Homeಅಂತರಾಷ್ಟ್ರೀಯಲೆಬನಾನ್ ಮೇಲೆ ಇಸ್ರೇಲ್ ವಾಯುದಾಳಿ: 1 ಸಾವು, 11 ಮಂದಿಗೆ ಗಾಯ

ಲೆಬನಾನ್ ಮೇಲೆ ಇಸ್ರೇಲ್ ವಾಯುದಾಳಿ: 1 ಸಾವು, 11 ಮಂದಿಗೆ ಗಾಯ

- Advertisement -
- Advertisement -

ನಬಾಟಿಯೆಹ್, ಲೆಬನಾನ್: ಶುಕ್ರವಾರ ಇಸ್ರೇಲ್‌ನ ವಾಯುಪಡೆಯು ಲೆಬನಾನ್‌ನ ದಕ್ಷಿಣ ಭಾಗದಲ್ಲಿರುವ ಪರ್ವತಗಳ ಮೇಲೆ ಭಾರಿ ವೈಮಾನಿಕ ದಾಳಿಗಳನ್ನು ನಡೆಸಿದೆ.

ಈ ದಾಳಿಗಳು ಹಿಜ್ಬುಲ್ಲಾ ಗುಂಪಿನ ಭೂಗತ ನೆಲೆಗಳನ್ನು ಗುರಿಯಾಗಿಸಿಕೊಂಡಿದ್ದವು ಎಂದು ಇಸ್ರೇಲಿ ಸೇನೆ ಹೇಳಿದೆ.

ಈ ದಾಳಿಯ ನಂತರ, ನಬಾಟಿಯೆಹ್ ನಗರದ ಸಮೀಪದ ಅಪಾರ್ಟ್‌ಮೆಂಟ್ ಕಟ್ಟಡವೊಂದಕ್ಕೆ ಹಾನಿಯಾಗಿದೆ. ಈ ದಾಳಿಯಲ್ಲಿ ಒಬ್ಬ ಮಹಿಳೆ ಸಾವನ್ನಪ್ಪಿದ್ದು, 11 ಜನರು ಗಾಯಗೊಂಡಿದ್ದಾರೆ. ಕಟ್ಟಡದ ಮೇಲಿನ ಮಹಡಿ ಸಂಪೂರ್ಣವಾಗಿ ನಾಶವಾಗಿದೆ ಎಂದು ಲೆಬನಾನ್‌ನ ಸರ್ಕಾರಿ ಸುದ್ದಿ ಸಂಸ್ಥೆ ತಿಳಿಸಿದೆ.

ಸಾವನ್ನಪ್ಪಿದ ಮಹಿಳೆಯು ಜರ್ಮನಿಯಲ್ಲಿ ವಾಸಿಸುತ್ತಿದ್ದರು. ಅವರು ಕೇವಲ ಒಂದು ತಿಂಗಳ ಹಿಂದೆಯಷ್ಟೇ ಕುಟುಂಬವನ್ನು ಭೇಟಿ ಮಾಡಲು ಲೆಬನಾನ್‌ಗೆ ಮರಳಿದ್ದರು ಎಂದು ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ಸುದ್ದಿ ಸಂಸ್ಥೆ (NNA) ತಿಳಿಸಿದೆ. ಅವರು ಜರ್ಮನ್ ಪ್ರಜೆಯಾಗಿದ್ದಾರೆಯೇ ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ. ಮಹಿಳೆಯ ಇದ್ದ ಅಪಾರ್ಟ್‌ಮೆಂಟ್‌ ಇಸ್ರೇಲಿ ಡ್ರೋನ್ ದಾಳಿಗೆ ತುತ್ತಾಗಿದೆ ಎಂದು ವರದಿ ಹೇಳಿದೆ.

