Homeಮುಖಪುಟಇಸ್ರೇಲ್‌-ಪ್ಯಾಲೆಸ್ತೀನ್‌ ಯುದ್ಧ: ಅತಿಭಯಾನಕ '100 ದಿನಗಳು'..

ಇಸ್ರೇಲ್‌-ಪ್ಯಾಲೆಸ್ತೀನ್‌ ಯುದ್ಧ: ಅತಿಭಯಾನಕ ‘100 ದಿನಗಳು’..

- Advertisement -
- Advertisement -

ಇಸ್ರೇಲ್‌- ಪ್ಯಾಲೆಸ್ತೀನ್‌ ವಿರುದ್ಧ ಯುದ್ಧ ಘೋಷಿಸಿ 100 ದಿನಗಳೇ ಕಳೆದಿದೆ. ಪ್ರತಿ 100 ಜನರಲ್ಲಿ ಒಬ್ಬರು ಮತ್ತು ಪ್ರತಿ 85 ಮಕ್ಕಳಲ್ಲಿ ಒಬ್ಬರು, ಕಳೆದ 100 ದಿನಗಳಲ್ಲಿ ಗಾಝಾದಲ್ಲಿ ಮೃತಪಟ್ಟಿದ್ದಾರೆ ಎನ್ನುವ ಶಾಕಿಂಗ್‌ ಅಂಕಿ-ಅಂಶಗಳನ್ನು ಯುಎನ್‌ ಅಧೀನದ 20 ಅರಬ್ ರಾಷ್ಟ್ರಗಳ ಅಂಗವಾದ ಪಶ್ಚಿಮ ಏಷ್ಯಾದ ಆರ್ಥಿಕ ಮತ್ತು ಸಾಮಾಜಿಕ ಆಯೋಗವು ಪ್ರಕಟಿಸಿದ ವರದಿಯು ಬಹಿರಂಗಪಡಿಸಿದೆ. ಈ ದಿನಗಳು 21ನೇ ಶತಮಾನದಲ್ಲಿ  ಎಂದೂ ಕಂಡರಿಯದ 100 ದಿನಗಳ ಭಯಾನಕ ಮಾರಣಾಂತಿಕ ಸಶಸ್ತ್ರ ಸಂಘರ್ಷವಾಗಿದೆ ಎಂದು ವರದಿ ತಿಳಿಸಿದೆ.

ಪಶ್ಚಿಮ ಏಷ್ಯಾದ ಆರ್ಥಿಕ ಮತ್ತು ಸಾಮಾಜಿಕ ಆಯೋಗದ ವರದಿಯು ಎಲ್ಲಾ ಯುದ್ಧಗಳನ್ನು ತಕ್ಷಣವೇ ನಿಲ್ಲಿಸಲು ಕರೆ ನೀಡಿದೆ. ನಾಗರಿಕರನ್ನು ರಕ್ಷಿಸುವ ಅಗತ್ಯವನ್ನು ಮತ್ತು ಮಾನವೀಯ ನೆರವಿನ ಬಗ್ಗೆ ವರದಿಯು ಒತ್ತಿ ಹೇಳಿದೆ.

ಇಸ್ರೇಲ್‌ನಿಂದ ಗಾಝಾದ ಮೇಲಿನ ಯುದ್ಧವು ಜನವರಿ 14ರಂದು ಪ್ರಾರಂಭವಾಗಿದೆ, ಇದೀಗ ಯುದ್ಧ 100 ದಿನಗಳನ್ನೇ ದಾಟಿದೆ. 2023ರ ಅಕ್ಟೋಬರ್ 7ರಂದು ಪ್ರಾರಂಭವಾದ ಯುದ್ಧವು ವಿನಾಶಕ್ಕೆ, ಸ್ಥಳಾಂತರಕ್ಕೆ ಮತ್ತು ಸಾವುಗಳಿಗೆ ಕಾರಣವಾಯಿತು. 2024ರ ಫೆಬ್ರವರಿ 6ರವರೆಗೆ ಯುದ್ಧದಲ್ಲಿ ಸುಮಾರು 27,585 ಪ್ಯಾಲೆಸ್ತೀನ್‌ ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 66,978 ಮಂದಿ ಗಾಯಗೊಂಡಿದ್ದಾರೆ ಎನ್ನುವುದನ್ನು ವರದಿಯು ಬಹಿರಂಗಪಡಿಸಿದೆ.

