Homeಮುಖಪುಟಇಸ್ರೇಲ್‌-ಪ್ಯಾಲೆಸ್ತೀನ್‌ ಯುದ್ಧ: ಅತಿಭಯಾನಕ '100 ದಿನಗಳು'..

ಇಸ್ರೇಲ್‌-ಪ್ಯಾಲೆಸ್ತೀನ್‌ ಯುದ್ಧ: ಅತಿಭಯಾನಕ ‘100 ದಿನಗಳು’..

- Advertisement -
- Advertisement -

ಇಸ್ರೇಲ್‌- ಪ್ಯಾಲೆಸ್ತೀನ್‌ ವಿರುದ್ಧ ಯುದ್ಧ ಘೋಷಿಸಿ 100 ದಿನಗಳೇ ಕಳೆದಿದೆ. ಪ್ರತಿ 100 ಜನರಲ್ಲಿ ಒಬ್ಬರು ಮತ್ತು ಪ್ರತಿ 85 ಮಕ್ಕಳಲ್ಲಿ ಒಬ್ಬರು, ಕಳೆದ 100 ದಿನಗಳಲ್ಲಿ ಗಾಝಾದಲ್ಲಿ ಮೃತಪಟ್ಟಿದ್ದಾರೆ ಎನ್ನುವ ಶಾಕಿಂಗ್‌ ಅಂಕಿ-ಅಂಶಗಳನ್ನು ಯುಎನ್‌ ಅಧೀನದ 20 ಅರಬ್ ರಾಷ್ಟ್ರಗಳ ಅಂಗವಾದ ಪಶ್ಚಿಮ ಏಷ್ಯಾದ ಆರ್ಥಿಕ ಮತ್ತು ಸಾಮಾಜಿಕ ಆಯೋಗವು ಪ್ರಕಟಿಸಿದ ವರದಿಯು ಬಹಿರಂಗಪಡಿಸಿದೆ. ಈ ದಿನಗಳು 21ನೇ ಶತಮಾನದಲ್ಲಿ  ಎಂದೂ ಕಂಡರಿಯದ 100 ದಿನಗಳ ಭಯಾನಕ ಮಾರಣಾಂತಿಕ ಸಶಸ್ತ್ರ ಸಂಘರ್ಷವಾಗಿದೆ ಎಂದು ವರದಿ ತಿಳಿಸಿದೆ.

ಪಶ್ಚಿಮ ಏಷ್ಯಾದ ಆರ್ಥಿಕ ಮತ್ತು ಸಾಮಾಜಿಕ ಆಯೋಗದ ವರದಿಯು ಎಲ್ಲಾ ಯುದ್ಧಗಳನ್ನು ತಕ್ಷಣವೇ ನಿಲ್ಲಿಸಲು ಕರೆ ನೀಡಿದೆ. ನಾಗರಿಕರನ್ನು ರಕ್ಷಿಸುವ ಅಗತ್ಯವನ್ನು ಮತ್ತು ಮಾನವೀಯ ನೆರವಿನ ಬಗ್ಗೆ ವರದಿಯು ಒತ್ತಿ ಹೇಳಿದೆ.

ಇಸ್ರೇಲ್‌ನಿಂದ ಗಾಝಾದ ಮೇಲಿನ ಯುದ್ಧವು ಜನವರಿ 14ರಂದು ಪ್ರಾರಂಭವಾಗಿದೆ, ಇದೀಗ ಯುದ್ಧ 100 ದಿನಗಳನ್ನೇ ದಾಟಿದೆ. 2023ರ ಅಕ್ಟೋಬರ್ 7ರಂದು ಪ್ರಾರಂಭವಾದ ಯುದ್ಧವು ವಿನಾಶಕ್ಕೆ, ಸ್ಥಳಾಂತರಕ್ಕೆ ಮತ್ತು ಸಾವುಗಳಿಗೆ ಕಾರಣವಾಯಿತು. 2024ರ ಫೆಬ್ರವರಿ 6ರವರೆಗೆ ಯುದ್ಧದಲ್ಲಿ ಸುಮಾರು 27,585 ಪ್ಯಾಲೆಸ್ತೀನ್‌ ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 66,978 ಮಂದಿ ಗಾಯಗೊಂಡಿದ್ದಾರೆ ಎನ್ನುವುದನ್ನು ವರದಿಯು ಬಹಿರಂಗಪಡಿಸಿದೆ.

