Homeಮುಖಪುಟವಯನಾಡ್ ಭೀಕರ ಭೂಕುಸಿತ : ಮತ್ತೆ ಮುನ್ನೆಲೆಗೆ ಬಂದ 'ಗಾಡ್ಗೀಳ್ ಸಮಿತಿ ವರದಿ'

ವಯನಾಡ್ ಭೀಕರ ಭೂಕುಸಿತ : ಮತ್ತೆ ಮುನ್ನೆಲೆಗೆ ಬಂದ ‘ಗಾಡ್ಗೀಳ್ ಸಮಿತಿ ವರದಿ’

ಮೆಪ್ಪಾಡಿಯಲ್ಲಿ ನಡೆಯುತ್ತಿರುವ ಪರಿಸರ ವಿರೋಧಿ ಚಟುವಟಿಕೆಗಳ ವಿರುದ್ಧ ವರದಿಯು ನಿರ್ದಿಷ್ಟವಾಗಿ ಎಚ್ಚರಿಕೆ ನೀಡಿತ್ತು

- Advertisement -
- Advertisement -

ಕೇರಳದ ವಯನಾಡ್‌ ಜಿಲ್ಲೆಯಲ್ಲಿ ಭೀಕರ ಭೂಕುಸಿತ, ಜಲಪ್ರಳಯ ಸಂಭವಿಸಿ ನೂರಾರು ಜನರು ಪ್ರಾಣ ಕಳೆದುಕೊಂಡಿರುವ ನಡುವೆ ‘ಪರಿಸರ ಸೂಕ್ಷ್ಮ ಪ್ರದೇಶಗಳಲ್ಲಿ (ಇಎಸ್‌ಎ) ವಿವೇಚನಾರಹಿತ ಕಲ್ಲುಗಣಿಗಾರಿಕೆ ಮತ್ತು ನಿರ್ಮಾಣ ಚಟುವಟಿಕೆಗಳ ವಿರುದ್ಧ ಎಚ್ಚರಿಕೆ ನೀಡಿದ್ದ 13 ವರ್ಷಗಳ ಹಿಂದಿನ ವರದಿಯೊಂದು ಮುನ್ನೆಲೆಗೆ ಬಂದಿದೆ.

ಮಾಧವ್ ಗಾಡ್ಗೀಳ್ ನೇತೃತ್ವದ ‘ಪಶ್ಚಿಮ ಘಟ್ಟಗಳ ಪರಿಸರ ತಜ್ಞರ ಸಮಿತಿ'(WGEEP) ಯು ಆಗಸ್ಟ್ 2011ರಲ್ಲಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದ ವರದಿಯಲ್ಲಿ ವಯನಾಡ್‌ ಭೂಕುಸಿತ ದುರಂತ ಸಂಭವಿಸಿರುವ ಮೆಪ್ಪಾಡಿಯಲ್ಲಿ ನಡೆಯುತ್ತಿರುವ ಪರಿಸರ ವಿರೋಧಿ ಚಟುವಟಿಕೆಗಳ ವಿರುದ್ಧ ನಿರ್ದಿಷ್ಟವಾಗಿ ಎಚ್ಚರಿಕೆ ನೀಡಿತ್ತು.

ಜುಲೈ 30ರಂದು ಭೀಕರ ಭೂಕುಸಿತ ಸಂಭವಿಸಿ ನರಕ ಸದೃಶ್ಯವಾಗಿ ಮಾರ್ಪಟ್ಟಿರುವ ಮುಂಡಕ್ಕೈ, ಚೂರಲ್ಮಲಾ, ಅಟ್ಟಮಾಲ ಮತ್ತು ನೂಲ್ಪುಝ ಗ್ರಾಮಗಳು ವಯನಾಡ್‌ ಜಿಲ್ಲೆಯ ವೈತಿರಿ ತಾಲೂಕಿನಲ್ಲಿರುವ ಮೆಪ್ಪಾಡಿ ವ್ಯಾಪ್ತಿಯಲ್ಲಿ ಬರುತ್ತವೆ. ಈ ಮೆಪ್ಪಾಡಿ ಗಾಡ್ಗೀಳ್ ಸಮಿತಿ ಗುರುತಿಸಿದ ಕೇರಳದ 18 ಪರಿಸರ ಸೂಕ್ಷ್ಮ ಸ್ಥಳಗಳಲ್ಲಿ (ಇಎಸ್ಎಲ್) ಒಂದಾಗಿದೆ.

