Homeಕರ್ನಾಟಕಜಗ್ಗಿ ವಾಸುದೇವ್ ನೇತೃತ್ವದ ಶಿವರಾತ್ರಿಯಲ್ಲಿ ಪಾಲ್ಗೊಂಡ ಡಿಕೆಶಿ : ಕಾಂಗ್ರೆಸ್ ನಾಯಕರು, ಪ್ರಗತಿಪರರಿಂದ ಆಕ್ಷೇಪ

ಜಗ್ಗಿ ವಾಸುದೇವ್ ನೇತೃತ್ವದ ಶಿವರಾತ್ರಿಯಲ್ಲಿ ಪಾಲ್ಗೊಂಡ ಡಿಕೆಶಿ : ಕಾಂಗ್ರೆಸ್ ನಾಯಕರು, ಪ್ರಗತಿಪರರಿಂದ ಆಕ್ಷೇಪ

- Advertisement -
- Advertisement -

‘ಸದ್ಗುರು’ ಎಂದು ಕರೆಯಲ್ಪಡುವ ಜಗ್ಗಿ ವಾಸುದೇವ್ ನೇತೃತ್ವದ ಕೊಯಮತ್ತೂರಿನ ಇಶಾ‌ ಯೋಗ ಕೇಂದ್ರದಲ್ಲಿ ಬುಧವಾರ (ಫೆ.26) ಆಯೋಜಿಸಿದ್ದ ಅದ್ದೂರಿ ಶಿವರಾತ್ರಿ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪಾಲ್ಗೊಂಡಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಜಗ್ಗಿ ವಾಸುದೇವ್ ಜೊತೆ ಡಿಕೆಶಿ, ಅಮಿತ್ ಶಾ ಮತ್ತು ಇತರರು ವೇದಿಕೆ ಹಂಚಿಕೊಂಡಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಡಿಕೆಶಿ ನಡೆ ಕೆಲ ಕಾಂಗ್ರೆಸ್ ನಾಯಕರು ಮತ್ತು ಪ್ರಗತಿಪರರ ಟೀಕೆಗೆ ಗುರಿಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ.

ಶಿವರಾತ್ರಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಜಗ್ಗಿವಾಸುದೇವ್ ನೀಡಿದ್ದ ಆಹ್ವಾನ ಪತ್ರವನ್ನು ಫೆ.25ರಂದು ಡಿ.ಕೆ ಶಿವಕುಮಾರ್ ಅವರು ತನ್ನ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಹಂಚಿಕೊಂಡಿದ್ದರು. ಆಗಲೇ ಡಿಕೆಶಿ ನಡೆಗೆ ಆಕ್ಷೇಪ ವ್ಯಕ್ತವಾಗಿತ್ತು.

ಡಿಕೆಶಿ ಫೇಸ್‌ಬುಕ್‌ನಲ್ಲಿ ಆಹ್ವಾನ ಪತ್ರದೊಂದಿಗೆ ಹಾಕಿದ್ದ ಪೋಸ್ಟ್‌ಗೆ ಪ್ರತಿಕ್ರಿಯೆ ಕೊಟ್ಟಿದ್ದ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕಾರ್ಯದರ್ಶಿ ಪಿ.ವಿ ಮೋಹನ್ ಅವರು “ಜಾತ್ಯತೀತ ಪಕ್ಷದ ಅಧ್ಯಕ್ಷನಾಗಿ ಮತ್ತು ಜಾತ್ಯತೀತ ಸರ್ಕಾರದ ಡಿಸಿಎಂ ಆಗಿ, ರಾಷ್ಟ್ರದ ಭರವಸೆಯ ಸಂಕೇತವಾಗಿರುವ ನಮ್ಮ ನಾಯಕ ರಾಹುಲ್ ಗಾಂಧಿಯವರನ್ನು ಅಪಹಾಸ್ಯ ಮಾಡಿದ, ಆರ್‌ಎಸ್‌ಎಸ್‌ ಜೊತೆ ಹೊಂದಾಣಿಕೆಯಾಗುವ ಅಭಿಪ್ರಾಯ ಹೊಂದಿರುವ ಯಾರಿಗಾದರೂ ಸಾರ್ವಜನಿಕವಾಗಿ ಧನ್ಯವಾದ ಹೇಳುವುದು ಮತ್ತು ಕೃತಜ್ಞತೆ ವ್ಯಕ್ತಪಡಿಸುವುದು ಪಕ್ಷದ ಕಾರ್ಯಕರ್ತರಿಗೆ ತಪ್ಪು ಸಂದೇಶವನ್ನು ರವಾನಿಸುತ್ತದೆ” ಎಂದಿದ್ದಾರೆ.

