ್ರಿ ಸ್ವಲ್ಪ ಸಮಯ ಕೊಡಿ ಬೆಳೆ ಕೊಯ್ದುಕೊಂಡ ನಂತರ ವಶಪಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ. ಇದಕ್ಕೆ ಸೊಪ್ಪು ಹಾಕದ ಪೊಲೀಸರು ಬಲವಂತವಾಗಿ ಬೆಳೆ ನಾಶಕ್ಕೆ ಮುಂದಾದಾಗ ಬೇರೆ ದಾರಿ ಕಾಣದೇ ದಂಪತಿಗಳು ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ.

ಮಧ್ಯಪ್ರದೇಶದ ದಲಿತ ದಂಪತಿಯ ಮೇಲಿನ ಅಮಾನವೀಯ ಹಲ್ಲೆಗೆ ತೀವ್ರ ಖಂಡನೆ: ಡಿಸಿ, ಎಸ್ಪಿ ಅಮಾನತು

Posted by Naanu Gauri on Thursday, July 16, 2020

ಬೆಳೆ ಕಟಾವಿನ ಹಂತಕ್ಕೆ ಬಂದಿದ್ದು, ಕಾಟಾವು ಮಾಡುವವರೆಗೂ ಸಮಯಾವಕಾಶ ಕೊಡಿ ಎಂದು ಕುಟುಂಬ ಜಮೀನಿನಿಂದ ಒಕ್ಕಲೆಬ್ಬಿಸಲು ಬಂದ ಅಧಿಕಾರಿಗಳ ಬಳಿ ಅಂಗಲಾಚಿಕೊಂಡರೂ ಅಧಿಕಾರಗಳು ದರ್ಪ ಮೆರೆದಿದ್ದಾರೆ. ಪೊಲೀಸರು ಮನಬಂದಂತೆ ಥಳಿಸಿದ್ದಾರೆ.

ಮನಕಲಕುವ ವೈರಲ್ ವಿಡಿಯೋದಲ್ಲಿ ದಂಪತಿಗಳಿಬ್ಬರನ್ನು ನೆಲದಲ್ಲಿ ಎಳೆದೊಯ್ಯುವ, ತನ್ನ ಮಕ್ಕಳ ಎದುರೆ ಕಾಲಿನಿಂದ ಒದೆಯುವ, ಲಾಠಿಯಿಂದ ಹಲ್ಲೆ ಮಾಡುವುದನ್ನು ಕಾಣಬಹುದಾಗಿದೆ. ಕೇವಲ ಇಬ್ಬರ ಮೇಲೆ ಸುಮಾರು 25-30 ಪೊಲೀಸರು ಏಕಕಾಲಕ್ಕೆ ದಾಳಿ ಮಾಡಿದ್ದಾರೆ.

ಘಟನೆಯಲ್ಲಿ ಅಸ್ವಸ್ಥಗೊಂಡು ಸಾವು-ಬದುಕಿನ ನಡುವಿನ ಹೋರಾಟದಲ್ಲಿ ಚಿಂತಾಜನಕ ಸ್ಥಿತಿಯಲ್ಲಿದ್ದ ಅಹಿರ್ವಾರ್ ಮತ್ತು ಪತ್ನಿ ಸಾವಿತ್ರಿಯವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ.

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೇರಿದಂತೆ ಸಾವಿರಾರು ಜನ ಘಟನೆಯನ್ನು ಒಕ್ಕೊರಲಿನಿಂದ ಖಂಡಿಸಿದ್ದಾರೆ. ಘಟನೆಗೆ ಕಾರಣವಾದ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಮತ್ತು ದಲಿತ ಕುಟುಂಬಕ್ಕೆ ಭೂಮಿ, ರಕ್ಷಣೆ ನೀಡಬೇಕೆಂದು ಆಗ್ರಹಿಸಿದ್ದಾರೆ.

