Homeಕರ್ನಾಟಕ"ಈ ಬಂಡೆ ಸಿದ್ದರಾಮಯ್ಯ ಜೊತೆ ಇದೆ": ಬಿಜೆಪಿ-ಜೆಡಿಎಸ್ ವಿರುದ್ಧ ಗುಡುಗಿದ ಡಿಕೆಶಿ

“ಈ ಬಂಡೆ ಸಿದ್ದರಾಮಯ್ಯ ಜೊತೆ ಇದೆ”: ಬಿಜೆಪಿ-ಜೆಡಿಎಸ್ ವಿರುದ್ಧ ಗುಡುಗಿದ ಡಿಕೆಶಿ

- Advertisement -
- Advertisement -

“ಮಾಧ್ಯಮದವರು ನನ್ನನ್ನು ಕನಕಪುರದ ಬಂಡೆ ಎಂದು ಕರೆಯುತ್ತಾರೆ. ಈ ಬಂಡೆ ಸಿದ್ದರಾಮಯ್ಯನವರ ಜೊತೆ ಸದಾ ಇದೆ” ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.

ಮೈಸೂರಿನಲ್ಲಿ ಆಯೋಜಿಸಿದ್ದ ಕಾಂಗ್ರೆಸ್‌ ಪಕ್ಷದ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಅವರು “ಹಿಂದುಳಿದ ಸಮುದಾಯದ ಸಿದ್ದರಾಮಯ್ಯನವರು ಎರಡನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿರುವುದು ಬಿಜೆಪಿ ಮತ್ತು ಜೆಡಿಎಸ್‌ನವರಿಗೆ ಸಹಿಸಲಾಗುತ್ತಿಲ್ಲ. ಅದಕ್ಕೆ ಅವರನ್ನು ಮುಡಾ ಹಗರಣದಲ್ಲಿ ಸಿಕ್ಕಿ ಹಾಕಿಸಿ ಅಧಿಕಾರದಿಂದ ಕೆಳಗಿಳಿಸುವ ಹುನ್ನಾರ ಮಾಡಿದ್ದಾರೆ. ಈ ಕನಕಪುರದ ಬಂಡೆ ಸಿಎಂ ಜೊತೆ ಸದಾ ಇರಲಿದೆ. ಕಲ್ಲು ಪ್ರಕೃತಿ, ಕಡಿದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ, ವಿರುದ್ದ ನಿಂತುಕೊಂಡರೆ ನಾಶ” ಎಂದು ಗುಡುಗಿದರು.

“ನಾವು ನುಡಿದಂತೆ ನಡೆದಿದ್ದೇವೆ. ಬಡ ಜನರಿಗಾಗಿ ಶ್ರಮಿಸಿದ್ದೇವೆ. ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ. ಇದನ್ನು ಸಹಿಸಲಾಗದೆ ಸಿದ್ದರಾಮಯ್ಯ ಅವರನ್ನು ಮುಡಾ ಪ್ರಕರಣದಲ್ಲಿ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ. ಮುಡಾ ಸೈಟ್ ಯಾರ ಆಡಳಿತಾವಧಿಯಲ್ಲಿ ನೀಡಲಾಗಿದೆ? ಬಿಜೆಪಿ ಅವಧಿಯಲ್ಲೇ ಆಗಿದೆ. ಆಗ ಎಲ್ಲಿಗೆ ಹೋಗಿತ್ತು ಹಗರಣ ವಿಚಾರ?” ಎಂದು ಡಿಕೆಶಿ ಪ್ರಶ್ನಿಸಿದರು.

ಇದೇ ವೇಳೆ ಬಿಜೆಪಿ -ಜೆಡಿಎಸ್ ನಾಯಕರು ಮೈತ್ರಿ ಮಾಡಿಕೊಳ್ಳುವ ಮುನ್ನ ಪರಸ್ಪರ ವಾಗ್ದಾಳಿ ನಡೆಸಿದ್ದ ವಿಡಿಯೋಗಳನ್ನು ವೇದಿಕೆಯಲ್ಲಿ ಪ್ರಸಾರ ಮಾಡಿಸಿದರು.

