Homeಅಂತರಾಷ್ಟ್ರೀಯಲೆಬನಾನ್ ಮೇಲೆ ಇಸ್ರೇಲ್ ವಾಯುದಾಳಿ: 1 ಸಾವು, 11 ಮಂದಿಗೆ ಗಾಯ

ಲೆಬನಾನ್ ಮೇಲೆ ಇಸ್ರೇಲ್ ವಾಯುದಾಳಿ: 1 ಸಾವು, 11 ಮಂದಿಗೆ ಗಾಯ

- Advertisement -
- Advertisement -

ನಬಾಟಿಯೆಹ್, ಲೆಬನಾನ್: ಶುಕ್ರವಾರ ಇಸ್ರೇಲ್‌ನ ವಾಯುಪಡೆಯು ಲೆಬನಾನ್‌ನ ದಕ್ಷಿಣ ಭಾಗದಲ್ಲಿರುವ ಪರ್ವತಗಳ ಮೇಲೆ ಭಾರಿ ವೈಮಾನಿಕ ದಾಳಿಗಳನ್ನು ನಡೆಸಿದೆ.

ಈ ದಾಳಿಗಳು ಹಿಜ್ಬುಲ್ಲಾ ಗುಂಪಿನ ಭೂಗತ ನೆಲೆಗಳನ್ನು ಗುರಿಯಾಗಿಸಿಕೊಂಡಿದ್ದವು ಎಂದು ಇಸ್ರೇಲಿ ಸೇನೆ ಹೇಳಿದೆ.

ಈ ದಾಳಿಯ ನಂತರ, ನಬಾಟಿಯೆಹ್ ನಗರದ ಸಮೀಪದ ಅಪಾರ್ಟ್‌ಮೆಂಟ್ ಕಟ್ಟಡವೊಂದಕ್ಕೆ ಹಾನಿಯಾಗಿದೆ. ಈ ದಾಳಿಯಲ್ಲಿ ಒಬ್ಬ ಮಹಿಳೆ ಸಾವನ್ನಪ್ಪಿದ್ದು, 11 ಜನರು ಗಾಯಗೊಂಡಿದ್ದಾರೆ. ಕಟ್ಟಡದ ಮೇಲಿನ ಮಹಡಿ ಸಂಪೂರ್ಣವಾಗಿ ನಾಶವಾಗಿದೆ ಎಂದು ಲೆಬನಾನ್‌ನ ಸರ್ಕಾರಿ ಸುದ್ದಿ ಸಂಸ್ಥೆ ತಿಳಿಸಿದೆ.

ಸಾವನ್ನಪ್ಪಿದ ಮಹಿಳೆಯು ಜರ್ಮನಿಯಲ್ಲಿ ವಾಸಿಸುತ್ತಿದ್ದರು. ಅವರು ಕೇವಲ ಒಂದು ತಿಂಗಳ ಹಿಂದೆಯಷ್ಟೇ ಕುಟುಂಬವನ್ನು ಭೇಟಿ ಮಾಡಲು ಲೆಬನಾನ್‌ಗೆ ಮರಳಿದ್ದರು ಎಂದು ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ಸುದ್ದಿ ಸಂಸ್ಥೆ (NNA) ತಿಳಿಸಿದೆ. ಅವರು ಜರ್ಮನ್ ಪ್ರಜೆಯಾಗಿದ್ದಾರೆಯೇ ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ. ಮಹಿಳೆಯ ಇದ್ದ ಅಪಾರ್ಟ್‌ಮೆಂಟ್‌ ಇಸ್ರೇಲಿ ಡ್ರೋನ್ ದಾಳಿಗೆ ತುತ್ತಾಗಿದೆ ಎಂದು ವರದಿ ಹೇಳಿದೆ.

ಇಸ್ರೇಲಿ ಸೇನೆಯು ‘ಎಕ್ಸ್’ (ಹಿಂದಿನ ಟ್ವಿಟರ್) ನಲ್ಲಿ ಹೇಳಿಕೆ ಬಿಡುಗಡೆ ಮಾಡಿದ್ದು, ತಾವು ನಾಗರಿಕ ಕಟ್ಟಡವನ್ನು ಗುರಿಯಾಗಿಸಿದ್ದನ್ನು ನಿರಾಕರಿಸಿದೆ.  ಬದಲಾಗಿ, ವಾಯುದಾಳಿಗೆ ಒಳಗಾದ ಸ್ಥಳದಲ್ಲಿ ಹಿಜ್ಬುಲ್ಲಾ ರಾಕೆಟ್‌ಗಳನ್ನು ಸಂಗ್ರಹಿಸಿಟ್ಟಿತ್ತು. ಇವು ಸ್ಫೋಟಗೊಂಡ ಕಾರಣ ಕಟ್ಟಡಕ್ಕೆ ಹಾನಿಯಾಗಿದೆ ಎಂದು ಸೇನೆ ಹೇಳಿದೆ. ವಸತಿ ಪ್ರದೇಶಗಳ ಬಳಿ ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಿದ್ದಕ್ಕಾಗಿ ಹಿಜ್ಬುಲ್ಲಾವನ್ನೇ ದೂಷಿಸಿದೆ.

