Homeಕರ್ನಾಟಕಕಾಂಗ್ರೆಸ್ ಬೆಂಬಲಿಸುವ ಅನೇಕ ಸಮುದಾಯಗಳಿಗೆ ಡಿಸಿಎಂ ಪ್ರಾತಿನಿಧ್ಯ ನೀಡಬೇಕು: ಕೆ.ಎನ್. ರಾಜಣ್ಣ

ಕಾಂಗ್ರೆಸ್ ಬೆಂಬಲಿಸುವ ಅನೇಕ ಸಮುದಾಯಗಳಿಗೆ ಡಿಸಿಎಂ ಪ್ರಾತಿನಿಧ್ಯ ನೀಡಬೇಕು: ಕೆ.ಎನ್. ರಾಜಣ್ಣ

- Advertisement -
- Advertisement -

“ಸಂಪುಟದಲ್ಲಿರುವ ಹಲವು ಸಚಿವರು, ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಸಮುದಾಯಗಳಿಗೆ ಉಪಮುಖ್ಯಮಂತ್ರಿಯಾಗುವ ಅವಕಾಶ ಸಿಗಬೇಕು. ಲೋಕಸಭೆ ಚುನಾವಣೆಯಿಂದಾಗಿ ಪ್ರಕ್ರಿಯೆ ವಿಳಂಬವಾಗಿದೆ” ಎಂದು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ತಮ್ಮ ಹಳೆ ಬೇಡಿಕೆಯನ್ನು ಪುನರುಚ್ಛರಿಸಿದ್ದಾರೆ.

ಈ ಕುರಿತು ಸೋಮವಾರ ಮಾತನಾಡಿರುವ ಅವರು, “ಸಂಸತ್ ಚುನಾವಣೆಯಿಂದಾಗಿ ವಿಳಂಬವಾಗಿದೆ; ಪಕ್ಷದ ಹೈಕಮಾಂಡ್ ನನ್ನ ಮನವಿಯನ್ನು ಪರಿಗಣಿಸಬೇಕೆಂದು ನಾನು ಬಯಸುತ್ತೇನೆ. ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಅನೇಕ ಸಮುದಾಯಗಳಿಗೆ ಉಪ ಮುಖ್ಯಮಂತ್ರಿ ಪ್ರಾತಿನಿಧ್ಯ ನೀಡಬೇಕು. ಆದರೆ, ನಾನು  ಮಹತ್ವಾಕಾಂಕ್ಷಿ ಅಲ್ಲ” ಎಂದು ಹೇಳಿದ್ದಾರೆ.

ಬಿಜೆಪಿ ಸರ್ಕಾರದಲ್ಲಿ ಈ ಹಿಂದೆ ಇಂತಹ ಪ್ರಯೋಗ ಮಾಡಿದ ಉದಾಹರಣೆಗಳಿವೆ; ಡಿಸಿಎಂ ಮಾಡಿದ ತಕ್ಷಣ ಬೇರೆ ಯಾವ ಸೌಲಭ್ಯಗಳು ಸಿಗಲ್ಲ. ಆದರೆ, ಆಯಾ ಸಮುದಾಯದ ಜನರಲ್ಲಿ ಪ್ರಾತಿನಿಧ್ಯ ದೊರಕಿದೆಂಬ ಸಮಾಧಾನ ಇರುತ್ತದೆ. ಆ ಮೂಲಕ ಆ ಸಮುದಾಯಗಳ ವಿಶ್ವಾಸ ಗಳಿಸಿಕೊಳ್ಳಲು ಸಾಧ್ಯವಾಗುತ್ತದೆ. ಇದಕ್ಕೆ ಸಂಪುಟದ ಬಹುತೇಕ ಸಚಿವರ ಸಹಮತವಿದೆ. ಅಂತಿಮವಾಗಿ ಪಕ್ಷದ ಹೈಕಮಾಂಡ್‌ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲ ಬದ್ಧರಾಗಿರುತ್ತೇವೆ” ಎಂದರು.

ಗ್ಯಾರಂಟಿ ಯೋಜನೆಗಳಿಗೆ ಸಚಿವರಿಂದ ಅಪಸ್ವರ ಇಲ್ಲ

ಪಕ್ಷದ ಶಾಸಕರೇ ಗ್ಯಾರಂಟಿ ಯೋಜನೆಗಳಿಗೆ ಅಪಸ್ವರ ಆರಂಭಿಸಿದ್ದಾರೆಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಾಜಣ್ಣ, “ಇದೆಲ್ಲವು ಮಾಧ್ಯಮಗಳ ಸೃಷ್ಟಿ ಮಾತ್ರ. ಕ್ಯಾಬಿನೆಟ್‌ನಲ್ಲಿಯೂ ಸಹ ಈ ಕುರಿತು ಚರ್ಚೆಯಾಗಿಲ್ಲ. ಮುಖ್ಯಮಂತ್ರಿಗಳೆ ಸಹ ಗ್ಯಾರಂಟಿ ನಿಲ್ಲಿಸುವುದಿಲ್ಲ ಎಂದಿದ್ದಾರೆ. ಬಡವರಿಗೆ ನೀಡಿದ ಸೌಲಭ್ಯಗಳು ಕಡಿತ ಆಗುವುದಿಲ್ಲ” ಎಂದು ತಿಳಿಸಿದರು.

ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ನಾಯಕರಿಂದ ಉಪಮುಖ್ಯಮಂತ್ರಿಗಳ ಬೇಡಿಕೆಯೂ ಕೇಳಿ ಬಂದಿತ್ತು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್ ಅವರು ಸಿದ್ದರಾಮಯ್ಯ ಸಂಪುಟದ ಏಕೈಕ ಉಪಮುಖ್ಯಮಂತ್ರಿ ಎಂಬುದು ಗಮನಾರ್ಹ. ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಬಿಜೆಪಿಯ ಬಸವರಾಜ ಬೊಮ್ಮಾಯಿ ಸರ್ಕಾರವನ್ನು ಕಿತ್ತೊಗೆಯಿತು. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ 66 ಸ್ಥಾನಗಳಿಗೆ ಕುಸಿದಿತ್ತು. ತ್ರಿಕೋನ ಸ್ಪರ್ಧೆಯಲ್ಲಿ ಪ್ರಾದೇಶಿಕ ಜೆಡಿಎಸ್ ಪಕ್ಷ ಕೇವಲ 19 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಸ್ವತಂತ್ರ ಅಭ್ಯರ್ಥಿಗಳು ಎರಡು ಸ್ಥಾನಗಳಲ್ಲಿ ಜಯಗಳಿಸಿದರೆ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಮತ್ತು ಸರ್ವೋದಯ ಕರ್ನಾಟಕ ಪಕ್ಷ ತಲಾ ಒಂದು ಸ್ಥಾನವನ್ನು ಗೆದ್ದಿದೆ.

ಇದನ್ನೂ ಓದಿ; ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ ಶಿಕ್ಷಣ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...