ಪಶ್ಚಿಮ ಏಷ್ಯಾದ ಆರ್ಥಿಕ ಮತ್ತು ಸಾಮಾಜಿಕ ಆಯೋಗ (ECSWA), ಸದಸ್ಯ ರಾಷ್ಟ್ರಗಳಲ್ಲಿನ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಯನ್ನು ಬೆಂಬಲಿಸುವ ಗುರಿಯನ್ನು ಹೊಂದಿದೆ ಮತ್ತು ಅವುಗಳ ನಡುವೆ ಪರಸ್ಪರ ಸಹಕಾರವನ್ನು ಉತ್ತೇಜಿಸುತ್ತದೆ. ESCWA 20 ಅರಬ್ ದೇಶಗಳನ್ನು ಒಳಗೊಂಡಿದೆ. ಅಲ್ಜೀರಿಯಾ, ಬಹ್ರೇನ್, ಈಜಿಪ್ಟ್, ಇರಾಕ್, ಜೋರ್ಡಾನ್, ಕುವೈತ್, ಲೆಬನಾನ್, ಲಿಬಿಯಾ, ಮಾರಿಟಾನಿಯಾ, ಮೊರಾಕೊ, ಓಮನ್, ಪ್ಯಾಲೆಸ್ತೀನ್‌, ಕತಾರ್, ಸೌದಿ ಅರೇಬಿಯಾ, ಸುಡಾನ್, ಸೊಮಾಲಿಯಾ, ಸಿರಿಯನ್ ಅರಬ್ ರಿಪಬ್ಲಿಕ್, ಟುನೀಶಿಯಾ , ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಯೆಮೆನ್ ಈ ಆಯೋಗಕ್ಕೆ ಒಳಪಡುತ್ತದೆ.

ESCWA ವರದಿಯ ಪ್ರಕಾರ, ಗಾಝಾದಲ್ಲಿ ಪ್ರತಿ 100 ಜನರಲ್ಲಿ ಒಬ್ಬರಿಗಿಂತ ಹೆಚ್ಚು ಜನರು ಕೇವಲ 100 ದಿನಗಳಲ್ಲಿ ಕೊಲ್ಲಲ್ಪಟ್ಟಿದ್ದಾರೆ. ಇದರಿಂದ ಪ್ರತಿದಿನ 240 ಸಾವುಗಳು ಸಂಭವಿಸುತ್ತವೆ, ಈ ಸಾವಿನ ಪ್ರಮಾಣವು 21ನೇ ಶತಮಾನದಲ್ಲಿ ಯಾವುದೇ ಇತರ ಸಶಸ್ತ್ರ ಸಂಘರ್ಷಕ್ಕಿಂತ ಭಯಾನಕವಾಗಿದೆ ಎಂದು ವರದಿ ಹೇಳಿದೆ.

ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳ ಹತ್ಯೆ:

ಗಾಝಾದಲ್ಲಿ ಕೊಲ್ಲಲ್ಪಟ್ಟ 27,585 ಜನರಲ್ಲಿ 12,345 ಮಕ್ಕಳಾಗಿದ್ದಾರೆ. 100 ದಿನಗಳಲ್ಲಿ ಪ್ರತಿ 85ರಲ್ಲಿ ಒಂದು ಮಗು ಕೊಲ್ಲಲ್ಪಟ್ಟಿದೆ ಎಂದು ವರದಿಯು ಹೇಳುತ್ತದೆ. ಇದು ಇತರ ಇತ್ತೀಚಿನ ಸಂಘರ್ಷಕ್ಕೆ ಹೋಲಿಸಿದರೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸಂಭವಿಸಿದ ಮಕ್ಕಳ ಹತ್ಯೆಯಾಗಿದೆ.

