Homeಮುಖಪುಟಏಪ್ರಿಲ್‌ 5ರಂದು ದೀಪ ಹಚ್ಚದ ದಲಿತ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ : ಹರಿಯಾಣದಲ್ಲೊಂದು ಅಮಾನವೀಯ...

ಏಪ್ರಿಲ್‌ 5ರಂದು ದೀಪ ಹಚ್ಚದ ದಲಿತ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ : ಹರಿಯಾಣದಲ್ಲೊಂದು ಅಮಾನವೀಯ ಘಟನೆ

- Advertisement -
- Advertisement -

ಏಪ್ರಿಲ್‌ 5ರಂದು 9 ಗಂಟೆಗೆ ಮನೆಯ ಲೈಟ್‌ ಆಫ್‌ ಮಾಡಿ ದೀಪ ಹಚ್ಚಬೇಕೆಂಬ ಪ್ರಧಾನಿ ನರೇಂದ್ರ ಮೋದಿಯವರ ಕರೆಯನ್ನು ಪಾಲಿಸದ ದಲಿತ ಕುಟುಂಬದ ಮೇಲೆ ಗುಜ್ಜರ್‌ ಸಮುದಾಯದ 35 ಜನರು ಮಾರಣಾಂತಿಕ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಹರಿಯಾಣ ರಾಜ್ಯದ ಪಲ್‌ವಾಲ ಜಿಲ್ಲೆಯ ಪಿಂಗೋರ್‌ ಗ್ರಾಮದಲ್ಲಿ ಜರುಗಿದೆ.

ಪ್ರಧಾನಿ ನರೇಂದ್ರ ಮೋದಿಯವರ ಕರೆಗೆ ಪ್ರತಿಕ್ರಿಯೆಯಾಗಿ ದೀಪಗಳನ್ನು ಸ್ವಿಚ್ ಆಫ್ ಮಾಡದಿರುವ ಬಗ್ಗೆ ವಾಗ್ವಾದ ನಡೆದ ಹಿನ್ನೆಲೆಯಲ್ಲಿ ಮೇಲ್ಜಾತಿಯ ಪುರುಷರು ನಡೆಸಿದ ದಾಳಿಗೆ ಇಬ್ಬರು ಮಹಿಳೆಯರು ಸೇರಿದಂತೆ ಕುಟುಂಬದ ಎಂಟು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಈ ಕುರಿತು ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಎಫ್‌ಐಆರ್‌ನಲ್ಲಿ 31 ಜನರನ್ನು ಹೆಸರಿಸಲಾಗಿದೆ. ಆದರೆ ಈವರೆಗೆ ಯಾರನ್ನೂ ಬಂಧಿಸಿಲ್ಲ.

ಗುಜ್ಜರ್ ಸಮುದಾಯಕ್ಕೆ ಸೇರಿದ ಗ್ರಾಮದ ಸುಮಾರು 35 ಜನರು ರಾತ್ರಿ 9.30 ಕ್ಕೆ ತಮ್ಮ ಮನೆಯ ಮೆಲೆ ದಾಳಿ ಮಾಡಿದರು. ಕೋಲುಗಳು, ಕಬ್ಬಿಣದ ಸರಳುಗಳು ಮತ್ತು ಇಟ್ಟಿಗೆಗಳಿಂದ ಹಲ್ಲೆ ನಡೆಸಿದರು. ಜಾತಿಯ ಬೈಗುಳಗಳನ್ನು ಬಳಸಿದರು ಮತ್ತು ಇಡೀ ರಾತ್ರಿ ತಮ್ಮ ಮನೆಯ ದೀಪಗಳನ್ನು ಸ್ವಿಚ್ ಆಫ್ ಮಾಡಲು ಹೇಳಿದರು. ಈ ವಿಷಯವೇನಾದರೂ ಪೊಲೀಸರಿಗೆ ವರದಿಯಾದರೆ ಭೀಕರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದರು ಎಂದು ದೂರುದಾರರಾದ ಧನಪಾಲ್‌ ಆರೋಪಿಸಿದ್ದಾರೆ.

ಪ್ರಧಾನ ಮಂತ್ರಿಯ ಕರೆಗೆ ಪ್ರತಿಕ್ರಿಯೆಯಾಗಿ ಎರಡು ಕುಟುಂಬಗಳ ಮಕ್ಕಳು ಮನೆಯ ಲೈಟ್‌ಗಳನ್ನು ಸ್ವಿಚ್ ಆಫ್ ಮಾಡುವ ಬಗ್ಗೆ ಕಿಡಿಕಾರಿದ್ದರಿಂದ ವಿಷಯ ಉಲ್ಬಣಗೊಂಡಿದೆ. ಎರಡೂ ಕಡೆಯವರು ಒಬ್ಬರಿಗೊಬ್ಬರು ಕಲ್ಲು ಎಸೆದಿದ್ದು, ವಾಹನಕ್ಕೂ ಹಾನಿಯಾಗಿದೆ ಎಂದು ಸದರ್ ಸ್ಟೇಷನ್ ಹೌಸ್ ಅಧಿಕಾರಿ ಜಿತೇಂದರ್ ಕುಮಾರ್ ಹೇಳಿದ್ದಾರೆ.

ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. “ಬುಧವಾರ ಸಂಜೆ 5 ಗಂಟೆಯೊಳಗೆ ಆರೋಪಿಗಳನ್ನು ಪೊಲೀಸರ ಮುಂದೆ ಹಾಜರುಪಡಿಸುವಂತೆ ಗ್ರಾಮದ ಸರಪಂಚ್‌ ಮತ್ತು ಇತರ ಪ್ರಮುಖ ಗ್ರಾಮಸ್ಥರಿಗೆ ನಿರ್ದೇಶಿಸಲಾಗಿದೆ. ಇಂದು ಈ ವಿಷಯವನ್ನು ಪೊಲೀಸ್ ಮಟ್ಟದ ಉಪ ಅಧೀಕ್ಷಕರು ತನಿಖೆ ನಡೆಸುತ್ತಾರೆ ”ಎಂದು ಜಿತೇಂದರ್ ಕುಮಾರ್ ಹೇಳಿದರು.

ಭಾರತೀಯ ದಂಡ ಸಂಹಿತೆಯಡಿ ನೋವುಂಟು ಮಾಡುವು ಮತ್ತು ಕ್ರಿಮಿನಲ್ ಬೆದರಿಕೆಗೆ ಕಾರಣವಾದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.


ಇದನ್ನೂ ಓದಿ: ಪ್ರೀತಿಯ ಜರೀನ್ ತಾಜ್, : ದೇವನೂರು ಮಹದೇವರವರು ಬರೆದ ಕ್ಷಮಾಪಣಾ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಒಂದು ವಿಶ್ಲೇಷಣೆ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...