Homeಅಂತರಾಷ್ಟ್ರೀಯಲೆಬನಾನ್ ಮೇಲೆ ಇಸ್ರೇಲ್ ವಾಯುದಾಳಿ: 1 ಸಾವು, 11 ಮಂದಿಗೆ ಗಾಯ

ಲೆಬನಾನ್ ಮೇಲೆ ಇಸ್ರೇಲ್ ವಾಯುದಾಳಿ: 1 ಸಾವು, 11 ಮಂದಿಗೆ ಗಾಯ

- Advertisement -
- Advertisement -

ನಬಾಟಿಯೆಹ್, ಲೆಬನಾನ್: ಶುಕ್ರವಾರ ಇಸ್ರೇಲ್‌ನ ವಾಯುಪಡೆಯು ಲೆಬನಾನ್‌ನ ದಕ್ಷಿಣ ಭಾಗದಲ್ಲಿರುವ ಪರ್ವತಗಳ ಮೇಲೆ ಭಾರಿ ವೈಮಾನಿಕ ದಾಳಿಗಳನ್ನು ನಡೆಸಿದೆ.

ಈ ದಾಳಿಗಳು ಹಿಜ್ಬುಲ್ಲಾ ಗುಂಪಿನ ಭೂಗತ ನೆಲೆಗಳನ್ನು ಗುರಿಯಾಗಿಸಿಕೊಂಡಿದ್ದವು ಎಂದು ಇಸ್ರೇಲಿ ಸೇನೆ ಹೇಳಿದೆ.

ಈ ದಾಳಿಯ ನಂತರ, ನಬಾಟಿಯೆಹ್ ನಗರದ ಸಮೀಪದ ಅಪಾರ್ಟ್‌ಮೆಂಟ್ ಕಟ್ಟಡವೊಂದಕ್ಕೆ ಹಾನಿಯಾಗಿದೆ. ಈ ದಾಳಿಯಲ್ಲಿ ಒಬ್ಬ ಮಹಿಳೆ ಸಾವನ್ನಪ್ಪಿದ್ದು, 11 ಜನರು ಗಾಯಗೊಂಡಿದ್ದಾರೆ. ಕಟ್ಟಡದ ಮೇಲಿನ ಮಹಡಿ ಸಂಪೂರ್ಣವಾಗಿ ನಾಶವಾಗಿದೆ ಎಂದು ಲೆಬನಾನ್‌ನ ಸರ್ಕಾರಿ ಸುದ್ದಿ ಸಂಸ್ಥೆ ತಿಳಿಸಿದೆ.

ಸಾವನ್ನಪ್ಪಿದ ಮಹಿಳೆಯು ಜರ್ಮನಿಯಲ್ಲಿ ವಾಸಿಸುತ್ತಿದ್ದರು. ಅವರು ಕೇವಲ ಒಂದು ತಿಂಗಳ ಹಿಂದೆಯಷ್ಟೇ ಕುಟುಂಬವನ್ನು ಭೇಟಿ ಮಾಡಲು ಲೆಬನಾನ್‌ಗೆ ಮರಳಿದ್ದರು ಎಂದು ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ಸುದ್ದಿ ಸಂಸ್ಥೆ (NNA) ತಿಳಿಸಿದೆ. ಅವರು ಜರ್ಮನ್ ಪ್ರಜೆಯಾಗಿದ್ದಾರೆಯೇ ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ. ಮಹಿಳೆಯ ಇದ್ದ ಅಪಾರ್ಟ್‌ಮೆಂಟ್‌ ಇಸ್ರೇಲಿ ಡ್ರೋನ್ ದಾಳಿಗೆ ತುತ್ತಾಗಿದೆ ಎಂದು ವರದಿ ಹೇಳಿದೆ.

