Homeಕರ್ನಾಟಕಜಗ್ಗಿ ವಾಸುದೇವ್ ನೇತೃತ್ವದ ಶಿವರಾತ್ರಿಯಲ್ಲಿ ಪಾಲ್ಗೊಂಡ ಡಿಕೆಶಿ : ಕಾಂಗ್ರೆಸ್ ನಾಯಕರು, ಪ್ರಗತಿಪರರಿಂದ ಆಕ್ಷೇಪ

ಜಗ್ಗಿ ವಾಸುದೇವ್ ನೇತೃತ್ವದ ಶಿವರಾತ್ರಿಯಲ್ಲಿ ಪಾಲ್ಗೊಂಡ ಡಿಕೆಶಿ : ಕಾಂಗ್ರೆಸ್ ನಾಯಕರು, ಪ್ರಗತಿಪರರಿಂದ ಆಕ್ಷೇಪ

- Advertisement -
- Advertisement -

‘ಸದ್ಗುರು’ ಎಂದು ಕರೆಯಲ್ಪಡುವ ಜಗ್ಗಿ ವಾಸುದೇವ್ ನೇತೃತ್ವದ ಕೊಯಮತ್ತೂರಿನ ಇಶಾ‌ ಯೋಗ ಕೇಂದ್ರದಲ್ಲಿ ಬುಧವಾರ (ಫೆ.26) ಆಯೋಜಿಸಿದ್ದ ಅದ್ದೂರಿ ಶಿವರಾತ್ರಿ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪಾಲ್ಗೊಂಡಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಜಗ್ಗಿ ವಾಸುದೇವ್ ಜೊತೆ ಡಿಕೆಶಿ, ಅಮಿತ್ ಶಾ ಮತ್ತು ಇತರರು ವೇದಿಕೆ ಹಂಚಿಕೊಂಡಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಡಿಕೆಶಿ ನಡೆ ಕೆಲ ಕಾಂಗ್ರೆಸ್ ನಾಯಕರು ಮತ್ತು ಪ್ರಗತಿಪರರ ಟೀಕೆಗೆ ಗುರಿಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ.

ಶಿವರಾತ್ರಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಜಗ್ಗಿವಾಸುದೇವ್ ನೀಡಿದ್ದ ಆಹ್ವಾನ ಪತ್ರವನ್ನು ಫೆ.25ರಂದು ಡಿ.ಕೆ ಶಿವಕುಮಾರ್ ಅವರು ತನ್ನ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಹಂಚಿಕೊಂಡಿದ್ದರು. ಆಗಲೇ ಡಿಕೆಶಿ ನಡೆಗೆ ಆಕ್ಷೇಪ ವ್ಯಕ್ತವಾಗಿತ್ತು.

ಡಿಕೆಶಿ ಫೇಸ್‌ಬುಕ್‌ನಲ್ಲಿ ಆಹ್ವಾನ ಪತ್ರದೊಂದಿಗೆ ಹಾಕಿದ್ದ ಪೋಸ್ಟ್‌ಗೆ ಪ್ರತಿಕ್ರಿಯೆ ಕೊಟ್ಟಿದ್ದ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಕಾರ್ಯದರ್ಶಿ ಪಿ.ವಿ ಮೋಹನ್ ಅವರು “ಜಾತ್ಯತೀತ ಪಕ್ಷದ ಅಧ್ಯಕ್ಷನಾಗಿ ಮತ್ತು ಜಾತ್ಯತೀತ ಸರ್ಕಾರದ ಡಿಸಿಎಂ ಆಗಿ, ರಾಷ್ಟ್ರದ ಭರವಸೆಯ ಸಂಕೇತವಾಗಿರುವ ನಮ್ಮ ನಾಯಕ ರಾಹುಲ್ ಗಾಂಧಿಯವರನ್ನು ಅಪಹಾಸ್ಯ ಮಾಡಿದ, ಆರ್‌ಎಸ್‌ಎಸ್‌ ಜೊತೆ ಹೊಂದಾಣಿಕೆಯಾಗುವ ಅಭಿಪ್ರಾಯ ಹೊಂದಿರುವ ಯಾರಿಗಾದರೂ ಸಾರ್ವಜನಿಕವಾಗಿ ಧನ್ಯವಾದ ಹೇಳುವುದು ಮತ್ತು ಕೃತಜ್ಞತೆ ವ್ಯಕ್ತಪಡಿಸುವುದು ಪಕ್ಷದ ಕಾರ್ಯಕರ್ತರಿಗೆ ತಪ್ಪು ಸಂದೇಶವನ್ನು ರವಾನಿಸುತ್ತದೆ” ಎಂದಿದ್ದಾರೆ.

