Homeಮುಖಪುಟಡಿಡಿಎಲ್‌ಜೆಗೆ 25ರ ಸಂಭ್ರಮ: ಹೆಸರು ಬದಲಾಯಿಸಿಕೊಂಡ ಕಾಜೋಲ್, ಶಾರುಖ್!

ಡಿಡಿಎಲ್‌ಜೆಗೆ 25ರ ಸಂಭ್ರಮ: ಹೆಸರು ಬದಲಾಯಿಸಿಕೊಂಡ ಕಾಜೋಲ್, ಶಾರುಖ್!

ನಟಿ ಕಾಜೋಲ್ ಮತ್ತು ನಟ ಶಾರುಖ್ ತಮ್ಮ ಸಾಮಾಜಿಕ ಮಾಧ್ಯಮಗಳ ಖಾತೆಗಳ ಹೆಸರನ್ನು ಡಿಡಿಎಲ್‌ಜೆ ಚಿತ್ರದ ಪಾತ್ರಗಳ ಹೆಸರಾದ ರಾಜ್ ಮತ್ತು ಸಿಮ್ರಾನ್ ಎಂದು ಬದಲಿಸಿಕೊಂಡಿದ್ದಾರೆ.

- Advertisement -
- Advertisement -

25 ವರ್ಷಗಳ ಹಿಂದೆ ಇದೆ ದಿನ ಬಾಲಿವುಡ್‌ನಲ್ಲಿ’ದಿಲ್ವಾಲೆ ದುಲ್ಹಾನಿಯಾ ಲೆ ಜಯೆಂಗೆ’ (DDLJ) ಚಿತ್ರ ಬಿಡುಗಡೆಯಾಗಿತ್ತು. ಅಂದು ಈ ಚಿತ್ರ ಈ ಮಟ್ಟಿಗೆ ಯಶಸ್ಸು, ದಾಖಲೆಗಳನ್ನು ಸಾಧಿಸುತ್ತದೆ ಎಂಬ ಕಲ್ಪನೆಯನ್ನು ಯಾರು ಇಟ್ಟುಕೊಂಡಿರಲಿಲ್ಲ.

ಬಾಲಿವುಡ್‌ನ ಎಲ್ಲಾ ದಾಖಲೆಗಳನ್ನು ಚೂರು ಮಾಡಿದ ಚಿತ್ರ ಇದು. ನಟ ಶಾರುಖ್ ಖಾನ್‌ಗೆ ರೊಮ್ಯಾಂಟಿಕ್ ಹೀರೋ ಪಟ್ಟ ಕೊಟ್ಟ ಚಿತ್ರ. ನಟಿ ಕಾಜೋಲ್ ಸಿನಿ ಜೀವನದ ಮೈಲುಗಲ್ಲು. ಚಿತ್ರ ನಿರ್ಮಿಸಿದ, ಚಿತ್ರದಲ್ಲಿ ನಟಿಸಿದ ಪ್ರತಿರೊಬ್ಬರ ಬದುಕನ್ನು ಬದಲಿಸಿದ ಚಿತ್ರ ಎಂದರೆ ಅತಿಶಯೋಕ್ತಿಯಲ್ಲ.

‘ದಿಲ್ವಾಲೆ ದುಲ್ಹಾನಿಯಾ ಲೆ ಜಯಂಗೆ’ ಚಿತ್ರವನ್ನು ಆದಿತ್ಯ ಚೋಪ್ರಾ ನಿರ್ದೇಶಿಸಿದ್ದರು. ಈ ಚಿತ್ರದಲ್ಲಿ ಅಂಬರಿಷ್ ಪುರಿ, ಅನುಪಮ್ ಖೇರ್, ಫರಿದಾ ಜಲಾಲ್ ಮುಂತಾದವರು ನಟಿಸಿದ್ದಾರೆ. ಇದು ಭಾರತೀಯ ಚಿತ್ರರಂಗದ ಅತ್ಯಂತ ಯಶಸ್ವಿ ಚಿತ್ರಗಳಲ್ಲಿ ಒಂದಾಗಿದೆ. ಈ ಚಿತ್ರ ಮುಂಬೈನ ಥಿಯೇಟರ್‌ ಒಂದರಲ್ಲಿ ಎರಡು ದಶಕಗಳಿಗೂ ಹೆಚ್ಚು ಕಾಲ ಪ್ರದರ್ಶನಗೊಂಡಿದೆ.

