Homeಮುಖಪುಟಹೆಲಿಕಾಪ್ಟರ್ ಅಪಘಾತದ ತೀವ್ರತೆಯಿಂದಾಗಿ ಮೃತದೇಹಗಳನ್ನು ಗುರುತಿಸುವುದು ಕಷ್ಟ: ವಾಯುಪಡೆ ಮೂಲಗಳು

ಹೆಲಿಕಾಪ್ಟರ್ ಅಪಘಾತದ ತೀವ್ರತೆಯಿಂದಾಗಿ ಮೃತದೇಹಗಳನ್ನು ಗುರುತಿಸುವುದು ಕಷ್ಟ: ವಾಯುಪಡೆ ಮೂಲಗಳು

- Advertisement -
- Advertisement -

ಬುಧವಾರ ತಮಿಳುನಾಡಿನಲ್ಲಿ ನಡೆದ ಹೆಲಿಕಾಪ್ಟರ್ ಅಪಘಾತದಲ್ಲಿ CDS ಜನರಲ್ ಬಿಪಿನ್ ರಾವತ್ ಮತ್ತು ಇತರ 12 ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದ ತೀವ್ರತೆಯಿಂದಾಗಿ ಎಲ್ಲಾ ದೇಹಗಳನ್ನು ಗುರುತಿಸುವುದು ಕಷ್ಟಕರವಾಗಿದೆ ಎಂದು ಗುರುವಾರ ಭಾರತೀಯ ವಾಯುಪಡೆ ಹೇಳಿಕೆ ನೀಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ಅಪಘಾತದ ತೀವ್ರಯಿಂದಾಗಿ ಮೃತಶರೀರಗಳನ್ನು ಗುರುತಿಸುವುದು ಕಷ್ಟಕರವಾಗಿದೆ. ಮೃತರ ಪ್ರೀತಿಪಾತ್ರರ ಭಾವನೆಗಳನ್ನು ಪರಿಗಣಿಸಿ ಮೃತ ಶರೀರದ ಗುರುತಿಸುವಿಕೆಗೆ ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ” ಎಂದು ಸರ್ಕಾರದ ಮೂಲಗಳು ತಿಳಿಸಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್, ಅವರ ರಕ್ಷಣಾ ಸಲಹೆಗಾರ ಬ್ರಿಗೇಡಿಯರ್ ಎಲ್ಎಸ್ ಲಿಡರ್ ಸೇರಿದಂತೆ ನಾಲ್ಕು ಮೃತದೇಹಗಳನ್ನು ಮಾತ್ರ ಸರಿಯಾಗಿ ಗುರುತಿಸಲಾಗಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:Fact Check: ಬಿಪಿನ್ ರಾವತ್‌ರವರ ಹೆಲಿಕಾಪ್ಟರ್ ಪತನ ಎಂದು ಹಳೆಯ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

ಮೃತರ ಕುಟುಂಬದ ಸದಸ್ಯರು ದೆಹಲಿಗೆ ಆಗಮಿಸುತ್ತಿದ್ದು, ಅಲ್ಲಿ ಮೃತದೇಹಗಳನ್ನು ಗುರುತಿಸಲು ಅವರನ್ನು ಕೇಳಲಾಗುತ್ತದೆ. ಮೃತದೇಹವನ್ನು ಸರಿಯಾಗಿ ಗುರುತಿಸಲು ವೈಜ್ಞಾನಿಕ ಕ್ರಮಗಳ ಜೊತೆಗೆ, ಕುಟುಂಬ ಸದಸ್ಯರ ಸಹಾಯವನ್ನು ತೆಗೆದುಕೊಳ್ಳಲಾಗುವುದು. ಸಕಾರಾತ್ಮಕ ಗುರುತಿನ ನಂತರವೇ ಮೃತದೇಹವನ್ನು ಸಂಬಂಧಿಕರಿಗೆ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ ಎಂದು ಎನ್‌ಡಿಟಿವಿ ಹೇಳಿದೆ.

“ಸಕಾರಾತ್ಮಕ ಗುರುತಿನ ಪ್ರಕ್ರಿಯೆಯು ಪೂರ್ಣಗೊಂಡ ನಂತರ ನಿಕಟ ಸಂಬಂಧಿಗಳೊಂದಿಗೆ ಸಮಾಲೋಚಿಸಿ ಎಲ್ಲಾ ಸಿಬ್ಬಂದಿಗೆ ಮಿಲಿಟರಿ ವಿಧಿಗಳನ್ನು ಖಚಿತಪಡಿಸಿಕೊಳ್ಳಲಾಗುವುದು” ಎಂದು ಅವರು ಹೇಳಿದ್ದಾರೆ.

