Homeಕರ್ನಾಟಕಜಗ್ಗಿ ವಾಸುದೇವ್ ನೇತೃತ್ವದ ಶಿವರಾತ್ರಿಯಲ್ಲಿ ಪಾಲ್ಗೊಂಡ ಡಿಕೆಶಿ : ಕಾಂಗ್ರೆಸ್ ನಾಯಕರು, ಪ್ರಗತಿಪರರಿಂದ ಆಕ್ಷೇಪ

ಜಗ್ಗಿ ವಾಸುದೇವ್ ನೇತೃತ್ವದ ಶಿವರಾತ್ರಿಯಲ್ಲಿ ಪಾಲ್ಗೊಂಡ ಡಿಕೆಶಿ : ಕಾಂಗ್ರೆಸ್ ನಾಯಕರು, ಪ್ರಗತಿಪರರಿಂದ ಆಕ್ಷೇಪ

- Advertisement -
- Advertisement -

‘ಸದ್ಗುರು’ ಎಂದು ಕರೆಯಲ್ಪಡುವ ಜಗ್ಗಿ ವಾಸುದೇವ್ ನೇತೃತ್ವದ ಕೊಯಮತ್ತೂರಿನ ಇಶಾ‌ ಯೋಗ ಕೇಂದ್ರದಲ್ಲಿ ಬುಧವಾರ (ಫೆ.26) ಆಯೋಜಿಸಿದ್ದ ಅದ್ದೂರಿ ಶಿವರಾತ್ರಿ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪಾಲ್ಗೊಂಡಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಜಗ್ಗಿ ವಾಸುದೇವ್ ಜೊತೆ ಡಿಕೆಶಿ, ಅಮಿತ್ ಶಾ ಮತ್ತು ಇತರರು ವೇದಿಕೆ ಹಂಚಿಕೊಂಡಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಡಿಕೆಶಿ ನಡೆ ಕೆಲ ಕಾಂಗ್ರೆಸ್ ನಾಯಕರು ಮತ್ತು ಪ್ರಗತಿಪರರ ಟೀಕೆಗೆ ಗುರಿಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ.

ಶಿವರಾತ್ರಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಜಗ್ಗಿವಾಸುದೇವ್ ನೀಡಿದ್ದ ಆಹ್ವಾನ ಪತ್ರವನ್ನು ಫೆ.25ರಂದು ಡಿ.ಕೆ ಶಿವಕುಮಾರ್ ಅವರು ತನ್ನ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಹಂಚಿಕೊಂಡಿದ್ದರು. ಆಗಲೇ ಡಿಕೆಶಿ ನಡೆಗೆ ಆಕ್ಷೇಪ ವ್ಯಕ್ತವಾಗಿತ್ತು.

ಡಿಕೆಶಿ ಫೇಸ್‌ಬುಕ್‌ನಲ್ಲಿ ಆಹ್ವಾನ ಪತ್ರದೊಂದಿಗೆ ಹಾಕಿದ್ದ ಪೋಸ್ಟ್‌ಗೆ ಪ್ರತಿಕ್ರಿಯೆ ಕೊಟ್ಟಿದ್ದ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕಾರ್ಯದರ್ಶಿ ಪಿ.ವಿ ಮೋಹನ್ ಅವರು “ಜಾತ್ಯತೀತ ಪಕ್ಷದ ಅಧ್ಯಕ್ಷನಾಗಿ ಮತ್ತು ಜಾತ್ಯತೀತ ಸರ್ಕಾರದ ಡಿಸಿಎಂ ಆಗಿ, ರಾಷ್ಟ್ರದ ಭರವಸೆಯ ಸಂಕೇತವಾಗಿರುವ ನಮ್ಮ ನಾಯಕ ರಾಹುಲ್ ಗಾಂಧಿಯವರನ್ನು ಅಪಹಾಸ್ಯ ಮಾಡಿದ, ಆರ್‌ಎಸ್‌ಎಸ್‌ ಜೊತೆ ಹೊಂದಾಣಿಕೆಯಾಗುವ ಅಭಿಪ್ರಾಯ ಹೊಂದಿರುವ ಯಾರಿಗಾದರೂ ಸಾರ್ವಜನಿಕವಾಗಿ ಧನ್ಯವಾದ ಹೇಳುವುದು ಮತ್ತು ಕೃತಜ್ಞತೆ ವ್ಯಕ್ತಪಡಿಸುವುದು ಪಕ್ಷದ ಕಾರ್ಯಕರ್ತರಿಗೆ ತಪ್ಪು ಸಂದೇಶವನ್ನು ರವಾನಿಸುತ್ತದೆ” ಎಂದಿದ್ದಾರೆ.

