Homeಕರ್ನಾಟಕಶಾಸಕ ಎನ್‌.ಮಹೇಶ್‌ ಸೂಚನೆ ಮೇರೆಗೆ ದಲಿತ ವ್ಯಕ್ತಿಯ ಮೇಲೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ; ಆರೋಪ

ಶಾಸಕ ಎನ್‌.ಮಹೇಶ್‌ ಸೂಚನೆ ಮೇರೆಗೆ ದಲಿತ ವ್ಯಕ್ತಿಯ ಮೇಲೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ; ಆರೋಪ

- Advertisement -
- Advertisement -

ಕೊಳ್ಳೇಗಾಲ ವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕ ಎನ್‌.ಮಹೇಶ್‌ ಅವರ ಸೂಚನೆಯ ಮೇರೆಗೆ ಪೊಲೀಸರು ದಲಿತ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆಂಬ ಆರೋಪ ಕೇಳಿಬಂದಿದೆ. ದೌರ್ಜನ್ಯವನ್ನು ಖಂಡಿಸಿ ಕೊಳ್ಳೇಗಾಲ ಡಿವೈಎಸ್‌ಪಿ ಕಚೇರಿ ಎದುರು ಉತ್ತಂಬಳ್ಳಿ ಗ್ರಾಮಸ್ಥರು, ಪ್ರಗತಿಪರ ಸಂಘಟನೆಯ ಒಕ್ಕೂಟದವರು ಹಾಗೂ ಬಿಎಸ್‌ಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಉತ್ತಂಬಳ್ಳಿಯಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಸಿದ್ದಪ್ಪಾಜಿ ಕೊಂಡೋತ್ಸವಕ್ಕೆ ಶಾಸಕರು ಆಗಮಿಸಿದ್ದಾಗ ವಾದ್ಯ ನುಡಿಸುವ ಸಿದ್ದರಾಜು ಉತ್ತಂಬಳ್ಳಿ ಅವರು ಶಾಸಕರನ್ನು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಶಾಸಕರ ಸೈದ್ಧಾಂತಿಕ ಬದಲಾವಣೆಯನ್ನು ಖಂಡಿಸಿ ಸಿದ್ದರಾಜು ಚಪ್ಪಲಿಯನ್ನು ತೋರಿಸಿದರು ಎಂದು ಕೆಲವರು ಹೇಳುತ್ತಿದ್ದರೆ, ಮತ್ತೆ ಕೆಲವರು ‘ಶಾಸಕರಿಂದ ನಮಗ್ಯಾವುದೇ ಅಭಿವೃದ್ಧಿ ಆಗಿಲ್ಲ. ಚಿಕ್ಕದೊಂದು ಲೋನ್‌ ಕೂಡ ಕೊಡಿಸಲಿಲ್ಲ. ಉತ್ತಂಬಳ್ಳಿಗೆ ಗ್ರಾಮವನ್ನು ಅಭಿವೃದ್ಧಿಪಡಿಸಿಲ್ಲ’ ಸಿದ್ದರಾಜು ಪ್ರಶ್ನಿಸಿದ್ದರಿಂದ ಶಾಸಕರು ಸಿಟ್ಟಾದರು ಎನ್ನಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಬಿಎಸ್‌ಪಿ ರಾಜ್ಯ ಕಾರ್ಯದರ್ಶಿ, ಜಿಪಂ ಮಾಜಿ ಸದಸ್ಯ ಕಮಲ್ ನಾಗರಾಜ್‌, “ನಮ್ಮ ಜೀವನದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಸಾಯುವವರೆಗೂ ವಾದ್ಯ ನುಡಿಸಬೇಕು ಎಂದು ಸಿದ್ದರಾಜು ಶಾಸಕರನ್ನು ಪ್ರಶ್ನಿಸಿದ್ದಾರೆ. ಅಷ್ಟಕ್ಕೆ ಸಿಟ್ಟಾದ ಎನ್.ಮಹೇಶ್ ಅವರು, ಈತ ಜಾಸ್ತಿ ಮಾತನಾಡುತ್ತಿದ್ದಾನೆ, ಸ್ವಲ್ಪ ರಿಪೇರಿ ಮಾಡ್ರಿ ಎಂದು ಪೊಲೀಸರಿಗೆ ಸೂಚಿಸಿದ್ದಾರೆ. ಚಪ್ಪಲಿ ತೋರಿಸಿದರೆಂದು ಆರೋಪಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಬಳಿಕ ಮಾಂಬಳ್ಳಿ ಠಾಣೆಗೆ ಕರೆದೊಯ್ದು ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ” ಎಂದು ದೂರಿದರು.

ಕೊಳ್ಳೇಗಾಲ ಡಿವೈಎಸ್‌ಪಿ ಕಚೇರಿ ಎದುರು ಉತ್ತಂಬಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

“ಶುಕ್ರವಾರ ಬೆಳಿಗ್ಗೆಯೇ ಠಾಣೆಗೆ ಕರೆದೊಯ್ದು, ಸಂಜೆಯವರೆಗೂ ಹೊಡೆದಿದ್ದಾರೆ. ಇಷ್ಟು ಹೊತ್ತಾದರೂ ಏಕೆ ಬಿಡುಗಡೆ ಮಾಡಿಲ್ಲ ಎಂದು ಹೋಗಿ ನೋಡಿದರೆ ಸಿದ್ದರಾಜು ನಿಂತುಕೊಳ್ಳಲೂ ಆಗದಷ್ಟು ಗಾಯಗೊಂಡಿದ್ದರು. ಅಂಗಾಲಿಗೆ ಹೊಡೆದಿದ್ದರು. ಮಂಡಿ ಮೂಳೆಯನ್ನು ಲಾಠಿಯಲ್ಲಿ ಉಜ್ಜಿದ್ದರು. ಕೈಗಳೆಲ್ಲ ಊದುಕೊಂಡಿದ್ದವು. ಅವರನ್ನು ಕರೆದುಕೊಂಡು ಬಂದು ಆಸ್ಪತ್ರೆಗೆ ದಾಖಲು ಮಾಡಿದ್ದೇವೆ. ಆಸ್ಪತ್ರೆಗೂ ಕೆಲವು ಗೂಂಡಾಗಳು ಆಗಮಿಸಿ ಸಿದ್ದರಾಜು ಅವರಿಗೆ ತೊಂದರೆ ನೀಡಲು ಪ್ರಯತ್ನಿಸಿದರು” ಎಂದು ಆರೋಪಿಸಿದರು.

