Homeಕರೋನಾ ತಲ್ಲಣಪರೀಕ್ಷಾ ಶುಲ್ಕ ಭರಿಸಲು ಅಂತಿಮ ಗಡುವು ವಿಧಿಸಿದ ಬೆಂಗಳೂರು ವಿ.ವಿ; ಕೆವಿಎಸ್ ವಿರೋಧ

ಪರೀಕ್ಷಾ ಶುಲ್ಕ ಭರಿಸಲು ಅಂತಿಮ ಗಡುವು ವಿಧಿಸಿದ ಬೆಂಗಳೂರು ವಿ.ವಿ; ಕೆವಿಎಸ್ ವಿರೋಧ

ವಿವಿಯ ಈ ನಿಲುವಿನಿಂದ ತಳಸಮುದಾಯದ ವಿದ್ಯಾರ್ಥಿಗಳು ಮತ್ತು ಮಹಿಳೆಯರು ಶಿಕ್ಷಣದಿಂದ ವಂಚಿತರಾಗುವ ಎಲ್ಲಾ ಸಾಧ್ಯತೆಗಳು ಇದೆ. ಇದಕ್ಕೆ ನೇರ ಹೊಣೆ ನಮ್ಮ ರಾಜ್ಯ ಸರ್ಕಾರವೇ ಆಗಲಿದೆ ಎಂದು ಅವರು ಆರೋಪಿಸಿದ್ದಾರೆ.

- Advertisement -
- Advertisement -

ಬೆಂಗಳೂರು ವಿಶ್ವವಿದ್ಯಾನಿಲಯವು ಪರೀಕ್ಷಾ ಶುಲ್ಕ ಭರಿಸಲು ಆಗಸ್ಟ್ 15ರಂದು ಕೊನೆಯ ದಿನಾಂಕ ಎಂದು ಘೋಷಿಸಿದೆ. ಅಲ್ಲದೇ ಹೊಸ ಶೈಕ್ಷಣಿಕ ವರ್ಷದ ಕಾಲೇಜು ದಾಖಲಾತಿ ಶುಲ್ಕವನ್ನು ಭರಿಸಲು ಹೇಳಿದೆ.

ವಿವಿಯ ಈ ನಿಲುವನ್ನು ಕರ್ನಾಟಕ ವಿದ್ಯಾರ್ಥಿ ಸಂಘಟನೆ ಖಂಡಿಸಿದೆ. ಕೂಡಲೇ ವಿವಿಯು ಈ ಆದೇಶವನ್ನು ಹಿಂಪಡೆಯಬೇಕು, ಇಲ್ಲಿದಿದ್ದಲ್ಲಿ ಹೋರಾಟ ಅನಿವಾರ್ಯ ಎಂದು ಎಚ್ಚರಿಕೆ ನೀಡಿದೆ.

ಕೊರೊನಾ ವೈರಸ್ ಇಡೀ ಪ್ರಪಂಚವನ್ನೇ ಭಯಾನಕವಾಗಿ ಕಾಡಿಸುತ್ತಿದೆ. ಭಾರತ ಕರೋನಾದಲ್ಲಿ ಸೋಂಕಿತರ ಪಟ್ಟಿಯಲ್ಲಿ ವಿಶ್ವಗುರು ಆಗುವತ್ತ ಸಾಗಿದೆ. ಇನ್ನು ಯಾವುದೇ ತಯಾರಿ ಇಲ್ಲದೆ ಮೇಲಿಂದ ಮೇಲೆ ಹೇರಿದ ಲಾಕ್‌ಡೌನ್‌ನಿಂದಾಗಿ ಬಡವರು, ದಿನಗೂಲಿ ಕಾರ್ಮಿಕರು, ರೈತರು, ಬೀದಿ ವ್ಯಾಪಾರಿಗಳ ಕುಟುಂಬಗಳು ಆರ್ಥಿಕವಾಗಿ ಇನ್ನೂ ಚೇತರಿಸಿಕೊಂಡಿಲ್ಲ. ಇಂತಹ ಸಂದರ್ಭವನ್ನು ಅವಕಾಶ ಎಂಬಂತೆ ಖಾಸಗೀ ಸಂಸ್ಥೆಗಳು ಬಳಸಿಕೊಳ್ಳುತ್ತಿರುವುದು ವಿಷಾಧನೀಯ. ಇದೇ ದಾರಿಯನ್ನು ಸರ್ಕಾರಿ ಶಿಕ್ಷಣ ಸಂಸ್ಥೆಗಳು ಅನುಸರಿಸುವುದು ಎಂದರೆ ಏನರ್ಥ? ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯವು ಈ ಸಮಯದಲ್ಲಿ ಶುಲ್ಕ ಸಂಗ್ರಹಿಸಬಾರದು ಎಂದು ಎಂದು ಕೆವಿಎಸ್ ರಾಜ್ಯ ಸಂಚಾಲಕರಾದ ಸರೋವರ್ ಬೆಂಕಿಕೆರೆ ಆಗ್ರಹಿಸಿದ್ದಾರೆ.

