Homeಮುಖಪುಟವಯನಾಡ್ ಭೀಕರ ಭೂಕುಸಿತ : ಮತ್ತೆ ಮುನ್ನೆಲೆಗೆ ಬಂದ 'ಗಾಡ್ಗೀಳ್ ಸಮಿತಿ ವರದಿ'

ವಯನಾಡ್ ಭೀಕರ ಭೂಕುಸಿತ : ಮತ್ತೆ ಮುನ್ನೆಲೆಗೆ ಬಂದ ‘ಗಾಡ್ಗೀಳ್ ಸಮಿತಿ ವರದಿ’

ಮೆಪ್ಪಾಡಿಯಲ್ಲಿ ನಡೆಯುತ್ತಿರುವ ಪರಿಸರ ವಿರೋಧಿ ಚಟುವಟಿಕೆಗಳ ವಿರುದ್ಧ ವರದಿಯು ನಿರ್ದಿಷ್ಟವಾಗಿ ಎಚ್ಚರಿಕೆ ನೀಡಿತ್ತು

- Advertisement -
- Advertisement -

ಕೇರಳದ ವಯನಾಡ್‌ ಜಿಲ್ಲೆಯಲ್ಲಿ ಭೀಕರ ಭೂಕುಸಿತ, ಜಲಪ್ರಳಯ ಸಂಭವಿಸಿ ನೂರಾರು ಜನರು ಪ್ರಾಣ ಕಳೆದುಕೊಂಡಿರುವ ನಡುವೆ ‘ಪರಿಸರ ಸೂಕ್ಷ್ಮ ಪ್ರದೇಶಗಳಲ್ಲಿ (ಇಎಸ್‌ಎ) ವಿವೇಚನಾರಹಿತ ಕಲ್ಲುಗಣಿಗಾರಿಕೆ ಮತ್ತು ನಿರ್ಮಾಣ ಚಟುವಟಿಕೆಗಳ ವಿರುದ್ಧ ಎಚ್ಚರಿಕೆ ನೀಡಿದ್ದ 13 ವರ್ಷಗಳ ಹಿಂದಿನ ವರದಿಯೊಂದು ಮುನ್ನೆಲೆಗೆ ಬಂದಿದೆ.

ಮಾಧವ್ ಗಾಡ್ಗೀಳ್ ನೇತೃತ್ವದ ‘ಪಶ್ಚಿಮ ಘಟ್ಟಗಳ ಪರಿಸರ ತಜ್ಞರ ಸಮಿತಿ'(WGEEP) ಯು ಆಗಸ್ಟ್ 2011ರಲ್ಲಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದ ವರದಿಯಲ್ಲಿ ವಯನಾಡ್‌ ಭೂಕುಸಿತ ದುರಂತ ಸಂಭವಿಸಿರುವ ಮೆಪ್ಪಾಡಿಯಲ್ಲಿ ನಡೆಯುತ್ತಿರುವ ಪರಿಸರ ವಿರೋಧಿ ಚಟುವಟಿಕೆಗಳ ವಿರುದ್ಧ ನಿರ್ದಿಷ್ಟವಾಗಿ ಎಚ್ಚರಿಕೆ ನೀಡಿತ್ತು.

ಜುಲೈ 30ರಂದು ಭೀಕರ ಭೂಕುಸಿತ ಸಂಭವಿಸಿ ನರಕ ಸದೃಶ್ಯವಾಗಿ ಮಾರ್ಪಟ್ಟಿರುವ ಮುಂಡಕ್ಕೈ, ಚೂರಲ್ಮಲಾ, ಅಟ್ಟಮಾಲ ಮತ್ತು ನೂಲ್ಪುಝ ಗ್ರಾಮಗಳು ವಯನಾಡ್‌ ಜಿಲ್ಲೆಯ ವೈತಿರಿ ತಾಲೂಕಿನಲ್ಲಿರುವ ಮೆಪ್ಪಾಡಿ ವ್ಯಾಪ್ತಿಯಲ್ಲಿ ಬರುತ್ತವೆ. ಈ ಮೆಪ್ಪಾಡಿ ಗಾಡ್ಗೀಳ್ ಸಮಿತಿ ಗುರುತಿಸಿದ ಕೇರಳದ 18 ಪರಿಸರ ಸೂಕ್ಷ್ಮ ಸ್ಥಳಗಳಲ್ಲಿ (ಇಎಸ್ಎಲ್) ಒಂದಾಗಿದೆ.

ಪರಿಸರ ವಿರೋಧಿ ಚಟುವಟಿಕೆಗಳನ್ನು ತಡೆಯಲು ಮಾಧವ್ ಗಾಡ್ಗೀಳ್ ಸಮಿತಿ ಸಲ್ಲಿಸಿದ್ದ ವರದಿಯಲ್ಲಿನ ಶಿಫಾರಸ್ಸುಗಳನ್ನು ಜಾರಿಗೊಳಿಸುವಲ್ಲಿ ಕೇಂದ್ರ ಮತ್ತು ಕೇರಳ ರಾಜ್ಯ ಸರ್ಕಾರಗಳು ಉತ್ಸಾಹ ತೋರಿಲ್ಲ. ಬದಲಿಗೆ ಅದನ್ನು ದುರ್ಬಲಗೊಳಿಸುವ ಕ್ರಮಗಳಿಗೆ ಮುಂದಾಯಿತು.

