Homeಮುಖಪುಟದೂರದರ್ಶನದ ಲೋಗೋ ಬಣ್ಣ ಬದಲಾವಣೆ ಕೇಸರೀಕರಣದ ಭಾಗ: ಎಂಕೆ ಸ್ಟಾಲಿನ್

ದೂರದರ್ಶನದ ಲೋಗೋ ಬಣ್ಣ ಬದಲಾವಣೆ ಕೇಸರೀಕರಣದ ಭಾಗ: ಎಂಕೆ ಸ್ಟಾಲಿನ್

- Advertisement -
- Advertisement -

ದೂರದರ್ಶನದ ಲೋಗೋವನ್ನು ಕೆಂಪು ಬಣ್ಣದಿಂದ ಕೇಸರಿ ಬಣ್ಣಕ್ಕೆ ಬದಲಾಯಿಸಿರುವುದನ್ನು ಟೀಕಿಸಿರುವ ಡಿಎಂಕೆ ಅಧ್ಯಕ್ಷ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ಎಲ್ಲವನ್ನೂ ಕೇಸರಿಮಯಗೊಳಿಸುವ ಬಿಜೆಪಿಯ ಪಿತೂರಿಯ ಪೂರ್ವಭಾವಿ ಪ್ರಯತ್ನ ಎಂದು ಹೇಳಿದ್ದಾರೆ.

ದೂರದರ್ಶನದ ಲೋಗೋ ಬದಲಾವಣೆ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಎಂ ಕೆ ಸ್ಟಾಲಿನ್, ದೂರದರ್ಶನಕ್ಕೆ ‘ಕೇಸರಿ ಕಲೆ’ ನೀಡಲಾಗಿದೆ. ಎಲ್ಲವನ್ನೂ ಕೇಸರಿಮಯಗೊಳಿಸುವ ಬಿಜೆಪಿಯ ಷಡ್ಯಂತ್ರ ಇದು ಎಂದು ಚುನಾವಣಾ ಪ್ರಚಾರದ ವೇಳೆ ಹೇಳಿರುವ ಹೇಳಿಕೆಯನ್ನು ಸ್ಟಾಲಿನ್‌ ಉಲ್ಲೇಖಿಸಿದ್ದಾರೆ. ಲೋಗೋ ಬದಲಾವಣೆಯಂತಹ ಕ್ರಮಗಳು ಕೇಸರೀಕರಣದ ಪೂರ್ವಭಾವಿಯಾಗಿವೆ. 2024ರ ಲೋಕಸಭಾ ಚುನಾವಣಾ ಫಲಿತಾಂಶವು ಅಂತಹ ಫ್ಯಾಸಿಸಂ ಶಕ್ತಿಗಳ ವಿರುದ್ಧ ಸಾರ್ವಜನಿಕ ಪ್ರತಿರೋಧವನ್ನು ತೋರಿಸಲಿದೆ ಎಂದು ಹೇಳಿದ್ದಾರೆ.

ಈ ಹಿಂದೆ ತಮಿಳು ಸಂತ ಕವಿ ತಿರುವಳ್ಳುವರ್ ಅವರನ್ನು ‘ಕೇಸರಿಮಯ’ಗೊಳಿಸಿದ್ದನ್ನು ಸ್ಮರಿಸಿದ ಅವರು, ತಮಿಳುನಾಡಿನ ಮಹಾನ್ ನಾಯಕರ ಪ್ರತಿಮೆಗಳಿಗೆ ಕೇಸರಿ ಬಣ್ಣವನ್ನು ಸುರಿಯಲಾಗಿತ್ತು ಎಂದು ಹೇಳಿದ್ದಾರೆ.

