Homeಮುಖಪುಟಹೆಲಿಕಾಪ್ಟರ್ ಅಪಘಾತದ ತೀವ್ರತೆಯಿಂದಾಗಿ ಮೃತದೇಹಗಳನ್ನು ಗುರುತಿಸುವುದು ಕಷ್ಟ: ವಾಯುಪಡೆ ಮೂಲಗಳು

ಹೆಲಿಕಾಪ್ಟರ್ ಅಪಘಾತದ ತೀವ್ರತೆಯಿಂದಾಗಿ ಮೃತದೇಹಗಳನ್ನು ಗುರುತಿಸುವುದು ಕಷ್ಟ: ವಾಯುಪಡೆ ಮೂಲಗಳು

- Advertisement -
- Advertisement -

ಬುಧವಾರ ತಮಿಳುನಾಡಿನಲ್ಲಿ ನಡೆದ ಹೆಲಿಕಾಪ್ಟರ್ ಅಪಘಾತದಲ್ಲಿ CDS ಜನರಲ್ ಬಿಪಿನ್ ರಾವತ್ ಮತ್ತು ಇತರ 12 ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದ ತೀವ್ರತೆಯಿಂದಾಗಿ ಎಲ್ಲಾ ದೇಹಗಳನ್ನು ಗುರುತಿಸುವುದು ಕಷ್ಟಕರವಾಗಿದೆ ಎಂದು ಗುರುವಾರ ಭಾರತೀಯ ವಾಯುಪಡೆ ಹೇಳಿಕೆ ನೀಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ಅಪಘಾತದ ತೀವ್ರಯಿಂದಾಗಿ ಮೃತಶರೀರಗಳನ್ನು ಗುರುತಿಸುವುದು ಕಷ್ಟಕರವಾಗಿದೆ. ಮೃತರ ಪ್ರೀತಿಪಾತ್ರರ ಭಾವನೆಗಳನ್ನು ಪರಿಗಣಿಸಿ ಮೃತ ಶರೀರದ ಗುರುತಿಸುವಿಕೆಗೆ ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ” ಎಂದು ಸರ್ಕಾರದ ಮೂಲಗಳು ತಿಳಿಸಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್, ಅವರ ರಕ್ಷಣಾ ಸಲಹೆಗಾರ ಬ್ರಿಗೇಡಿಯರ್ ಎಲ್ಎಸ್ ಲಿಡರ್ ಸೇರಿದಂತೆ ನಾಲ್ಕು ಮೃತದೇಹಗಳನ್ನು ಮಾತ್ರ ಸರಿಯಾಗಿ ಗುರುತಿಸಲಾಗಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:Fact Check: ಬಿಪಿನ್ ರಾವತ್‌ರವರ ಹೆಲಿಕಾಪ್ಟರ್ ಪತನ ಎಂದು ಹಳೆಯ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ಮೃತರ ಕುಟುಂಬದ ಸದಸ್ಯರು ದೆಹಲಿಗೆ ಆಗಮಿಸುತ್ತಿದ್ದು, ಅಲ್ಲಿ ಮೃತದೇಹಗಳನ್ನು ಗುರುತಿಸಲು ಅವರನ್ನು ಕೇಳಲಾಗುತ್ತದೆ. ಮೃತದೇಹವನ್ನು ಸರಿಯಾಗಿ ಗುರುತಿಸಲು ವೈಜ್ಞಾನಿಕ ಕ್ರಮಗಳ ಜೊತೆಗೆ, ಕುಟುಂಬ ಸದಸ್ಯರ ಸಹಾಯವನ್ನು ತೆಗೆದುಕೊಳ್ಳಲಾಗುವುದು. ಸಕಾರಾತ್ಮಕ ಗುರುತಿನ ನಂತರವೇ ಮೃತದೇಹವನ್ನು ಸಂಬಂಧಿಕರಿಗೆ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ ಎಂದು ಎನ್‌ಡಿಟಿವಿ ಹೇಳಿದೆ.

“ಸಕಾರಾತ್ಮಕ ಗುರುತಿನ ಪ್ರಕ್ರಿಯೆಯು ಪೂರ್ಣಗೊಂಡ ನಂತರ ನಿಕಟ ಸಂಬಂಧಿಗಳೊಂದಿಗೆ ಸಮಾಲೋಚಿಸಿ ಎಲ್ಲಾ ಸಿಬ್ಬಂದಿಗೆ ಮಿಲಿಟರಿ ವಿಧಿಗಳನ್ನು ಖಚಿತಪಡಿಸಿಕೊಳ್ಳಲಾಗುವುದು” ಎಂದು ಅವರು ಹೇಳಿದ್ದಾರೆ.