ಪರಿಸರ ವಿರೋಧಿ ಚಟುವಟಿಕೆಗಳನ್ನು ತಡೆಯಲು ಮಾಧವ್ ಗಾಡ್ಗೀಳ್ ಸಮಿತಿ ಸಲ್ಲಿಸಿದ್ದ ವರದಿಯಲ್ಲಿನ ಶಿಫಾರಸ್ಸುಗಳನ್ನು ಜಾರಿಗೊಳಿಸುವಲ್ಲಿ ಕೇಂದ್ರ ಮತ್ತು ಕೇರಳ ರಾಜ್ಯ ಸರ್ಕಾರಗಳು ಉತ್ಸಾಹ ತೋರಿಲ್ಲ. ಬದಲಿಗೆ ಅದನ್ನು ದುರ್ಬಲಗೊಳಿಸುವ ಕ್ರಮಗಳಿಗೆ ಮುಂದಾಯಿತು.

ಮಾಧವ್ ಗಾಡ್ಗೀಳ್ ನೇತೃತ್ವದ ಸಮಿತಿಯು ತನ್ನ ವರದಿಯಲ್ಲಿ ಪಶ್ಚಿಮ ಘಟ್ಟಗಳಾದ್ಯಂತ ಪರಿಸರ ಸೂಕ್ಷ್ಮ ಪ್ರದೇಶಗಳು ಮತ್ತು ವಲಯಗಳನ್ನು ವರ್ಗೀಕರಿಸಲು ಪ್ರಸ್ತಾಪಿಸಿತ್ತು.

ಪರಿಸರ ಸೂಕ್ಷ್ಮ ಪ್ರದೇಶ-1(ESZ-I)ಮತ್ತು 2 (ESZ-II)ಎಂದು ವರ್ಗೀಕರಿಸಿ, ಈ ಪ್ರದೇಶಗಳಲ್ಲಿ ನಿರ್ಮಾಣ ಚಟುವಟಿಕೆಗಳ ಮೇಲೆ ಸ್ಪಷ್ಟವಾದ ನಿರ್ಬಂಧಗಳನ್ನು ವಿಧಿಸಲು ಸಮಿತಿಯು ಶಿಫಾರಸು ಮಾಡಿತ್ತು.

“ನಾವು ಪರಿಸರ ಸೂಕ್ಷ್ಮ ಪ್ರದೇಶ -Iರಲ್ಲಿ ಕಲ್ಲುಗಣಿಗಾರಿಕೆ ಮತ್ತು ಕೆಂಪು ವರ್ಗದ ಕೈಗಾರಿಕೆಗಳಿಗೆ ಅವಕಾಶ ನೀಡಬಾರದು ಎಂದು ಪ್ರಸ್ತಾಪಿಸಿದ್ದೆವು. ಹಾಗೆಯೇ, ಕಲ್ಲುಗಣಿಗಾರಿಕೆಗೆ ಅನುಮತಿ ಇರುವ ಪ್ರದೇಶಗಳಲ್ಲಿ, ಕ್ವಾರಿಗಳು ಜನವಸತಿಯಿಂದ ಕನಿಷ್ಠ 100 ಮೀಟರ್ ದೂರದಲ್ಲಿರಬೇಕು ಎಂದು ಸೂಚಿಸಿದ್ದೆವು. ಆದರೆ, ಸರ್ಕಾರ ಕ್ವಾರಿಗಳು ಮತ್ತು ಜನವಸತಿ ಪ್ರದೇಶದ ನಡುವಿನ ಅಂತರವನ್ನು ಕಡಿತಗೊಳಿಸಿ 50 ಮೀಟರ್‌ ಮಾಡಿತು” ಎಂದು ಎಂದು WGEEP ಸದಸ್ಯರಾಗಿದ್ದ ಪರಿಸರವಾದಿ ವಿಎಸ್ ವಿಜಯನ್ ಹೇಳಿದ್ದಾರೆ.

