Homeಮುಖಪುಟವಯನಾಡ್ ಭೀಕರ ಭೂಕುಸಿತ : ಮತ್ತೆ ಮುನ್ನೆಲೆಗೆ ಬಂದ 'ಗಾಡ್ಗೀಳ್ ಸಮಿತಿ ವರದಿ'

ವಯನಾಡ್ ಭೀಕರ ಭೂಕುಸಿತ : ಮತ್ತೆ ಮುನ್ನೆಲೆಗೆ ಬಂದ ‘ಗಾಡ್ಗೀಳ್ ಸಮಿತಿ ವರದಿ’

ಮೆಪ್ಪಾಡಿಯಲ್ಲಿ ನಡೆಯುತ್ತಿರುವ ಪರಿಸರ ವಿರೋಧಿ ಚಟುವಟಿಕೆಗಳ ವಿರುದ್ಧ ವರದಿಯು ನಿರ್ದಿಷ್ಟವಾಗಿ ಎಚ್ಚರಿಕೆ ನೀಡಿತ್ತು

- Advertisement -
- Advertisement -

ಕೇರಳದ ವಯನಾಡ್‌ ಜಿಲ್ಲೆಯಲ್ಲಿ ಭೀಕರ ಭೂಕುಸಿತ, ಜಲಪ್ರಳಯ ಸಂಭವಿಸಿ ನೂರಾರು ಜನರು ಪ್ರಾಣ ಕಳೆದುಕೊಂಡಿರುವ ನಡುವೆ ‘ಪರಿಸರ ಸೂಕ್ಷ್ಮ ಪ್ರದೇಶಗಳಲ್ಲಿ (ಇಎಸ್‌ಎ) ವಿವೇಚನಾರಹಿತ ಕಲ್ಲುಗಣಿಗಾರಿಕೆ ಮತ್ತು ನಿರ್ಮಾಣ ಚಟುವಟಿಕೆಗಳ ವಿರುದ್ಧ ಎಚ್ಚರಿಕೆ ನೀಡಿದ್ದ 13 ವರ್ಷಗಳ ಹಿಂದಿನ ವರದಿಯೊಂದು ಮುನ್ನೆಲೆಗೆ ಬಂದಿದೆ.

ಮಾಧವ್ ಗಾಡ್ಗೀಳ್ ನೇತೃತ್ವದ ‘ಪಶ್ಚಿಮ ಘಟ್ಟಗಳ ಪರಿಸರ ತಜ್ಞರ ಸಮಿತಿ'(WGEEP) ಯು ಆಗಸ್ಟ್ 2011ರಲ್ಲಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದ ವರದಿಯಲ್ಲಿ ವಯನಾಡ್‌ ಭೂಕುಸಿತ ದುರಂತ ಸಂಭವಿಸಿರುವ ಮೆಪ್ಪಾಡಿಯಲ್ಲಿ ನಡೆಯುತ್ತಿರುವ ಪರಿಸರ ವಿರೋಧಿ ಚಟುವಟಿಕೆಗಳ ವಿರುದ್ಧ ನಿರ್ದಿಷ್ಟವಾಗಿ ಎಚ್ಚರಿಕೆ ನೀಡಿತ್ತು.

ಜುಲೈ 30ರಂದು ಭೀಕರ ಭೂಕುಸಿತ ಸಂಭವಿಸಿ ನರಕ ಸದೃಶ್ಯವಾಗಿ ಮಾರ್ಪಟ್ಟಿರುವ ಮುಂಡಕ್ಕೈ, ಚೂರಲ್ಮಲಾ, ಅಟ್ಟಮಾಲ ಮತ್ತು ನೂಲ್ಪುಝ ಗ್ರಾಮಗಳು ವಯನಾಡ್‌ ಜಿಲ್ಲೆಯ ವೈತಿರಿ ತಾಲೂಕಿನಲ್ಲಿರುವ ಮೆಪ್ಪಾಡಿ ವ್ಯಾಪ್ತಿಯಲ್ಲಿ ಬರುತ್ತವೆ. ಈ ಮೆಪ್ಪಾಡಿ ಗಾಡ್ಗೀಳ್ ಸಮಿತಿ ಗುರುತಿಸಿದ ಕೇರಳದ 18 ಪರಿಸರ ಸೂಕ್ಷ್ಮ ಸ್ಥಳಗಳಲ್ಲಿ (ಇಎಸ್ಎಲ್) ಒಂದಾಗಿದೆ.