“ಕುಮಾರಸ್ವಾಮಿ ನಂಬಿದವರನ್ನು ಮುಗಿಸುತ್ತಾರೆ. ಅವರು ಮಾಡಿರುವ ಹಗರಣಗಳನ್ನು ಬಯಲು ಮಾಡಿದ್ದೇನೆ, ಮುಂದೆ ಮಾಡುತ್ತೇನೆ. ವಿಜಯೇಂದ್ರ ಎಷ್ಟು ಕೊಳ್ಳೆ ಹೊಡೆದಿದ್ದಾರೆ ಎಂಬುವುದು ಹೊರಬರಲಿದೆ. ಕೊರೋನಾ ಸಮಯದಲ್ಲಿ ಬಡವರ ಹಣ ತಿಂದಿದ್ದಾರೆ. ಇಂತಹ ಭ್ರಷ್ಟರನ್ನು ಬಿಜೆಪಿ ಅಧ್ಯಕ್ಷರಾಗಿ ಮುಂದುವರೆಸಬೇಕಾ? ವಿಜಯೇಂದ್ರ ಅಂದ್ರೆ ಭ್ರಷ್ಟಾಚಾರ” ಎಂದರು.

“ರಾಜ್ಯದ ಜನರು, ಸಂವಿಧಾನದ ರಕ್ಷಣೆಗೋಸ್ಕರ, ನಮ್ಮ ಸರ್ಕಾರವನ್ನು ಉರುಳಿಸುವ, ನಾವು ಜನರಿಗೆ ಕೊಟ್ಟಿರುವ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹುನ್ನಾರ ನಡೆಯುತ್ತಿದೆ. ಅದರಿಂದ ರಕ್ಷಣೆಗೋಸ್ಕರ ಈ ಜನಾಂದೋಲನ ಆಯೋಜಿಸಿದ್ದೇವೆ” ಎಂದು ಹೇಳಿದರು.

“ಮಿಸ್ಟರ್ ಕುಮಾರಸ್ವಾಮಿ..ಮಿಸ್ಟರ್ ಆಶೋಕಾ..ಮಿಸ್ಟರ್ ವಿಜಯೇಂದ್ರ..ನೀವು ಆಪರೇಶನ್ ಮಾಡಿ ಅನೇಕ ಸರ್ಕಾರಗಳನ್ನು ತೆಗೆದು ಹಾಕಿದ್ದೀರಿ. ಕುಮಾರಸ್ವಾಮಿ ನಿಮ್ಮ ಮುಖಂಡತ್ವದಲ್ಲಿ 19 ಸೀಟ್ ಮಾತ್ರ ಗೆಲ್ಲಿತು. ಈ ಡಿ.ಕೆ ಶಿವಕುಮಾರ್ ಮುಖಂಡತ್ವದಲ್ಲಿ 136 ಸೀಟ್ ಗೆದ್ದಿದೆ. ಬ್ರಿಟಿಷರು 200 ವರ್ಷ ಆಳಿದ್ರೂ ಕೂಡ ಕಾಂಗ್ರೆಸ್ ತೆಗೆದು ಹಾಕಲು ಆಗಿಲ್ಲ. ನಿಮ್ಮ 19 ಸೀಟು.. ಈ ಬಡಜನರ ಶಕ್ತಿ, ಈ ಕಾಂಗ್ರೆಸ್ ಶಕ್ತಿಯನ್ನು ಇನ್ನು ಎರಡು ಜನ್ಮ ತಾಳಿದ್ರು ಕೂಡ, ನೀನು ಬಿಜೆಪಿಯವರು ಸೇರಿಕೊಂಡು ಏನೇ ಕುತಂತ್ರ ಮಾಡಿದ್ರೂ ಕೂಡ ಏನು ಮಾಡಲು ಸಾಧ್ಯವಿಲ್ಲ. ನಿನಗೆ ಸಿದ್ದರಾಮಯ್ಯನವರ ರಾಜೀನಾಮೆ ಬೇಕಾ? ಏ ವಿಜಯೇಂದ್ರ, ಅಶೋಕಾ ನಿಮಗೆ ರಾಜೀನಾಮೆ ಬೇಕಾ? ಎಂದು ಖಾರವಾಗಿ ಪ್ರಶ್ನಿಸಿದರು.

ಇದನ್ನೂ ಓದಿ : ಹೆಚ್‌.ಡಿ ಕುಮಾರಸ್ವಾಮಿ ಪ್ರಾಸಿಕ್ಯೂಷನ್‌ಗೆ ಎಸ್‌ಐಟಿ ಮನವಿ : 10 ತಿಂಗಳಿನಿಂದ ಪ್ರತಿಕ್ರಿಯಿಸದ ರಾಜ್ಯಪಾಲರು; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...