Homeಕರೋನಾ ತಲ್ಲಣಪರೀಕ್ಷಾ ಶುಲ್ಕ ಭರಿಸಲು ಅಂತಿಮ ಗಡುವು ವಿಧಿಸಿದ ಬೆಂಗಳೂರು ವಿ.ವಿ; ಕೆವಿಎಸ್ ವಿರೋಧ

ಪರೀಕ್ಷಾ ಶುಲ್ಕ ಭರಿಸಲು ಅಂತಿಮ ಗಡುವು ವಿಧಿಸಿದ ಬೆಂಗಳೂರು ವಿ.ವಿ; ಕೆವಿಎಸ್ ವಿರೋಧ

ವಿವಿಯ ಈ ನಿಲುವಿನಿಂದ ತಳಸಮುದಾಯದ ವಿದ್ಯಾರ್ಥಿಗಳು ಮತ್ತು ಮಹಿಳೆಯರು ಶಿಕ್ಷಣದಿಂದ ವಂಚಿತರಾಗುವ ಎಲ್ಲಾ ಸಾಧ್ಯತೆಗಳು ಇದೆ. ಇದಕ್ಕೆ ನೇರ ಹೊಣೆ ನಮ್ಮ ರಾಜ್ಯ ಸರ್ಕಾರವೇ ಆಗಲಿದೆ ಎಂದು ಅವರು ಆರೋಪಿಸಿದ್ದಾರೆ.

- Advertisement -
- Advertisement -

ಬೆಂಗಳೂರು ವಿಶ್ವವಿದ್ಯಾನಿಲಯವು ಪರೀಕ್ಷಾ ಶುಲ್ಕ ಭರಿಸಲು ಆಗಸ್ಟ್ 15ರಂದು ಕೊನೆಯ ದಿನಾಂಕ ಎಂದು ಘೋಷಿಸಿದೆ. ಅಲ್ಲದೇ ಹೊಸ ಶೈಕ್ಷಣಿಕ ವರ್ಷದ ಕಾಲೇಜು ದಾಖಲಾತಿ ಶುಲ್ಕವನ್ನು ಭರಿಸಲು ಹೇಳಿದೆ.

ವಿವಿಯ ಈ ನಿಲುವನ್ನು ಕರ್ನಾಟಕ ವಿದ್ಯಾರ್ಥಿ ಸಂಘಟನೆ ಖಂಡಿಸಿದೆ. ಕೂಡಲೇ ವಿವಿಯು ಈ ಆದೇಶವನ್ನು ಹಿಂಪಡೆಯಬೇಕು, ಇಲ್ಲಿದಿದ್ದಲ್ಲಿ ಹೋರಾಟ ಅನಿವಾರ್ಯ ಎಂದು ಎಚ್ಚರಿಕೆ ನೀಡಿದೆ.

ಕೊರೊನಾ ವೈರಸ್ ಇಡೀ ಪ್ರಪಂಚವನ್ನೇ ಭಯಾನಕವಾಗಿ ಕಾಡಿಸುತ್ತಿದೆ. ಭಾರತ ಕರೋನಾದಲ್ಲಿ ಸೋಂಕಿತರ ಪಟ್ಟಿಯಲ್ಲಿ ವಿಶ್ವಗುರು ಆಗುವತ್ತ ಸಾಗಿದೆ. ಇನ್ನು ಯಾವುದೇ ತಯಾರಿ ಇಲ್ಲದೆ ಮೇಲಿಂದ ಮೇಲೆ ಹೇರಿದ ಲಾಕ್‌ಡೌನ್‌ನಿಂದಾಗಿ ಬಡವರು, ದಿನಗೂಲಿ ಕಾರ್ಮಿಕರು, ರೈತರು, ಬೀದಿ ವ್ಯಾಪಾರಿಗಳ ಕುಟುಂಬಗಳು ಆರ್ಥಿಕವಾಗಿ ಇನ್ನೂ ಚೇತರಿಸಿಕೊಂಡಿಲ್ಲ. ಇಂತಹ ಸಂದರ್ಭವನ್ನು ಅವಕಾಶ ಎಂಬಂತೆ ಖಾಸಗೀ ಸಂಸ್ಥೆಗಳು ಬಳಸಿಕೊಳ್ಳುತ್ತಿರುವುದು ವಿಷಾಧನೀಯ. ಇದೇ ದಾರಿಯನ್ನು ಸರ್ಕಾರಿ ಶಿಕ್ಷಣ ಸಂಸ್ಥೆಗಳು ಅನುಸರಿಸುವುದು ಎಂದರೆ ಏನರ್ಥ? ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯವು ಈ ಸಮಯದಲ್ಲಿ ಶುಲ್ಕ ಸಂಗ್ರಹಿಸಬಾರದು ಎಂದು ಎಂದು ಕೆವಿಎಸ್ ರಾಜ್ಯ ಸಂಚಾಲಕರಾದ ಸರೋವರ್ ಬೆಂಕಿಕೆರೆ ಆಗ್ರಹಿಸಿದ್ದಾರೆ.