“ಪಕ್ಷದ ಪ್ರಗತಿ ಮತ್ತು ಬೆಳವಣಿಗೆಗೆ ರಾಜಿ ಮಾಡಿಕೊಳ್ಳುವ ಬದಲು, ದೃಢ ನಿಶ್ಚಯಕ್ಕೆ ಬದ್ಧತೆ ಅತ್ಯಗತ್ಯ; ಇದನ್ನು ನಿರ್ಲಕ್ಷಿಸುವುದರಿಂದ ಪಕ್ಷದ ಸೈದ್ಧಾಂತಿಕ ನೆಲೆ ದುರ್ಬಲಗೊಳ್ಳಬಹುದು. ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಆರ್‌ಎಸ್‌ಎಸ್ ಹಿನ್ನಲೆಯ ಹಲವಾರು ವ್ಯಕ್ತಿಗಳಿಗೆ ಆಹ್ವಾನ ನೀಡಲಾಗಿದೆ ಎಂದು ತಿಳಿದು ಆತಂಕವಾಗಿದೆ. ನಮ್ಮ ಪಕ್ಷದ ಅಧ್ಯಕ್ಷರು ಅಮಿತ್ ಶಾ ಅವರೊಂದಿಗೆ ವೇದಿಕೆ ಹಂಚಿಕೊಂಡು ಇಡೀ ರಾತ್ರಿ ಕಳೆಯುವುದನ್ನು ನೋಡಲು ಸಾಧ್ಯವಿಲ್ಲ, ಇದನ್ನು ಗ್ರಹಿಸುವುದು ಕಷ್ಟ” ಎಂದು ಬರೆದುಕೊಂಡಿದ್ದಾರೆ.

ಇನ್ನು, ಜಗ್ಗಿ ವಾಸುದೇವ್ ಜೊತೆ ಡಿ.ಕೆ ಶಿವಕುಮಾರ್ ಮತ್ತು ಅಮಿತ್ ಶಾ ವೇದಿಕೆ ಹಂಚಿಕೊಂಡಿರುವ ಫೋಟೋ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿರುವ ಡಿವೈಎಫ್‌ಐ ನಾಯಕ ಮುನೀರ್ ಕಾಟಿಪಳ್ಳ ಅವರು “ಡಿಕೆಶಿ ಹಿಂದೆ ಮಂಗಳೂರಿನ ಯಾರೆಲ್ಲ ಕಾಂಗ್ರೆಸ್ ಮುಖಂಡರು ಹೋಗಬಹುದು?” ಎಂದು ಪ್ರಶ್ನಿಸಿದ್ದಾರೆ.

“ಈ ಕಾರ್ಯಕ್ರಮಕ್ಕೆ ಡಿಕೆಶಿ ಹೋಗಬಾರದು. ಒಬ್ಬ ಡಿಸಿಎಂ ಆಗಿ, ಅವರು ಅಂತಹ ಕಾರ್ಯಕ್ರಮಗಳಿಗೆ ಹಾಜರಾಗಬಾರದು ಮತ್ತು ಆಹ್ವಾನವನ್ನು ನಿರ್ಲಕ್ಷಿಸಬೇಕು” ಎಂದು ಪ್ರಗತಿಪರ ಚಿಂತಕರಾದ ಡಾ. ಶ್ರೀನಿವಾಸ ಕಕ್ಕಿಲ್ಲಾಯ ಹೇಳಿದ್ದರು.

