Homeಕರ್ನಾಟಕಶಾಸಕ ಎನ್‌.ಮಹೇಶ್‌ ಸೂಚನೆ ಮೇರೆಗೆ ದಲಿತ ವ್ಯಕ್ತಿಯ ಮೇಲೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ; ಆರೋಪ

ಶಾಸಕ ಎನ್‌.ಮಹೇಶ್‌ ಸೂಚನೆ ಮೇರೆಗೆ ದಲಿತ ವ್ಯಕ್ತಿಯ ಮೇಲೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ; ಆರೋಪ

- Advertisement -
- Advertisement -

ಕೊಳ್ಳೇಗಾಲ ವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕ ಎನ್‌.ಮಹೇಶ್‌ ಅವರ ಸೂಚನೆಯ ಮೇರೆಗೆ ಪೊಲೀಸರು ದಲಿತ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆಂಬ ಆರೋಪ ಕೇಳಿಬಂದಿದೆ. ದೌರ್ಜನ್ಯವನ್ನು ಖಂಡಿಸಿ ಕೊಳ್ಳೇಗಾಲ ಡಿವೈಎಸ್‌ಪಿ ಕಚೇರಿ ಎದುರು ಉತ್ತಂಬಳ್ಳಿ ಗ್ರಾಮಸ್ಥರು, ಪ್ರಗತಿಪರ ಸಂಘಟನೆಯ ಒಕ್ಕೂಟದವರು ಹಾಗೂ ಬಿಎಸ್‌ಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಉತ್ತಂಬಳ್ಳಿಯಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಸಿದ್ದಪ್ಪಾಜಿ ಕೊಂಡೋತ್ಸವಕ್ಕೆ ಶಾಸಕರು ಆಗಮಿಸಿದ್ದಾಗ ವಾದ್ಯ ನುಡಿಸುವ ಸಿದ್ದರಾಜು ಉತ್ತಂಬಳ್ಳಿ ಅವರು ಶಾಸಕರನ್ನು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಶಾಸಕರ ಸೈದ್ಧಾಂತಿಕ ಬದಲಾವಣೆಯನ್ನು ಖಂಡಿಸಿ ಸಿದ್ದರಾಜು ಚಪ್ಪಲಿಯನ್ನು ತೋರಿಸಿದರು ಎಂದು ಕೆಲವರು ಹೇಳುತ್ತಿದ್ದರೆ, ಮತ್ತೆ ಕೆಲವರು ‘ಶಾಸಕರಿಂದ ನಮಗ್ಯಾವುದೇ ಅಭಿವೃದ್ಧಿ ಆಗಿಲ್ಲ. ಚಿಕ್ಕದೊಂದು ಲೋನ್‌ ಕೂಡ ಕೊಡಿಸಲಿಲ್ಲ. ಉತ್ತಂಬಳ್ಳಿಗೆ ಗ್ರಾಮವನ್ನು ಅಭಿವೃದ್ಧಿಪಡಿಸಿಲ್ಲ’ ಸಿದ್ದರಾಜು ಪ್ರಶ್ನಿಸಿದ್ದರಿಂದ ಶಾಸಕರು ಸಿಟ್ಟಾದರು ಎನ್ನಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಬಿಎಸ್‌ಪಿ ರಾಜ್ಯ ಕಾರ್ಯದರ್ಶಿ, ಜಿಪಂ ಮಾಜಿ ಸದಸ್ಯ ಕಮಲ್ ನಾಗರಾಜ್‌, “ನಮ್ಮ ಜೀವನದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಸಾಯುವವರೆಗೂ ವಾದ್ಯ ನುಡಿಸಬೇಕು ಎಂದು ಸಿದ್ದರಾಜು ಶಾಸಕರನ್ನು ಪ್ರಶ್ನಿಸಿದ್ದಾರೆ. ಅಷ್ಟಕ್ಕೆ ಸಿಟ್ಟಾದ ಎನ್.ಮಹೇಶ್ ಅವರು, ಈತ ಜಾಸ್ತಿ ಮಾತನಾಡುತ್ತಿದ್ದಾನೆ, ಸ್ವಲ್ಪ ರಿಪೇರಿ ಮಾಡ್ರಿ ಎಂದು ಪೊಲೀಸರಿಗೆ ಸೂಚಿಸಿದ್ದಾರೆ. ಚಪ್ಪಲಿ ತೋರಿಸಿದರೆಂದು ಆರೋಪಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಬಳಿಕ ಮಾಂಬಳ್ಳಿ ಠಾಣೆಗೆ ಕರೆದೊಯ್ದು ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ” ಎಂದು ದೂರಿದರು.

ಕೊಳ್ಳೇಗಾಲ ಡಿವೈಎಸ್‌ಪಿ ಕಚೇರಿ ಎದುರು ಉತ್ತಂಬಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

“ಶುಕ್ರವಾರ ಬೆಳಿಗ್ಗೆಯೇ ಠಾಣೆಗೆ ಕರೆದೊಯ್ದು, ಸಂಜೆಯವರೆಗೂ ಹೊಡೆದಿದ್ದಾರೆ. ಇಷ್ಟು ಹೊತ್ತಾದರೂ ಏಕೆ ಬಿಡುಗಡೆ ಮಾಡಿಲ್ಲ ಎಂದು ಹೋಗಿ ನೋಡಿದರೆ ಸಿದ್ದರಾಜು ನಿಂತುಕೊಳ್ಳಲೂ ಆಗದಷ್ಟು ಗಾಯಗೊಂಡಿದ್ದರು. ಅಂಗಾಲಿಗೆ ಹೊಡೆದಿದ್ದರು. ಮಂಡಿ ಮೂಳೆಯನ್ನು ಲಾಠಿಯಲ್ಲಿ ಉಜ್ಜಿದ್ದರು. ಕೈಗಳೆಲ್ಲ ಊದುಕೊಂಡಿದ್ದವು. ಅವರನ್ನು ಕರೆದುಕೊಂಡು ಬಂದು ಆಸ್ಪತ್ರೆಗೆ ದಾಖಲು ಮಾಡಿದ್ದೇವೆ. ಆಸ್ಪತ್ರೆಗೂ ಕೆಲವು ಗೂಂಡಾಗಳು ಆಗಮಿಸಿ ಸಿದ್ದರಾಜು ಅವರಿಗೆ ತೊಂದರೆ ನೀಡಲು ಪ್ರಯತ್ನಿಸಿದರು” ಎಂದು ಆರೋಪಿಸಿದರು.

