Homeಮುಖಪುಟಡಿಡಿಎಲ್‌ಜೆಗೆ 25ರ ಸಂಭ್ರಮ: ಹೆಸರು ಬದಲಾಯಿಸಿಕೊಂಡ ಕಾಜೋಲ್, ಶಾರುಖ್!

ಡಿಡಿಎಲ್‌ಜೆಗೆ 25ರ ಸಂಭ್ರಮ: ಹೆಸರು ಬದಲಾಯಿಸಿಕೊಂಡ ಕಾಜೋಲ್, ಶಾರುಖ್!

ನಟಿ ಕಾಜೋಲ್ ಮತ್ತು ನಟ ಶಾರುಖ್ ತಮ್ಮ ಸಾಮಾಜಿಕ ಮಾಧ್ಯಮಗಳ ಖಾತೆಗಳ ಹೆಸರನ್ನು ಡಿಡಿಎಲ್‌ಜೆ ಚಿತ್ರದ ಪಾತ್ರಗಳ ಹೆಸರಾದ ರಾಜ್ ಮತ್ತು ಸಿಮ್ರಾನ್ ಎಂದು ಬದಲಿಸಿಕೊಂಡಿದ್ದಾರೆ.

- Advertisement -
- Advertisement -

25 ವರ್ಷಗಳ ಹಿಂದೆ ಇದೆ ದಿನ ಬಾಲಿವುಡ್‌ನಲ್ಲಿ’ದಿಲ್ವಾಲೆ ದುಲ್ಹಾನಿಯಾ ಲೆ ಜಯೆಂಗೆ’ (DDLJ) ಚಿತ್ರ ಬಿಡುಗಡೆಯಾಗಿತ್ತು. ಅಂದು ಈ ಚಿತ್ರ ಈ ಮಟ್ಟಿಗೆ ಯಶಸ್ಸು, ದಾಖಲೆಗಳನ್ನು ಸಾಧಿಸುತ್ತದೆ ಎಂಬ ಕಲ್ಪನೆಯನ್ನು ಯಾರು ಇಟ್ಟುಕೊಂಡಿರಲಿಲ್ಲ.

ಬಾಲಿವುಡ್‌ನ ಎಲ್ಲಾ ದಾಖಲೆಗಳನ್ನು ಚೂರು ಮಾಡಿದ ಚಿತ್ರ ಇದು. ನಟ ಶಾರುಖ್ ಖಾನ್‌ಗೆ ರೊಮ್ಯಾಂಟಿಕ್ ಹೀರೋ ಪಟ್ಟ ಕೊಟ್ಟ ಚಿತ್ರ. ನಟಿ ಕಾಜೋಲ್ ಸಿನಿ ಜೀವನದ ಮೈಲುಗಲ್ಲು. ಚಿತ್ರ ನಿರ್ಮಿಸಿದ, ಚಿತ್ರದಲ್ಲಿ ನಟಿಸಿದ ಪ್ರತಿರೊಬ್ಬರ ಬದುಕನ್ನು ಬದಲಿಸಿದ ಚಿತ್ರ ಎಂದರೆ ಅತಿಶಯೋಕ್ತಿಯಲ್ಲ.

‘ದಿಲ್ವಾಲೆ ದುಲ್ಹಾನಿಯಾ ಲೆ ಜಯಂಗೆ’ ಚಿತ್ರವನ್ನು ಆದಿತ್ಯ ಚೋಪ್ರಾ ನಿರ್ದೇಶಿಸಿದ್ದರು. ಈ ಚಿತ್ರದಲ್ಲಿ ಅಂಬರಿಷ್ ಪುರಿ, ಅನುಪಮ್ ಖೇರ್, ಫರಿದಾ ಜಲಾಲ್ ಮುಂತಾದವರು ನಟಿಸಿದ್ದಾರೆ. ಇದು ಭಾರತೀಯ ಚಿತ್ರರಂಗದ ಅತ್ಯಂತ ಯಶಸ್ವಿ ಚಿತ್ರಗಳಲ್ಲಿ ಒಂದಾಗಿದೆ. ಈ ಚಿತ್ರ ಮುಂಬೈನ ಥಿಯೇಟರ್‌ ಒಂದರಲ್ಲಿ ಎರಡು ದಶಕಗಳಿಗೂ ಹೆಚ್ಚು ಕಾಲ ಪ್ರದರ್ಶನಗೊಂಡಿದೆ.