“ಪಕ್ಷದ ಪ್ರಗತಿ ಮತ್ತು ಬೆಳವಣಿಗೆಗೆ ರಾಜಿ ಮಾಡಿಕೊಳ್ಳುವ ಬದಲು, ದೃಢ ನಿಶ್ಚಯಕ್ಕೆ ಬದ್ಧತೆ ಅತ್ಯಗತ್ಯ; ಇದನ್ನು ನಿರ್ಲಕ್ಷಿಸುವುದರಿಂದ ಪಕ್ಷದ ಸೈದ್ಧಾಂತಿಕ ನೆಲೆ ದುರ್ಬಲಗೊಳ್ಳಬಹುದು. ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಆರ್‌ಎಸ್‌ಎಸ್ ಹಿನ್ನಲೆಯ ಹಲವಾರು ವ್ಯಕ್ತಿಗಳಿಗೆ ಆಹ್ವಾನ ನೀಡಲಾಗಿದೆ ಎಂದು ತಿಳಿದು ಆತಂಕವಾಗಿದೆ. ನಮ್ಮ ಪಕ್ಷದ ಅಧ್ಯಕ್ಷರು ಅಮಿತ್ ಶಾ ಅವರೊಂದಿಗೆ ವೇದಿಕೆ ಹಂಚಿಕೊಂಡು ಇಡೀ ರಾತ್ರಿ ಕಳೆಯುವುದನ್ನು ನೋಡಲು ಸಾಧ್ಯವಿಲ್ಲ, ಇದನ್ನು ಗ್ರಹಿಸುವುದು ಕಷ್ಟ” ಎಂದು ಬರೆದುಕೊಂಡಿದ್ದಾರೆ.

ಇನ್ನು, ಜಗ್ಗಿ ವಾಸುದೇವ್ ಜೊತೆ ಡಿ.ಕೆ ಶಿವಕುಮಾರ್ ಮತ್ತು ಅಮಿತ್ ಶಾ ವೇದಿಕೆ ಹಂಚಿಕೊಂಡಿರುವ ಫೋಟೋ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿರುವ ಡಿವೈಎಫ್‌ಐ ನಾಯಕ ಮುನೀರ್ ಕಾಟಿಪಳ್ಳ ಅವರು “ಡಿಕೆಶಿ ಹಿಂದೆ ಮಂಗಳೂರಿನ ಯಾರೆಲ್ಲ ಕಾಂಗ್ರೆಸ್ ಮುಖಂಡರು ಹೋಗಬಹುದು?” ಎಂದು ಪ್ರಶ್ನಿಸಿದ್ದಾರೆ.

“ಈ ಕಾರ್ಯಕ್ರಮಕ್ಕೆ ಡಿಕೆಶಿ ಹೋಗಬಾರದು. ಒಬ್ಬ ಡಿಸಿಎಂ ಆಗಿ, ಅವರು ಅಂತಹ ಕಾರ್ಯಕ್ರಮಗಳಿಗೆ ಹಾಜರಾಗಬಾರದು ಮತ್ತು ಆಹ್ವಾನವನ್ನು ನಿರ್ಲಕ್ಷಿಸಬೇಕು” ಎಂದು ಪ್ರಗತಿಪರ ಚಿಂತಕರಾದ ಡಾ. ಶ್ರೀನಿವಾಸ ಕಕ್ಕಿಲ್ಲಾಯ ಹೇಳಿದ್ದರು.