ಇದನ್ನೂ ಓದಿರಿ: ಸಂತೋಷ್‌ ಸಾವು ಪ್ರಕರಣ: ಆರೋಪಿ ನಂ.1 ಈಶ್ವರಪ್ಪನವರಿಂದ ಅಧಿಕೃತ ರಾಜೀನಾಮೆ

“ಘಟನೆಯನ್ನು ಖಂಡಿಸಿ ಉತ್ತಂಬಳ್ಳಿ ಗ್ರಾಮಸ್ಥರು, ಬಿಎಸ್‌ಪಿ ಕಾರ್ಯಕರ್ತರು ಕೊಳ್ಳೇಗಾಲ ಡಿವೈಎಸ್‌ಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದೇವೆ. ಮಾಂಬಳ್ಳಿ ಠಾಣೆಗೆ ಬಂದಿದ್ದ ಯಳಂದೂರು ಸರ್ಕಲ್ ಇನ್‌ಸ್ಪೆಕ್ಟರ್‌ ಶಿವಮಾದಯ್ಯನವರು ಹಲ್ಲೆ ಮಾಡಿದ್ದಾರೆ ಎಂದು ತಿಳಿಸಿದ್ದೇವೆ. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಎಎಸ್‌ಪಿ ಸುಂದರ್‌ ರಾಜ್‌ ಅವರು ಜನರಲ್ಲಿ ಕ್ಷಮೆಯಾಚಿಸಿದ್ದು, ಒಂದು ವಾರ ಸಮಯ ಕೋರಿದ್ದಾರೆ” ಎಂದು ಮಾಹಿತಿ ನೀಡಿದರು.

“ಸಿದ್ದರಾಜು ಅವರಿಗೆ ಹೈ ಬಿಪಿಯಾಗಿದೆ. ಹಲ್ಲೆ ನಡೆದಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಸಾಬೀತಾಗಿದೆ. ಸಿದ್ದರಾಜು ಅವರು ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂದು ಕಮಲ್ ತಿಳಿಸಿದರು.

ಚಪ್ಪಲಿ ಧರಿಸಿಯೇ ಇರಲಿಲ್ಲ: ಸಿದ್ದರಾಜು

ಆಸ್ಪತ್ರೆಯ ಮುಂದೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿದ್ದರಾಜು, ‘ನೋಡಪ್ಪ ಹೇಗೆ ಹೋಗ್ತಾ ಇದ್ದಾನೆ? ನಾವು ಸಾಯುವವರೆಗೆ ಹೀಗೆ ಇರುವಂತಾಯಿತಲ್ಲ ಎಂದು ಶಾಸಕರನ್ನು ನೋಡಿ ಹೇಳಿದ್ದೆ. ಆದರೆ, ನಾನು ಚಪ್ಪಲಿ ತೋರಿಸಿದ್ದೇನೆ ಎಂದು ಆರೋಪಿಸಲಾಗಿದೆ. ನಾನು ಚಪ್ಪಲಿಯೇ ಧರಿಸಿರಲಿಲ್ಲ’ ಎಂದು ತಿಳಿಸಿದ್ದಾರೆ.

‘ಶಾಸಕರಿಗೆ ಚಪ್ಪಲಿ ತೋರಿಸಿದ್ದೇನೆ ಎಂದು ನನ್ನನ್ನು ಪೊಲೀಸರು ಅಗರ ಮಾಂಬಳ್ಳಿ ಠಾಣೆಗೆ ಕರೆದೊಯ್ದು ಸಿಕ್ಕಾಪಟ್ಟೆ ಹೊಡೆದಿದ್ದಾರೆ. ಹಗ್ಗದಲ್ಲಿ ನೇತಾಡಿಸಿ ಬಡಿದಿದ್ದಾರೆ. ಬೇಡ ಬೇಡ ಎಂದರೂ ಕೇಳಲಿಲ್ಲ. ನನಗೆ ಹೊಡೆದವರಿಗೆ ಶಿಕ್ಷೆಯಾಗಬೇಕು. ಮುಂದೆ ಯಾರಿಗೂ ಈ ರೀತಿ ಆಗಬಾರದು’ ಎಂದಿದ್ದಾರೆ.

ಘಟನೆಯ ಕುರಿತು ಶಾಸಕ ಎನ್‌.ಮಹೇಶ್‌ ಅವರ ಪ್ರತಿಕ್ರಿಯೆಗಾಗಿ ‘ನಾನುಗೌರಿ.ಕಾಂ’ ಸಂಪರ್ಕಿಸಿದೆ. ಆದರೆ ಅವರು ಕರೆ ಸ್ವೀಕರಿಸಲಿಲ್ಲ. ಪ್ರತಿಕ್ರಿಯೆ ನಿರೀಕ್ಷಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Dalitharu mathe mathe BJP sertharalla…? Yee ghatanegalannu gamanisi innadaru horge bandu bere paksha nodkolli… BJP dalithara dhamanakaagiye irodu gothilva

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...