ಇಸ್ರೇಲಿ ಸೇನೆಯು ‘ಎಕ್ಸ್’ (ಹಿಂದಿನ ಟ್ವಿಟರ್) ನಲ್ಲಿ ಹೇಳಿಕೆ ಬಿಡುಗಡೆ ಮಾಡಿದ್ದು, ತಾವು ನಾಗರಿಕ ಕಟ್ಟಡವನ್ನು ಗುರಿಯಾಗಿಸಿದ್ದನ್ನು ನಿರಾಕರಿಸಿದೆ.  ಬದಲಾಗಿ, ವಾಯುದಾಳಿಗೆ ಒಳಗಾದ ಸ್ಥಳದಲ್ಲಿ ಹಿಜ್ಬುಲ್ಲಾ ರಾಕೆಟ್‌ಗಳನ್ನು ಸಂಗ್ರಹಿಸಿಟ್ಟಿತ್ತು. ಇವು ಸ್ಫೋಟಗೊಂಡ ಕಾರಣ ಕಟ್ಟಡಕ್ಕೆ ಹಾನಿಯಾಗಿದೆ ಎಂದು ಸೇನೆ ಹೇಳಿದೆ. ವಸತಿ ಪ್ರದೇಶಗಳ ಬಳಿ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿದ್ದಕ್ಕಾಗಿ ಹಿಜ್ಬುಲ್ಲಾವನ್ನೇ ದೂಷಿಸಿದೆ.

14 ತಿಂಗಳ ಇಸ್ರೇಲ್-ಹಿಜ್ಬುಲ್ಲಾ ಯುದ್ಧಕ್ಕೆ ಅಮೆರಿಕದ ಮಧ್ಯಸ್ಥಿಕೆಯಲ್ಲಿ ನವೆಂಬರ್‌ನಲ್ಲಿ ಕದನವಿರಾಮ ಘೋಷಿಸಲಾಯಿತು. ಹೀಗಿದ್ದೂ, ಇಸ್ರೇಲ್ ದಕ್ಷಿಣ ಲೆಬನಾನ್ ಮೇಲೆ ಬಹುತೇಕ ಪ್ರತಿದಿನವೂ ವೈಮಾನಿಕ ದಾಳಿಗಳನ್ನು ನಡೆಸುತ್ತಿದೆ. ಶುಕ್ರವಾರದ ದಾಳಿಗಳು ಸಾಮಾನ್ಯಕ್ಕಿಂತ ಹೆಚ್ಚು ತೀವ್ರವಾಗಿದ್ದವು.

ಇಸ್ರೇಲಿನ ಯುದ್ಧ ವಿಮಾನಗಳು ಮತ್ತು ಡ್ರೋನ್‌ಗಳಿಂದ ನಮ್ಮ ಮೇಲೆ ಎಷ್ಟೇ ಬಾಂಬ್ ದಾಳಿ ನಡೆಸಿದರೂ, ನಾವು ದೃಢವಾಗಿ ನಿಲ್ಲುತ್ತೇವೆ ಎಂದು ನಬಾಟಿಯೆಹ್‌ನ ಶಿಯಾ ಧರ್ಮಗುರು ಹಸನ್ ಗಂದೂರ್ ಅವರು ಘಟನಾ ಸ್ಥಳದಲ್ಲಿ ಅಸೋಸಿಯೇಟೆಡ್ ಪ್ರೆಸ್ (AP) ಗೆ ತಿಳಿಸಿದರು.

ದಕ್ಷಿಣ ಲೆಬನಾನ್ ಮೇಲೆ ಇಸ್ರೇಲ್ ನಡೆಸಿದ ದಾಳಿಗಳು ಕದನವಿರಾಮ ಒಪ್ಪಂದವನ್ನು ಉಲ್ಲಂಘಿಸಿವೆ ಎಂದು ಲೆಬನಾನ್‌ನ ಅಧ್ಯಕ್ಷರು ಮತ್ತು ಪ್ರಧಾನ ಮಂತ್ರಿಗಳು ಖಂಡಿಸಿದ್ದಾರೆ.

ನಬಾಟಿಯೆಹ್‌ನ ಮೇಲಿರುವ ಪರ್ವತಗಳ ಮೇಲೆ ವೈಮಾನಿಕ ದಾಳಿಗಳು ಎರಡು ಹಂತಗಳಲ್ಲಿ ನಡೆದಿದ್ದು, ಬಂಕರ್ ಬಸ್ಟರ್‌ಗಳನ್ನು ಬಳಸಲಾಗಿದೆ ಎಂದು ಲೆಬನಾನ್‌ನ ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ಸುದ್ದಿ ಸಂಸ್ಥೆ (NNA) ವರದಿ ಮಾಡಿದೆ. ನಗರದ ಹೊರಗಿನ ಈ ವೈಮಾನಿಕ ದಾಳಿಗಳಲ್ಲಿ ನಾಲ್ವರು ಅಲ್ಪಸ್ವಲ್ಪ ಗಾಯಗೊಂಡಿದ್ದಾರೆ ಎಂದು ಎನ್‌ಎನ್‌ಎ ತಿಳಿಸಿದೆ.

