Homeಕರೋನಾ ತಲ್ಲಣಪರೀಕ್ಷಾ ಶುಲ್ಕ ಭರಿಸಲು ಅಂತಿಮ ಗಡುವು ವಿಧಿಸಿದ ಬೆಂಗಳೂರು ವಿ.ವಿ; ಕೆವಿಎಸ್ ವಿರೋಧ

ಪರೀಕ್ಷಾ ಶುಲ್ಕ ಭರಿಸಲು ಅಂತಿಮ ಗಡುವು ವಿಧಿಸಿದ ಬೆಂಗಳೂರು ವಿ.ವಿ; ಕೆವಿಎಸ್ ವಿರೋಧ

ವಿವಿಯ ಈ ನಿಲುವಿನಿಂದ ತಳಸಮುದಾಯದ ವಿದ್ಯಾರ್ಥಿಗಳು ಮತ್ತು ಮಹಿಳೆಯರು ಶಿಕ್ಷಣದಿಂದ ವಂಚಿತರಾಗುವ ಎಲ್ಲಾ ಸಾಧ್ಯತೆಗಳು ಇದೆ. ಇದಕ್ಕೆ ನೇರ ಹೊಣೆ ನಮ್ಮ ರಾಜ್ಯ ಸರ್ಕಾರವೇ ಆಗಲಿದೆ ಎಂದು ಅವರು ಆರೋಪಿಸಿದ್ದಾರೆ.

- Advertisement -
- Advertisement -

ಬೆಂಗಳೂರು ವಿಶ್ವವಿದ್ಯಾನಿಲಯವು ಪರೀಕ್ಷಾ ಶುಲ್ಕ ಭರಿಸಲು ಆಗಸ್ಟ್ 15ರಂದು ಕೊನೆಯ ದಿನಾಂಕ ಎಂದು ಘೋಷಿಸಿದೆ. ಅಲ್ಲದೇ ಹೊಸ ಶೈಕ್ಷಣಿಕ ವರ್ಷದ ಕಾಲೇಜು ದಾಖಲಾತಿ ಶುಲ್ಕವನ್ನು ಭರಿಸಲು ಹೇಳಿದೆ.

ವಿವಿಯ ಈ ನಿಲುವನ್ನು ಕರ್ನಾಟಕ ವಿದ್ಯಾರ್ಥಿ ಸಂಘಟನೆ ಖಂಡಿಸಿದೆ. ಕೂಡಲೇ ವಿವಿಯು ಈ ಆದೇಶವನ್ನು ಹಿಂಪಡೆಯಬೇಕು, ಇಲ್ಲಿದಿದ್ದಲ್ಲಿ ಹೋರಾಟ ಅನಿವಾರ್ಯ ಎಂದು ಎಚ್ಚರಿಕೆ ನೀಡಿದೆ.

ಕೊರೊನಾ ವೈರಸ್ ಇಡೀ ಪ್ರಪಂಚವನ್ನೇ ಭಯಾನಕವಾಗಿ ಕಾಡಿಸುತ್ತಿದೆ. ಭಾರತ ಕರೋನಾದಲ್ಲಿ ಸೋಂಕಿತರ ಪಟ್ಟಿಯಲ್ಲಿ ವಿಶ್ವಗುರು ಆಗುವತ್ತ ಸಾಗಿದೆ. ಇನ್ನು ಯಾವುದೇ ತಯಾರಿ ಇಲ್ಲದೆ ಮೇಲಿಂದ ಮೇಲೆ ಹೇರಿದ ಲಾಕ್‌ಡೌನ್‌ನಿಂದಾಗಿ ಬಡವರು, ದಿನಗೂಲಿ ಕಾರ್ಮಿಕರು, ರೈತರು, ಬೀದಿ ವ್ಯಾಪಾರಿಗಳ ಕುಟುಂಬಗಳು ಆರ್ಥಿಕವಾಗಿ ಇನ್ನೂ ಚೇತರಿಸಿಕೊಂಡಿಲ್ಲ. ಇಂತಹ ಸಂದರ್ಭವನ್ನು ಅವಕಾಶ ಎಂಬಂತೆ ಖಾಸಗೀ ಸಂಸ್ಥೆಗಳು ಬಳಸಿಕೊಳ್ಳುತ್ತಿರುವುದು ವಿಷಾಧನೀಯ. ಇದೇ ದಾರಿಯನ್ನು ಸರ್ಕಾರಿ ಶಿಕ್ಷಣ ಸಂಸ್ಥೆಗಳು ಅನುಸರಿಸುವುದು ಎಂದರೆ ಏನರ್ಥ? ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯವು ಈ ಸಮಯದಲ್ಲಿ ಶುಲ್ಕ ಸಂಗ್ರಹಿಸಬಾರದು ಎಂದು ಎಂದು ಕೆವಿಎಸ್ ರಾಜ್ಯ ಸಂಚಾಲಕರಾದ ಸರೋವರ್ ಬೆಂಕಿಕೆರೆ ಆಗ್ರಹಿಸಿದ್ದಾರೆ.