ಇಸ್ರೇಲಿ ಸೇನೆಯು ‘ಎಕ್ಸ್’ (ಹಿಂದಿನ ಟ್ವಿಟರ್) ನಲ್ಲಿ ಹೇಳಿಕೆ ಬಿಡುಗಡೆ ಮಾಡಿದ್ದು, ತಾವು ನಾಗರಿಕ ಕಟ್ಟಡವನ್ನು ಗುರಿಯಾಗಿಸಿದ್ದನ್ನು ನಿರಾಕರಿಸಿದೆ.  ಬದಲಾಗಿ, ವಾಯುದಾಳಿಗೆ ಒಳಗಾದ ಸ್ಥಳದಲ್ಲಿ ಹಿಜ್ಬುಲ್ಲಾ ರಾಕೆಟ್‌ಗಳನ್ನು ಸಂಗ್ರಹಿಸಿಟ್ಟಿತ್ತು. ಇವು ಸ್ಫೋಟಗೊಂಡ ಕಾರಣ ಕಟ್ಟಡಕ್ಕೆ ಹಾನಿಯಾಗಿದೆ ಎಂದು ಸೇನೆ ಹೇಳಿದೆ. ವಸತಿ ಪ್ರದೇಶಗಳ ಬಳಿ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿದ್ದಕ್ಕಾಗಿ ಹಿಜ್ಬುಲ್ಲಾವನ್ನೇ ದೂಷಿಸಿದೆ.

14 ತಿಂಗಳ ಇಸ್ರೇಲ್-ಹಿಜ್ಬುಲ್ಲಾ ಯುದ್ಧಕ್ಕೆ ಅಮೆರಿಕದ ಮಧ್ಯಸ್ಥಿಕೆಯಲ್ಲಿ ನವೆಂಬರ್‌ನಲ್ಲಿ ಕದನವಿರಾಮ ಘೋಷಿಸಲಾಯಿತು. ಹೀಗಿದ್ದೂ, ಇಸ್ರೇಲ್ ದಕ್ಷಿಣ ಲೆಬನಾನ್ ಮೇಲೆ ಬಹುತೇಕ ಪ್ರತಿದಿನವೂ ವೈಮಾನಿಕ ದಾಳಿಗಳನ್ನು ನಡೆಸುತ್ತಿದೆ. ಶುಕ್ರವಾರದ ದಾಳಿಗಳು ಸಾಮಾನ್ಯಕ್ಕಿಂತ ಹೆಚ್ಚು ತೀವ್ರವಾಗಿದ್ದವು.

ಇಸ್ರೇಲಿನ ಯುದ್ಧ ವಿಮಾನಗಳು ಮತ್ತು ಡ್ರೋನ್‌ಗಳಿಂದ ನಮ್ಮ ಮೇಲೆ ಎಷ್ಟೇ ಬಾಂಬ್ ದಾಳಿ ನಡೆಸಿದರೂ, ನಾವು ದೃಢವಾಗಿ ನಿಲ್ಲುತ್ತೇವೆ ಎಂದು ನಬಾಟಿಯೆಹ್‌ನ ಶಿಯಾ ಧರ್ಮಗುರು ಹಸನ್ ಗಂದೂರ್ ಅವರು ಘಟನಾ ಸ್ಥಳದಲ್ಲಿ ಅಸೋಸಿಯೇಟೆಡ್ ಪ್ರೆಸ್ (AP) ಗೆ ತಿಳಿಸಿದರು.

ದಕ್ಷಿಣ ಲೆಬನಾನ್ ಮೇಲೆ ಇಸ್ರೇಲ್ ನಡೆಸಿದ ದಾಳಿಗಳು ಕದನವಿರಾಮ ಒಪ್ಪಂದವನ್ನು ಉಲ್ಲಂಘಿಸಿವೆ ಎಂದು ಲೆಬನಾನ್‌ನ ಅಧ್ಯಕ್ಷರು ಮತ್ತು ಪ್ರಧಾನ ಮಂತ್ರಿಗಳು ಖಂಡಿಸಿದ್ದಾರೆ.

ನಬಾಟಿಯೆಹ್‌ನ ಮೇಲಿರುವ ಪರ್ವತಗಳ ಮೇಲೆ ವೈಮಾನಿಕ ದಾಳಿಗಳು ಎರಡು ಹಂತಗಳಲ್ಲಿ ನಡೆದಿದ್ದು, ಬಂಕರ್ ಬಸ್ಟರ್‌ಗಳನ್ನು ಬಳಸಲಾಗಿದೆ ಎಂದು ಲೆಬನಾನ್‌ನ ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ಸುದ್ದಿ ಸಂಸ್ಥೆ (NNA) ವರದಿ ಮಾಡಿದೆ. ನಗರದ ಹೊರಗಿನ ಈ ವೈಮಾನಿಕ ದಾಳಿಗಳಲ್ಲಿ ನಾಲ್ವರು ಅಲ್ಪಸ್ವಲ್ಪ ಗಾಯಗೊಂಡಿದ್ದಾರೆ ಎಂದು ಎನ್‌ಎನ್‌ಎ ತಿಳಿಸಿದೆ.

