Homeಮುಖಪುಟಡಿಡಿಎಲ್‌ಜೆಗೆ 25ರ ಸಂಭ್ರಮ: ಹೆಸರು ಬದಲಾಯಿಸಿಕೊಂಡ ಕಾಜೋಲ್, ಶಾರುಖ್!

ಡಿಡಿಎಲ್‌ಜೆಗೆ 25ರ ಸಂಭ್ರಮ: ಹೆಸರು ಬದಲಾಯಿಸಿಕೊಂಡ ಕಾಜೋಲ್, ಶಾರುಖ್!

ನಟಿ ಕಾಜೋಲ್ ಮತ್ತು ನಟ ಶಾರುಖ್ ತಮ್ಮ ಸಾಮಾಜಿಕ ಮಾಧ್ಯಮಗಳ ಖಾತೆಗಳ ಹೆಸರನ್ನು ಡಿಡಿಎಲ್‌ಜೆ ಚಿತ್ರದ ಪಾತ್ರಗಳ ಹೆಸರಾದ ರಾಜ್ ಮತ್ತು ಸಿಮ್ರಾನ್ ಎಂದು ಬದಲಿಸಿಕೊಂಡಿದ್ದಾರೆ.

- Advertisement -
- Advertisement -

25 ವರ್ಷಗಳ ಹಿಂದೆ ಇದೆ ದಿನ ಬಾಲಿವುಡ್‌ನಲ್ಲಿ’ದಿಲ್ವಾಲೆ ದುಲ್ಹಾನಿಯಾ ಲೆ ಜಯೆಂಗೆ’ (DDLJ) ಚಿತ್ರ ಬಿಡುಗಡೆಯಾಗಿತ್ತು. ಅಂದು ಈ ಚಿತ್ರ ಈ ಮಟ್ಟಿಗೆ ಯಶಸ್ಸು, ದಾಖಲೆಗಳನ್ನು ಸಾಧಿಸುತ್ತದೆ ಎಂಬ ಕಲ್ಪನೆಯನ್ನು ಯಾರು ಇಟ್ಟುಕೊಂಡಿರಲಿಲ್ಲ.

ಬಾಲಿವುಡ್‌ನ ಎಲ್ಲಾ ದಾಖಲೆಗಳನ್ನು ಚೂರು ಮಾಡಿದ ಚಿತ್ರ ಇದು. ನಟ ಶಾರುಖ್ ಖಾನ್‌ಗೆ ರೊಮ್ಯಾಂಟಿಕ್ ಹೀರೋ ಪಟ್ಟ ಕೊಟ್ಟ ಚಿತ್ರ. ನಟಿ ಕಾಜೋಲ್ ಸಿನಿ ಜೀವನದ ಮೈಲುಗಲ್ಲು. ಚಿತ್ರ ನಿರ್ಮಿಸಿದ, ಚಿತ್ರದಲ್ಲಿ ನಟಿಸಿದ ಪ್ರತಿರೊಬ್ಬರ ಬದುಕನ್ನು ಬದಲಿಸಿದ ಚಿತ್ರ ಎಂದರೆ ಅತಿಶಯೋಕ್ತಿಯಲ್ಲ.

‘ದಿಲ್ವಾಲೆ ದುಲ್ಹಾನಿಯಾ ಲೆ ಜಯಂಗೆ’ ಚಿತ್ರವನ್ನು ಆದಿತ್ಯ ಚೋಪ್ರಾ ನಿರ್ದೇಶಿಸಿದ್ದರು. ಈ ಚಿತ್ರದಲ್ಲಿ ಅಂಬರಿಷ್ ಪುರಿ, ಅನುಪಮ್ ಖೇರ್, ಫರಿದಾ ಜಲಾಲ್ ಮುಂತಾದವರು ನಟಿಸಿದ್ದಾರೆ. ಇದು ಭಾರತೀಯ ಚಿತ್ರರಂಗದ ಅತ್ಯಂತ ಯಶಸ್ವಿ ಚಿತ್ರಗಳಲ್ಲಿ ಒಂದಾಗಿದೆ. ಈ ಚಿತ್ರ ಮುಂಬೈನ ಥಿಯೇಟರ್‌ ಒಂದರಲ್ಲಿ ಎರಡು ದಶಕಗಳಿಗೂ ಹೆಚ್ಚು ಕಾಲ ಪ್ರದರ್ಶನಗೊಂಡಿದೆ.