ವಾಯು ಕಾರ್ಯಾಚರಣೆಗೆ ಹವಾಮಾನವು ಸೂಕ್ತವಲ್ಲದ ಕಾರಣ ಅಪಘಾತದ ಸ್ಥಳದಲ್ಲಿ ಪತ್ತೆಯಾದ ಎಲ್ಲಾ ಮೃತದೇಹಗಳನ್ನು ವೆಲ್ಲಿಂಗ್ಟನ್‌ನಿಂದ ಸುಲೂರಿಗೆ ರಸ್ತೆಯ ಮೂಲಕ ಸ್ಥಳಾಂತರಿಸಲಾಗಿದೆ. ಸೂಲೂರಿನಿಂದ ಎಲ್ಲರ ಮೃಹದೇಹಗಳನ್ನು ವಾಯುಪಡೆಯ ಮೂಲಕ ದೆಹಲಿಗೆ ತರಲಾಗುವುದು.

ಇದನ್ನೂ ಓದಿ:ಹೆಲಿಕ್ಯಾಪ್ಟರ್ ಪತನ: ಜನರಲ್ ಬಿಪಿನ್ ರಾವತ್ ದುರ್ಮರಣ

“ಎಲ್ಲಾ 13 ಮೃತದೇಹಗಳನ್ನು ಭಾರತೀಯ ವಾಯುಪಡೆಯ C-130J ಸೂಪರ್ ಹರ್ಕ್ಯುಲಸ್ ಸಾರಿಗೆ ವಿಮಾನದಲ್ಲಿ ಸೂಲೂರಿನಿಂದ ದೆಹಲಿಗೆ ತರಲಾಗುತ್ತಿದೆ” ಎಂದು ಮೂಲಗಳು ತಿಳಿಸಿವೆ ಎಂದು ಎನ್‌ಡಿಟಿವಿ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಮತ್ತು ಇತರ 11 ಜನರು ಸೂಲೂರು ವಾಯುಪಡೆಯ ನೆಲೆಯಿಂದ ವೆಲ್ಲಿಂಗ್ಟನ್‌ಗೆ ತೆರಳುತ್ತಿದ್ದಾಗ Mi5V17 ಹೆಲಿಕಾಪ್ಟರ್‌ನಲ್ಲಿ ಅಪಘಾತಕ್ಕೀಡಾಗಿದ್ದರು.

ನಾಳೆ ದೆಹಲಿಯಲ್ಲಿ ಸಕಲ ಸೇನಾ ಗೌರವಗಳೊಂದಿಗೆ ಜನರಲ್ ರಾವತ್ ಅವರ ಅಂತ್ಯಕ್ರಿಯೆ ನಡೆಯಲಿದೆ.

ಘಟನೆಯಲ್ಲಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಮಾತ್ರ ಬದುಕುಳಿದಿದ್ದು, ತೀವ್ರ ಸುಟ್ಟಗಾಯಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಪಘಾತದಲ್ಲಿ ಸಾವನ್ನಪ್ಪಿದ ಇತರರೆಂದರೆ ಜನರಲ್ ರಾವತ್ ಅವರ ರಕ್ಷಣಾ ಸಲಹೆಗಾರ ಬ್ರಿಗೇಡಿಯರ್‌ ಲಖ್ಬಿಂದರ್ ಸಿಂಗ್ ಲಿಡರ್, ಸಿಬ್ಬಂದಿ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್, ವಿಂಗ್ ಕಮಾಂಡರ್ ಪಿಎಸ್ ಚೌಹಾಣ್, ಸ್ಕ್ವಾಡ್ರನ್ ಲೀಡರ್ ಕೆ ಸಿಂಗ್, ಜೂನಿಯರ್ ವಾರಂಟ್ ಅಧಿಕಾರಿ ರಾಣಾ ಪ್ರತಾಪ್ ದಾಸ್, ಜೂನಿಯರ್ ವಾರಂಟ್ ಅಧಿಕಾರಿ ಪ್ರದೀಪ್ ಎ, ಹವಾಲ್ದಾರ್ ಸತ್ಪಾಲ್, ನಾಯಕ್ ಗುರುಸೇವಕ್ ಸಿಂಗ್, ನಾಯಕ್ ಜಿತೇಂದರ್ ಕುಮಾರ್, ಲ್ಯಾನ್ಸ್ ನಾಯಕ್ ವಿವೇಕ್ ಕುಮಾರ್ ಮತ್ತು ಲ್ಯಾನ್ಸ್ ನಾಯಕ್ ಸಾಯಿ ತೇಜಾ.

ಇದನ್ನೂ ಓದಿ:ಬಿಪಿನ್ ರಾವತ್‌ರವರ ಮೃತದೇಹ ಇಂದು ದೆಹಲಿಗೆ: ನಾಳೆ ಅಂತ್ಯಕ್ರಿಯೆ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...