“ಪಕ್ಷದ ಪ್ರಗತಿ ಮತ್ತು ಬೆಳವಣಿಗೆಗೆ ರಾಜಿ ಮಾಡಿಕೊಳ್ಳುವ ಬದಲು, ದೃಢ ನಿಶ್ಚಯಕ್ಕೆ ಬದ್ಧತೆ ಅತ್ಯಗತ್ಯ; ಇದನ್ನು ನಿರ್ಲಕ್ಷಿಸುವುದರಿಂದ ಪಕ್ಷದ ಸೈದ್ಧಾಂತಿಕ ನೆಲೆ ದುರ್ಬಲಗೊಳ್ಳಬಹುದು. ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಆರ್‌ಎಸ್‌ಎಸ್ ಹಿನ್ನಲೆಯ ಹಲವಾರು ವ್ಯಕ್ತಿಗಳಿಗೆ ಆಹ್ವಾನ ನೀಡಲಾಗಿದೆ ಎಂದು ತಿಳಿದು ಆತಂಕವಾಗಿದೆ. ನಮ್ಮ ಪಕ್ಷದ ಅಧ್ಯಕ್ಷರು ಅಮಿತ್ ಶಾ ಅವರೊಂದಿಗೆ ವೇದಿಕೆ ಹಂಚಿಕೊಂಡು ಇಡೀ ರಾತ್ರಿ ಕಳೆಯುವುದನ್ನು ನೋಡಲು ಸಾಧ್ಯವಿಲ್ಲ, ಇದನ್ನು ಗ್ರಹಿಸುವುದು ಕಷ್ಟ” ಎಂದು ಬರೆದುಕೊಂಡಿದ್ದಾರೆ.

ಇನ್ನು, ಜಗ್ಗಿ ವಾಸುದೇವ್ ಜೊತೆ ಡಿ.ಕೆ ಶಿವಕುಮಾರ್ ಮತ್ತು ಅಮಿತ್ ಶಾ ವೇದಿಕೆ ಹಂಚಿಕೊಂಡಿರುವ ಫೋಟೋ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿರುವ ಡಿವೈಎಫ್‌ಐ ನಾಯಕ ಮುನೀರ್ ಕಾಟಿಪಳ್ಳ ಅವರು “ಡಿಕೆಶಿ ಹಿಂದೆ ಮಂಗಳೂರಿನ ಯಾರೆಲ್ಲ ಕಾಂಗ್ರೆಸ್ ಮುಖಂಡರು ಹೋಗಬಹುದು?” ಎಂದು ಪ್ರಶ್ನಿಸಿದ್ದಾರೆ.

“ಈ ಕಾರ್ಯಕ್ರಮಕ್ಕೆ ಡಿಕೆಶಿ ಹೋಗಬಾರದು. ಒಬ್ಬ ಡಿಸಿಎಂ ಆಗಿ, ಅವರು ಅಂತಹ ಕಾರ್ಯಕ್ರಮಗಳಿಗೆ ಹಾಜರಾಗಬಾರದು ಮತ್ತು ಆಹ್ವಾನವನ್ನು ನಿರ್ಲಕ್ಷಿಸಬೇಕು” ಎಂದು ಪ್ರಗತಿಪರ ಚಿಂತಕರಾದ ಡಾ. ಶ್ರೀನಿವಾಸ ಕಕ್ಕಿಲ್ಲಾಯ ಹೇಳಿದ್ದರು.