ಚಿತ್ರಕ್ಕೆ 25ರ ಸಂಭ್ರಮದ ಹಿನ್ನೆಲೆ ನಟಿ ಕಾಜೋಲ್ ಮತ್ತು ನಟ ಶಾರುಖ್ ತಮ್ಮ ಸಾಮಾಜಿಕ ಮಾಧ್ಯಮಗಳ ಖಾತೆಗಳ ಹೆಸರನ್ನು ಡಿಡಿಎಲ್‌ಜೆ ಚಿತ್ರದ ಪಾತ್ರಗಳ ಹೆಸರಾದ ರಾಜ್ ಮತ್ತು ಸಿಮ್ರಾನ್ ಎಂದು ಬದಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಬಾಲಿವುಡ್ ನಟಿ ಶ್ರೀದೇವಿಯ ಸಾವು ಸಹಜವಲ್ಲವೇ?

 

PC: screenshot@twitter

ಈ ಚಿತ್ರವು ರಾಜ್ (ಶಾರುಖ್) ಮತ್ತು ಸಿಮ್ರಾನ್ (ಕಾಜೋಲ್) ಎಂಬ ಪ್ರೇಮಿಗಳ ಪ್ರೀತಿಯ ಸುತ್ತ ಗಿರಕಿ ಹೊಡೆಯುತ್ತದೆ. ಇದು ಸಾರ್ವಕಾಲಿಕ ಹಿಂದಿ ಚಲನಚಿತ್ರವಾಗಿ ಹೊರಹೊಮ್ಮಿದ್ದು ಮಾತ್ರವಲ್ಲದೆ  10 ಫಿಲ್ಮ್ ಫೇರ್ ಪ್ರಶಸ್ತಿಗಳನ್ನು ಗೆದ್ದುಕೊಂಡಿತ್ತು.

PC: screenshot@twitter

ಡಿಡಿಎಲ್‌ಜೆ ಚಿತ್ರದ ಅಪ್ರತಿಮ ಜೋಡಿ ಶಾರುಖ್ ಖಾನ್ ಮತ್ತು ಕಾಜೋಲ್ ಅವರ ಕಂಚಿನ ಪ್ರತಿಮೆ ಲಂಡನ್ನಿನ  ಲೀಸೆಸ್ಟರ್ ಸ್ಕ್ವೇರ್ ನ  ‘ಸೀನ್ಸ್ ಇನ್ ದಿ ಸ್ಕ್ವೇರ್’ ನಲ್ಲಿ ಅನಾವರಣಗೊಳ್ಳಲಿದೆ. ಈ ಪ್ರತಿಮೆಯು ಲೀಸೆಸ್ಟರ್ ಚೌಕದಲ್ಲಿ ಚಿತ್ರೀಕರಿಸಿದ ದೃಶ್ಯದ ಒಂದು ಭಾಗವನ್ನು ಪ್ರತಿನಿಧಿಸುತ್ತದೆ.

“ಈ ಚಿತ್ರ ಬರುವ ಮುನ್ನ ರೋಮ್ಯಾಂಟಿಕ್ ರೀತಿಯ ಪಾತ್ರವನ್ನು ನಿರ್ವಹಿಸಲು ನನ್ನಿಂದ ಸಾಧ್ಯವೇ ಇಲ್ಲ ಎಂದೇ ನಾನು ಭಾವಿಸಿದ್ದೆ” ಎಂದು ಚಿತ್ರದ 25 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ‘ಕಿಂಗ್ ಆಫ್ ರೋಮ್ಯಾನ್ಸ್’ ಶಾರುಖ್ ಖಾನ್ ಹೇಳಿದ್ದಾರೆ.

ಇಂದಿಗೂ ಈ ಚಿತ್ರಕ್ಕೆ ಅತ್ಯಧಿಕ ಅಭಿಮಾನಿ ಬಳಗವಿದೆ. 25 ವರ್ಷಗಳನ್ನು ಪೂರೈಸಿದರೂ ಕೂಡ ಈ ಚಿತ್ರದ ಜನಪ್ರಿಯತೆ ಎಂದಿಗೂ ಕಡಿಮೆಯಾಗಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ #DilwaleDulhaniaLeJayenge # DDLJ ಹ್ಯಾಶ್‌ಟ್ಯಾಗ್‌ಗಳು ಟ್ರೆಂಡಿಂಗ್‌ನಲ್ಲಿವೆ.


ಇದನ್ನೂ ಓದಿ: ಆಟೋರಾಜ’ನ ನೆನಪಲ್ಲಿ… ಶಂಕರ್ ‌ನಾಗ್‌ ನಮ್ಮನ್ನಗಲಿ ಇಂದಿಗೆ 30 ವರ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...