ಕೇಂದ್ರ ಸರ್ಕಾರವು ನಂತರ ಗಾಡ್ಗೀಳ್ ವರದಿಯನ್ನು ತಿರಸ್ಕರಿಸಿತ್ತು. ಮತ್ತೊಂದು ವರದಿ ನೀಡಲು ಕಸ್ತೂರಿರಂಗನ್ ನೇತೃತ್ವದ ಹೊಸ ಸಮಿತಿಯನ್ನು ನೇಮಿಸಿತ್ತು. ಗಾಡ್ಗೀಳ್ ಸಮಿತಿಯು ಸಂಪೂರ್ಣ ಪಶ್ಚಿಮ ಘಟ್ಟಗಳನ್ನು ಪರಿಸರ ಸೂಕ್ಷ್ಮ ಪ್ರದೇಶ (ಇಎಸ್‌ಎ) ಎಂದು ಸೂಚಿಸಲು ಶಿಫಾರಸು ಮಾಡಿತ್ತು. ಆದರೆ, ಕಸ್ತೂರಿರಂಗನ್ ಸಮಿತಿಯು ಇಎಸ್ಎಗಳ ವ್ಯಾಪ್ತಿಯನ್ನು ಪಶ್ಚಿಮ ಘಟ್ಟಗಳ ಶೇ. 37ಕ್ಕೆಇಳಿಸಿತು.

ಕೇರಳದಲ್ಲಿ ಮಾಜಿ ಸಿಎಂ ದಿವಂಗತ ಉಮ್ಮನ್ ಚಾಂಡಿ ನೇತೃತ್ವದ ರಾಜ್ಯ ಸರ್ಕಾರವು WGEEP ವರದಿಯನ್ನು ವಿರೋಧಿಸಿತ್ತು. ಸ್ವತಂತ್ರ ವರದಿ ನೀಡಲು ಉಮ್ಮನ್ ವಿ ಉಮ್ಮನ್ ನೇತೃತ್ವದ ರಾಜ್ಯಮಟ್ಟದ ಮತ್ತೊಂದು ಸಮಿತಿಗೆ ಜವಾಬ್ದಾರಿ ನೀಡಿತ್ತು. ಆ ಸಮಯದಲ್ಲಿ, ಗಾಡ್ಗೀಳ್ ವರದಿಯ ಅನುಷ್ಠಾನಕ್ಕೆ ಒಲವು ತೋರಿದ ಕೆಲವೇ ಕೆಲವು ರಾಜಕಾರಣಿಗಳಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಪಿಟಿ ಥಾಮಸ್ ಕೂಡ ಒಬ್ಬರು.

“ವಾಸ್ತವವಾಗಿ, ಗಾಡ್ಗೀಳ್ ವರದಿಯು ಪಶ್ಚಿಮ ಘಟ್ಟಗಳ ಪರಿಸರ ಪ್ರಾಮುಖ್ಯತೆಯನ್ನು ಗುರುತಿಸಿತ್ತು. ಆದರೆ, ಕ್ಷುಲ್ಲಕ ರಾಜಕೀಯ ಕಾರಣಗಳಿಗಾಗಿ ಸರ್ಕಾರಗಳು ಅದನ್ನು ವಿರೋಧಿಸಿದ್ದವು. ಪರಿಸರ ದುರ್ಬಲ ಪ್ರದೇಶವನ್ನು ಕೇವಲ ಸರ್ಕಾರಿ ಆದೇಶದಿಂದ ದುರ್ಬಲವಲ್ಲ ಎಂದು ಕರೆಯಲು ಹೇಗೆ ಸಾಧ್ಯ? ಈಗಿನ ಕೇರಳದ ಎಡರಂಗ ಸರ್ಕಾರ ಇಡುಕ್ಕಿಯಲ್ಲಿ 1,500 ಚದರ ಅಡಿವರೆಗಿನ ಅನಧಿಕೃತ ನಿರ್ಮಾಣಗಳನ್ನು ಕ್ರಮಬದ್ಧಗೊಳಿಸಿದ ನಂತರ, ಅಕ್ರಮ ಕಲ್ಲುಗಣಿಗಾರಿಕೆಯನ್ನು ಕೂಡ ಸಕ್ರಮಗೊಳಿಸುವ ಪ್ರಯತ್ನ ಮಾಡಿರುವುದು ವಿಷಾದಕರ” ಎಂದು ಪಿಟಿ ಥಾಮಸ್ ಹೇಳಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕೇರಳದ ಪರಿಸರ ಸೂಕ್ಷ್ಮ ಪ್ರದೇಶಗಳು (ESZ-I,II)

