Homeಕರೋನಾ ತಲ್ಲಣಪರೀಕ್ಷಾ ಶುಲ್ಕ ಭರಿಸಲು ಅಂತಿಮ ಗಡುವು ವಿಧಿಸಿದ ಬೆಂಗಳೂರು ವಿ.ವಿ; ಕೆವಿಎಸ್ ವಿರೋಧ

ಪರೀಕ್ಷಾ ಶುಲ್ಕ ಭರಿಸಲು ಅಂತಿಮ ಗಡುವು ವಿಧಿಸಿದ ಬೆಂಗಳೂರು ವಿ.ವಿ; ಕೆವಿಎಸ್ ವಿರೋಧ

ವಿವಿಯ ಈ ನಿಲುವಿನಿಂದ ತಳಸಮುದಾಯದ ವಿದ್ಯಾರ್ಥಿಗಳು ಮತ್ತು ಮಹಿಳೆಯರು ಶಿಕ್ಷಣದಿಂದ ವಂಚಿತರಾಗುವ ಎಲ್ಲಾ ಸಾಧ್ಯತೆಗಳು ಇದೆ. ಇದಕ್ಕೆ ನೇರ ಹೊಣೆ ನಮ್ಮ ರಾಜ್ಯ ಸರ್ಕಾರವೇ ಆಗಲಿದೆ ಎಂದು ಅವರು ಆರೋಪಿಸಿದ್ದಾರೆ.

- Advertisement -
- Advertisement -

ಬೆಂಗಳೂರು ವಿಶ್ವವಿದ್ಯಾನಿಲಯವು ಪರೀಕ್ಷಾ ಶುಲ್ಕ ಭರಿಸಲು ಆಗಸ್ಟ್ 15ರಂದು ಕೊನೆಯ ದಿನಾಂಕ ಎಂದು ಘೋಷಿಸಿದೆ. ಅಲ್ಲದೇ ಹೊಸ ಶೈಕ್ಷಣಿಕ ವರ್ಷದ ಕಾಲೇಜು ದಾಖಲಾತಿ ಶುಲ್ಕವನ್ನು ಭರಿಸಲು ಹೇಳಿದೆ.

ವಿವಿಯ ಈ ನಿಲುವನ್ನು ಕರ್ನಾಟಕ ವಿದ್ಯಾರ್ಥಿ ಸಂಘಟನೆ ಖಂಡಿಸಿದೆ. ಕೂಡಲೇ ವಿವಿಯು ಈ ಆದೇಶವನ್ನು ಹಿಂಪಡೆಯಬೇಕು, ಇಲ್ಲಿದಿದ್ದಲ್ಲಿ ಹೋರಾಟ ಅನಿವಾರ್ಯ ಎಂದು ಎಚ್ಚರಿಕೆ ನೀಡಿದೆ.

ಕೊರೊನಾ ವೈರಸ್ ಇಡೀ ಪ್ರಪಂಚವನ್ನೇ ಭಯಾನಕವಾಗಿ ಕಾಡಿಸುತ್ತಿದೆ. ಭಾರತ ಕರೋನಾದಲ್ಲಿ ಸೋಂಕಿತರ ಪಟ್ಟಿಯಲ್ಲಿ ವಿಶ್ವಗುರು ಆಗುವತ್ತ ಸಾಗಿದೆ. ಇನ್ನು ಯಾವುದೇ ತಯಾರಿ ಇಲ್ಲದೆ ಮೇಲಿಂದ ಮೇಲೆ ಹೇರಿದ ಲಾಕ್‌ಡೌನ್‌ನಿಂದಾಗಿ ಬಡವರು, ದಿನಗೂಲಿ ಕಾರ್ಮಿಕರು, ರೈತರು, ಬೀದಿ ವ್ಯಾಪಾರಿಗಳ ಕುಟುಂಬಗಳು ಆರ್ಥಿಕವಾಗಿ ಇನ್ನೂ ಚೇತರಿಸಿಕೊಂಡಿಲ್ಲ. ಇಂತಹ ಸಂದರ್ಭವನ್ನು ಅವಕಾಶ ಎಂಬಂತೆ ಖಾಸಗೀ ಸಂಸ್ಥೆಗಳು ಬಳಸಿಕೊಳ್ಳುತ್ತಿರುವುದು ವಿಷಾಧನೀಯ. ಇದೇ ದಾರಿಯನ್ನು ಸರ್ಕಾರಿ ಶಿಕ್ಷಣ ಸಂಸ್ಥೆಗಳು ಅನುಸರಿಸುವುದು ಎಂದರೆ ಏನರ್ಥ? ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯವು ಈ ಸಮಯದಲ್ಲಿ ಶುಲ್ಕ ಸಂಗ್ರಹಿಸಬಾರದು ಎಂದು ಎಂದು ಕೆವಿಎಸ್ ರಾಜ್ಯ ಸಂಚಾಲಕರಾದ ಸರೋವರ್ ಬೆಂಕಿಕೆರೆ ಆಗ್ರಹಿಸಿದ್ದಾರೆ.