“ನಮ್ಮ ಹೋರಾಟವು ಇಂತಹ ಮನಸ್ಥಿತಿ ಮತ್ತು ಅನ್ಯಾಯದ ವಿರುದ್ಧವಾಗಿದೆ” ಎಂಬ ಶೀರ್ಷಿಕೆಯೊಂದಿಗೆ ಆ ವಿಡಿಯೋವನ್ನು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಭೂಸ್ವಾಧೀನಕ್ಕಾಗಿ ದೌರ್ಜನ್ಯ ನಡೆಸಿದ ಗುಣಾ ಜಿಲ್ಲಾಧಿಕಾರಿ ಎಸ್‌ ವಿಶ್ವನಾಥ್‌ ಮತ್ತು ಎಸ್‌ಪಿ ತರುಣ್‌ ನಾಯಕ್‌ ಅವರನ್ನು ಸೇವೆಯಿಂದ ತೆಗೆದುಹಾಕಲಾಗಿದೆ ಎಂದು ಮಧ್ಯಪ್ರದೇಶದ ಸಿಎಂ ಶಿವರಾಜ್‌ ಸಿಂಗ್‌ ಚೌಹಾಣ್‌ ತಿಳಿಸಿದ್ದಾರೆ.

ಇದೇ ಸಮಯದಲ್ಲಿ ದಲಿತ ದಂಪತಿಯ ಮೇಲೂ ಸಹ ಆತ್ಮಹತ್ಯೆಗೆ ಪ್ರಯತ್ನ, ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿ ಆರೋಪದ ಮೇಲೆ ದೂರು ದಾಖಲಿಸಲಾಗಿದೆ.

ಸೇವೆಯಿಂದ ಅಮಾನತಾಗುವ ಮೊದಲು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದ ಜಿಲ್ಲಾಧಿಕಾರಿ ವಿಶ್ವನಾಥನ್‌, “ಅಹಿರ್ವಾರ್ ಅವರ ಸಂಬಂಧಿಕರು ದಂಪತಿಯನ್ನು ಆಸ್ಪತ್ರೆಗೆ ಕರೆದೊಯ್ಯಲು ಬಿಡದ ಕಾರಣ ಪೊಲೀಸರು ಬಲವನ್ನು ಬಳಸಬೇಕಾಯಿತು. ಕಾಲೇಜು ನಿರ್ಮಾಣಕ್ಕಾಗಿ ಸರ್ಕಾರ 12 ಕೋಟಿ ರೂ.ಗಳನ್ನು ಮಂಜೂರು ಮಾಡಿದೆ. ಇನ್ನೂ ವಿಳಂಬ ಮಾಡಿದಲ್ಲಿ ಅದನ್ನು ಬೇರೆ ಜಿಲ್ಲೆಗೆ ಸ್ಥಳಾಂತರಿಸಬಹುದು. ಹಾಗಾಗಿ ನಾವು ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಬೇಕಾಗಿತ್ತು” ಎಂದು ಹೇಳಿದ್ದಾರೆ.

‘ಈ ಘಟನೆಯ ಬಗ್ಗೆ ಭೋಪಾಲ್‌ನ ಹಿರಿಯ ಅಧಿಕಾರಿಗಳು ತನಿಖೆ ನಡೆಸುತ್ತಾರೆ ಮತ್ತು ಘಟನೆಗೆ ಯಾರು ಹೊಣೆಗಾರರಾಗಿದ್ದಾರೆ ಎಂಬುದರ ಆಧಾರದ ಮೇಲೆ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತಾರೆ’ ಎಂದು ಗೃಹ ಸಚಿವ ನರೋತ್ತಮ್ ಮಿಶ್ರಾ ಹೇಳಿದರು.

“ಭೂಮಿಯ ಬಗ್ಗೆ ವಿವಾದವಿದ್ದರೆ, ಅದನ್ನು ಕಾನೂನುಬದ್ಧವಾಗಿ ಪರಿಹರಿಸಬಹುದಿತ್ತು… ಜನ ಸೇವಕರು ಎಂದು ಕರೆದುಕೊಳ್ಳುವ ಬಿಜೆಪಿ ಸರ್ಕಾರವು, ಸಾವಿರಾರು ಎಕರೆ ಸರ್ಕಾರಿ ಭೂಮಿಯನ್ನು ಆಕ್ರಮಣ ಮಾಡಿಕೊಂಡಿರುವವರನ್ನು ತೆರವುಗೊಳಿಸುವಲ್ಲಿ ಇದೇ ರೀತಿಯ ದರ್ಪವನ್ನು ತೋರುತ್ತದೆಯೇ?” ಎಂದು ಮಾಜಿ ಸಿಎಂ ಕಮಲ್ ನಾಥ್ ಪ್ರಶ್ನಿಸಿದ್ದಾರೆ.