ಇದನ್ನೂ ಓದಿರಿ: ಸಂತೋಷ್‌ ಸಾವು ಪ್ರಕರಣ: ಆರೋಪಿ ನಂ.1 ಈಶ್ವರಪ್ಪನವರಿಂದ ಅಧಿಕೃತ ರಾಜೀನಾಮೆ

“ಘಟನೆಯನ್ನು ಖಂಡಿಸಿ ಉತ್ತಂಬಳ್ಳಿ ಗ್ರಾಮಸ್ಥರು, ಬಿಎಸ್‌ಪಿ ಕಾರ್ಯಕರ್ತರು ಕೊಳ್ಳೇಗಾಲ ಡಿವೈಎಸ್‌ಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದೇವೆ. ಮಾಂಬಳ್ಳಿ ಠಾಣೆಗೆ ಬಂದಿದ್ದ ಯಳಂದೂರು ಸರ್ಕಲ್ ಇನ್‌ಸ್ಪೆಕ್ಟರ್‌ ಶಿವಮಾದಯ್ಯನವರು ಹಲ್ಲೆ ಮಾಡಿದ್ದಾರೆ ಎಂದು ತಿಳಿಸಿದ್ದೇವೆ. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಎಎಸ್‌ಪಿ ಸುಂದರ್‌ ರಾಜ್‌ ಅವರು ಜನರಲ್ಲಿ ಕ್ಷಮೆಯಾಚಿಸಿದ್ದು, ಒಂದು ವಾರ ಸಮಯ ಕೋರಿದ್ದಾರೆ” ಎಂದು ಮಾಹಿತಿ ನೀಡಿದರು.

“ಸಿದ್ದರಾಜು ಅವರಿಗೆ ಹೈ ಬಿಪಿಯಾಗಿದೆ. ಹಲ್ಲೆ ನಡೆದಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಸಾಬೀತಾಗಿದೆ. ಸಿದ್ದರಾಜು ಅವರು ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂದು ಕಮಲ್ ತಿಳಿಸಿದರು.

ಚಪ್ಪಲಿ ಧರಿಸಿಯೇ ಇರಲಿಲ್ಲ: ಸಿದ್ದರಾಜು

ಆಸ್ಪತ್ರೆಯ ಮುಂದೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿದ್ದರಾಜು, ‘ನೋಡಪ್ಪ ಹೇಗೆ ಹೋಗ್ತಾ ಇದ್ದಾನೆ? ನಾವು ಸಾಯುವವರೆಗೆ ಹೀಗೆ ಇರುವಂತಾಯಿತಲ್ಲ ಎಂದು ಶಾಸಕರನ್ನು ನೋಡಿ ಹೇಳಿದ್ದೆ. ಆದರೆ, ನಾನು ಚಪ್ಪಲಿ ತೋರಿಸಿದ್ದೇನೆ ಎಂದು ಆರೋಪಿಸಲಾಗಿದೆ. ನಾನು ಚಪ್ಪಲಿಯೇ ಧರಿಸಿರಲಿಲ್ಲ’ ಎಂದು ತಿಳಿಸಿದ್ದಾರೆ.

‘ಶಾಸಕರಿಗೆ ಚಪ್ಪಲಿ ತೋರಿಸಿದ್ದೇನೆ ಎಂದು ನನ್ನನ್ನು ಪೊಲೀಸರು ಅಗರ ಮಾಂಬಳ್ಳಿ ಠಾಣೆಗೆ ಕರೆದೊಯ್ದು ಸಿಕ್ಕಾಪಟ್ಟೆ ಹೊಡೆದಿದ್ದಾರೆ. ಹಗ್ಗದಲ್ಲಿ ನೇತಾಡಿಸಿ ಬಡಿದಿದ್ದಾರೆ. ಬೇಡ ಬೇಡ ಎಂದರೂ ಕೇಳಲಿಲ್ಲ. ನನಗೆ ಹೊಡೆದವರಿಗೆ ಶಿಕ್ಷೆಯಾಗಬೇಕು. ಮುಂದೆ ಯಾರಿಗೂ ಈ ರೀತಿ ಆಗಬಾರದು’ ಎಂದಿದ್ದಾರೆ.

ಘಟನೆಯ ಕುರಿತು ಶಾಸಕ ಎನ್‌.ಮಹೇಶ್‌ ಅವರ ಪ್ರತಿಕ್ರಿಯೆಗಾಗಿ ‘ನಾನುಗೌರಿ.ಕಾಂ’ ಸಂಪರ್ಕಿಸಿದೆ. ಆದರೆ ಅವರು ಕರೆ ಸ್ವೀಕರಿಸಲಿಲ್ಲ. ಪ್ರತಿಕ್ರಿಯೆ ನಿರೀಕ್ಷಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Dalitharu mathe mathe BJP sertharalla…? Yee ghatanegalannu gamanisi innadaru horge bandu bere paksha nodkolli… BJP dalithara dhamanakaagiye irodu gothilva

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...