Homeಕರ್ನಾಟಕ"ಈ ಬಂಡೆ ಸಿದ್ದರಾಮಯ್ಯ ಜೊತೆ ಇದೆ": ಬಿಜೆಪಿ-ಜೆಡಿಎಸ್ ವಿರುದ್ಧ ಗುಡುಗಿದ ಡಿಕೆಶಿ

“ಈ ಬಂಡೆ ಸಿದ್ದರಾಮಯ್ಯ ಜೊತೆ ಇದೆ”: ಬಿಜೆಪಿ-ಜೆಡಿಎಸ್ ವಿರುದ್ಧ ಗುಡುಗಿದ ಡಿಕೆಶಿ

- Advertisement -
- Advertisement -

“ಮಾಧ್ಯಮದವರು ನನ್ನನ್ನು ಕನಕಪುರದ ಬಂಡೆ ಎಂದು ಕರೆಯುತ್ತಾರೆ. ಈ ಬಂಡೆ ಸಿದ್ದರಾಮಯ್ಯನವರ ಜೊತೆ ಸದಾ ಇದೆ” ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.

ಮೈಸೂರಿನಲ್ಲಿ ಆಯೋಜಿಸಿದ್ದ ಕಾಂಗ್ರೆಸ್‌ ಪಕ್ಷದ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಅವರು “ಹಿಂದುಳಿದ ಸಮುದಾಯದ ಸಿದ್ದರಾಮಯ್ಯನವರು ಎರಡನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿರುವುದು ಬಿಜೆಪಿ ಮತ್ತು ಜೆಡಿಎಸ್‌ನವರಿಗೆ ಸಹಿಸಲಾಗುತ್ತಿಲ್ಲ. ಅದಕ್ಕೆ ಅವರನ್ನು ಮುಡಾ ಹಗರಣದಲ್ಲಿ ಸಿಕ್ಕಿ ಹಾಕಿಸಿ ಅಧಿಕಾರದಿಂದ ಕೆಳಗಿಳಿಸುವ ಹುನ್ನಾರ ಮಾಡಿದ್ದಾರೆ. ಈ ಕನಕಪುರದ ಬಂಡೆ ಸಿಎಂ ಜೊತೆ ಸದಾ ಇರಲಿದೆ. ಕಲ್ಲು ಪ್ರಕೃತಿ, ಕಡಿದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ, ವಿರುದ್ದ ನಿಂತುಕೊಂಡರೆ ನಾಶ” ಎಂದು ಗುಡುಗಿದರು.

“ನಾವು ನುಡಿದಂತೆ ನಡೆದಿದ್ದೇವೆ. ಬಡ ಜನರಿಗಾಗಿ ಶ್ರಮಿಸಿದ್ದೇವೆ. ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ. ಇದನ್ನು ಸಹಿಸಲಾಗದೆ ಸಿದ್ದರಾಮಯ್ಯ ಅವರನ್ನು ಮುಡಾ ಪ್ರಕರಣದಲ್ಲಿ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ. ಮುಡಾ ಸೈಟ್ ಯಾರ ಆಡಳಿತಾವಧಿಯಲ್ಲಿ ನೀಡಲಾಗಿದೆ? ಬಿಜೆಪಿ ಅವಧಿಯಲ್ಲೇ ಆಗಿದೆ. ಆಗ ಎಲ್ಲಿಗೆ ಹೋಗಿತ್ತು ಹಗರಣ ವಿಚಾರ?” ಎಂದು ಡಿಕೆಶಿ ಪ್ರಶ್ನಿಸಿದರು.

ಇದೇ ವೇಳೆ ಬಿಜೆಪಿ -ಜೆಡಿಎಸ್ ನಾಯಕರು ಮೈತ್ರಿ ಮಾಡಿಕೊಳ್ಳುವ ಮುನ್ನ ಪರಸ್ಪರ ವಾಗ್ದಾಳಿ ನಡೆಸಿದ್ದ ವಿಡಿಯೋಗಳನ್ನು ವೇದಿಕೆಯಲ್ಲಿ ಪ್ರಸಾರ ಮಾಡಿಸಿದರು.

