Homeಕರ್ನಾಟಕಶಾಸಕ ಎನ್‌.ಮಹೇಶ್‌ ಸೂಚನೆ ಮೇರೆಗೆ ದಲಿತ ವ್ಯಕ್ತಿಯ ಮೇಲೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ; ಆರೋಪ

ಶಾಸಕ ಎನ್‌.ಮಹೇಶ್‌ ಸೂಚನೆ ಮೇರೆಗೆ ದಲಿತ ವ್ಯಕ್ತಿಯ ಮೇಲೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ; ಆರೋಪ

- Advertisement -
- Advertisement -

ಕೊಳ್ಳೇಗಾಲ ವಿಧಾನಸಭೆ ಕ್ಷೇತ್ರದ ಬಿಜೆಪಿ ಶಾಸಕ ಎನ್‌.ಮಹೇಶ್‌ ಅವರ ಸೂಚನೆಯ ಮೇರೆಗೆ ಪೊಲೀಸರು ದಲಿತ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆಂಬ ಆರೋಪ ಕೇಳಿಬಂದಿದೆ. ದೌರ್ಜನ್ಯವನ್ನು ಖಂಡಿಸಿ ಕೊಳ್ಳೇಗಾಲ ಡಿವೈಎಸ್‌ಪಿ ಕಚೇರಿ ಎದುರು ಉತ್ತಂಬಳ್ಳಿ ಗ್ರಾಮಸ್ಥರು, ಪ್ರಗತಿಪರ ಸಂಘಟನೆಯ ಒಕ್ಕೂಟದವರು ಹಾಗೂ ಬಿಎಸ್‌ಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಉತ್ತಂಬಳ್ಳಿಯಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಸಿದ್ದಪ್ಪಾಜಿ ಕೊಂಡೋತ್ಸವಕ್ಕೆ ಶಾಸಕರು ಆಗಮಿಸಿದ್ದಾಗ ವಾದ್ಯ ನುಡಿಸುವ ಸಿದ್ದರಾಜು ಉತ್ತಂಬಳ್ಳಿ ಅವರು ಶಾಸಕರನ್ನು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಶಾಸಕರ ಸೈದ್ಧಾಂತಿಕ ಬದಲಾವಣೆಯನ್ನು ಖಂಡಿಸಿ ಸಿದ್ದರಾಜು ಚಪ್ಪಲಿಯನ್ನು ತೋರಿಸಿದರು ಎಂದು ಕೆಲವರು ಹೇಳುತ್ತಿದ್ದರೆ, ಮತ್ತೆ ಕೆಲವರು ‘ಶಾಸಕರಿಂದ ನಮಗ್ಯಾವುದೇ ಅಭಿವೃದ್ಧಿ ಆಗಿಲ್ಲ. ಚಿಕ್ಕದೊಂದು ಲೋನ್‌ ಕೂಡ ಕೊಡಿಸಲಿಲ್ಲ. ಉತ್ತಂಬಳ್ಳಿಗೆ ಗ್ರಾಮವನ್ನು ಅಭಿವೃದ್ಧಿಪಡಿಸಿಲ್ಲ’ ಸಿದ್ದರಾಜು ಪ್ರಶ್ನಿಸಿದ್ದರಿಂದ ಶಾಸಕರು ಸಿಟ್ಟಾದರು ಎನ್ನಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಬಿಎಸ್‌ಪಿ ರಾಜ್ಯ ಕಾರ್ಯದರ್ಶಿ, ಜಿಪಂ ಮಾಜಿ ಸದಸ್ಯ ಕಮಲ್ ನಾಗರಾಜ್‌, “ನಮ್ಮ ಜೀವನದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಸಾಯುವವರೆಗೂ ವಾದ್ಯ ನುಡಿಸಬೇಕು ಎಂದು ಸಿದ್ದರಾಜು ಶಾಸಕರನ್ನು ಪ್ರಶ್ನಿಸಿದ್ದಾರೆ. ಅಷ್ಟಕ್ಕೆ ಸಿಟ್ಟಾದ ಎನ್.ಮಹೇಶ್ ಅವರು, ಈತ ಜಾಸ್ತಿ ಮಾತನಾಡುತ್ತಿದ್ದಾನೆ, ಸ್ವಲ್ಪ ರಿಪೇರಿ ಮಾಡ್ರಿ ಎಂದು ಪೊಲೀಸರಿಗೆ ಸೂಚಿಸಿದ್ದಾರೆ. ಚಪ್ಪಲಿ ತೋರಿಸಿದರೆಂದು ಆರೋಪಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಬಳಿಕ ಮಾಂಬಳ್ಳಿ ಠಾಣೆಗೆ ಕರೆದೊಯ್ದು ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ” ಎಂದು ದೂರಿದರು.