ಮೊದಲ ಸುತ್ತಿನ ಲಾಕ್ ಡೌನ್ ಘೋಷಣೆ ಆದಾಗಲೇ ‘ಪರೀಕ್ಷಾ ಶುಲ್ಕ ಮತ್ತು ಈ ಶೈಕ್ಷಣಿಕ ವರ್ಷದ ಶುಲ್ಕಗಳನ್ನು ವಿದ್ಯಾರ್ಥಿ/ಪೋಷಕರಿಂದ ಪಡೆಯದೇ ಸರ್ಕಾರವೇ ಭರಿಸಬೇಕು ಅಥವಾ ಶುಲ್ಕ ಕಡಿಮೆಗೊಳಿಸಿ ಹೆಚ್ಚಿನ ಕಲಾವಾಕಾಶ ನೀಡಿ ಕಂತುಗಳಲ್ಲಿ ಶುಲ್ಕ ಪಡೆಯಬೇಕು ಎಂದು’ ಕರ್ನಾಟಕ ವಿದ್ಯಾರ್ಥಿ ಸಂಘಟನೆ ವತಿಯಿಂದ ಒತ್ತಾಯಿಸಿದ್ದೆವು. ಆದರೆ ಇದನ್ನು ಕಿವಿಗೆ ಹಾಕಿಕೊಳ್ಳದೆ ಸರ್ಕಾರ ಮತ್ತು ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿ-ಪೋಷಕರ ಸುಲಿಗೆಗೆ ನಿಂತಿದೆ! ಇದರಿಂದಾಗಿ ಪೋಷಕರು ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಹಾಗಾಗಿ ಈ ಬಾರಿ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣದಿಂದ ಹಿಂದೆ ಸರಿಯಲಿದ್ದಾರೆ ಎಂಬ ಆತಂಕ ವ್ಯಕ್ತಪಡಿಸಿದ್ದಾರೆ.

ವಿವಿಯ ಈ ನಿಲುವಿನಿಂದ ತಳಸಮುದಾಯದ ವಿದ್ಯಾರ್ಥಿಗಳು ಮತ್ತು ಮಹಿಳೆಯರು ಶಿಕ್ಷಣದಿಂದ ವಂಚಿತರಾಗುವ ಎಲ್ಲಾ ಸಾಧ್ಯತೆಗಳು ಇದೆ. ಇದಕ್ಕೆ ನೇರ ಹೊಣೆ ನಮ್ಮ ರಾಜ್ಯ ಸರ್ಕಾರವೇ ಆಗಲಿದೆ ಎಂದು ಅವರು ಆರೋಪಿಸಿದ್ದಾರೆ.

ಪಿಮ್ ಕೇರ್ಸ್ ಗೆ ದೇಶದ ಜನರು ನೀಡಿದ ಕೋಟ್ಯಾಂತರ ರೂಪಾಯಿಗಳು ಏನಾದವು? ಕೊರೊನಾ ವಿಶೇಷ ಪ್ಯಾಕೇಜ್ ಎಂದು ಘೋಷಿಸಿದ 20 ಲಕ್ಷ ಕೋಟಿಯಲ್ಲಿ ವಿದ್ಯಾರ್ಥಿಗಳಿಗೆ ಏನು ಇಲ್ಲವೆ?, ವಿದ್ಯಾರ್ಥಿಗಳಿಂದ ಯಾವುದೇ ಕಾರಣಕ್ಕೂ ಶುಲ್ಕ ವಸೂಲಿ ಮಾಡಬಾರದು ಎಂದು ಅವರು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಶಿಕ್ಷಣದ ರಾಷ್ಟ್ರೀಕರಣಕ್ಕಾಗಿ, JNU ಉಳಿವಿಗಾಗಿ ಒತ್ತಾಯ: ’ಉಚಿತ ಶಿಕ್ಷಣಕ್ಕಾಗಿ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟ’ ಅಸ್ತಿತ್ವಕ್ಕೆ, ನಾಳೆ ಮಹತ್ವದ ಸಭೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...