ಗುಣಾ ಜಿಲ್ಲೆಯು ಇತ್ತೀಚೆಗೆ ಕಾಂಗ್ರೆಸ್ ನಿಂದ ಬಿಜೆಪಿಗೆ ಹಾರಿ ಕಾಂಗ್ರೆಸ್ ಸರ್ಕಾರ ಪತನಕ್ಕೆ ಕಾರಣವಾಗಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಜಿಲ್ಲೆಯಾಗಿದ್ದು ಭಾರೀ ಟೀಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಅವರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಲಿದೆ ಎಂದು ಟ್ವೀಟ್ ಮಾಡಿದ್ದಾರೆ.

ಕರ್ನಾಟಕದಲ್ಲಿ ಪ್ರತಿಭಟನೆ

ಕರ್ನಾಟಕದ ಸಿಂಧನೂರಿನಲ್ಲಿ ಈ ಘಟನೆಯನ್ನು ಖಂಡಿಸಿ ಕ್ರಾಂತಿಕಾರಿ ಯುವಜನ ರಂಗ (RYF) ಪ್ರತಿಭಟನೆ ನಡೆಸಿದೆ.

ಕೇಂದ್ರದಲ್ಲಿ ಬಿಜೆಪಿ ಸರಕಾರ ಆಡಳಿತಕ್ಕೆ ಬಂದದಿನಿದ ದಲಿತ ಸಮುದಾಯದ ಮೇಲೆ ದೌರ್ಜನ್ಯ, ದಬ್ಬಾಳಿಕೆ ಹಾಗೂ ಕೊಲೆಯಂತಹ ಘಟನೆಗಳು ದೇಶಾದ್ಯಂತ ಮಿತಿ ಮೀರಿವೆ. ಇನ್ನು ಮಧ್ಯಪ್ರದೇಶದಲ್ಲಿನ ಬಿಜೆಪಿ ಸರಕಾರ ಅಲ್ಲಿನ ದಲಿತರು, ಬಡವರು ಹಾಗೂ ಆದಿವಾಸಿ ಕುಟುಂಬಗಳ ಮೇಲೆ ನಿರಂತರ ದೌರ್ಜನ್ಯ ಮುಂದುವರಿಸಿದ್ದು, ಬಡ ಹಾಗೂ ಮಧ್ಯಮ ವರ್ಗದ ಅಸಹಾಯಕ ಕುಟುಂಬಗಳು ಬದುಕುವುದೇ ದುಸ್ತರ ಎನ್ನುವಂತಹ ವಾತಾವರಣ ನಿರ್ಮಾಣವಾಗಿದೆ ಎಂದು RYF ಆರೋಪಿಸಿದೆ.

ಪೊಲೀಸ್ ದೌರ್ಜನ್ಯವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಿ ತಪ್ಪಿತಸ್ಥರ ಅಧಿಕಾರಿಗಳನ್ನು ಅಮಾನತು ಮಾಡಬೇಕು, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಈ ಘಟನೆಯನ್ನು ಆಧರಿಸಿ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡು ದಲಿತ ರೈತ ಕುಟುಂಬಕ್ಕೆ ನ್ಯಾಯ ಕೊಡಿಸಬೇಕು. ದಲಿತ ರೈತ ಕುಟುಂಬ ಉಳುಮೆ ಮಾಡಲು ಜಮೀನನ್ನು ವಾಪಸ್ ಕೊಡಿಸಬೇಕು ಎಂದು ಸಂಘಟನೆ ಆಗ್ರಹಿಸಿದೆ.

ಪ್ರತಿಭಟನೆಯಲ್ಲಿ ನಾಗರಾಜ ಪೂಜಾರ್, ಆರ್.ಎಚ್ ಕಲಮಂಗಿ, ಬಸವರಾಜ ಕೊಂಡೆ, ಮಹಾದೇವ ಅಮರಾಪುರ, ಮಲ್ಲಿಕಾರ್ಜುನ ಕುರುಗೋಡು, ಹುಸೇನಪ್ಪ ತಿಡಿಗೋಳ ಮತ್ತಿತರರು ಭಾಗವಹಿಸಿದ್ದರು.


ಇದನ್ನೂ ಓದಿ: ಹೊಂಬಾಳೆ-1: ದೇಶದ ಅನ್ನದ ಬಟ್ಟಲನ್ನೇ ಮಾರಲು ಹೊರಟರೆ ಕೊನೆಗೆ ಏನು ಉಳಿದೀತು? 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...