Homeಕರ್ನಾಟಕಶಾಸಕ ಎನ್‌.ಮಹೇಶ್‌ ಸೂಚನೆ ಮೇರೆಗೆ ದಲಿತ ವ್ಯಕ್ತಿಯ ಮೇಲೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ; ಆರೋಪ

ಶಾಸಕ ಎನ್‌.ಮಹೇಶ್‌ ಸೂಚನೆ ಮೇರೆಗೆ ದಲಿತ ವ್ಯಕ್ತಿಯ ಮೇಲೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ; ಆರೋಪ

- Advertisement -
- Advertisement -

ಕೊಳ್ಳೇಗಾಲ ವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕ ಎನ್‌.ಮಹೇಶ್‌ ಅವರ ಸೂಚನೆಯ ಮೇರೆಗೆ ಪೊಲೀಸರು ದಲಿತ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆಂಬ ಆರೋಪ ಕೇಳಿಬಂದಿದೆ. ದೌರ್ಜನ್ಯವನ್ನು ಖಂಡಿಸಿ ಕೊಳ್ಳೇಗಾಲ ಡಿವೈಎಸ್‌ಪಿ ಕಚೇರಿ ಎದುರು ಉತ್ತಂಬಳ್ಳಿ ಗ್ರಾಮಸ್ಥರು, ಪ್ರಗತಿಪರ ಸಂಘಟನೆಯ ಒಕ್ಕೂಟದವರು ಹಾಗೂ ಬಿಎಸ್‌ಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಉತ್ತಂಬಳ್ಳಿಯಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಸಿದ್ದಪ್ಪಾಜಿ ಕೊಂಡೋತ್ಸವಕ್ಕೆ ಶಾಸಕರು ಆಗಮಿಸಿದ್ದಾಗ ವಾದ್ಯ ನುಡಿಸುವ ಸಿದ್ದರಾಜು ಉತ್ತಂಬಳ್ಳಿ ಅವರು ಶಾಸಕರನ್ನು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಶಾಸಕರ ಸೈದ್ಧಾಂತಿಕ ಬದಲಾವಣೆಯನ್ನು ಖಂಡಿಸಿ ಸಿದ್ದರಾಜು ಚಪ್ಪಲಿಯನ್ನು ತೋರಿಸಿದರು ಎಂದು ಕೆಲವರು ಹೇಳುತ್ತಿದ್ದರೆ, ಮತ್ತೆ ಕೆಲವರು ‘ಶಾಸಕರಿಂದ ನಮಗ್ಯಾವುದೇ ಅಭಿವೃದ್ಧಿ ಆಗಿಲ್ಲ. ಚಿಕ್ಕದೊಂದು ಲೋನ್‌ ಕೂಡ ಕೊಡಿಸಲಿಲ್ಲ. ಉತ್ತಂಬಳ್ಳಿಗೆ ಗ್ರಾಮವನ್ನು ಅಭಿವೃದ್ಧಿಪಡಿಸಿಲ್ಲ’ ಸಿದ್ದರಾಜು ಪ್ರಶ್ನಿಸಿದ್ದರಿಂದ ಶಾಸಕರು ಸಿಟ್ಟಾದರು ಎನ್ನಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಬಿಎಸ್‌ಪಿ ರಾಜ್ಯ ಕಾರ್ಯದರ್ಶಿ, ಜಿಪಂ ಮಾಜಿ ಸದಸ್ಯ ಕಮಲ್ ನಾಗರಾಜ್‌, “ನಮ್ಮ ಜೀವನದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಸಾಯುವವರೆಗೂ ವಾದ್ಯ ನುಡಿಸಬೇಕು ಎಂದು ಸಿದ್ದರಾಜು ಶಾಸಕರನ್ನು ಪ್ರಶ್ನಿಸಿದ್ದಾರೆ. ಅಷ್ಟಕ್ಕೆ ಸಿಟ್ಟಾದ ಎನ್.ಮಹೇಶ್ ಅವರು, ಈತ ಜಾಸ್ತಿ ಮಾತನಾಡುತ್ತಿದ್ದಾನೆ, ಸ್ವಲ್ಪ ರಿಪೇರಿ ಮಾಡ್ರಿ ಎಂದು ಪೊಲೀಸರಿಗೆ ಸೂಚಿಸಿದ್ದಾರೆ. ಚಪ್ಪಲಿ ತೋರಿಸಿದರೆಂದು ಆರೋಪಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಬಳಿಕ ಮಾಂಬಳ್ಳಿ ಠಾಣೆಗೆ ಕರೆದೊಯ್ದು ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ” ಎಂದು ದೂರಿದರು.

ಕೊಳ್ಳೇಗಾಲ ಡಿವೈಎಸ್‌ಪಿ ಕಚೇರಿ ಎದುರು ಉತ್ತಂಬಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

“ಶುಕ್ರವಾರ ಬೆಳಿಗ್ಗೆಯೇ ಠಾಣೆಗೆ ಕರೆದೊಯ್ದು, ಸಂಜೆಯವರೆಗೂ ಹೊಡೆದಿದ್ದಾರೆ. ಇಷ್ಟು ಹೊತ್ತಾದರೂ ಏಕೆ ಬಿಡುಗಡೆ ಮಾಡಿಲ್ಲ ಎಂದು ಹೋಗಿ ನೋಡಿದರೆ ಸಿದ್ದರಾಜು ನಿಂತುಕೊಳ್ಳಲೂ ಆಗದಷ್ಟು ಗಾಯಗೊಂಡಿದ್ದರು. ಅಂಗಾಲಿಗೆ ಹೊಡೆದಿದ್ದರು. ಮಂಡಿ ಮೂಳೆಯನ್ನು ಲಾಠಿಯಲ್ಲಿ ಉಜ್ಜಿದ್ದರು. ಕೈಗಳೆಲ್ಲ ಊದುಕೊಂಡಿದ್ದವು. ಅವರನ್ನು ಕರೆದುಕೊಂಡು ಬಂದು ಆಸ್ಪತ್ರೆಗೆ ದಾಖಲು ಮಾಡಿದ್ದೇವೆ. ಆಸ್ಪತ್ರೆಗೂ ಕೆಲವು ಗೂಂಡಾಗಳು ಆಗಮಿಸಿ ಸಿದ್ದರಾಜು ಅವರಿಗೆ ತೊಂದರೆ ನೀಡಲು ಪ್ರಯತ್ನಿಸಿದರು” ಎಂದು ಆರೋಪಿಸಿದರು.