ಮೊದಲ ಸುತ್ತಿನ ಲಾಕ್ ಡೌನ್ ಘೋಷಣೆ ಆದಾಗಲೇ ‘ಪರೀಕ್ಷಾ ಶುಲ್ಕ ಮತ್ತು ಈ ಶೈಕ್ಷಣಿಕ ವರ್ಷದ ಶುಲ್ಕಗಳನ್ನು ವಿದ್ಯಾರ್ಥಿ/ಪೋಷಕರಿಂದ ಪಡೆಯದೇ ಸರ್ಕಾರವೇ ಭರಿಸಬೇಕು ಅಥವಾ ಶುಲ್ಕ ಕಡಿಮೆಗೊಳಿಸಿ ಹೆಚ್ಚಿನ ಕಲಾವಾಕಾಶ ನೀಡಿ ಕಂತುಗಳಲ್ಲಿ ಶುಲ್ಕ ಪಡೆಯಬೇಕು ಎಂದು’ ಕರ್ನಾಟಕ ವಿದ್ಯಾರ್ಥಿ ಸಂಘಟನೆ ವತಿಯಿಂದ ಒತ್ತಾಯಿಸಿದ್ದೆವು. ಆದರೆ ಇದನ್ನು ಕಿವಿಗೆ ಹಾಕಿಕೊಳ್ಳದೆ ಸರ್ಕಾರ ಮತ್ತು ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿ-ಪೋಷಕರ ಸುಲಿಗೆಗೆ ನಿಂತಿದೆ! ಇದರಿಂದಾಗಿ ಪೋಷಕರು ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಹಾಗಾಗಿ ಈ ಬಾರಿ ಹೆಚ್ಚು ವಿದ್ಯಾರ್ಥಿಗಳು ಶಿಕ್ಷಣದಿಂದ ಹಿಂದೆ ಸರಿಯಲಿದ್ದಾರೆ ಎಂಬ ಆತಂಕ ವ್ಯಕ್ತಪಡಿಸಿದ್ದಾರೆ.

ವಿವಿಯ ಈ ನಿಲುವಿನಿಂದ ತಳಸಮುದಾಯದ ವಿದ್ಯಾರ್ಥಿಗಳು ಮತ್ತು ಮಹಿಳೆಯರು ಶಿಕ್ಷಣದಿಂದ ವಂಚಿತರಾಗುವ ಎಲ್ಲಾ ಸಾಧ್ಯತೆಗಳು ಇದೆ. ಇದಕ್ಕೆ ನೇರ ಹೊಣೆ ನಮ್ಮ ರಾಜ್ಯ ಸರ್ಕಾರವೇ ಆಗಲಿದೆ ಎಂದು ಅವರು ಆರೋಪಿಸಿದ್ದಾರೆ.

ಪಿಮ್ ಕೇರ್ಸ್ ಗೆ ದೇಶದ ಜನರು ನೀಡಿದ ಕೋಟ್ಯಾಂತರ ರೂಪಾಯಿಗಳು ಏನಾದವು? ಕೊರೊನಾ ವಿಶೇಷ ಪ್ಯಾಕೇಜ್ ಎಂದು ಘೋಷಿಸಿದ 20 ಲಕ್ಷ ಕೋಟಿಯಲ್ಲಿ ವಿದ್ಯಾರ್ಥಿಗಳಿಗೆ ಏನು ಇಲ್ಲವೆ?, ವಿದ್ಯಾರ್ಥಿಗಳಿಂದ ಯಾವುದೇ ಕಾರಣಕ್ಕೂ ಶುಲ್ಕ ವಸೂಲಿ ಮಾಡಬಾರದು ಎಂದು ಅವರು ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಶಿಕ್ಷಣದ ರಾಷ್ಟ್ರೀಕರಣಕ್ಕಾಗಿ, JNU ಉಳಿವಿಗಾಗಿ ಒತ್ತಾಯ: ’ಉಚಿತ ಶಿಕ್ಷಣಕ್ಕಾಗಿ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟ’ ಅಸ್ತಿತ್ವಕ್ಕೆ, ನಾಳೆ ಮಹತ್ವದ ಸಭೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...