ಪರಿಸರ ವಿರೋಧಿ ಚಟುವಟಿಕೆಗಳನ್ನು ತಡೆಯಲು ಮಾಧವ್ ಗಾಡ್ಗೀಳ್ ಸಮಿತಿ ಸಲ್ಲಿಸಿದ್ದ ವರದಿಯಲ್ಲಿನ ಶಿಫಾರಸ್ಸುಗಳನ್ನು ಜಾರಿಗೊಳಿಸುವಲ್ಲಿ ಕೇಂದ್ರ ಮತ್ತು ಕೇರಳ ರಾಜ್ಯ ಸರ್ಕಾರಗಳು ಉತ್ಸಾಹ ತೋರಿಲ್ಲ. ಬದಲಿಗೆ ಅದನ್ನು ದುರ್ಬಲಗೊಳಿಸುವ ಕ್ರಮಗಳಿಗೆ ಮುಂದಾಯಿತು.

ಮಾಧವ್ ಗಾಡ್ಗೀಳ್ ನೇತೃತ್ವದ ಸಮಿತಿಯು ತನ್ನ ವರದಿಯಲ್ಲಿ ಪಶ್ಚಿಮ ಘಟ್ಟಗಳಾದ್ಯಂತ ಪರಿಸರ ಸೂಕ್ಷ್ಮ ಪ್ರದೇಶಗಳು ಮತ್ತು ವಲಯಗಳನ್ನು ವರ್ಗೀಕರಿಸಲು ಪ್ರಸ್ತಾಪಿಸಿತ್ತು.

ಪರಿಸರ ಸೂಕ್ಷ್ಮ ಪ್ರದೇಶ-1(ESZ-I)ಮತ್ತು 2 (ESZ-II)ಎಂದು ವರ್ಗೀಕರಿಸಿ, ಈ ಪ್ರದೇಶಗಳಲ್ಲಿ ನಿರ್ಮಾಣ ಚಟುವಟಿಕೆಗಳ ಮೇಲೆ ಸ್ಪಷ್ಟವಾದ ನಿರ್ಬಂಧಗಳನ್ನು ವಿಧಿಸಲು ಸಮಿತಿಯು ಶಿಫಾರಸು ಮಾಡಿತ್ತು.

“ನಾವು ಪರಿಸರ ಸೂಕ್ಷ್ಮ ಪ್ರದೇಶ -Iರಲ್ಲಿ ಕಲ್ಲುಗಣಿಗಾರಿಕೆ ಮತ್ತು ಕೆಂಪು ವರ್ಗದ ಕೈಗಾರಿಕೆಗಳಿಗೆ ಅವಕಾಶ ನೀಡಬಾರದು ಎಂದು ಪ್ರಸ್ತಾಪಿಸಿದ್ದೆವು. ಹಾಗೆಯೇ, ಕಲ್ಲುಗಣಿಗಾರಿಕೆಗೆ ಅನುಮತಿ ಇರುವ ಪ್ರದೇಶಗಳಲ್ಲಿ, ಕ್ವಾರಿಗಳು ಜನವಸತಿಯಿಂದ ಕನಿಷ್ಠ 100 ಮೀಟರ್ ದೂರದಲ್ಲಿರಬೇಕು ಎಂದು ಸೂಚಿಸಿದ್ದೆವು. ಆದರೆ, ಸರ್ಕಾರ ಕ್ವಾರಿಗಳು ಮತ್ತು ಜನವಸತಿ ಪ್ರದೇಶದ ನಡುವಿನ ಅಂತರವನ್ನು ಕಡಿತಗೊಳಿಸಿ 50 ಮೀಟರ್‌ ಮಾಡಿತು” ಎಂದು ಎಂದು WGEEP ಸದಸ್ಯರಾಗಿದ್ದ ಪರಿಸರವಾದಿ ವಿಎಸ್ ವಿಜಯನ್ ಹೇಳಿದ್ದಾರೆ.