ಹಿಜ್ಬುಲ್ಲಾವು ದಾಳಿ ಮತ್ತು ರಕ್ಷಣಾ ವ್ಯವಸ್ಥೆಯನ್ನು ನಿರ್ವಹಿಸಲು ಬಳಸುತ್ತಿದ್ದ ಸ್ಥಳವನ್ನು ಗುರಿಯಾಗಿಸಿ ತಮ್ಮ ಯುದ್ಧ ವಿಮಾನಗಳು ದಾಳಿ ನಡೆಸಿವೆ ಎಂದು ಇಸ್ರೇಲಿ ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ. ಈ ಸ್ಥಳವು ಹಿಜ್ಬುಲ್ಲಾದ ಮಹತ್ವದ ಭೂಗತ ಯೋಜನೆಯ ಭಾಗವಾಗಿದ್ದು, ಅದನ್ನು ಸಂಪೂರ್ಣವಾಗಿ ನಿಷ್ಕ್ರಿಯಗೊಳಿಸಲಾಗಿದೆ. ಆ ಪ್ರದೇಶದಲ್ಲಿ ಹಿಜ್ಬುಲ್ಲಾ ಮರುನಿರ್ಮಾಣದ ಪ್ರಯತ್ನಗಳನ್ನು ನಡೆಸುತ್ತಿದೆ ಎಂದು ಮೊದಲೇ ಗುರುತಿಸಿದ್ದೇವೆ ಮತ್ತು ಹಾಗಾಗಿ ಅದರ ಮಿಲಿಟರಿ ಮೂಲಸೌಕರ್ಯ ತಾಣಗಳ ಮೇಲೆ ದಾಳಿ ನಡೆಸಿದ್ದೇವೆ ಎಂದು ಇಸ್ರೇಲಿ ಸೇನೆ ಹೇಳಿದೆ.

ಈ ದಾಳಿ ಕುರಿತು ಹಿಜ್ಬುಲ್ಲಾದಿಂದ ತಕ್ಷಣದ ಯಾವುದೇ ಪ್ರತಿಕ್ರಿಯೆ ಲಭ್ಯವಾಗಿಲ್ಲ.

ಈ ಹಿಂದೆ ನಡೆದ ಯುದ್ಧದಲ್ಲಿ, ಹಿಜ್ಬುಲ್ಲಾ ಯುದ್ಧಭೂಮಿಯಲ್ಲಿ ಭಾರಿ ನಷ್ಟವನ್ನು ಅನುಭವಿಸಿತ್ತು. ಆ ಯುದ್ಧದಲ್ಲಿ ಲೆಬನಾನ್‌ನಲ್ಲಿ 4,000 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದರು. ಲೆಬನಾನ್‌ಗೆ ಸುಮಾರು 11 ಶತಕೋಟಿ ಡಾಲರ್‌ಗಳಷ್ಟು ಹಾನಿಯಾಗಿತ್ತು. ಇಸ್ರೇಲ್‌ನಲ್ಲಿ 80 ಸೈನಿಕರು ಸೇರಿದಂತೆ 127 ಜನರು ಸಾವನ್ನಪ್ಪಿದ್ದರು.

ಕದನವಿರಾಮ ಒಪ್ಪಂದದ ಭಾಗವಾಗಿ, ಹಿಜ್ಬುಲ್ಲಾವನ್ನು ದಕ್ಷಿಣ ಲೆಬನಾನ್‌ನಲ್ಲಿರುವ ಇಸ್ರೇಲ್ ಗಡಿಯಿಂದ ಅಟ್ಟಲಾಗಿದೆ. ಲಿಟಾನಿ ನದಿಯ ದಕ್ಷಿಣಕ್ಕೆ ಶಸ್ತ್ರಾಸ್ತ್ರಗಳೊಂದಿಗೆ ಇರಲು ಅವರಿಗೆ ಅವಕಾಶ ನೀಡಲಾಗಿಲ್ಲ. ಆದರೆ, ಶುಕ್ರವಾರದ ವೈಮಾನಿಕ ದಾಳಿಗಳು ನದಿಯ ಉತ್ತರ ಭಾಗದಲ್ಲಿ ನಡೆದಿವೆ.

ಇರಾನ್-ಇಸ್ರೇಲ್ ಸಂಘರ್ಷ: ಕದನವಿರಾಮದ ನಂತರವೂ ಅನಿಶ್ಚಿತತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...