ರಾಜ್ಯ ಕಾಂಗ್ರೆಸ್‌ನಲ್ಲಿ ಒಂದು ಬಣ ಡಿ.ಕೆ ಶಿವಕುಮಾರ್ ನಾಯಕತ್ವದ ವಿರುದ್ದ ಒಳಗೊಳಗೆ ಅಸಮಾಧಾನ ಹೊಂದಿರುವ ನಡುವೆ, ಡಿಕೆಶಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಹೆಚ್ಚಾಗಿ ಪಾಲ್ಗೊಳ್ಳುತ್ತಿದ್ದಾರೆ.

ಇತ್ತೀಚೆಗೆ ಮಲ್ಲಿಕಾರ್ಜುನ ಖರ್ಗೆ, ಹೆಚ್‌.ಸಿ ಮಹದೇವಪ್ಪ ಅವರಂತಹ ಕಾಂಗ್ರೆಸ್‌ನ ಹಿರಿಯ ನಾಯಕರು ಪ್ರಯಾಗ್‌ರಾಜ್ ಕುಂಭಮೇಳದ ಕುರಿತು ವ್ಯತಿರಿಕ್ತ ಹೇಳಿಕೆ ನೀಡಿದ್ದರು. ಆದರೆ, ಅದಕ್ಕೆ ವಿರುದ್ದವೆಂಬಂತೆ ಡಿ.ಕೆ ಶಿವಕುಮಾರ್ ಕುಟುಂಬ ಸಮೇತರಾಗಿ ಕುಂಭಮೇಳಕ್ಕೆ ತೆರಳಿ ಗಂಗಾಸ್ನಾನ ಮಾಡಿದ್ದರು.

ತಿ.ನರಸೀಪುರದ ಕುಂಭಮೇಳದಲ್ಲೂ ಬಹಳ ಉತ್ಸುಕತೆಯಿಂದ ಡಿಕೆಶಿ ಪಾಲ್ಗೊಂಡಿದ್ದರು. ಇಲ್ಲಿಯೂ ಸಂಗಮದಲ್ಲಿ ಸ್ನಾನ ಮಾಡಿದ್ದರು ಮತ್ತು ಕಾವೇರಿ ಆರತಿ ಮಾಡಿದ್ದರು.

ಆ ಬಳಿಕ, ಫೆ.26ರಂದು ಸದಾಶಿವನಗರದ ಮನೆ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಡಿಕೆಶಿ, “ನಾನು ಹಿಂದೂ ಆಗಿ ಹುಟ್ಟಿದ್ದೇನೆ, ಹಿಂದೂ ಆಗಿ ಸಾಯುತ್ತೇನೆ ಎಂದಿದ್ದರು. ಈ ಮೂಲಕ ಕುಂಭಮೇಳದಲ್ಲಿ ಭಾಗಿಯಾದ ಬಗ್ಗೆ ಕೆಲವರ ಆಕ್ಷೇಪಕ್ಕೆ ತಿರುಗೇಟು ನೀಡಿದ್ದರು.

ಇನ್ನು, “ಪ್ರಯಾಗ್‌ರಾಜ್ ಕುಂಭಮೇಳವನ್ನು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಬಹಳ ಅಚ್ಚುಕಟ್ಟಾಗಿ ನಿರ್ವಹಿಸಿದೆ” ಎಂದು ಡಿಕೆಶಿ ಶ್ಲಾಘಿಸಿದ್ದಾಗಿ ವರದಿಯಾಗಿದೆ.

ಕೆಲ ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ಡಿಕೆಶಿಯ ಇತ್ತೀಚಿನ ನಡೆಗಳಿಗೆ ಬಹಳ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಡಿಕೆಶಿ ಬಿಜೆಪಿ ಸೇರಬಹುದು ಎಂಬ ಚರ್ಚೆಗಳೂ ಗದಿಗೆದರಿವೆ.

ಕ್ರಿಕೆಟಿನಲ್ಲಿ ಭಾರತ ಗೆಲ್ಲಬೇಕಾದರೆ ಬಿಜೆಪಿಗೆ ಮತ ಹಾಕಬೇಕು…: ಕೇಂದ್ರ ರಾಜ್ಯ ಖಾತೆ ಸಚಿವ ಬಂಡಿ ಸಂಜಯ್ ಹೇಳಿಕೆಗೆ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...