Homeಮುಖಪುಟಡಿಡಿಎಲ್‌ಜೆಗೆ 25ರ ಸಂಭ್ರಮ: ಹೆಸರು ಬದಲಾಯಿಸಿಕೊಂಡ ಕಾಜೋಲ್, ಶಾರುಖ್!

ಡಿಡಿಎಲ್‌ಜೆಗೆ 25ರ ಸಂಭ್ರಮ: ಹೆಸರು ಬದಲಾಯಿಸಿಕೊಂಡ ಕಾಜೋಲ್, ಶಾರುಖ್!

ನಟಿ ಕಾಜೋಲ್ ಮತ್ತು ನಟ ಶಾರುಖ್ ತಮ್ಮ ಸಾಮಾಜಿಕ ಮಾಧ್ಯಮಗಳ ಖಾತೆಗಳ ಹೆಸರನ್ನು ಡಿಡಿಎಲ್‌ಜೆ ಚಿತ್ರದ ಪಾತ್ರಗಳ ಹೆಸರಾದ ರಾಜ್ ಮತ್ತು ಸಿಮ್ರಾನ್ ಎಂದು ಬದಲಿಸಿಕೊಂಡಿದ್ದಾರೆ.

- Advertisement -
- Advertisement -

25 ವರ್ಷಗಳ ಹಿಂದೆ ಇದೆ ದಿನ ಬಾಲಿವುಡ್‌ನಲ್ಲಿ’ದಿಲ್ವಾಲೆ ದುಲ್ಹಾನಿಯಾ ಲೆ ಜಯೆಂಗೆ’ (DDLJ) ಚಿತ್ರ ಬಿಡುಗಡೆಯಾಗಿತ್ತು. ಅಂದು ಈ ಚಿತ್ರ ಈ ಮಟ್ಟಿಗೆ ಯಶಸ್ಸು, ದಾಖಲೆಗಳನ್ನು ಸಾಧಿಸುತ್ತದೆ ಎಂಬ ಕಲ್ಪನೆಯನ್ನು ಯಾರು ಇಟ್ಟುಕೊಂಡಿರಲಿಲ್ಲ.

ಬಾಲಿವುಡ್‌ನ ಎಲ್ಲಾ ದಾಖಲೆಗಳನ್ನು ಚೂರು ಮಾಡಿದ ಚಿತ್ರ ಇದು. ನಟ ಶಾರುಖ್ ಖಾನ್‌ಗೆ ರೊಮ್ಯಾಂಟಿಕ್ ಹೀರೋ ಪಟ್ಟ ಕೊಟ್ಟ ಚಿತ್ರ. ನಟಿ ಕಾಜೋಲ್ ಸಿನಿ ಜೀವನದ ಮೈಲುಗಲ್ಲು. ಚಿತ್ರ ನಿರ್ಮಿಸಿದ, ಚಿತ್ರದಲ್ಲಿ ನಟಿಸಿದ ಪ್ರತಿರೊಬ್ಬರ ಬದುಕನ್ನು ಬದಲಿಸಿದ ಚಿತ್ರ ಎಂದರೆ ಅತಿಶಯೋಕ್ತಿಯಲ್ಲ.

‘ದಿಲ್ವಾಲೆ ದುಲ್ಹಾನಿಯಾ ಲೆ ಜಯಂಗೆ’ ಚಿತ್ರವನ್ನು ಆದಿತ್ಯ ಚೋಪ್ರಾ ನಿರ್ದೇಶಿಸಿದ್ದರು. ಈ ಚಿತ್ರದಲ್ಲಿ ಅಂಬರಿಷ್ ಪುರಿ, ಅನುಪಮ್ ಖೇರ್, ಫರಿದಾ ಜಲಾಲ್ ಮುಂತಾದವರು ನಟಿಸಿದ್ದಾರೆ. ಇದು ಭಾರತೀಯ ಚಿತ್ರರಂಗದ ಅತ್ಯಂತ ಯಶಸ್ವಿ ಚಿತ್ರಗಳಲ್ಲಿ ಒಂದಾಗಿದೆ. ಈ ಚಿತ್ರ ಮುಂಬೈನ ಥಿಯೇಟರ್‌ ಒಂದರಲ್ಲಿ ಎರಡು ದಶಕಗಳಿಗೂ ಹೆಚ್ಚು ಕಾಲ ಪ್ರದರ್ಶನಗೊಂಡಿದೆ.