ಗಾಡ್ಗೀಳ್ ನೇತೃತ್ವದ ಸಮಿತಿಯ ವರದಿಯ ಪ್ರಕಾರ, ವಯನಾಡ್‌ ಜಿಲ್ಲೆಯ ವೈತಿರಿ, ಮಾನಂತವಾಡಿ ಮತ್ತು ಸುಲ್ತಾನ್ ಬತ್ತೇರಿಗಳು ಪರಿಸರ ಸೂಕ್ಷ್ಮ ಪ್ರದೇಶ- Iರಲ್ಲಿ ಬರುತ್ತವೆ.

ಅದೇ ರೀತಿ ಮಲಪ್ಪುರಂನ ಪೆರಿಂದಲ್ಮನ್ನಾ ಮತ್ತು ತಿರೂರ್ ತಾಲೂಕುಗಳು ಪರಿಸರ ಸೂಕ್ಷ್ಮ ಪ್ರದೇಶ- IIರಲ್ಲಿ ಬರುವ ತಾಲೂಕುಗಳಲ್ಲಿ ಸೇರಿವೆ.

WGEEP ಸಮಿತಿ ಗುರುತಿಸಿದ ಕೇರಳದ ಪರಿಸರ ಸೂಕ್ಷ್ಮ ಸ್ಥಳಗಳು :

ಮಂಡಕೋಲ್, ಪಣತ್ತಡಿ, ಪೈದಲ್ಮಲ, ಬ್ರಹ್ಮಗಿರಿ- ತಿರುನೆಲ್ಲಿ, ವಯನಾಡ್, ಬಾಣಾಸುರ ಸಾಗರ್ – ಕುಟ್ಯಾಡಿ, ನಿಲಂಬೂರ್ – ಮೇಪ್ಪಾಡಿ, ಸೈಲೆಂಟ್ ವ್ಯಾಲಿ – ನ್ಯೂ ಅಮರಂಬಲಂ, ಸಿರುವಣಿ, ನೆಲ್ಲಿಯಂಪದಿ, ಪೀಚಿ – ವಝನಿ, ಅದಿರಪಲ್ಲಿ – ವಝಚಲ್, ಪೂಯಂಕುಟ್ಟಿ – ಮುನ್ನಾರ್, ಏಲಕ್ಕಿ ಬೆಟ್ಟಗಳು, ಪೆರಿಯಾರ್, ಕುಲತುಪುಝ, ಅಗಸ್ತ್ಯ ಮಾಲಾ, ಸಂರಕ್ಷಿತ ಪ್ರದೇಶಗಳ ಸುತ್ತಮುತ್ತಲಿನ ಪರಿಸರ ಸೂಕ್ಷ್ಮ ಪ್ರದೇಶಗಳು.

ಇದನ್ನೂ ಓದಿ : ವಯನಾಡ್ ಭೂಕುಸಿತ ದುರಂತ: 143 ಕ್ಕೆ ತಲುಪಿದ ಸಾವಿನ ಸಂಖ್ಯೆ, 186 ಜನರು ಪ್ರಾಣಾಪಾಯದಿಂದ ಪಾರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....