Homeಕರ್ನಾಟಕಕಾಂಗ್ರೆಸ್ ಬೆಂಬಲಿಸುವ ಅನೇಕ ಸಮುದಾಯಗಳಿಗೆ ಡಿಸಿಎಂ ಪ್ರಾತಿನಿಧ್ಯ ನೀಡಬೇಕು: ಕೆ.ಎನ್. ರಾಜಣ್ಣ

ಕಾಂಗ್ರೆಸ್ ಬೆಂಬಲಿಸುವ ಅನೇಕ ಸಮುದಾಯಗಳಿಗೆ ಡಿಸಿಎಂ ಪ್ರಾತಿನಿಧ್ಯ ನೀಡಬೇಕು: ಕೆ.ಎನ್. ರಾಜಣ್ಣ

- Advertisement -
- Advertisement -

“ಸಂಪುಟದಲ್ಲಿರುವ ಹಲವು ಸಚಿವರು, ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಸಮುದಾಯಗಳಿಗೆ ಉಪಮುಖ್ಯಮಂತ್ರಿಯಾಗುವ ಅವಕಾಶ ಸಿಗಬೇಕು. ಲೋಕಸಭೆ ಚುನಾವಣೆಯಿಂದಾಗಿ ಪ್ರಕ್ರಿಯೆ ವಿಳಂಬವಾಗಿದೆ” ಎಂದು ಸಹಕಾರಿ ಸಚಿವ ಕೆ.ಎನ್.ರಾಜಣ್ಣ ತಮ್ಮ ಹಳೆ ಬೇಡಿಕೆಯನ್ನು ಪುನರುಚ್ಛರಿಸಿದ್ದಾರೆ.

ಈ ಕುರಿತು ಸೋಮವಾರ ಮಾತನಾಡಿರುವ ಅವರು, “ಸಂಸತ್ ಚುನಾವಣೆಯಿಂದಾಗಿ ವಿಳಂಬವಾಗಿದೆ; ಪಕ್ಷದ ಹೈಕಮಾಂಡ್ ನನ್ನ ಮನವಿಯನ್ನು ಪರಿಗಣಿಸಬೇಕೆಂದು ನಾನು ಬಯಸುತ್ತೇನೆ. ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಅನೇಕ ಸಮುದಾಯಗಳಿಗೆ ಉಪ ಮುಖ್ಯಮಂತ್ರಿ ಪ್ರಾತಿನಿಧ್ಯ ನೀಡಬೇಕು. ಆದರೆ, ನಾನು  ಮಹತ್ವಾಕಾಂಕ್ಷಿ ಅಲ್ಲ” ಎಂದು ಹೇಳಿದ್ದಾರೆ.

ಬಿಜೆಪಿ ಸರ್ಕಾರದಲ್ಲಿ ಈ ಹಿಂದೆ ಇಂತಹ ಪ್ರಯೋಗ ಮಾಡಿದ ಉದಾಹರಣೆಗಳಿವೆ; ಡಿಸಿಎಂ ಮಾಡಿದ ತಕ್ಷಣ ಬೇರೆ ಯಾವ ಸೌಲಭ್ಯಗಳು ಸಿಗಲ್ಲ. ಆದರೆ, ಆಯಾ ಸಮುದಾಯದ ಜನರಲ್ಲಿ ಪ್ರಾತಿನಿಧ್ಯ ದೊರಕಿದೆಂಬ ಸಮಾಧಾನ ಇರುತ್ತದೆ. ಆ ಮೂಲಕ ಆ ಸಮುದಾಯಗಳ ವಿಶ್ವಾಸ ಗಳಿಸಿಕೊಳ್ಳಲು ಸಾಧ್ಯವಾಗುತ್ತದೆ. ಇದಕ್ಕೆ ಸಂಪುಟದ ಬಹುತೇಕ ಸಚಿವರ ಸಹಮತವಿದೆ. ಅಂತಿಮವಾಗಿ ಪಕ್ಷದ ಹೈಕಮಾಂಡ್‌ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲ ಬದ್ಧರಾಗಿರುತ್ತೇವೆ” ಎಂದರು.

ಗ್ಯಾರಂಟಿ ಯೋಜನೆಗಳಿಗೆ ಸಚಿವರಿಂದ ಅಪಸ್ವರ ಇಲ್ಲ

ಪಕ್ಷದ ಶಾಸಕರೇ ಗ್ಯಾರಂಟಿ ಯೋಜನೆಗಳಿಗೆ ಅಪಸ್ವರ ಆರಂಭಿಸಿದ್ದಾರೆಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ರಾಜಣ್ಣ, “ಇದೆಲ್ಲವು ಮಾಧ್ಯಮಗಳ ಸೃಷ್ಟಿ ಮಾತ್ರ. ಕ್ಯಾಬಿನೆಟ್‌ನಲ್ಲಿಯೂ ಸಹ ಈ ಕುರಿತು ಚರ್ಚೆಯಾಗಿಲ್ಲ. ಮುಖ್ಯಮಂತ್ರಿಗಳೆ ಸಹ ಗ್ಯಾರಂಟಿ ನಿಲ್ಲಿಸುವುದಿಲ್ಲ ಎಂದಿದ್ದಾರೆ. ಬಡವರಿಗೆ ನೀಡಿದ ಸೌಲಭ್ಯಗಳು ಕಡಿತ ಆಗುವುದಿಲ್ಲ” ಎಂದು ತಿಳಿಸಿದರು.

ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ನಾಯಕರಿಂದ ಉಪಮುಖ್ಯಮಂತ್ರಿಗಳ ಬೇಡಿಕೆಯೂ ಕೇಳಿ ಬಂದಿತ್ತು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್ ಅವರು ಸಿದ್ದರಾಮಯ್ಯ ಸಂಪುಟದ ಏಕೈಕ ಉಪಮುಖ್ಯಮಂತ್ರಿ ಎಂಬುದು ಗಮನಾರ್ಹ. ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಬಿಜೆಪಿಯ ಬಸವರಾಜ ಬೊಮ್ಮಾಯಿ ಸರ್ಕಾರವನ್ನು ಕಿತ್ತೊಗೆಯಿತು. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ 66 ಸ್ಥಾನಗಳಿಗೆ ಕುಸಿದಿತ್ತು. ತ್ರಿಕೋನ ಸ್ಪರ್ಧೆಯಲ್ಲಿ ಪ್ರಾದೇಶಿಕ ಜೆಡಿಎಸ್ ಪಕ್ಷ ಕೇವಲ 19 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಸ್ವತಂತ್ರ ಅಭ್ಯರ್ಥಿಗಳು ಎರಡು ಸ್ಥಾನಗಳಲ್ಲಿ ಜಯಗಳಿಸಿದರೆ, ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಮತ್ತು ಸರ್ವೋದಯ ಕರ್ನಾಟಕ ಪಕ್ಷ ತಲಾ ಒಂದು ಸ್ಥಾನವನ್ನು ಗೆದ್ದಿದೆ.

ಇದನ್ನೂ ಓದಿ; ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ ಶಿಕ್ಷಣ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...