“ಕುಮಾರಸ್ವಾಮಿ ನಂಬಿದವರನ್ನು ಮುಗಿಸುತ್ತಾರೆ. ಅವರು ಮಾಡಿರುವ ಹಗರಣಗಳನ್ನು ಬಯಲು ಮಾಡಿದ್ದೇನೆ, ಮುಂದೆ ಮಾಡುತ್ತೇನೆ. ವಿಜಯೇಂದ್ರ ಎಷ್ಟು ಕೊಳ್ಳೆ ಹೊಡೆದಿದ್ದಾರೆ ಎಂಬುವುದು ಹೊರಬರಲಿದೆ. ಕೊರೋನಾ ಸಮಯದಲ್ಲಿ ಬಡವರ ಹಣ ತಿಂದಿದ್ದಾರೆ. ಇಂತಹ ಭ್ರಷ್ಟರನ್ನು ಬಿಜೆಪಿ ಅಧ್ಯಕ್ಷರಾಗಿ ಮುಂದುವರೆಸಬೇಕಾ? ವಿಜಯೇಂದ್ರ ಅಂದ್ರೆ ಭ್ರಷ್ಟಾಚಾರ” ಎಂದರು.

“ರಾಜ್ಯದ ಜನರು, ಸಂವಿಧಾನದ ರಕ್ಷಣೆಗೋಸ್ಕರ, ನಮ್ಮ ಸರ್ಕಾರವನ್ನು ಉರುಳಿಸುವ, ನಾವು ಜನರಿಗೆ ಕೊಟ್ಟಿರುವ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹುನ್ನಾರ ನಡೆಯುತ್ತಿದೆ. ಅದರಿಂದ ರಕ್ಷಣೆಗೋಸ್ಕರ ಈ ಜನಾಂದೋಲನ ಆಯೋಜಿಸಿದ್ದೇವೆ” ಎಂದು ಹೇಳಿದರು.

“ಮಿಸ್ಟರ್ ಕುಮಾರಸ್ವಾಮಿ..ಮಿಸ್ಟರ್ ಆಶೋಕಾ..ಮಿಸ್ಟರ್ ವಿಜಯೇಂದ್ರ..ನೀವು ಆಪರೇಶನ್ ಮಾಡಿ ಅನೇಕ ಸರ್ಕಾರಗಳನ್ನು ತೆಗೆದು ಹಾಕಿದ್ದೀರಿ. ಕುಮಾರಸ್ವಾಮಿ ನಿಮ್ಮ ಮುಖಂಡತ್ವದಲ್ಲಿ 19 ಸೀಟ್ ಮಾತ್ರ ಗೆಲ್ಲಿತು. ಈ ಡಿ.ಕೆ ಶಿವಕುಮಾರ್ ಮುಖಂಡತ್ವದಲ್ಲಿ 136 ಸೀಟ್ ಗೆದ್ದಿದೆ. ಬ್ರಿಟಿಷರು 200 ವರ್ಷ ಆಳಿದ್ರೂ ಕೂಡ ಕಾಂಗ್ರೆಸ್ ತೆಗೆದು ಹಾಕಲು ಆಗಿಲ್ಲ. ನಿಮ್ಮ 19 ಸೀಟು.. ಈ ಬಡಜನರ ಶಕ್ತಿ, ಈ ಕಾಂಗ್ರೆಸ್ ಶಕ್ತಿಯನ್ನು ಇನ್ನು ಎರಡು ಜನ್ಮ ತಾಳಿದ್ರು ಕೂಡ, ನೀನು ಬಿಜೆಪಿಯವರು ಸೇರಿಕೊಂಡು ಏನೇ ಕುತಂತ್ರ ಮಾಡಿದ್ರೂ ಕೂಡ ಏನು ಮಾಡಲು ಸಾಧ್ಯವಿಲ್ಲ. ನಿನಗೆ ಸಿದ್ದರಾಮಯ್ಯನವರ ರಾಜೀನಾಮೆ ಬೇಕಾ? ಏ ವಿಜಯೇಂದ್ರ, ಅಶೋಕಾ ನಿಮಗೆ ರಾಜೀನಾಮೆ ಬೇಕಾ? ಎಂದು ಖಾರವಾಗಿ ಪ್ರಶ್ನಿಸಿದರು.

ಇದನ್ನೂ ಓದಿ : ಹೆಚ್‌.ಡಿ ಕುಮಾರಸ್ವಾಮಿ ಪ್ರಾಸಿಕ್ಯೂಷನ್‌ಗೆ ಎಸ್‌ಐಟಿ ಮನವಿ : 10 ತಿಂಗಳಿನಿಂದ ಪ್ರತಿಕ್ರಿಯಿಸದ ರಾಜ್ಯಪಾಲರು; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...