ವರದಿಯು ಎಲ್ಲಾ ಯುದ್ಧಗಳನ್ನು ತಕ್ಷಣವೇ ನಿಲ್ಲಿಸಲು ಕರೆ ನೀಡಿದೆ. ಪ್ಯಾಲೆಸ್ತೀನ್‌ನ ಸಾಮಾಜಿಕ, ಆರ್ಥಿಕ ಮತ್ತು ಸಾಂಸ್ಥಿಕ ರಚನೆಯ ಮೇಲೆ ನಡೆಯುತ್ತಿರುವ ಯುದ್ಧದ ವಿನಾಶಕಾರಿ ಪರಿಣಾಮಗಳು ಮುಂಬರುವ ಪೀಳಿಗೆಯ ಮೇಲೆ ಅಗಾಧ ಪರಿಣಾಮ ಬೀರುತ್ತವೆ. ಈ ಪರಿಣಾಮಗಳು ಭವಿಷ್ಯದ ಹಿಂಸಾಚಾರದ ಅಪಾಯವನ್ನು ತೀವ್ರಗೊಳಿಸುತ್ತವೆ ಎಂದು ವರದಿ ಹೇಳಿದೆ.

ವರದಿಯ ಶಿಫಾರಸುಗಳಲ್ಲಿ ನಾಗರಿಕರ ಜೊತೆಗೆ ಅವರ ಮೂಲಸೌಕರ್ಯವನ್ನು ರಕ್ಷಿಸುವುದು ಮತ್ತು ಮಾನವೀಯ ಸಹಾಯ  ಖಾತ್ರಿಪಡಿಸುವುದು ಸೇರಿದೆ. ಇಂಧನ, ಔಷಧಗಳು, ಉಪಕರಣಗಳು ಮತ್ತು ಮಾನವ ಸಂಪನ್ಮೂಲಗಳನ್ನು ಒದಗಿಸುವ ಮೂಲಕ ಆಸ್ಪತ್ರೆಗಳು ಮತ್ತು ಇತರ ವೈದ್ಯಕೀಯ ಸೌಲಭ್ಯಗಳನ್ನು ಒಳಗೊಂಡಂತೆ ಆರೋಗ್ಯ ಮೂಲಸೌಕರ್ಯಗಳನ್ನು ಪುನರ್‌ನಿರ್ಮಾಣ ಮಾಡುವ ಅಗತ್ಯವನ್ನು ಅದು ಒತ್ತಿ ಹೇಳಿದೆ. ಆಘಾತಕ್ಕೊಳಗಾದ ಜನರಿಗೆ ಮತ್ತು ವಿಶೇಷವಾಗಿ ಮಕ್ಕಳಿಗೆ ಮಾನಸಿಕ ಮತ್ತು ಭಾವನಾತ್ಮಕ ಬೆಂಬಲವನ್ನು ನೀಡಲು ಇದು ನಿರ್ಣಾಯಕವಾಗಿದೆ ಎಂದು ವರದಿ ಹೇಳಿದೆ.

ಗಾಝಾದ ರಫಾದಲ್ಲಿ ವೈಮಾನಿಕ ದಾಳಿಯನ್ನು ತೀವ್ರಗೊಳಿಸಿದ ಇಸ್ರೇಲ್‌:

ಹಮಾಸ್ ನಿಯಂತ್ರಿತ ಪ್ರದೇಶದಲ್ಲಿನ ಆರೋಗ್ಯ ಸಚಿವಾಲಯದ ಪ್ರಕಾರ, ನಿನ್ನೆ ಇಸ್ರೇಲ್‌ ನಡೆಸಿದ ವಾಯುದಾಳಿಗಳಿಗೆ ಗಾಝಾದ ದಕ್ಷಿಣ ಗಡಿಯ ರಾಫಾ ನಗರದಲ್ಲಿ ಕನಿಷ್ಠ 25 ಜನರು ಸಾವನ್ನಪ್ಪಿದ್ದಾರೆ. ಇದಲ್ಲದೆ ಇಸ್ರೇಲ್‌ ಪಡೆಗಳು ಈಗಾಗಲೇ ಎರಡು ಪ್ರಮುಖ ನಗರಗಳಾದ ಗಾಝಾ ಸಿಟಿ ಮತ್ತು ಖಾನ್ ಯೂನಿಸ್‌ಗಳಲ್ಲಿ ಕಾರ್ಯಾಚರಣೆಯನ್ನು ನಡೆಸುತ್ತಿದೆ.