ಚಿತ್ರಕ್ಕೆ 25ರ ಸಂಭ್ರಮದ ಹಿನ್ನೆಲೆ ನಟಿ ಕಾಜೋಲ್ ಮತ್ತು ನಟ ಶಾರುಖ್ ತಮ್ಮ ಸಾಮಾಜಿಕ ಮಾಧ್ಯಮಗಳ ಖಾತೆಗಳ ಹೆಸರನ್ನು ಡಿಡಿಎಲ್‌ಜೆ ಚಿತ್ರದ ಪಾತ್ರಗಳ ಹೆಸರಾದ ರಾಜ್ ಮತ್ತು ಸಿಮ್ರಾನ್ ಎಂದು ಬದಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಬಾಲಿವುಡ್ ನಟಿ ಶ್ರೀದೇವಿಯ ಸಾವು ಸಹಜವಲ್ಲವೇ?

 

PC: screenshot@twitter

ಈ ಚಿತ್ರವು ರಾಜ್ (ಶಾರುಖ್) ಮತ್ತು ಸಿಮ್ರಾನ್ (ಕಾಜೋಲ್) ಎಂಬ ಪ್ರೇಮಿಗಳ ಪ್ರೀತಿಯ ಸುತ್ತ ಗಿರಕಿ ಹೊಡೆಯುತ್ತದೆ. ಇದು ಸಾರ್ವಕಾಲಿಕ ಹಿಂದಿ ಚಲನಚಿತ್ರವಾಗಿ ಹೊರಹೊಮ್ಮಿದ್ದು ಮಾತ್ರವಲ್ಲದೆ  10 ಫಿಲ್ಮ್ ಫೇರ್ ಪ್ರಶಸ್ತಿಗಳನ್ನು ಗೆದ್ದುಕೊಂಡಿತ್ತು.

PC: screenshot@twitter

ಡಿಡಿಎಲ್‌ಜೆ ಚಿತ್ರದ ಅಪ್ರತಿಮ ಜೋಡಿ ಶಾರುಖ್ ಖಾನ್ ಮತ್ತು ಕಾಜೋಲ್ ಅವರ ಕಂಚಿನ ಪ್ರತಿಮೆ ಲಂಡನ್ನಿನ  ಲೀಸೆಸ್ಟರ್ ಸ್ಕ್ವೇರ್ ನ  ‘ಸೀನ್ಸ್ ಇನ್ ದಿ ಸ್ಕ್ವೇರ್’ ನಲ್ಲಿ ಅನಾವರಣಗೊಳ್ಳಲಿದೆ. ಈ ಪ್ರತಿಮೆಯು ಲೀಸೆಸ್ಟರ್ ಚೌಕದಲ್ಲಿ ಚಿತ್ರೀಕರಿಸಿದ ದೃಶ್ಯದ ಒಂದು ಭಾಗವನ್ನು ಪ್ರತಿನಿಧಿಸುತ್ತದೆ.

“ಈ ಚಿತ್ರ ಬರುವ ಮುನ್ನ ರೋಮ್ಯಾಂಟಿಕ್ ರೀತಿಯ ಪಾತ್ರವನ್ನು ನಿರ್ವಹಿಸಲು ನನ್ನಿಂದ ಸಾಧ್ಯವೇ ಇಲ್ಲ ಎಂದೇ ನಾನು ಭಾವಿಸಿದ್ದೆ” ಎಂದು ಚಿತ್ರದ 25 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ‘ಕಿಂಗ್ ಆಫ್ ರೋಮ್ಯಾನ್ಸ್’ ಶಾರುಖ್ ಖಾನ್ ಹೇಳಿದ್ದಾರೆ.

ಇಂದಿಗೂ ಈ ಚಿತ್ರಕ್ಕೆ ಅತ್ಯಧಿಕ ಅಭಿಮಾನಿ ಬಳಗವಿದೆ. 25 ವರ್ಷಗಳನ್ನು ಪೂರೈಸಿದರೂ ಕೂಡ ಈ ಚಿತ್ರದ ಜನಪ್ರಿಯತೆ ಎಂದಿಗೂ ಕಡಿಮೆಯಾಗಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ #DilwaleDulhaniaLeJayenge # DDLJ ಹ್ಯಾಶ್‌ಟ್ಯಾಗ್‌ಗಳು ಟ್ರೆಂಡಿಂಗ್‌ನಲ್ಲಿವೆ.


ಇದನ್ನೂ ಓದಿ: ಆಟೋರಾಜ’ನ ನೆನಪಲ್ಲಿ… ಶಂಕರ್ ‌ನಾಗ್‌ ನಮ್ಮನ್ನಗಲಿ ಇಂದಿಗೆ 30 ವರ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...