14 ತಿಂಗಳ ಇಸ್ರೇಲ್-ಹಿಜ್ಬುಲ್ಲಾ ಯುದ್ಧಕ್ಕೆ ಅಮೆರಿಕದ ಮಧ್ಯಸ್ಥಿಕೆಯಲ್ಲಿ ನವೆಂಬರ್‌ನಲ್ಲಿ ಕದನವಿರಾಮ ಘೋಷಿಸಲಾಯಿತು. ಹೀಗಿದ್ದೂ, ಇಸ್ರೇಲ್ ದಕ್ಷಿಣ ಲೆಬನಾನ್ ಮೇಲೆ ಬಹುತೇಕ ಪ್ರತಿದಿನವೂ ವೈಮಾನಿಕ ದಾಳಿಗಳನ್ನು ನಡೆಸುತ್ತಿದೆ. ಶುಕ್ರವಾರದ ದಾಳಿಗಳು ಸಾಮಾನ್ಯಕ್ಕಿಂತ ಹೆಚ್ಚು ತೀವ್ರವಾಗಿದ್ದವು.

ಇಸ್ರೇಲಿನ ಯುದ್ಧ ವಿಮಾನಗಳು ಮತ್ತು ಡ್ರೋನ್‌ಗಳಿಂದ ನಮ್ಮ ಮೇಲೆ ಎಷ್ಟೇ ಬಾಂಬ್ ದಾಳಿ ನಡೆಸಿದರೂ, ನಾವು ದೃಢವಾಗಿ ನಿಲ್ಲುತ್ತೇವೆ ಎಂದು ನಬಾಟಿಯೆಹ್‌ನ ಶಿಯಾ ಧರ್ಮಗುರು ಹಸನ್ ಗಂದೂರ್ ಅವರು ಘಟನಾ ಸ್ಥಳದಲ್ಲಿ ಅಸೋಸಿಯೇಟೆಡ್ ಪ್ರೆಸ್ (AP) ಗೆ ತಿಳಿಸಿದರು.

ದಕ್ಷಿಣ ಲೆಬನಾನ್ ಮೇಲೆ ಇಸ್ರೇಲ್ ನಡೆಸಿದ ದಾಳಿಗಳು ಕದನವಿರಾಮ ಒಪ್ಪಂದವನ್ನು ಉಲ್ಲಂಘಿಸಿವೆ ಎಂದು ಲೆಬನಾನ್‌ನ ಅಧ್ಯಕ್ಷರು ಮತ್ತು ಪ್ರಧಾನ ಮಂತ್ರಿಗಳು ಖಂಡಿಸಿದ್ದಾರೆ.

ನಬಾಟಿಯೆಹ್‌ನ ಮೇಲಿರುವ ಪರ್ವತಗಳ ಮೇಲೆ ವೈಮಾನಿಕ ದಾಳಿಗಳು ಎರಡು ಹಂತಗಳಲ್ಲಿ ನಡೆದಿದ್ದು, ಬಂಕರ್ ಬಸ್ಟರ್‌ಗಳನ್ನು ಬಳಸಲಾಗಿದೆ ಎಂದು ಲೆಬನಾನ್‌ನ ಸರ್ಕಾರಿ ಸ್ವಾಮ್ಯದ ರಾಷ್ಟ್ರೀಯ ಸುದ್ದಿ ಸಂಸ್ಥೆ (NNA) ವರದಿ ಮಾಡಿದೆ. ನಗರದ ಹೊರಗಿನ ಈ ವೈಮಾನಿಕ ದಾಳಿಗಳಲ್ಲಿ ನಾಲ್ವರು ಅಲ್ಪಸ್ವಲ್ಪ ಗಾಯಗೊಂಡಿದ್ದಾರೆ ಎಂದು ಎನ್‌ಎನ್‌ಎ ತಿಳಿಸಿದೆ.