ಸರಕಾರಿ ಸ್ವಾಮ್ಯದ ದೂರದರ್ಶನ ಚಾನೆಲ್ ಡಿಡಿ ಲೋಗೋ ಬಣ್ಣ ಬದಲಾವಣೆಯು ಕಾನೂನುಬಾಹಿರ ಎಂದು ಪ್ರತಿಪಕ್ಷಗಳು ಈಗಾಗಲೇ ಟೀಕಿಸಿವೆ. ಸರ್ಕಾರಿ ಸ್ವಾಮ್ಯದ ಸಾರ್ವಜನಿಕ ಸುದ್ದಿ ದೂರದರ್ಶನ ಚಾನೆಲ್ ಡಿಡಿ ನ್ಯೂಸ್‌ನ ಲೋಗೋವನ್ನು ಕೆಂಪು ಬಣ್ಣದಿಂದ- ಕೇಸರಿ ಬಣ್ಣಕ್ಕೆ ಮರುಬ್ರಾಂಡ್ ಮಾಡಲಾಗಿದೆ. ಡಿಡಿ ನ್ಯೂಸ್‌ನ ಅಧಿಕೃತ ಎಕ್ಸ್  ಹ್ಯಾಂಡಲ್ ಮೂಲಕ ಬದಲಾವಣೆ ಬಗ್ಗೆ ಪ್ರಕಟಣೆಯನ್ನು ಹೊರಡಿಸಲಾಗಿತ್ತು. ನಮ್ಮ ಮೌಲ್ಯಗಳಲ್ಲಿ ಯಾವುದೇ ಬದಲಾವಣೆಗಳಿಲ್ಲ, ಆದರೆ ನಾವು ಈಗ ಹೊಸ ಅವತಾರದಲ್ಲಿ ಲಭ್ಯವಿದ್ದೇವೆ ಎಂದು ಪೋಸ್ಟ್‌ ಮೂಲಕ ದೂರದರ್ಶನ ಮಾಹಿತಿ ನೀಡಿತ್ತು.

ದೂರದರ್ಶನದ ಲೋಗೋ ಬದಲಾವಣೆಯ ಬಗ್ಗೆ ರಾಜ್ಯಸಭಾ ಸದಸ್ಯ ಮತ್ತು ಪ್ರಸಾರ ಭಾರತಿಯ ಮಾಜಿ ಸಿಇಒ ಜವಾಹರ್ ಸಿರ್ಕಾರ್ ಅವರು ಟೀಕಿಸಿದ್ದಾರೆ. ದೂರದರ್ಶನವು ತನ್ನ ಬಣ್ಣವನ್ನು ಕೇಸರಿಗೆ ಬದಲಿಸಿಕೊಂಡಿದ್ದು ಅಕ್ಷಮ್ಯ ಅಪರಾಧ ಎಂದು ಹೇಳಿದ್ದಾರೆ. ದೂರದರ್ಶನದಲ್ಲಿ ಆಗುತ್ತಿರುವ ಕೇಸರೀಕರಣದ ಬದಲಾವಣೆಯನ್ನು ನೋಡಿಕೊಂಡು ಬರುತ್ತಿದ್ದೇನೆ. ಪ್ರಸಾರ ಭಾರತಿ ಈಗ ಹಿಂದಿನ ಮೌಲ್ಯಗಳನ್ನು ಉಳಿಸಿಕೊಂಡಿಲ್ಲ. ಈಗ, ಅದು ಪ್ರಚಾರ ಭಾರತಿ ಆಗಿದೆ ಎಂದು ಜವಾಹರ್ ಸಿರ್ಕಾರ್ ಹೇಳಿದ್ದರು.

2012ರಿಂದ 2014ರ ಅವಧಿಯಲ್ಲಿ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಸಚಿವರಾಗಿದ್ದ ಕಾಂಗ್ರೆಸ್‌ನ ಮನೀಶ್ ತಿವಾರಿ, ದೂರದರ್ಶನದ ಲೋಗೋ ಬಣ್ಣ ಬದಲಾವಣೆಯು ಸರ್ಕಾರಿ ಸಂಸ್ಥೆಗಳನ್ನು ವಶಪಡಿಸಿಕೊಳ್ಳುವ ಸರ್ಕಾರದ ಪ್ರಯತ್ನದ ಒಂದು ಭಾಗವಾಗಿದೆ ಎಂದು ಆರೋಪಿಸಿದ್ದರು.

ಇದನ್ನು ಓದಿ: ಕನ್ನಡಿಗರಿಗೆ ಕೊಟ್ಟ ‘ಖಾಲಿ ಚೊಂಬಿ’ಗೆ ಕನ್ನಡಿಗರಿಂದ ‘ಖಾಲಿ ಕುರ್ಚಿ’ಯ ಉತ್ತರ: ಮೋದಿ ಸಭೆಯಲ್ಲಿ ಕುರ್ಚಿಗಳು ಖಾಲಿ-ಖಾಲಿ; ವಿಡಿಯೋ ಹಂಚಿಕೊಂಡ ಕಾಂಗ್ರೆಸ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...