ಇದನ್ನೂ ಓದಿರಿ: ಸಂತೋಷ್‌ ಸಾವು ಪ್ರಕರಣ: ಆರೋಪಿ ನಂ.1 ಈಶ್ವರಪ್ಪನವರಿಂದ ಅಧಿಕೃತ ರಾಜೀನಾಮೆ

“ಘಟನೆಯನ್ನು ಖಂಡಿಸಿ ಉತ್ತಂಬಳ್ಳಿ ಗ್ರಾಮಸ್ಥರು, ಬಿಎಸ್‌ಪಿ ಕಾರ್ಯಕರ್ತರು ಕೊಳ್ಳೇಗಾಲ ಡಿವೈಎಸ್‌ಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದೇವೆ. ಮಾಂಬಳ್ಳಿ ಠಾಣೆಗೆ ಬಂದಿದ್ದ ಯಳಂದೂರು ಸರ್ಕಲ್ ಇನ್‌ಸ್ಪೆಕ್ಟರ್‌ ಶಿವಮಾದಯ್ಯನವರು ಹಲ್ಲೆ ಮಾಡಿದ್ದಾರೆ ಎಂದು ತಿಳಿಸಿದ್ದೇವೆ. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಎಎಸ್‌ಪಿ ಸುಂದರ್‌ ರಾಜ್‌ ಅವರು ಜನರಲ್ಲಿ ಕ್ಷಮೆಯಾಚಿಸಿದ್ದು, ಒಂದು ವಾರ ಸಮಯ ಕೋರಿದ್ದಾರೆ” ಎಂದು ಮಾಹಿತಿ ನೀಡಿದರು.

“ಸಿದ್ದರಾಜು ಅವರಿಗೆ ಹೈ ಬಿಪಿಯಾಗಿದೆ. ಹಲ್ಲೆ ನಡೆದಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಸಾಬೀತಾಗಿದೆ. ಸಿದ್ದರಾಜು ಅವರು ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂದು ಕಮಲ್ ತಿಳಿಸಿದರು.

ಚಪ್ಪಲಿ ಧರಿಸಿಯೇ ಇರಲಿಲ್ಲ: ಸಿದ್ದರಾಜು

ಆಸ್ಪತ್ರೆಯ ಮುಂದೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿದ್ದರಾಜು, ‘ನೋಡಪ್ಪ ಹೇಗೆ ಹೋಗ್ತಾ ಇದ್ದಾನೆ? ನಾವು ಸಾಯುವವರೆಗೆ ಹೀಗೆ ಇರುವಂತಾಯಿತಲ್ಲ ಎಂದು ಶಾಸಕರನ್ನು ನೋಡಿ ಹೇಳಿದ್ದೆ. ಆದರೆ, ನಾನು ಚಪ್ಪಲಿ ತೋರಿಸಿದ್ದೇನೆ ಎಂದು ಆರೋಪಿಸಲಾಗಿದೆ. ನಾನು ಚಪ್ಪಲಿಯೇ ಧರಿಸಿರಲಿಲ್ಲ’ ಎಂದು ತಿಳಿಸಿದ್ದಾರೆ.

‘ಶಾಸಕರಿಗೆ ಚಪ್ಪಲಿ ತೋರಿಸಿದ್ದೇನೆ ಎಂದು ನನ್ನನ್ನು ಪೊಲೀಸರು ಅಗರ ಮಾಂಬಳ್ಳಿ ಠಾಣೆಗೆ ಕರೆದೊಯ್ದು ಸಿಕ್ಕಾಪಟ್ಟೆ ಹೊಡೆದಿದ್ದಾರೆ. ಹಗ್ಗದಲ್ಲಿ ನೇತಾಡಿಸಿ ಬಡಿದಿದ್ದಾರೆ. ಬೇಡ ಬೇಡ ಎಂದರೂ ಕೇಳಲಿಲ್ಲ. ನನಗೆ ಹೊಡೆದವರಿಗೆ ಶಿಕ್ಷೆಯಾಗಬೇಕು. ಮುಂದೆ ಯಾರಿಗೂ ಈ ರೀತಿ ಆಗಬಾರದು’ ಎಂದಿದ್ದಾರೆ.

ಘಟನೆಯ ಕುರಿತು ಶಾಸಕ ಎನ್‌.ಮಹೇಶ್‌ ಅವರ ಪ್ರತಿಕ್ರಿಯೆಗಾಗಿ ‘ನಾನುಗೌರಿ.ಕಾಂ’ ಸಂಪರ್ಕಿಸಿದೆ. ಆದರೆ ಅವರು ಕರೆ ಸ್ವೀಕರಿಸಲಿಲ್ಲ. ಪ್ರತಿಕ್ರಿಯೆ ನಿರೀಕ್ಷಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Dalitharu mathe mathe BJP sertharalla…? Yee ghatanegalannu gamanisi innadaru horge bandu bere paksha nodkolli… BJP dalithara dhamanakaagiye irodu gothilva

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...