ಯುಎನ್‌ನ ಇತ್ತೀಚಿನ ಸುದ್ದಿಗಳ ಪ್ರಕಾರ, ಈಜಿಪ್ಟ್‌ನ ಗಡಿಯಲ್ಲಿರುವ ದಕ್ಷಿಣ ಗಾಜಾದ ರಫಾ ನಗರವು ಈಗ  ಎರಡು ಮಿಲಿಯನ್‌ಗಿಂತಲೂ ಹೆಚ್ಚು ಜನಸಂಖ್ಯೆಗೆ ಅಂದರೆ ಗಾಝಾದ ಅರ್ಧಕ್ಕಿಂತ ಹೆಚ್ಚು ಜನರಿಗೆ ನೆಲೆಯಾಗಿದೆ. ನಗರದಲ್ಲಿ ಈಗಾಗಲೇ ಸುಮಾರು 2,50,000 ಜನರು ನೆಲೆಸಿದ್ದರು. ಆ ಪ್ರದೇಶದಲ್ಲಿ ಆಹಾರ ಮತ್ತು ಶುದ್ಧ ನೀರಿನ ಸಮಸ್ಯೆ ಉದ್ಭವಿಸಿದೆ, ನೈರ್ಮಲ್ಯ ಸಮಸ್ಯೆ ಎದುರಾಗಿದ್ದು, ನಗರವು ಕೇವಲ ಮೂರು ತಿಂಗಳಲ್ಲಿ ಒಂದು ವರ್ಷದಲ್ಲಿ ಉತ್ಪಾದಿಸುವಷ್ಟು ಕಸವನ್ನು ಉತ್ಪಾದಿಸಿದೆ.

ಇಸ್ರೇಲ್‌ ನಡೆಸುತ್ತಿರುವ ಈ ನರಹತ್ಯೆಯನ್ನು ಮಾನವತಾವಾದಿಗಳು ಮತ್ತು ಇಸ್ರೇಲ್‌ನ ಕೆಲವು ನಿಕಟ ಮಿತ್ರರು ಕೂಡ ತೀವ್ರವಾಗಿ ಟೀಕಿಸಿದ್ದಾರೆ. ರಾಫಾದ ಮೇಲೆ ಇಸ್ರೇಲ್ ಆಕ್ರಮಣವು ದುರಂತವಾಗಿದೆ ಮತ್ತು ಅದು ಮುಂದುವರಿಯಬಾರದು ಎಂದು ಡಾಕ್ಟರ್ಸ್ ವಿದೌಟ್ ಬಾರ್ಡರ್ಸ್ ಹೇಳಿಕೆಯಲ್ಲಿ ತಿಳಿಸಿದೆ. ಗಾಝಾದಲ್ಲಿ ಸುರಕ್ಷಿತವಾದ ಸ್ಥಳವಿಲ್ಲ ಮತ್ತು ಗಾಝಾದ ಜನರಿಗೆ ಅಲ್ಲಿಂದ ನಿರ್ಗಮಿಸಲು ಯಾವುದೇ ಮಾರ್ಗವಿಲ್ಲ ಎಂದು ಹೇಳಿದ್ದಾರೆ. UNRWA ಏಜೆನ್ಸಿಯ ಮುಖ್ಯಸ್ಥರಾದ ಫಿಲಿಪ್ ಲಾಝಾರಿನಿ ಮಾತನಾಡಿ, ರಾಫಾದಲ್ಲಿ ಆತಂಕ ಹೆಚ್ಚುತ್ತಿದೆ, ಜನರಿಗೆ ಎಲ್ಲಿಗೆ ಹೋಗಬೇಕೆಂದು ತಿಳಿದಿಲ್ಲ ಎಂದು ಹೇಳಿದ್ದಾರೆ. ನಿರಾಶ್ರಿತರ ಶಿಬಿರದ ಮೇಲಿನ ಯಾವುದೇ ಯುದ್ಧವನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ನಾರ್ವೇಜಿಯನ್ ನಿರಾಶ್ರಿತರ ಮಂಡಳಿಯ ಪ್ರಧಾನ ಕಾರ್ಯದರ್ಶಿ ಜಾನ್ ಎಗೆಲ್ಯಾಂಡ್ ಕೂಡ ಹೇಳಿದ್ದಾರೆ.

ಇದನ್ನು ಓದಿ; ಮೋದಿ ಸರ್ಕಾರ ಒಂದು ನಿರ್ದಿಷ್ಟ ಸಮುದಾಯಕ್ಕೆ ಮಾತ್ರ ಸೇರಿದೆಯೇ? ಸಂಸತ್ತಿನಲ್ಲಿ ಓವೈಸಿ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...