Homeಕರ್ನಾಟಕಶಾಸಕ ಎನ್‌.ಮಹೇಶ್‌ ಸೂಚನೆ ಮೇರೆಗೆ ದಲಿತ ವ್ಯಕ್ತಿಯ ಮೇಲೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ; ಆರೋಪ

ಶಾಸಕ ಎನ್‌.ಮಹೇಶ್‌ ಸೂಚನೆ ಮೇರೆಗೆ ದಲಿತ ವ್ಯಕ್ತಿಯ ಮೇಲೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ; ಆರೋಪ

- Advertisement -
- Advertisement -

ಕೊಳ್ಳೇಗಾಲ ವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕ ಎನ್‌.ಮಹೇಶ್‌ ಅವರ ಸೂಚನೆಯ ಮೇರೆಗೆ ಪೊಲೀಸರು ದಲಿತ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆಂಬ ಆರೋಪ ಕೇಳಿಬಂದಿದೆ. ದೌರ್ಜನ್ಯವನ್ನು ಖಂಡಿಸಿ ಕೊಳ್ಳೇಗಾಲ ಡಿವೈಎಸ್‌ಪಿ ಕಚೇರಿ ಎದುರು ಉತ್ತಂಬಳ್ಳಿ ಗ್ರಾಮಸ್ಥರು, ಪ್ರಗತಿಪರ ಸಂಘಟನೆಯ ಒಕ್ಕೂಟದವರು ಹಾಗೂ ಬಿಎಸ್‌ಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಉತ್ತಂಬಳ್ಳಿಯಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಸಿದ್ದಪ್ಪಾಜಿ ಕೊಂಡೋತ್ಸವಕ್ಕೆ ಶಾಸಕರು ಆಗಮಿಸಿದ್ದಾಗ ವಾದ್ಯ ನುಡಿಸುವ ಸಿದ್ದರಾಜು ಉತ್ತಂಬಳ್ಳಿ ಅವರು ಶಾಸಕರನ್ನು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಶಾಸಕರ ಸೈದ್ಧಾಂತಿಕ ಬದಲಾವಣೆಯನ್ನು ಖಂಡಿಸಿ ಸಿದ್ದರಾಜು ಚಪ್ಪಲಿಯನ್ನು ತೋರಿಸಿದರು ಎಂದು ಕೆಲವರು ಹೇಳುತ್ತಿದ್ದರೆ, ಮತ್ತೆ ಕೆಲವರು ‘ಶಾಸಕರಿಂದ ನಮಗ್ಯಾವುದೇ ಅಭಿವೃದ್ಧಿ ಆಗಿಲ್ಲ. ಚಿಕ್ಕದೊಂದು ಲೋನ್‌ ಕೂಡ ಕೊಡಿಸಲಿಲ್ಲ. ಉತ್ತಂಬಳ್ಳಿಗೆ ಗ್ರಾಮವನ್ನು ಅಭಿವೃದ್ಧಿಪಡಿಸಿಲ್ಲ’ ಸಿದ್ದರಾಜು ಪ್ರಶ್ನಿಸಿದ್ದರಿಂದ ಶಾಸಕರು ಸಿಟ್ಟಾದರು ಎನ್ನಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಬಿಎಸ್‌ಪಿ ರಾಜ್ಯ ಕಾರ್ಯದರ್ಶಿ, ಜಿಪಂ ಮಾಜಿ ಸದಸ್ಯ ಕಮಲ್ ನಾಗರಾಜ್‌, “ನಮ್ಮ ಜೀವನದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಸಾಯುವವರೆಗೂ ವಾದ್ಯ ನುಡಿಸಬೇಕು ಎಂದು ಸಿದ್ದರಾಜು ಶಾಸಕರನ್ನು ಪ್ರಶ್ನಿಸಿದ್ದಾರೆ. ಅಷ್ಟಕ್ಕೆ ಸಿಟ್ಟಾದ ಎನ್.ಮಹೇಶ್ ಅವರು, ಈತ ಜಾಸ್ತಿ ಮಾತನಾಡುತ್ತಿದ್ದಾನೆ, ಸ್ವಲ್ಪ ರಿಪೇರಿ ಮಾಡ್ರಿ ಎಂದು ಪೊಲೀಸರಿಗೆ ಸೂಚಿಸಿದ್ದಾರೆ. ಚಪ್ಪಲಿ ತೋರಿಸಿದರೆಂದು ಆರೋಪಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಬಳಿಕ ಮಾಂಬಳ್ಳಿ ಠಾಣೆಗೆ ಕರೆದೊಯ್ದು ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ” ಎಂದು ದೂರಿದರು.

ಕೊಳ್ಳೇಗಾಲ ಡಿವೈಎಸ್‌ಪಿ ಕಚೇರಿ ಎದುರು ಉತ್ತಂಬಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

“ಶುಕ್ರವಾರ ಬೆಳಿಗ್ಗೆಯೇ ಠಾಣೆಗೆ ಕರೆದೊಯ್ದು, ಸಂಜೆಯವರೆಗೂ ಹೊಡೆದಿದ್ದಾರೆ. ಇಷ್ಟು ಹೊತ್ತಾದರೂ ಏಕೆ ಬಿಡುಗಡೆ ಮಾಡಿಲ್ಲ ಎಂದು ಹೋಗಿ ನೋಡಿದರೆ ಸಿದ್ದರಾಜು ನಿಂತುಕೊಳ್ಳಲೂ ಆಗದಷ್ಟು ಗಾಯಗೊಂಡಿದ್ದರು. ಅಂಗಾಲಿಗೆ ಹೊಡೆದಿದ್ದರು. ಮಂಡಿ ಮೂಳೆಯನ್ನು ಲಾಠಿಯಲ್ಲಿ ಉಜ್ಜಿದ್ದರು. ಕೈಗಳೆಲ್ಲ ಊದುಕೊಂಡಿದ್ದವು. ಅವರನ್ನು ಕರೆದುಕೊಂಡು ಬಂದು ಆಸ್ಪತ್ರೆಗೆ ದಾಖಲು ಮಾಡಿದ್ದೇವೆ. ಆಸ್ಪತ್ರೆಗೂ ಕೆಲವು ಗೂಂಡಾಗಳು ಆಗಮಿಸಿ ಸಿದ್ದರಾಜು ಅವರಿಗೆ ತೊಂದರೆ ನೀಡಲು ಪ್ರಯತ್ನಿಸಿದರು” ಎಂದು ಆರೋಪಿಸಿದರು.

