Homeಅಂತರಾಷ್ಟ್ರೀಯಲೆಬನಾನ್ ಮೇಲೆ ಇಸ್ರೇಲ್ ವಾಯುದಾಳಿ: 1 ಸಾವು, 11 ಮಂದಿಗೆ ಗಾಯ

ಲೆಬನಾನ್ ಮೇಲೆ ಇಸ್ರೇಲ್ ವಾಯುದಾಳಿ: 1 ಸಾವು, 11 ಮಂದಿಗೆ ಗಾಯ

- Advertisement -
- Advertisement -

ನಬಾಟಿಯೆಹ್, ಲೆಬನಾನ್: ಶುಕ್ರವಾರ ಇಸ್ರೇಲ್‌ನ ವಾಯುಪಡೆಯು ಲೆಬನಾನ್‌ನ ದಕ್ಷಿಣ ಭಾಗದಲ್ಲಿರುವ ಪರ್ವತಗಳ ಮೇಲೆ ಭಾರಿ ವೈಮಾನಿಕ ದಾಳಿಗಳನ್ನು ನಡೆಸಿದೆ.

ಈ ದಾಳಿಗಳು ಹಿಜ್ಬುಲ್ಲಾ ಗುಂಪಿನ ಭೂಗತ ನೆಲೆಗಳನ್ನು ಗುರಿಯಾಗಿಸಿಕೊಂಡಿದ್ದವು ಎಂದು ಇಸ್ರೇಲಿ ಸೇನೆ ಹೇಳಿದೆ.

ಈ ದಾಳಿಯ ನಂತರ, ನಬಾಟಿಯೆಹ್ ನಗರದ ಸಮೀಪದ ಅಪಾರ್ಟ್‌ಮೆಂಟ್ ಕಟ್ಟಡವೊಂದಕ್ಕೆ ಹಾನಿಯಾಗಿದೆ. ಈ ದಾಳಿಯಲ್ಲಿ ಒಬ್ಬ ಮಹಿಳೆ ಸಾವನ್ನಪ್ಪಿದ್ದು, 11 ಜನರು ಗಾಯಗೊಂಡಿದ್ದಾರೆ. ಕಟ್ಟಡದ ಮೇಲಿನ ಮಹಡಿ ಸಂಪೂರ್ಣವಾಗಿ ನಾಶವಾಗಿದೆ ಎಂದು ಲೆಬನಾನ್‌ನ ಸರ್ಕಾರಿ ಸುದ್ದಿ ಸಂಸ್ಥೆ ತಿಳಿಸಿದೆ.

ಸಾವನ್ನಪ್ಪಿದ ಮಹಿಳೆಯು ಜರ್ಮನಿಯಲ್ಲಿ ವಾಸಿಸುತ್ತಿದ್ದರು. ಅವರು ಕೇವಲ ಒಂದು ತಿಂಗಳ ಹಿಂದೆಯಷ್ಟೇ ಕುಟುಂಬವನ್ನು ಭೇಟಿ ಮಾಡಲು ಲೆಬನಾನ್‌ಗೆ ಮರಳಿದ್ದರು ಎಂದು ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ಸುದ್ದಿ ಸಂಸ್ಥೆ (NNA) ತಿಳಿಸಿದೆ. ಅವರು ಜರ್ಮನ್ ಪ್ರಜೆಯಾಗಿದ್ದಾರೆಯೇ ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ. ಮಹಿಳೆಯ ಇದ್ದ ಅಪಾರ್ಟ್‌ಮೆಂಟ್‌ ಇಸ್ರೇಲಿ ಡ್ರೋನ್ ದಾಳಿಗೆ ತುತ್ತಾಗಿದೆ ಎಂದು ವರದಿ ಹೇಳಿದೆ.