ಹಿಜ್ಬುಲ್ಲಾವು ದಾಳಿ ಮತ್ತು ರಕ್ಷಣಾ ವ್ಯವಸ್ಥೆಯನ್ನು ನಿರ್ವಹಿಸಲು ಬಳಸುತ್ತಿದ್ದ ಸ್ಥಳವನ್ನು ಗುರಿಯಾಗಿಸಿ ತಮ್ಮ ಯುದ್ಧ ವಿಮಾನಗಳು ದಾಳಿ ನಡೆಸಿವೆ ಎಂದು ಇಸ್ರೇಲಿ ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ. ಈ ಸ್ಥಳವು ಹಿಜ್ಬುಲ್ಲಾದ ಮಹತ್ವದ ಭೂಗತ ಯೋಜನೆಯ ಭಾಗವಾಗಿದ್ದು, ಅದನ್ನು ಸಂಪೂರ್ಣವಾಗಿ ನಿಷ್ಕ್ರಿಯಗೊಳಿಸಲಾಗಿದೆ. ಆ ಪ್ರದೇಶದಲ್ಲಿ ಹಿಜ್ಬುಲ್ಲಾ ಮರುನಿರ್ಮಾಣದ ಪ್ರಯತ್ನಗಳನ್ನು ನಡೆಸುತ್ತಿದೆ ಎಂದು ಮೊದಲೇ ಗುರುತಿಸಿದ್ದೇವೆ ಮತ್ತು ಹಾಗಾಗಿ ಅದರ ಮಿಲಿಟರಿ ಮೂಲಸೌಕರ್ಯ ತಾಣಗಳ ಮೇಲೆ ದಾಳಿ ನಡೆಸಿದ್ದೇವೆ ಎಂದು ಇಸ್ರೇಲಿ ಸೇನೆ ಹೇಳಿದೆ.

ಈ ದಾಳಿ ಕುರಿತು ಹಿಜ್ಬುಲ್ಲಾದಿಂದ ತಕ್ಷಣದ ಯಾವುದೇ ಪ್ರತಿಕ್ರಿಯೆ ಲಭ್ಯವಾಗಿಲ್ಲ.

ಈ ಹಿಂದೆ ನಡೆದ ಯುದ್ಧದಲ್ಲಿ, ಹಿಜ್ಬುಲ್ಲಾ ಯುದ್ಧಭೂಮಿಯಲ್ಲಿ ಭಾರಿ ನಷ್ಟವನ್ನು ಅನುಭವಿಸಿತ್ತು. ಆ ಯುದ್ಧದಲ್ಲಿ ಲೆಬನಾನ್‌ನಲ್ಲಿ 4,000 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದರು. ಲೆಬನಾನ್‌ಗೆ ಸುಮಾರು 11 ಶತಕೋಟಿ ಡಾಲರ್‌ಗಳಷ್ಟು ಹಾನಿಯಾಗಿತ್ತು. ಇಸ್ರೇಲ್‌ನಲ್ಲಿ 80 ಸೈನಿಕರು ಸೇರಿದಂತೆ 127 ಜನರು ಸಾವನ್ನಪ್ಪಿದ್ದರು.

ಕದನವಿರಾಮ ಒಪ್ಪಂದದ ಭಾಗವಾಗಿ, ಹಿಜ್ಬುಲ್ಲಾವನ್ನು ದಕ್ಷಿಣ ಲೆಬನಾನ್‌ನಲ್ಲಿರುವ ಇಸ್ರೇಲ್ ಗಡಿಯಿಂದ ಅಟ್ಟಲಾಗಿದೆ. ಲಿಟಾನಿ ನದಿಯ ದಕ್ಷಿಣಕ್ಕೆ ಶಸ್ತ್ರಾಸ್ತ್ರಗಳೊಂದಿಗೆ ಇರಲು ಅವರಿಗೆ ಅವಕಾಶ ನೀಡಲಾಗಿಲ್ಲ. ಆದರೆ, ಶುಕ್ರವಾರದ ವೈಮಾನಿಕ ದಾಳಿಗಳು ನದಿಯ ಉತ್ತರ ಭಾಗದಲ್ಲಿ ನಡೆದಿವೆ.

ಇರಾನ್-ಇಸ್ರೇಲ್ ಸಂಘರ್ಷ: ಕದನವಿರಾಮದ ನಂತರವೂ ಅನಿಶ್ಚಿತತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...