ರಾಜ್ಯ ಕಾಂಗ್ರೆಸ್‌ನಲ್ಲಿ ಒಂದು ಬಣ ಡಿ.ಕೆ ಶಿವಕುಮಾರ್ ನಾಯಕತ್ವದ ವಿರುದ್ದ ಒಳಗೊಳಗೆ ಅಸಮಾಧಾನ ಹೊಂದಿರುವ ನಡುವೆ, ಡಿಕೆಶಿ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಹೆಚ್ಚಾಗಿ ಪಾಲ್ಗೊಳ್ಳುತ್ತಿದ್ದಾರೆ.

ಇತ್ತೀಚೆಗೆ ಮಲ್ಲಿಕಾರ್ಜುನ ಖರ್ಗೆ, ಹೆಚ್‌.ಸಿ ಮಹದೇವಪ್ಪ ಅವರಂತಹ ಕಾಂಗ್ರೆಸ್‌ನ ಹಿರಿಯ ನಾಯಕರು ಪ್ರಯಾಗ್‌ರಾಜ್ ಕುಂಭಮೇಳದ ಕುರಿತು ವ್ಯತಿರಿಕ್ತ ಹೇಳಿಕೆ ನೀಡಿದ್ದರು. ಆದರೆ, ಅದಕ್ಕೆ ವಿರುದ್ದವೆಂಬಂತೆ ಡಿ.ಕೆ ಶಿವಕುಮಾರ್ ಕುಟುಂಬ ಸಮೇತರಾಗಿ ಕುಂಭಮೇಳಕ್ಕೆ ತೆರಳಿ ಗಂಗಾಸ್ನಾನ ಮಾಡಿದ್ದರು.

ತಿ.ನರಸೀಪುರದ ಕುಂಭಮೇಳದಲ್ಲೂ ಬಹಳ ಉತ್ಸುಕತೆಯಿಂದ ಡಿಕೆಶಿ ಪಾಲ್ಗೊಂಡಿದ್ದರು. ಇಲ್ಲಿಯೂ ಸಂಗಮದಲ್ಲಿ ಸ್ನಾನ ಮಾಡಿದ್ದರು ಮತ್ತು ಕಾವೇರಿ ಆರತಿ ಮಾಡಿದ್ದರು.

ಆ ಬಳಿಕ, ಫೆ.26ರಂದು ಸದಾಶಿವನಗರದ ಮನೆ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಡಿಕೆಶಿ, “ನಾನು ಹಿಂದೂ ಆಗಿ ಹುಟ್ಟಿದ್ದೇನೆ, ಹಿಂದೂ ಆಗಿ ಸಾಯುತ್ತೇನೆ ಎಂದಿದ್ದರು. ಈ ಮೂಲಕ ಕುಂಭಮೇಳದಲ್ಲಿ ಭಾಗಿಯಾದ ಬಗ್ಗೆ ಕೆಲವರ ಆಕ್ಷೇಪಕ್ಕೆ ತಿರುಗೇಟು ನೀಡಿದ್ದರು.

ಇನ್ನು, “ಪ್ರಯಾಗ್‌ರಾಜ್ ಕುಂಭಮೇಳವನ್ನು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಬಹಳ ಅಚ್ಚುಕಟ್ಟಾಗಿ ನಿರ್ವಹಿಸಿದೆ” ಎಂದು ಡಿಕೆಶಿ ಶ್ಲಾಘಿಸಿದ್ದಾಗಿ ವರದಿಯಾಗಿದೆ.

ಕೆಲ ಬಲಪಂಥೀಯ ಸಾಮಾಜಿಕ ಜಾಲತಾಣ ಬಳಕೆದಾರರು ಡಿಕೆಶಿಯ ಇತ್ತೀಚಿನ ನಡೆಗಳಿಗೆ ಬಹಳ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಡಿಕೆಶಿ ಬಿಜೆಪಿ ಸೇರಬಹುದು ಎಂಬ ಚರ್ಚೆಗಳೂ ಗದಿಗೆದರಿವೆ.

ಕ್ರಿಕೆಟಿನಲ್ಲಿ ಭಾರತ ಗೆಲ್ಲಬೇಕಾದರೆ ಬಿಜೆಪಿಗೆ ಮತ ಹಾಕಬೇಕು…: ಕೇಂದ್ರ ರಾಜ್ಯ ಖಾತೆ ಸಚಿವ ಬಂಡಿ ಸಂಜಯ್ ಹೇಳಿಕೆಗೆ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...