ರಾಜ್ಯ ಕಾಂಗ್ರೆಸ್‌ನಲ್ಲಿ ಒಂದು ಬಣ ಡಿ.ಕೆ ಶಿವಕುಮಾರ್ ನಾಯಕತ್ವದ ವಿರುದ್ದ ಒಳಗೊಳಗೆ ಅಸಮಾಧಾನ ಹೊಂದಿರುವ ನಡುವೆ, ಡಿಕೆಶಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಹೆಚ್ಚಾಗಿ ಪಾಲ್ಗೊಳ್ಳುತ್ತಿದ್ದಾರೆ.

ಇತ್ತೀಚೆಗೆ ಮಲ್ಲಿಕಾರ್ಜುನ ಖರ್ಗೆ, ಹೆಚ್‌.ಸಿ ಮಹದೇವಪ್ಪ ಅವರಂತಹ ಕಾಂಗ್ರೆಸ್‌ನ ಹಿರಿಯ ನಾಯಕರು ಪ್ರಯಾಗ್‌ರಾಜ್ ಕುಂಭಮೇಳದ ಕುರಿತು ವ್ಯತಿರಿಕ್ತ ಹೇಳಿಕೆ ನೀಡಿದ್ದರು. ಆದರೆ, ಅದಕ್ಕೆ ವಿರುದ್ದವೆಂಬಂತೆ ಡಿ.ಕೆ ಶಿವಕುಮಾರ್ ಕುಟುಂಬ ಸಮೇತರಾಗಿ ಕುಂಭಮೇಳಕ್ಕೆ ತೆರಳಿ ಗಂಗಾಸ್ನಾನ ಮಾಡಿದ್ದರು.

ತಿ.ನರಸೀಪುರದ ಕುಂಭಮೇಳದಲ್ಲೂ ಬಹಳ ಉತ್ಸುಕತೆಯಿಂದ ಡಿಕೆಶಿ ಪಾಲ್ಗೊಂಡಿದ್ದರು. ಇಲ್ಲಿಯೂ ಸಂಗಮದಲ್ಲಿ ಸ್ನಾನ ಮಾಡಿದ್ದರು ಮತ್ತು ಕಾವೇರಿ ಆರತಿ ಮಾಡಿದ್ದರು.

ಆ ಬಳಿಕ, ಫೆ.26ರಂದು ಸದಾಶಿವನಗರದ ಮನೆ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಡಿಕೆಶಿ, “ನಾನು ಹಿಂದೂ ಆಗಿ ಹುಟ್ಟಿದ್ದೇನೆ, ಹಿಂದೂ ಆಗಿ ಸಾಯುತ್ತೇನೆ ಎಂದಿದ್ದರು. ಈ ಮೂಲಕ ಕುಂಭಮೇಳದಲ್ಲಿ ಭಾಗಿಯಾದ ಬಗ್ಗೆ ಕೆಲವರ ಆಕ್ಷೇಪಕ್ಕೆ ತಿರುಗೇಟು ನೀಡಿದ್ದರು.

ಇನ್ನು, “ಪ್ರಯಾಗ್‌ರಾಜ್ ಕುಂಭಮೇಳವನ್ನು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಬಹಳ ಅಚ್ಚುಕಟ್ಟಾಗಿ ನಿರ್ವಹಿಸಿದೆ” ಎಂದು ಡಿಕೆಶಿ ಶ್ಲಾಘಿಸಿದ್ದಾಗಿ ವರದಿಯಾಗಿದೆ.

ಕೆಲ ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ಡಿಕೆಶಿಯ ಇತ್ತೀಚಿನ ನಡೆಗಳಿಗೆ ಬಹಳ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಡಿಕೆಶಿ ಬಿಜೆಪಿ ಸೇರಬಹುದು ಎಂಬ ಚರ್ಚೆಗಳೂ ಗದಿಗೆದರಿವೆ.

ಕ್ರಿಕೆಟಿನಲ್ಲಿ ಭಾರತ ಗೆಲ್ಲಬೇಕಾದರೆ ಬಿಜೆಪಿಗೆ ಮತ ಹಾಕಬೇಕು…: ಕೇಂದ್ರ ರಾಜ್ಯ ಖಾತೆ ಸಚಿವ ಬಂಡಿ ಸಂಜಯ್ ಹೇಳಿಕೆಗೆ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...