ಚಿತ್ರಕ್ಕೆ 25ರ ಸಂಭ್ರಮದ ಹಿನ್ನೆಲೆ ನಟಿ ಕಾಜೋಲ್ ಮತ್ತು ನಟ ಶಾರುಖ್ ತಮ್ಮ ಸಾಮಾಜಿಕ ಮಾಧ್ಯಮಗಳ ಖಾತೆಗಳ ಹೆಸರನ್ನು ಡಿಡಿಎಲ್‌ಜೆ ಚಿತ್ರದ ಪಾತ್ರಗಳ ಹೆಸರಾದ ರಾಜ್ ಮತ್ತು ಸಿಮ್ರಾನ್ ಎಂದು ಬದಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಬಾಲಿವುಡ್ ನಟಿ ಶ್ರೀದೇವಿಯ ಸಾವು ಸಹಜವಲ್ಲವೇ?

 

PC: screenshot@twitter

ಈ ಚಿತ್ರವು ರಾಜ್ (ಶಾರುಖ್) ಮತ್ತು ಸಿಮ್ರಾನ್ (ಕಾಜೋಲ್) ಎಂಬ ಪ್ರೇಮಿಗಳ ಪ್ರೀತಿಯ ಸುತ್ತ ಗಿರಕಿ ಹೊಡೆಯುತ್ತದೆ. ಇದು ಸಾರ್ವಕಾಲಿಕ ಹಿಂದಿ ಚಲನಚಿತ್ರವಾಗಿ ಹೊರಹೊಮ್ಮಿದ್ದು ಮಾತ್ರವಲ್ಲದೆ  10 ಫಿಲ್ಮ್ ಫೇರ್ ಪ್ರಶಸ್ತಿಗಳನ್ನು ಗೆದ್ದುಕೊಂಡಿತ್ತು.

PC: screenshot@twitter

ಡಿಡಿಎಲ್‌ಜೆ ಚಿತ್ರದ ಅಪ್ರತಿಮ ಜೋಡಿ ಶಾರುಖ್ ಖಾನ್ ಮತ್ತು ಕಾಜೋಲ್ ಅವರ ಕಂಚಿನ ಪ್ರತಿಮೆ ಲಂಡನ್ನಿನ  ಲೀಸೆಸ್ಟರ್ ಸ್ಕ್ವೇರ್ ನ  ‘ಸೀನ್ಸ್ ಇನ್ ದಿ ಸ್ಕ್ವೇರ್’ ನಲ್ಲಿ ಅನಾವರಣಗೊಳ್ಳಲಿದೆ. ಈ ಪ್ರತಿಮೆಯು ಲೀಸೆಸ್ಟರ್ ಚೌಕದಲ್ಲಿ ಚಿತ್ರೀಕರಿಸಿದ ದೃಶ್ಯದ ಒಂದು ಭಾಗವನ್ನು ಪ್ರತಿನಿಧಿಸುತ್ತದೆ.

“ಈ ಚಿತ್ರ ಬರುವ ಮುನ್ನ ರೋಮ್ಯಾಂಟಿಕ್ ರೀತಿಯ ಪಾತ್ರವನ್ನು ನಿರ್ವಹಿಸಲು ನನ್ನಿಂದ ಸಾಧ್ಯವೇ ಇಲ್ಲ ಎಂದೇ ನಾನು ಭಾವಿಸಿದ್ದೆ” ಎಂದು ಚಿತ್ರದ 25 ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ‘ಕಿಂಗ್ ಆಫ್ ರೋಮ್ಯಾನ್ಸ್’ ಶಾರುಖ್ ಖಾನ್ ಹೇಳಿದ್ದಾರೆ.

ಇಂದಿಗೂ ಈ ಚಿತ್ರಕ್ಕೆ ಅತ್ಯಧಿಕ ಅಭಿಮಾನಿ ಬಳಗವಿದೆ. 25 ವರ್ಷಗಳನ್ನು ಪೂರೈಸಿದರೂ ಕೂಡ ಈ ಚಿತ್ರದ ಜನಪ್ರಿಯತೆ ಎಂದಿಗೂ ಕಡಿಮೆಯಾಗಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ #DilwaleDulhaniaLeJayenge # DDLJ ಹ್ಯಾಶ್‌ಟ್ಯಾಗ್‌ಗಳು ಟ್ರೆಂಡಿಂಗ್‌ನಲ್ಲಿವೆ.


ಇದನ್ನೂ ಓದಿ: ಆಟೋರಾಜ’ನ ನೆನಪಲ್ಲಿ… ಶಂಕರ್ ‌ನಾಗ್‌ ನಮ್ಮನ್ನಗಲಿ ಇಂದಿಗೆ 30 ವರ್ಷ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...