ಪಶ್ಚಿಮ ಏಷ್ಯಾದ ಆರ್ಥಿಕ ಮತ್ತು ಸಾಮಾಜಿಕ ಆಯೋಗ (ECSWA), ಸದಸ್ಯ ರಾಷ್ಟ್ರಗಳಲ್ಲಿನ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಯನ್ನು ಬೆಂಬಲಿಸುವ ಗುರಿಯನ್ನು ಹೊಂದಿದೆ ಮತ್ತು ಅವುಗಳ ನಡುವೆ ಪರಸ್ಪರ ಸಹಕಾರವನ್ನು ಉತ್ತೇಜಿಸುತ್ತದೆ. ESCWA 20 ಅರಬ್ ದೇಶಗಳನ್ನು ಒಳಗೊಂಡಿದೆ. ಅಲ್ಜೀರಿಯಾ, ಬಹ್ರೇನ್, ಈಜಿಪ್ಟ್, ಇರಾಕ್, ಜೋರ್ಡಾನ್, ಕುವೈತ್, ಲೆಬನಾನ್, ಲಿಬಿಯಾ, ಮಾರಿಟಾನಿಯಾ, ಮೊರಾಕೊ, ಓಮನ್, ಪ್ಯಾಲೆಸ್ತೀನ್‌, ಕತಾರ್, ಸೌದಿ ಅರೇಬಿಯಾ, ಸುಡಾನ್, ಸೊಮಾಲಿಯಾ, ಸಿರಿಯನ್ ಅರಬ್ ರಿಪಬ್ಲಿಕ್, ಟುನೀಶಿಯಾ , ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಯೆಮೆನ್ ಈ ಆಯೋಗಕ್ಕೆ ಒಳಪಡುತ್ತದೆ.

ESCWA ವರದಿಯ ಪ್ರಕಾರ, ಗಾಝಾದಲ್ಲಿ ಪ್ರತಿ 100 ಜನರಲ್ಲಿ ಒಬ್ಬರಿಗಿಂತ ಹೆಚ್ಚು ಜನರು ಕೇವಲ 100 ದಿನಗಳಲ್ಲಿ ಕೊಲ್ಲಲ್ಪಟ್ಟಿದ್ದಾರೆ. ಇದರಿಂದ ಪ್ರತಿದಿನ 240 ಸಾವುಗಳು ಸಂಭವಿಸುತ್ತವೆ, ಈ ಸಾವಿನ ಪ್ರಮಾಣವು 21ನೇ ಶತಮಾನದಲ್ಲಿ ಯಾವುದೇ ಇತರ ಸಶಸ್ತ್ರ ಸಂಘರ್ಷಕ್ಕಿಂತ ಭಯಾನಕವಾಗಿದೆ ಎಂದು ವರದಿ ಹೇಳಿದೆ.

ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳ ಹತ್ಯೆ:

ಗಾಝಾದಲ್ಲಿ ಕೊಲ್ಲಲ್ಪಟ್ಟ 27,585 ಜನರಲ್ಲಿ 12,345 ಮಕ್ಕಳಾಗಿದ್ದಾರೆ. 100 ದಿನಗಳಲ್ಲಿ ಪ್ರತಿ 85ರಲ್ಲಿ ಒಂದು ಮಗು ಕೊಲ್ಲಲ್ಪಟ್ಟಿದೆ ಎಂದು ವರದಿಯು ಹೇಳುತ್ತದೆ. ಇದು ಇತರ ಇತ್ತೀಚಿನ ಸಂಘರ್ಷಕ್ಕೆ ಹೋಲಿಸಿದರೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸಂಭವಿಸಿದ ಮಕ್ಕಳ ಹತ್ಯೆಯಾಗಿದೆ.