ಕೊಳ್ಳೇಗಾಲ ಡಿವೈಎಸ್‌ಪಿ ಕಚೇರಿ ಎದುರು ಉತ್ತಂಬಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

“ಶುಕ್ರವಾರ ಬೆಳಿಗ್ಗೆಯೇ ಠಾಣೆಗೆ ಕರೆದೊಯ್ದು, ಸಂಜೆಯವರೆಗೂ ಹೊಡೆದಿದ್ದಾರೆ. ಇಷ್ಟು ಹೊತ್ತಾದರೂ ಏಕೆ ಬಿಡುಗಡೆ ಮಾಡಿಲ್ಲ ಎಂದು ಹೋಗಿ ನೋಡಿದರೆ ಸಿದ್ದರಾಜು ನಿಂತುಕೊಳ್ಳಲೂ ಆಗದಷ್ಟು ಗಾಯಗೊಂಡಿದ್ದರು. ಅಂಗಾಲಿಗೆ ಹೊಡೆದಿದ್ದರು. ಮಂಡಿ ಮೂಳೆಯನ್ನು ಲಾಠಿಯಲ್ಲಿ ಉಜ್ಜಿದ್ದರು. ಕೈಗಳೆಲ್ಲ ಊದುಕೊಂಡಿದ್ದವು. ಅವರನ್ನು ಕರೆದುಕೊಂಡು ಬಂದು ಆಸ್ಪತ್ರೆಗೆ ದಾಖಲು ಮಾಡಿದ್ದೇವೆ. ಆಸ್ಪತ್ರೆಗೂ ಕೆಲವು ಗೂಂಡಾಗಳು ಆಗಮಿಸಿ ಸಿದ್ದರಾಜು ಅವರಿಗೆ ತೊಂದರೆ ನೀಡಲು ಪ್ರಯತ್ನಿಸಿದರು” ಎಂದು ಆರೋಪಿಸಿದರು.

ಇದನ್ನೂ ಓದಿರಿ: ಸಂತೋಷ್‌ ಸಾವು ಪ್ರಕರಣ: ಆರೋಪಿ ನಂ.1 ಈಶ್ವರಪ್ಪನವರಿಂದ ಅಧಿಕೃತ ರಾಜೀನಾಮೆ

“ಘಟನೆಯನ್ನು ಖಂಡಿಸಿ ಉತ್ತಂಬಳ್ಳಿ ಗ್ರಾಮಸ್ಥರು, ಬಿಎಸ್‌ಪಿ ಕಾರ್ಯಕರ್ತರು ಕೊಳ್ಳೇಗಾಲ ಡಿವೈಎಸ್‌ಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದೇವೆ. ಮಾಂಬಳ್ಳಿ ಠಾಣೆಗೆ ಬಂದಿದ್ದ ಯಳಂದೂರು ಸರ್ಕಲ್ ಇನ್‌ಸ್ಪೆಕ್ಟರ್‌ ಶಿವಮಾದಯ್ಯನವರು ಹಲ್ಲೆ ಮಾಡಿದ್ದಾರೆ ಎಂದು ತಿಳಿಸಿದ್ದೇವೆ. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಎಎಸ್‌ಪಿ ಸುಂದರ್‌ ರಾಜ್‌ ಅವರು ಜನರಲ್ಲಿ ಕ್ಷಮೆಯಾಚಿಸಿದ್ದು, ಒಂದು ವಾರ ಸಮಯ ಕೋರಿದ್ದಾರೆ” ಎಂದು ಮಾಹಿತಿ ನೀಡಿದರು.