ಕೇಂದ್ರ ಸರ್ಕಾರವು ನಂತರ ಗಾಡ್ಗೀಳ್ ವರದಿಯನ್ನು ತಿರಸ್ಕರಿಸಿತ್ತು. ಮತ್ತೊಂದು ವರದಿ ನೀಡಲು ಕಸ್ತೂರಿರಂಗನ್ ನೇತೃತ್ವದ ಹೊಸ ಸಮಿತಿಯನ್ನು ನೇಮಿಸಿತ್ತು. ಗಾಡ್ಗೀಳ್ ಸಮಿತಿಯು ಸಂಪೂರ್ಣ ಪಶ್ಚಿಮ ಘಟ್ಟಗಳನ್ನು ಪರಿಸರ ಸೂಕ್ಷ್ಮ ಪ್ರದೇಶ (ಇಎಸ್‌ಎ) ಎಂದು ಸೂಚಿಸಲು ಶಿಫಾರಸು ಮಾಡಿತ್ತು. ಆದರೆ, ಕಸ್ತೂರಿರಂಗನ್ ಸಮಿತಿಯು ಇಎಸ್ಎಗಳ ವ್ಯಾಪ್ತಿಯನ್ನು ಪಶ್ಚಿಮ ಘಟ್ಟಗಳ ಶೇ. 37ಕ್ಕೆಇಳಿಸಿತು.

ಕೇರಳದಲ್ಲಿ ಮಾಜಿ ಸಿಎಂ ದಿವಂಗತ ಉಮ್ಮನ್ ಚಾಂಡಿ ನೇತೃತ್ವದ ರಾಜ್ಯ ಸರ್ಕಾರವು WGEEP ವರದಿಯನ್ನು ವಿರೋಧಿಸಿತ್ತು. ಸ್ವತಂತ್ರ ವರದಿ ನೀಡಲು ಉಮ್ಮನ್ ವಿ ಉಮ್ಮನ್ ನೇತೃತ್ವದ ರಾಜ್ಯಮಟ್ಟದ ಮತ್ತೊಂದು ಸಮಿತಿಗೆ ಜವಾಬ್ದಾರಿ ನೀಡಿತ್ತು. ಆ ಸಮಯದಲ್ಲಿ, ಗಾಡ್ಗೀಳ್ ವರದಿಯ ಅನುಷ್ಠಾನಕ್ಕೆ ಒಲವು ತೋರಿದ ಕೆಲವೇ ಕೆಲವು ರಾಜಕಾರಣಿಗಳಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಪಿಟಿ ಥಾಮಸ್ ಕೂಡ ಒಬ್ಬರು.

“ವಾಸ್ತವವಾಗಿ, ಗಾಡ್ಗೀಳ್ ವರದಿಯು ಪಶ್ಚಿಮ ಘಟ್ಟಗಳ ಪರಿಸರ ಪ್ರಾಮುಖ್ಯತೆಯನ್ನು ಗುರುತಿಸಿತ್ತು. ಆದರೆ, ಕ್ಷುಲ್ಲಕ ರಾಜಕೀಯ ಕಾರಣಗಳಿಗಾಗಿ ಸರ್ಕಾರಗಳು ಅದನ್ನು ವಿರೋಧಿಸಿದ್ದವು. ಪರಿಸರ ದುರ್ಬಲ ಪ್ರದೇಶವನ್ನು ಕೇವಲ ಸರ್ಕಾರಿ ಆದೇಶದಿಂದ ದುರ್ಬಲವಲ್ಲ ಎಂದು ಕರೆಯಲು ಹೇಗೆ ಸಾಧ್ಯ? ಈಗಿನ ಕೇರಳದ ಎಡರಂಗ ಸರ್ಕಾರ ಇಡುಕ್ಕಿಯಲ್ಲಿ 1,500 ಚದರ ಅಡಿವರೆಗಿನ ಅನಧಿಕೃತ ನಿರ್ಮಾಣಗಳನ್ನು ಕ್ರಮಬದ್ಧಗೊಳಿಸಿದ ನಂತರ, ಅಕ್ರಮ ಕಲ್ಲುಗಣಿಗಾರಿಕೆಯನ್ನು ಕೂಡ ಸಕ್ರಮಗೊಳಿಸುವ ಪ್ರಯತ್ನ ಮಾಡಿರುವುದು ವಿಷಾದಕರ” ಎಂದು ಪಿಟಿ ಥಾಮಸ್ ಹೇಳಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕೇರಳದ ಪರಿಸರ ಸೂಕ್ಷ್ಮ ಪ್ರದೇಶಗಳು (ESZ-I,II)