ಮೊದಲ ಸುತ್ತಿನ ಲಾಕ್ ಡೌನ್ ಘೋಷಣೆ ಆದಾಗಲೇ ‘ಪರೀಕ್ಷಾ ಶುಲ್ಕ ಮತ್ತು ಈ ಶೈಕ್ಷಣಿಕ ವರ್ಷದ ಶುಲ್ಕಗಳನ್ನು ವಿದ್ಯಾರ್ಥಿ/ಪೋಷಕರಿಂದ ಪಡೆಯದೇ ಸರ್ಕಾರವೇ ಭರಿಸಬೇಕು ಅಥವಾ ಶುಲ್ಕ ಕಡಿಮೆಗೊಳಿಸಿ ಹೆಚ್ಚಿನ ಕಲಾವಾಕಾಶ ನೀಡಿ ಕಂತುಗಳಲ್ಲಿ ಶುಲ್ಕ ಪಡೆಯಬೇಕು ಎಂದು’ ಕರ್ನಾಟಕ ವಿದ್ಯಾರ್ಥಿ ಸಂಘಟನೆ ವತಿಯಿಂದ ಒತ್ತಾಯಿಸಿದ್ದೆವು. ಆದರೆ ಇದನ್ನು ಕಿವಿಗೆ ಹಾಕಿಕೊಳ್ಳದೆ ಸರ್ಕಾರ ಮತ್ತು ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿ-ಪೋಷಕರ ಸುಲಿಗೆಗೆ ನಿಂತಿದೆ! ಇದರಿಂದಾಗಿ ಪೋಷಕರು ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಹಾಗಾಗಿ ಈ ಬಾರಿ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣದಿಂದ ಹಿಂದೆ ಸರಿಯಲಿದ್ದಾರೆ ಎಂಬ ಆತಂಕ ವ್ಯಕ್ತಪಡಿಸಿದ್ದಾರೆ.

ವಿವಿಯ ಈ ನಿಲುವಿನಿಂದ ತಳಸಮುದಾಯದ ವಿದ್ಯಾರ್ಥಿಗಳು ಮತ್ತು ಮಹಿಳೆಯರು ಶಿಕ್ಷಣದಿಂದ ವಂಚಿತರಾಗುವ ಎಲ್ಲಾ ಸಾಧ್ಯತೆಗಳು ಇದೆ. ಇದಕ್ಕೆ ನೇರ ಹೊಣೆ ನಮ್ಮ ರಾಜ್ಯ ಸರ್ಕಾರವೇ ಆಗಲಿದೆ ಎಂದು ಅವರು ಆರೋಪಿಸಿದ್ದಾರೆ.

ಪಿಮ್ ಕೇರ್ಸ್ ಗೆ ದೇಶದ ಜನರು ನೀಡಿದ ಕೋಟ್ಯಾಂತರ ರೂಪಾಯಿಗಳು ಏನಾದವು? ಕೊರೊನಾ ವಿಶೇಷ ಪ್ಯಾಕೇಜ್ ಎಂದು ಘೋಷಿಸಿದ 20 ಲಕ್ಷ ಕೋಟಿಯಲ್ಲಿ ವಿದ್ಯಾರ್ಥಿಗಳಿಗೆ ಏನು ಇಲ್ಲವೆ?, ವಿದ್ಯಾರ್ಥಿಗಳಿಂದ ಯಾವುದೇ ಕಾರಣಕ್ಕೂ ಶುಲ್ಕ ವಸೂಲಿ ಮಾಡಬಾರದು ಎಂದು ಅವರು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಶಿಕ್ಷಣದ ರಾಷ್ಟ್ರೀಕರಣಕ್ಕಾಗಿ, JNU ಉಳಿವಿಗಾಗಿ ಒತ್ತಾಯ: ’ಉಚಿತ ಶಿಕ್ಷಣಕ್ಕಾಗಿ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟ’ ಅಸ್ತಿತ್ವಕ್ಕೆ, ನಾಳೆ ಮಹತ್ವದ ಸಭೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...