“ಸಿದ್ದರಾಜು ಅವರಿಗೆ ಹೈ ಬಿಪಿಯಾಗಿದೆ. ಹಲ್ಲೆ ನಡೆದಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಸಾಬೀತಾಗಿದೆ. ಸಿದ್ದರಾಜು ಅವರು ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂದು ಕಮಲ್ ತಿಳಿಸಿದರು.

ಚಪ್ಪಲಿ ಧರಿಸಿಯೇ ಇರಲಿಲ್ಲ: ಸಿದ್ದರಾಜು

ಆಸ್ಪತ್ರೆಯ ಮುಂದೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿದ್ದರಾಜು, ‘ನೋಡಪ್ಪ ಹೇಗೆ ಹೋಗ್ತಾ ಇದ್ದಾನೆ? ನಾವು ಸಾಯುವವರೆಗೆ ಹೀಗೆ ಇರುವಂತಾಯಿತಲ್ಲ ಎಂದು ಶಾಸಕರನ್ನು ನೋಡಿ ಹೇಳಿದ್ದೆ. ಆದರೆ, ನಾನು ಚಪ್ಪಲಿ ತೋರಿಸಿದ್ದೇನೆ ಎಂದು ಆರೋಪಿಸಲಾಗಿದೆ. ನಾನು ಚಪ್ಪಲಿಯೇ ಧರಿಸಿರಲಿಲ್ಲ’ ಎಂದು ತಿಳಿಸಿದ್ದಾರೆ.

‘ಶಾಸಕರಿಗೆ ಚಪ್ಪಲಿ ತೋರಿಸಿದ್ದೇನೆ ಎಂದು ನನ್ನನ್ನು ಪೊಲೀಸರು ಅಗರ ಮಾಂಬಳ್ಳಿ ಠಾಣೆಗೆ ಕರೆದೊಯ್ದು ಸಿಕ್ಕಾಪಟ್ಟೆ ಹೊಡೆದಿದ್ದಾರೆ. ಹಗ್ಗದಲ್ಲಿ ನೇತಾಡಿಸಿ ಬಡಿದಿದ್ದಾರೆ. ಬೇಡ ಬೇಡ ಎಂದರೂ ಕೇಳಲಿಲ್ಲ. ನನಗೆ ಹೊಡೆದವರಿಗೆ ಶಿಕ್ಷೆಯಾಗಬೇಕು. ಮುಂದೆ ಯಾರಿಗೂ ಈ ರೀತಿ ಆಗಬಾರದು’ ಎಂದಿದ್ದಾರೆ.

ಘಟನೆಯ ಕುರಿತು ಶಾಸಕ ಎನ್‌.ಮಹೇಶ್‌ ಅವರ ಪ್ರತಿಕ್ರಿಯೆಗಾಗಿ ‘ನಾನುಗೌರಿ.ಕಾಂ’ ಸಂಪರ್ಕಿಸಿದೆ. ಆದರೆ ಅವರು ಕರೆ ಸ್ವೀಕರಿಸಲಿಲ್ಲ. ಪ್ರತಿಕ್ರಿಯೆ ನಿರೀಕ್ಷಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Dalitharu mathe mathe BJP sertharalla…? Yee ghatanegalannu gamanisi innadaru horge bandu bere paksha nodkolli… BJP dalithara dhamanakaagiye irodu gothilva

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...