ಹಿಜ್ಬುಲ್ಲಾವು ದಾಳಿ ಮತ್ತು ರಕ್ಷಣಾ ವ್ಯವಸ್ಥೆಯನ್ನು ನಿರ್ವಹಿಸಲು ಬಳಸುತ್ತಿದ್ದ ಸ್ಥಳವನ್ನು ಗುರಿಯಾಗಿಸಿ ತಮ್ಮ ಯುದ್ಧ ವಿಮಾನಗಳು ದಾಳಿ ನಡೆಸಿವೆ ಎಂದು ಇಸ್ರೇಲಿ ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ. ಈ ಸ್ಥಳವು ಹಿಜ್ಬುಲ್ಲಾದ ಮಹತ್ವದ ಭೂಗತ ಯೋಜನೆಯ ಭಾಗವಾಗಿದ್ದು, ಅದನ್ನು ಸಂಪೂರ್ಣವಾಗಿ ನಿಷ್ಕ್ರಿಯಗೊಳಿಸಲಾಗಿದೆ. ಆ ಪ್ರದೇಶದಲ್ಲಿ ಹಿಜ್ಬುಲ್ಲಾ ಮರುನಿರ್ಮಾಣದ ಪ್ರಯತ್ನಗಳನ್ನು ನಡೆಸುತ್ತಿದೆ ಎಂದು ಮೊದಲೇ ಗುರುತಿಸಿದ್ದೇವೆ ಮತ್ತು ಹಾಗಾಗಿ ಅದರ ಮಿಲಿಟರಿ ಮೂಲಸೌಕರ್ಯ ತಾಣಗಳ ಮೇಲೆ ದಾಳಿ ನಡೆಸಿದ್ದೇವೆ ಎಂದು ಇಸ್ರೇಲಿ ಸೇನೆ ಹೇಳಿದೆ.

ಈ ದಾಳಿ ಕುರಿತು ಹಿಜ್ಬುಲ್ಲಾದಿಂದ ತಕ್ಷಣದ ಯಾವುದೇ ಪ್ರತಿಕ್ರಿಯೆ ಲಭ್ಯವಾಗಿಲ್ಲ.

ಈ ಹಿಂದೆ ನಡೆದ ಯುದ್ಧದಲ್ಲಿ, ಹಿಜ್ಬುಲ್ಲಾ ಯುದ್ಧಭೂಮಿಯಲ್ಲಿ ಭಾರಿ ನಷ್ಟವನ್ನು ಅನುಭವಿಸಿತ್ತು. ಆ ಯುದ್ಧದಲ್ಲಿ ಲೆಬನಾನ್‌ನಲ್ಲಿ 4,000 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದರು. ಲೆಬನಾನ್‌ಗೆ ಸುಮಾರು 11 ಶತಕೋಟಿ ಡಾಲರ್‌ಗಳಷ್ಟು ಹಾನಿಯಾಗಿತ್ತು. ಇಸ್ರೇಲ್‌ನಲ್ಲಿ 80 ಸೈನಿಕರು ಸೇರಿದಂತೆ 127 ಜನರು ಸಾವನ್ನಪ್ಪಿದ್ದರು.

ಕದನವಿರಾಮ ಒಪ್ಪಂದದ ಭಾಗವಾಗಿ, ಹಿಜ್ಬುಲ್ಲಾವನ್ನು ದಕ್ಷಿಣ ಲೆಬನಾನ್‌ನಲ್ಲಿರುವ ಇಸ್ರೇಲ್ ಗಡಿಯಿಂದ ಅಟ್ಟಲಾಗಿದೆ. ಲಿಟಾನಿ ನದಿಯ ದಕ್ಷಿಣಕ್ಕೆ ಶಸ್ತ್ರಾಸ್ತ್ರಗಳೊಂದಿಗೆ ಇರಲು ಅವರಿಗೆ ಅವಕಾಶ ನೀಡಲಾಗಿಲ್ಲ. ಆದರೆ, ಶುಕ್ರವಾರದ ವೈಮಾನಿಕ ದಾಳಿಗಳು ನದಿಯ ಉತ್ತರ ಭಾಗದಲ್ಲಿ ನಡೆದಿವೆ.

ಇರಾನ್-ಇಸ್ರೇಲ್ ಸಂಘರ್ಷ: ಕದನವಿರಾಮದ ನಂತರವೂ ಅನಿಶ್ಚಿತತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...