ವಾಯು ಕಾರ್ಯಾಚರಣೆಗೆ ಹವಾಮಾನವು ಸೂಕ್ತವಲ್ಲದ ಕಾರಣ ಅಪಘಾತದ ಸ್ಥಳದಲ್ಲಿ ಪತ್ತೆಯಾದ ಎಲ್ಲಾ ಮೃತದೇಹಗಳನ್ನು ವೆಲ್ಲಿಂಗ್ಟನ್‌ನಿಂದ ಸುಲೂರಿಗೆ ರಸ್ತೆಯ ಮೂಲಕ ಸ್ಥಳಾಂತರಿಸಲಾಗಿದೆ. ಸೂಲೂರಿನಿಂದ ಎಲ್ಲರ ಮೃಹದೇಹಗಳನ್ನು ವಾಯುಪಡೆಯ ಮೂಲಕ ದೆಹಲಿಗೆ ತರಲಾಗುವುದು.

ಇದನ್ನೂ ಓದಿ:ಹೆಲಿಕ್ಯಾಪ್ಟರ್ ಪತನ: ಜನರಲ್ ಬಿಪಿನ್ ರಾವತ್ ದುರ್ಮರಣ

“ಎಲ್ಲಾ 13 ಮೃತದೇಹಗಳನ್ನು ಭಾರತೀಯ ವಾಯುಪಡೆಯ C-130J ಸೂಪರ್ ಹರ್ಕ್ಯುಲಸ್ ಸಾರಿಗೆ ವಿಮಾನದಲ್ಲಿ ಸೂಲೂರಿನಿಂದ ದೆಹಲಿಗೆ ತರಲಾಗುತ್ತಿದೆ” ಎಂದು ಮೂಲಗಳು ತಿಳಿಸಿವೆ ಎಂದು ಎನ್‌ಡಿಟಿವಿ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಮತ್ತು ಇತರ 11 ಜನರು ಸೂಲೂರು ವಾಯುಪಡೆಯ ನೆಲೆಯಿಂದ ವೆಲ್ಲಿಂಗ್ಟನ್‌ಗೆ ತೆರಳುತ್ತಿದ್ದಾಗ Mi5V17 ಹೆಲಿಕಾಪ್ಟರ್‌ನಲ್ಲಿ ಅಪಘಾತಕ್ಕೀಡಾಗಿದ್ದರು.

ನಾಳೆ ದೆಹಲಿಯಲ್ಲಿ ಸಕಲ ಸೇನಾ ಗೌರವಗಳೊಂದಿಗೆ ಜನರಲ್ ರಾವತ್ ಅವರ ಅಂತ್ಯಕ್ರಿಯೆ ನಡೆಯಲಿದೆ.

ಘಟನೆಯಲ್ಲಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಮಾತ್ರ ಬದುಕುಳಿದಿದ್ದು, ತೀವ್ರ ಸುಟ್ಟಗಾಯಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಪಘಾತದಲ್ಲಿ ಸಾವನ್ನಪ್ಪಿದ ಇತರರೆಂದರೆ ಜನರಲ್ ರಾವತ್ ಅವರ ರಕ್ಷಣಾ ಸಲಹೆಗಾರ ಬ್ರಿಗೇಡಿಯರ್‌ ಲಖ್ಬಿಂದರ್ ಸಿಂಗ್ ಲಿಡರ್, ಸಿಬ್ಬಂದಿ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್, ವಿಂಗ್ ಕಮಾಂಡರ್ ಪಿಎಸ್ ಚೌಹಾಣ್, ಸ್ಕ್ವಾಡ್ರನ್ ಲೀಡರ್ ಕೆ ಸಿಂಗ್, ಜೂನಿಯರ್ ವಾರಂಟ್ ಅಧಿಕಾರಿ ರಾಣಾ ಪ್ರತಾಪ್ ದಾಸ್, ಜೂನಿಯರ್ ವಾರಂಟ್ ಅಧಿಕಾರಿ ಪ್ರದೀಪ್ ಎ, ಹವಾಲ್ದಾರ್ ಸತ್ಪಾಲ್, ನಾಯಕ್ ಗುರುಸೇವಕ್ ಸಿಂಗ್, ನಾಯಕ್ ಜಿತೇಂದರ್ ಕುಮಾರ್, ಲ್ಯಾನ್ಸ್ ನಾಯಕ್ ವಿವೇಕ್ ಕುಮಾರ್ ಮತ್ತು ಲ್ಯಾನ್ಸ್ ನಾಯಕ್ ಸಾಯಿ ತೇಜಾ.

ಇದನ್ನೂ ಓದಿ:ಬಿಪಿನ್ ರಾವತ್‌ರವರ ಮೃತದೇಹ ಇಂದು ದೆಹಲಿಗೆ: ನಾಳೆ ಅಂತ್ಯಕ್ರಿಯೆ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....