ವರದಿಯು ಎಲ್ಲಾ ಯುದ್ಧಗಳನ್ನು ತಕ್ಷಣವೇ ನಿಲ್ಲಿಸಲು ಕರೆ ನೀಡಿದೆ. ಪ್ಯಾಲೆಸ್ತೀನ್‌ನ ಸಾಮಾಜಿಕ, ಆರ್ಥಿಕ ಮತ್ತು ಸಾಂಸ್ಥಿಕ ರಚನೆಯ ಮೇಲೆ ನಡೆಯುತ್ತಿರುವ ಯುದ್ಧದ ವಿನಾಶಕಾರಿ ಪರಿಣಾಮಗಳು ಮುಂಬರುವ ಪೀಳಿಗೆಯ ಮೇಲೆ ಅಗಾಧ ಪರಿಣಾಮ ಬೀರುತ್ತವೆ. ಈ ಪರಿಣಾಮಗಳು ಭವಿಷ್ಯದ ಹಿಂಸಾಚಾರದ ಅಪಾಯವನ್ನು ತೀವ್ರಗೊಳಿಸುತ್ತವೆ ಎಂದು ವರದಿ ಹೇಳಿದೆ.

ವರದಿಯ ಶಿಫಾರಸುಗಳಲ್ಲಿ ನಾಗರಿಕರ ಜೊತೆಗೆ ಅವರ ಮೂಲಸೌಕರ್ಯವನ್ನು ರಕ್ಷಿಸುವುದು ಮತ್ತು ಮಾನವೀಯ ಸಹಾಯ  ಖಾತ್ರಿಪಡಿಸುವುದು ಸೇರಿದೆ. ಇಂಧನ, ಔಷಧಗಳು, ಉಪಕರಣಗಳು ಮತ್ತು ಮಾನವ ಸಂಪನ್ಮೂಲಗಳನ್ನು ಒದಗಿಸುವ ಮೂಲಕ ಆಸ್ಪತ್ರೆಗಳು ಮತ್ತು ಇತರ ವೈದ್ಯಕೀಯ ಸೌಲಭ್ಯಗಳನ್ನು ಒಳಗೊಂಡಂತೆ ಆರೋಗ್ಯ ಮೂಲಸೌಕರ್ಯಗಳನ್ನು ಪುನರ್‌ನಿರ್ಮಾಣ ಮಾಡುವ ಅಗತ್ಯವನ್ನು ಅದು ಒತ್ತಿ ಹೇಳಿದೆ. ಆಘಾತಕ್ಕೊಳಗಾದ ಜನರಿಗೆ ಮತ್ತು ವಿಶೇಷವಾಗಿ ಮಕ್ಕಳಿಗೆ ಮಾನಸಿಕ ಮತ್ತು ಭಾವನಾತ್ಮಕ ಬೆಂಬಲವನ್ನು ನೀಡಲು ಇದು ನಿರ್ಣಾಯಕವಾಗಿದೆ ಎಂದು ವರದಿ ಹೇಳಿದೆ.

ಗಾಝಾದ ರಫಾದಲ್ಲಿ ವೈಮಾನಿಕ ದಾಳಿಯನ್ನು ತೀವ್ರಗೊಳಿಸಿದ ಇಸ್ರೇಲ್‌:

ಹಮಾಸ್ ನಿಯಂತ್ರಿತ ಪ್ರದೇಶದಲ್ಲಿನ ಆರೋಗ್ಯ ಸಚಿವಾಲಯದ ಪ್ರಕಾರ, ನಿನ್ನೆ ಇಸ್ರೇಲ್‌ ನಡೆಸಿದ ವಾಯುದಾಳಿಗಳಿಗೆ ಗಾಝಾದ ದಕ್ಷಿಣ ಗಡಿಯ ರಾಫಾ ನಗರದಲ್ಲಿ ಕನಿಷ್ಠ 25 ಜನರು ಸಾವನ್ನಪ್ಪಿದ್ದಾರೆ. ಇದಲ್ಲದೆ ಇಸ್ರೇಲ್‌ ಪಡೆಗಳು ಈಗಾಗಲೇ ಎರಡು ಪ್ರಮುಖ ನಗರಗಳಾದ ಗಾಝಾ ಸಿಟಿ ಮತ್ತು ಖಾನ್ ಯೂನಿಸ್‌ಗಳಲ್ಲಿ ಕಾರ್ಯಾಚರಣೆಯನ್ನು ನಡೆಸುತ್ತಿದೆ.