ಗಾಡ್ಗೀಳ್ ನೇತೃತ್ವದ ಸಮಿತಿಯ ವರದಿಯ ಪ್ರಕಾರ, ವಯನಾಡ್‌ ಜಿಲ್ಲೆಯ ವೈತಿರಿ, ಮಾನಂತವಾಡಿ ಮತ್ತು ಸುಲ್ತಾನ್ ಬತ್ತೇರಿಗಳು ಪರಿಸರ ಸೂಕ್ಷ್ಮ ಪ್ರದೇಶ- Iರಲ್ಲಿ ಬರುತ್ತವೆ.

ಅದೇ ರೀತಿ ಮಲಪ್ಪುರಂನ ಪೆರಿಂದಲ್ಮನ್ನಾ ಮತ್ತು ತಿರೂರ್ ತಾಲೂಕುಗಳು ಪರಿಸರ ಸೂಕ್ಷ್ಮ ಪ್ರದೇಶ- IIರಲ್ಲಿ ಬರುವ ತಾಲೂಕುಗಳಲ್ಲಿ ಸೇರಿವೆ.

WGEEP ಸಮಿತಿ ಗುರುತಿಸಿದ ಕೇರಳದ ಪರಿಸರ ಸೂಕ್ಷ್ಮ ಸ್ಥಳಗಳು :

ಮಂಡಕೋಲ್, ಪಣತ್ತಡಿ, ಪೈದಲ್ಮಲ, ಬ್ರಹ್ಮಗಿರಿ- ತಿರುನೆಲ್ಲಿ, ವಯನಾಡ್, ಬಾಣಾಸುರ ಸಾಗರ್ – ಕುಟ್ಯಾಡಿ, ನಿಲಂಬೂರ್ – ಮೇಪ್ಪಾಡಿ, ಸೈಲೆಂಟ್ ವ್ಯಾಲಿ – ನ್ಯೂ ಅಮರಂಬಲಂ, ಸಿರುವಣಿ, ನೆಲ್ಲಿಯಂಪದಿ, ಪೀಚಿ – ವಝನಿ, ಅದಿರಪಲ್ಲಿ – ವಝಚಲ್, ಪೂಯಂಕುಟ್ಟಿ – ಮುನ್ನಾರ್, ಏಲಕ್ಕಿ ಬೆಟ್ಟಗಳು, ಪೆರಿಯಾರ್, ಕುಲತುಪುಝ, ಅಗಸ್ತ್ಯ ಮಾಲಾ, ಸಂರಕ್ಷಿತ ಪ್ರದೇಶಗಳ ಸುತ್ತಮುತ್ತಲಿನ ಪರಿಸರ ಸೂಕ್ಷ್ಮ ಪ್ರದೇಶಗಳು.

ಇದನ್ನೂ ಓದಿ : ವಯನಾಡ್ ಭೂಕುಸಿತ ದುರಂತ: 143 ಕ್ಕೆ ತಲುಪಿದ ಸಾವಿನ ಸಂಖ್ಯೆ, 186 ಜನರು ಪ್ರಾಣಾಪಾಯದಿಂದ ಪಾರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...