ಇಸ್ರೇಲಿ ಸೇನೆಯು ‘ಎಕ್ಸ್’ (ಹಿಂದಿನ ಟ್ವಿಟರ್) ನಲ್ಲಿ ಹೇಳಿಕೆ ಬಿಡುಗಡೆ ಮಾಡಿದ್ದು, ತಾವು ನಾಗರಿಕ ಕಟ್ಟಡವನ್ನು ಗುರಿಯಾಗಿಸಿದ್ದನ್ನು ನಿರಾಕರಿಸಿದೆ.  ಬದಲಾಗಿ, ವಾಯುದಾಳಿಗೆ ಒಳಗಾದ ಸ್ಥಳದಲ್ಲಿ ಹಿಜ್ಬುಲ್ಲಾ ರಾಕೆಟ್‌ಗಳನ್ನು ಸಂಗ್ರಹಿಸಿಟ್ಟಿತ್ತು. ಇವು ಸ್ಫೋಟಗೊಂಡ ಕಾರಣ ಕಟ್ಟಡಕ್ಕೆ ಹಾನಿಯಾಗಿದೆ ಎಂದು ಸೇನೆ ಹೇಳಿದೆ. ವಸತಿ ಪ್ರದೇಶಗಳ ಬಳಿ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿದ್ದಕ್ಕಾಗಿ ಹಿಜ್ಬುಲ್ಲಾವನ್ನೇ ದೂಷಿಸಿದೆ.

14 ತಿಂಗಳ ಇಸ್ರೇಲ್-ಹಿಜ್ಬುಲ್ಲಾ ಯುದ್ಧಕ್ಕೆ ಅಮೆರಿಕದ ಮಧ್ಯಸ್ಥಿಕೆಯಲ್ಲಿ ನವೆಂಬರ್‌ನಲ್ಲಿ ಕದನವಿರಾಮ ಘೋಷಿಸಲಾಯಿತು. ಹೀಗಿದ್ದೂ, ಇಸ್ರೇಲ್ ದಕ್ಷಿಣ ಲೆಬನಾನ್ ಮೇಲೆ ಬಹುತೇಕ ಪ್ರತಿದಿನವೂ ವೈಮಾನಿಕ ದಾಳಿಗಳನ್ನು ನಡೆಸುತ್ತಿದೆ. ಶುಕ್ರವಾರದ ದಾಳಿಗಳು ಸಾಮಾನ್ಯಕ್ಕಿಂತ ಹೆಚ್ಚು ತೀವ್ರವಾಗಿದ್ದವು.

ಇಸ್ರೇಲಿನ ಯುದ್ಧ ವಿಮಾನಗಳು ಮತ್ತು ಡ್ರೋನ್‌ಗಳಿಂದ ನಮ್ಮ ಮೇಲೆ ಎಷ್ಟೇ ಬಾಂಬ್ ದಾಳಿ ನಡೆಸಿದರೂ, ನಾವು ದೃಢವಾಗಿ ನಿಲ್ಲುತ್ತೇವೆ ಎಂದು ನಬಾಟಿಯೆಹ್‌ನ ಶಿಯಾ ಧರ್ಮಗುರು ಹಸನ್ ಗಂದೂರ್ ಅವರು ಘಟನಾ ಸ್ಥಳದಲ್ಲಿ ಅಸೋಸಿಯೇಟೆಡ್ ಪ್ರೆಸ್ (AP) ಗೆ ತಿಳಿಸಿದರು.

ದಕ್ಷಿಣ ಲೆಬನಾನ್ ಮೇಲೆ ಇಸ್ರೇಲ್ ನಡೆಸಿದ ದಾಳಿಗಳು ಕದನವಿರಾಮ ಒಪ್ಪಂದವನ್ನು ಉಲ್ಲಂಘಿಸಿವೆ ಎಂದು ಲೆಬನಾನ್‌ನ ಅಧ್ಯಕ್ಷರು ಮತ್ತು ಪ್ರಧಾನ ಮಂತ್ರಿಗಳು ಖಂಡಿಸಿದ್ದಾರೆ.

ನಬಾಟಿಯೆಹ್‌ನ ಮೇಲಿರುವ ಪರ್ವತಗಳ ಮೇಲೆ ವೈಮಾನಿಕ ದಾಳಿಗಳು ಎರಡು ಹಂತಗಳಲ್ಲಿ ನಡೆದಿದ್ದು, ಬಂಕರ್ ಬಸ್ಟರ್‌ಗಳನ್ನು ಬಳಸಲಾಗಿದೆ ಎಂದು ಲೆಬನಾನ್‌ನ ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ಸುದ್ದಿ ಸಂಸ್ಥೆ (NNA) ವರದಿ ಮಾಡಿದೆ. ನಗರದ ಹೊರಗಿನ ಈ ವೈಮಾನಿಕ ದಾಳಿಗಳಲ್ಲಿ ನಾಲ್ವರು ಅಲ್ಪಸ್ವಲ್ಪ ಗಾಯಗೊಂಡಿದ್ದಾರೆ ಎಂದು ಎನ್‌ಎನ್‌ಎ ತಿಳಿಸಿದೆ.