ಯುಎನ್‌ನ ಇತ್ತೀಚಿನ ಸುದ್ದಿಗಳ ಪ್ರಕಾರ, ಈಜಿಪ್ಟ್‌ನ ಗಡಿಯಲ್ಲಿರುವ ದಕ್ಷಿಣ ಗಾಜಾದ ರಫಾ ನಗರವು ಈಗ  ಎರಡು ಮಿಲಿಯನ್‌ಗಿಂತಲೂ ಹೆಚ್ಚು ಜನಸಂಖ್ಯೆಗೆ ಅಂದರೆ ಗಾಝಾದ ಅರ್ಧಕ್ಕಿಂತ ಹೆಚ್ಚು ಜನರಿಗೆ ನೆಲೆಯಾಗಿದೆ. ನಗರದಲ್ಲಿ ಈಗಾಗಲೇ ಸುಮಾರು 2,50,000 ಜನರು ನೆಲೆಸಿದ್ದರು. ಆ ಪ್ರದೇಶದಲ್ಲಿ ಆಹಾರ ಮತ್ತು ಶುದ್ಧ ನೀರಿನ ಸಮಸ್ಯೆ ಉದ್ಭವಿಸಿದೆ, ನೈರ್ಮಲ್ಯ ಸಮಸ್ಯೆ ಎದುರಾಗಿದ್ದು, ನಗರವು ಕೇವಲ ಮೂರು ತಿಂಗಳಲ್ಲಿ ಒಂದು ವರ್ಷದಲ್ಲಿ ಉತ್ಪಾದಿಸುವಷ್ಟು ಕಸವನ್ನು ಉತ್ಪಾದಿಸಿದೆ.

ಇಸ್ರೇಲ್‌ ನಡೆಸುತ್ತಿರುವ ಈ ನರಹತ್ಯೆಯನ್ನು ಮಾನವತಾವಾದಿಗಳು ಮತ್ತು ಇಸ್ರೇಲ್‌ನ ಕೆಲವು ನಿಕಟ ಮಿತ್ರರು ಕೂಡ ತೀವ್ರವಾಗಿ ಟೀಕಿಸಿದ್ದಾರೆ. ರಾಫಾದ ಮೇಲೆ ಇಸ್ರೇಲ್ ಆಕ್ರಮಣವು ದುರಂತವಾಗಿದೆ ಮತ್ತು ಅದು ಮುಂದುವರಿಯಬಾರದು ಎಂದು ಡಾಕ್ಟರ್ಸ್ ವಿದೌಟ್ ಬಾರ್ಡರ್ಸ್ ಹೇಳಿಕೆಯಲ್ಲಿ ತಿಳಿಸಿದೆ. ಗಾಝಾದಲ್ಲಿ ಸುರಕ್ಷಿತವಾದ ಸ್ಥಳವಿಲ್ಲ ಮತ್ತು ಗಾಝಾದ ಜನರಿಗೆ ಅಲ್ಲಿಂದ ನಿರ್ಗಮಿಸಲು ಯಾವುದೇ ಮಾರ್ಗವಿಲ್ಲ ಎಂದು ಹೇಳಿದ್ದಾರೆ. UNRWA ಏಜೆನ್ಸಿಯ ಮುಖ್ಯಸ್ಥರಾದ ಫಿಲಿಪ್ ಲಾಝಾರಿನಿ ಮಾತನಾಡಿ, ರಾಫಾದಲ್ಲಿ ಆತಂಕ ಹೆಚ್ಚುತ್ತಿದೆ, ಜನರಿಗೆ ಎಲ್ಲಿಗೆ ಹೋಗಬೇಕೆಂದು ತಿಳಿದಿಲ್ಲ ಎಂದು ಹೇಳಿದ್ದಾರೆ. ನಿರಾಶ್ರಿತರ ಶಿಬಿರದ ಮೇಲಿನ ಯಾವುದೇ ಯುದ್ಧವನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ನಾರ್ವೇಜಿಯನ್ ನಿರಾಶ್ರಿತರ ಮಂಡಳಿಯ ಪ್ರಧಾನ ಕಾರ್ಯದರ್ಶಿ ಜಾನ್ ಎಗೆಲ್ಯಾಂಡ್ ಕೂಡ ಹೇಳಿದ್ದಾರೆ.

ಇದನ್ನು ಓದಿ; ಮೋದಿ ಸರ್ಕಾರ ಒಂದು ನಿರ್ದಿಷ್ಟ ಸಮುದಾಯಕ್ಕೆ ಮಾತ್ರ ಸೇರಿದೆಯೇ? ಸಂಸತ್ತಿನಲ್ಲಿ ಓವೈಸಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...