ಇದನ್ನೂ ಓದಿರಿ: ಸಂತೋಷ್‌ ಸಾವು ಪ್ರಕರಣ: ಆರೋಪಿ ನಂ.1 ಈಶ್ವರಪ್ಪನವರಿಂದ ಅಧಿಕೃತ ರಾಜೀನಾಮೆ

“ಘಟನೆಯನ್ನು ಖಂಡಿಸಿ ಉತ್ತಂಬಳ್ಳಿ ಗ್ರಾಮಸ್ಥರು, ಬಿಎಸ್‌ಪಿ ಕಾರ್ಯಕರ್ತರು ಕೊಳ್ಳೇಗಾಲ ಡಿವೈಎಸ್‌ಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದೇವೆ. ಮಾಂಬಳ್ಳಿ ಠಾಣೆಗೆ ಬಂದಿದ್ದ ಯಳಂದೂರು ಸರ್ಕಲ್ ಇನ್‌ಸ್ಪೆಕ್ಟರ್‌ ಶಿವಮಾದಯ್ಯನವರು ಹಲ್ಲೆ ಮಾಡಿದ್ದಾರೆ ಎಂದು ತಿಳಿಸಿದ್ದೇವೆ. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಎಎಸ್‌ಪಿ ಸುಂದರ್‌ ರಾಜ್‌ ಅವರು ಜನರಲ್ಲಿ ಕ್ಷಮೆಯಾಚಿಸಿದ್ದು, ಒಂದು ವಾರ ಸಮಯ ಕೋರಿದ್ದಾರೆ” ಎಂದು ಮಾಹಿತಿ ನೀಡಿದರು.

“ಸಿದ್ದರಾಜು ಅವರಿಗೆ ಹೈ ಬಿಪಿಯಾಗಿದೆ. ಹಲ್ಲೆ ನಡೆದಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಸಾಬೀತಾಗಿದೆ. ಸಿದ್ದರಾಜು ಅವರು ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂದು ಕಮಲ್ ತಿಳಿಸಿದರು.

ಚಪ್ಪಲಿ ಧರಿಸಿಯೇ ಇರಲಿಲ್ಲ: ಸಿದ್ದರಾಜು

ಆಸ್ಪತ್ರೆಯ ಮುಂದೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿದ್ದರಾಜು, ‘ನೋಡಪ್ಪ ಹೇಗೆ ಹೋಗ್ತಾ ಇದ್ದಾನೆ? ನಾವು ಸಾಯುವವರೆಗೆ ಹೀಗೆ ಇರುವಂತಾಯಿತಲ್ಲ ಎಂದು ಶಾಸಕರನ್ನು ನೋಡಿ ಹೇಳಿದ್ದೆ. ಆದರೆ, ನಾನು ಚಪ್ಪಲಿ ತೋರಿಸಿದ್ದೇನೆ ಎಂದು ಆರೋಪಿಸಲಾಗಿದೆ. ನಾನು ಚಪ್ಪಲಿಯೇ ಧರಿಸಿರಲಿಲ್ಲ’ ಎಂದು ತಿಳಿಸಿದ್ದಾರೆ.

‘ಶಾಸಕರಿಗೆ ಚಪ್ಪಲಿ ತೋರಿಸಿದ್ದೇನೆ ಎಂದು ನನ್ನನ್ನು ಪೊಲೀಸರು ಅಗರ ಮಾಂಬಳ್ಳಿ ಠಾಣೆಗೆ ಕರೆದೊಯ್ದು ಸಿಕ್ಕಾಪಟ್ಟೆ ಹೊಡೆದಿದ್ದಾರೆ. ಹಗ್ಗದಲ್ಲಿ ನೇತಾಡಿಸಿ ಬಡಿದಿದ್ದಾರೆ. ಬೇಡ ಬೇಡ ಎಂದರೂ ಕೇಳಲಿಲ್ಲ. ನನಗೆ ಹೊಡೆದವರಿಗೆ ಶಿಕ್ಷೆಯಾಗಬೇಕು. ಮುಂದೆ ಯಾರಿಗೂ ಈ ರೀತಿ ಆಗಬಾರದು’ ಎಂದಿದ್ದಾರೆ.

ಘಟನೆಯ ಕುರಿತು ಶಾಸಕ ಎನ್‌.ಮಹೇಶ್‌ ಅವರ ಪ್ರತಿಕ್ರಿಯೆಗಾಗಿ ‘ನಾನುಗೌರಿ.ಕಾಂ’ ಸಂಪರ್ಕಿಸಿದೆ. ಆದರೆ ಅವರು ಕರೆ ಸ್ವೀಕರಿಸಲಿಲ್ಲ. ಪ್ರತಿಕ್ರಿಯೆ ನಿರೀಕ್ಷಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Dalitharu mathe mathe BJP sertharalla…? Yee ghatanegalannu gamanisi innadaru horge bandu bere paksha nodkolli… BJP dalithara dhamanakaagiye irodu gothilva

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....