ಹಿಜ್ಬುಲ್ಲಾವು ದಾಳಿ ಮತ್ತು ರಕ್ಷಣಾ ವ್ಯವಸ್ಥೆಯನ್ನು ನಿರ್ವಹಿಸಲು ಬಳಸುತ್ತಿದ್ದ ಸ್ಥಳವನ್ನು ಗುರಿಯಾಗಿಸಿ ತಮ್ಮ ಯುದ್ಧ ವಿಮಾನಗಳು ದಾಳಿ ನಡೆಸಿವೆ ಎಂದು ಇಸ್ರೇಲಿ ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ. ಈ ಸ್ಥಳವು ಹಿಜ್ಬುಲ್ಲಾದ ಮಹತ್ವದ ಭೂಗತ ಯೋಜನೆಯ ಭಾಗವಾಗಿದ್ದು, ಅದನ್ನು ಸಂಪೂರ್ಣವಾಗಿ ನಿಷ್ಕ್ರಿಯಗೊಳಿಸಲಾಗಿದೆ. ಆ ಪ್ರದೇಶದಲ್ಲಿ ಹಿಜ್ಬುಲ್ಲಾ ಮರುನಿರ್ಮಾಣದ ಪ್ರಯತ್ನಗಳನ್ನು ನಡೆಸುತ್ತಿದೆ ಎಂದು ಮೊದಲೇ ಗುರುತಿಸಿದ್ದೇವೆ ಮತ್ತು ಹಾಗಾಗಿ ಅದರ ಮಿಲಿಟರಿ ಮೂಲಸೌಕರ್ಯ ತಾಣಗಳ ಮೇಲೆ ದಾಳಿ ನಡೆಸಿದ್ದೇವೆ ಎಂದು ಇಸ್ರೇಲಿ ಸೇನೆ ಹೇಳಿದೆ.

ಈ ದಾಳಿ ಕುರಿತು ಹಿಜ್ಬುಲ್ಲಾದಿಂದ ತಕ್ಷಣದ ಯಾವುದೇ ಪ್ರತಿಕ್ರಿಯೆ ಲಭ್ಯವಾಗಿಲ್ಲ.

ಈ ಹಿಂದೆ ನಡೆದ ಯುದ್ಧದಲ್ಲಿ, ಹಿಜ್ಬುಲ್ಲಾ ಯುದ್ಧಭೂಮಿಯಲ್ಲಿ ಭಾರಿ ನಷ್ಟವನ್ನು ಅನುಭವಿಸಿತ್ತು. ಆ ಯುದ್ಧದಲ್ಲಿ ಲೆಬನಾನ್‌ನಲ್ಲಿ 4,000 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದರು. ಲೆಬನಾನ್‌ಗೆ ಸುಮಾರು 11 ಶತಕೋಟಿ ಡಾಲರ್‌ಗಳಷ್ಟು ಹಾನಿಯಾಗಿತ್ತು. ಇಸ್ರೇಲ್‌ನಲ್ಲಿ 80 ಸೈನಿಕರು ಸೇರಿದಂತೆ 127 ಜನರು ಸಾವನ್ನಪ್ಪಿದ್ದರು.

ಕದನವಿರಾಮ ಒಪ್ಪಂದದ ಭಾಗವಾಗಿ, ಹಿಜ್ಬುಲ್ಲಾವನ್ನು ದಕ್ಷಿಣ ಲೆಬನಾನ್‌ನಲ್ಲಿರುವ ಇಸ್ರೇಲ್ ಗಡಿಯಿಂದ ಅಟ್ಟಲಾಗಿದೆ. ಲಿಟಾನಿ ನದಿಯ ದಕ್ಷಿಣಕ್ಕೆ ಶಸ್ತ್ರಾಸ್ತ್ರಗಳೊಂದಿಗೆ ಇರಲು ಅವರಿಗೆ ಅವಕಾಶ ನೀಡಲಾಗಿಲ್ಲ. ಆದರೆ, ಶುಕ್ರವಾರದ ವೈಮಾನಿಕ ದಾಳಿಗಳು ನದಿಯ ಉತ್ತರ ಭಾಗದಲ್ಲಿ ನಡೆದಿವೆ.

ಇರಾನ್-ಇಸ್ರೇಲ್ ಸಂಘರ್ಷ: ಕದನವಿರಾಮದ ನಂತರವೂ ಅನಿಶ್ಚಿತತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...