ಮೊದಲ ಸುತ್ತಿನ ಲಾಕ್ ಡೌನ್ ಘೋಷಣೆ ಆದಾಗಲೇ ‘ಪರೀಕ್ಷಾ ಶುಲ್ಕ ಮತ್ತು ಈ ಶೈಕ್ಷಣಿಕ ವರ್ಷದ ಶುಲ್ಕಗಳನ್ನು ವಿದ್ಯಾರ್ಥಿ/ಪೋಷಕರಿಂದ ಪಡೆಯದೇ ಸರ್ಕಾರವೇ ಭರಿಸಬೇಕು ಅಥವಾ ಶುಲ್ಕ ಕಡಿಮೆಗೊಳಿಸಿ ಹೆಚ್ಚಿನ ಕಲಾವಾಕಾಶ ನೀಡಿ ಕಂತುಗಳಲ್ಲಿ ಶುಲ್ಕ ಪಡೆಯಬೇಕು ಎಂದು’ ಕರ್ನಾಟಕ ವಿದ್ಯಾರ್ಥಿ ಸಂಘಟನೆ ವತಿಯಿಂದ ಒತ್ತಾಯಿಸಿದ್ದೆವು. ಆದರೆ ಇದನ್ನು ಕಿವಿಗೆ ಹಾಕಿಕೊಳ್ಳದೆ ಸರ್ಕಾರ ಮತ್ತು ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿ-ಪೋಷಕರ ಸುಲಿಗೆಗೆ ನಿಂತಿದೆ! ಇದರಿಂದಾಗಿ ಪೋಷಕರು ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಹಾಗಾಗಿ ಈ ಬಾರಿ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣದಿಂದ ಹಿಂದೆ ಸರಿಯಲಿದ್ದಾರೆ ಎಂಬ ಆತಂಕ ವ್ಯಕ್ತಪಡಿಸಿದ್ದಾರೆ.

ವಿವಿಯ ಈ ನಿಲುವಿನಿಂದ ತಳಸಮುದಾಯದ ವಿದ್ಯಾರ್ಥಿಗಳು ಮತ್ತು ಮಹಿಳೆಯರು ಶಿಕ್ಷಣದಿಂದ ವಂಚಿತರಾಗುವ ಎಲ್ಲಾ ಸಾಧ್ಯತೆಗಳು ಇದೆ. ಇದಕ್ಕೆ ನೇರ ಹೊಣೆ ನಮ್ಮ ರಾಜ್ಯ ಸರ್ಕಾರವೇ ಆಗಲಿದೆ ಎಂದು ಅವರು ಆರೋಪಿಸಿದ್ದಾರೆ.

ಪಿಮ್ ಕೇರ್ಸ್ ಗೆ ದೇಶದ ಜನರು ನೀಡಿದ ಕೋಟ್ಯಾಂತರ ರೂಪಾಯಿಗಳು ಏನಾದವು? ಕೊರೊನಾ ವಿಶೇಷ ಪ್ಯಾಕೇಜ್ ಎಂದು ಘೋಷಿಸಿದ 20 ಲಕ್ಷ ಕೋಟಿಯಲ್ಲಿ ವಿದ್ಯಾರ್ಥಿಗಳಿಗೆ ಏನು ಇಲ್ಲವೆ?, ವಿದ್ಯಾರ್ಥಿಗಳಿಂದ ಯಾವುದೇ ಕಾರಣಕ್ಕೂ ಶುಲ್ಕ ವಸೂಲಿ ಮಾಡಬಾರದು ಎಂದು ಅವರು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಶಿಕ್ಷಣದ ರಾಷ್ಟ್ರೀಕರಣಕ್ಕಾಗಿ, JNU ಉಳಿವಿಗಾಗಿ ಒತ್ತಾಯ: ’ಉಚಿತ ಶಿಕ್ಷಣಕ್ಕಾಗಿ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟ’ ಅಸ್ತಿತ್ವಕ್ಕೆ, ನಾಳೆ ಮಹತ್ವದ ಸಭೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...