ಚಿತ್ರಕ್ಕೆ 25ರ ಸಂಭ್ರಮದ ಹಿನ್ನೆಲೆ ನಟಿ ಕಾಜೋಲ್ ಮತ್ತು ನಟ ಶಾರುಖ್ ತಮ್ಮ ಸಾಮಾಜಿಕ ಮಾಧ್ಯಮಗಳ ಖಾತೆಗಳ ಹೆಸರನ್ನು ಡಿಡಿಎಲ್‌ಜೆ ಚಿತ್ರದ ಪಾತ್ರಗಳ ಹೆಸರಾದ ರಾಜ್ ಮತ್ತು ಸಿಮ್ರಾನ್ ಎಂದು ಬದಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಬಾಲಿವುಡ್ ನಟಿ ಶ್ರೀದೇವಿಯ ಸಾವು ಸಹಜವಲ್ಲವೇ?

 

PC: screenshot@twitter

ಈ ಚಿತ್ರವು ರಾಜ್ (ಶಾರುಖ್) ಮತ್ತು ಸಿಮ್ರಾನ್ (ಕಾಜೋಲ್) ಎಂಬ ಪ್ರೇಮಿಗಳ ಪ್ರೀತಿಯ ಸುತ್ತ ಗಿರಕಿ ಹೊಡೆಯುತ್ತದೆ. ಇದು ಸಾರ್ವಕಾಲಿಕ ಹಿಂದಿ ಚಲನಚಿತ್ರವಾಗಿ ಹೊರಹೊಮ್ಮಿದ್ದು ಮಾತ್ರವಲ್ಲದೆ  10 ಫಿಲ್ಮ್ ಫೇರ್ ಪ್ರಶಸ್ತಿಗಳನ್ನು ಗೆದ್ದುಕೊಂಡಿತ್ತು.

PC: screenshot@twitter

ಡಿಡಿಎಲ್‌ಜೆ ಚಿತ್ರದ ಅಪ್ರತಿಮ ಜೋಡಿ ಶಾರುಖ್ ಖಾನ್ ಮತ್ತು ಕಾಜೋಲ್ ಅವರ ಕಂಚಿನ ಪ್ರತಿಮೆ ಲಂಡನ್ನಿನ  ಲೀಸೆಸ್ಟರ್ ಸ್ಕ್ವೇರ್ ನ  ‘ಸೀನ್ಸ್ ಇನ್ ದಿ ಸ್ಕ್ವೇರ್’ ನಲ್ಲಿ ಅನಾವರಣಗೊಳ್ಳಲಿದೆ. ಈ ಪ್ರತಿಮೆಯು ಲೀಸೆಸ್ಟರ್ ಚೌಕದಲ್ಲಿ ಚಿತ್ರೀಕರಿಸಿದ ದೃಶ್ಯದ ಒಂದು ಭಾಗವನ್ನು ಪ್ರತಿನಿಧಿಸುತ್ತದೆ.

“ಈ ಚಿತ್ರ ಬರುವ ಮುನ್ನ ರೋಮ್ಯಾಂಟಿಕ್ ರೀತಿಯ ಪಾತ್ರವನ್ನು ನಿರ್ವಹಿಸಲು ನನ್ನಿಂದ ಸಾಧ್ಯವೇ ಇಲ್ಲ ಎಂದೇ ನಾನು ಭಾವಿಸಿದ್ದೆ” ಎಂದು ಚಿತ್ರದ 25 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ‘ಕಿಂಗ್ ಆಫ್ ರೋಮ್ಯಾನ್ಸ್’ ಶಾರುಖ್ ಖಾನ್ ಹೇಳಿದ್ದಾರೆ.

ಇಂದಿಗೂ ಈ ಚಿತ್ರಕ್ಕೆ ಅತ್ಯಧಿಕ ಅಭಿಮಾನಿ ಬಳಗವಿದೆ. 25 ವರ್ಷಗಳನ್ನು ಪೂರೈಸಿದರೂ ಕೂಡ ಈ ಚಿತ್ರದ ಜನಪ್ರಿಯತೆ ಎಂದಿಗೂ ಕಡಿಮೆಯಾಗಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ #DilwaleDulhaniaLeJayenge # DDLJ ಹ್ಯಾಶ್‌ಟ್ಯಾಗ್‌ಗಳು ಟ್ರೆಂಡಿಂಗ್‌ನಲ್ಲಿವೆ.


ಇದನ್ನೂ ಓದಿ: ಆಟೋರಾಜ’ನ ನೆನಪಲ್ಲಿ… ಶಂಕರ್ ‌ನಾಗ್‌ ನಮ್ಮನ್ನಗಲಿ ಇಂದಿಗೆ 30 ವರ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...