ಮಾಧವ್ ಗಾಡ್ಗೀಳ್ ನೇತೃತ್ವದ ಸಮಿತಿಯು ತನ್ನ ವರದಿಯಲ್ಲಿ ಪಶ್ಚಿಮ ಘಟ್ಟಗಳಾದ್ಯಂತ ಪರಿಸರ ಸೂಕ್ಷ್ಮ ಪ್ರದೇಶಗಳು ಮತ್ತು ವಲಯಗಳನ್ನು ವರ್ಗೀಕರಿಸಲು ಪ್ರಸ್ತಾಪಿಸಿತ್ತು.

ಪರಿಸರ ಸೂಕ್ಷ್ಮ ಪ್ರದೇಶ-1(ESZ-I)ಮತ್ತು 2 (ESZ-II)ಎಂದು ವರ್ಗೀಕರಿಸಿ, ಈ ಪ್ರದೇಶಗಳಲ್ಲಿ ನಿರ್ಮಾಣ ಚಟುವಟಿಕೆಗಳ ಮೇಲೆ ಸ್ಪಷ್ಟವಾದ ನಿರ್ಬಂಧಗಳನ್ನು ವಿಧಿಸಲು ಸಮಿತಿಯು ಶಿಫಾರಸು ಮಾಡಿತ್ತು.

“ನಾವು ಪರಿಸರ ಸೂಕ್ಷ್ಮ ಪ್ರದೇಶ -Iರಲ್ಲಿ ಕಲ್ಲುಗಣಿಗಾರಿಕೆ ಮತ್ತು ಕೆಂಪು ವರ್ಗದ ಕೈಗಾರಿಕೆಗಳಿಗೆ ಅವಕಾಶ ನೀಡಬಾರದು ಎಂದು ಪ್ರಸ್ತಾಪಿಸಿದ್ದೆವು. ಹಾಗೆಯೇ, ಕಲ್ಲುಗಣಿಗಾರಿಕೆಗೆ ಅನುಮತಿ ಇರುವ ಪ್ರದೇಶಗಳಲ್ಲಿ, ಕ್ವಾರಿಗಳು ಜನವಸತಿಯಿಂದ ಕನಿಷ್ಠ 100 ಮೀಟರ್ ದೂರದಲ್ಲಿರಬೇಕು ಎಂದು ಸೂಚಿಸಿದ್ದೆವು. ಆದರೆ, ಸರ್ಕಾರ ಕ್ವಾರಿಗಳು ಮತ್ತು ಜನವಸತಿ ಪ್ರದೇಶದ ನಡುವಿನ ಅಂತರವನ್ನು ಕಡಿತಗೊಳಿಸಿ 50 ಮೀಟರ್‌ ಮಾಡಿತು” ಎಂದು ಎಂದು WGEEP ಸದಸ್ಯರಾಗಿದ್ದ ಪರಿಸರವಾದಿ ವಿಎಸ್ ವಿಜಯನ್ ಹೇಳಿದ್ದಾರೆ.

ಕೇಂದ್ರ ಸರ್ಕಾರವು ನಂತರ ಗಾಡ್ಗೀಳ್ ವರದಿಯನ್ನು ತಿರಸ್ಕರಿಸಿತ್ತು. ಮತ್ತೊಂದು ವರದಿ ನೀಡಲು ಕಸ್ತೂರಿರಂಗನ್ ನೇತೃತ್ವದ ಹೊಸ ಸಮಿತಿಯನ್ನು ನೇಮಿಸಿತ್ತು. ಗಾಡ್ಗೀಳ್ ಸಮಿತಿಯು ಸಂಪೂರ್ಣ ಪಶ್ಚಿಮ ಘಟ್ಟಗಳನ್ನು ಪರಿಸರ ಸೂಕ್ಷ್ಮ ಪ್ರದೇಶ (ಇಎಸ್‌ಎ) ಎಂದು ಸೂಚಿಸಲು ಶಿಫಾರಸು ಮಾಡಿತ್ತು. ಆದರೆ, ಕಸ್ತೂರಿರಂಗನ್ ಸಮಿತಿಯು ಇಎಸ್ಎಗಳ ವ್ಯಾಪ್ತಿಯನ್ನು ಪಶ್ಚಿಮ ಘಟ್ಟಗಳ ಶೇ. 37ಕ್ಕೆಇಳಿಸಿತು.

ಕೇರಳದಲ್ಲಿ ಮಾಜಿ ಸಿಎಂ ದಿವಂಗತ ಉಮ್ಮನ್ ಚಾಂಡಿ ನೇತೃತ್ವದ ರಾಜ್ಯ ಸರ್ಕಾರವು WGEEP ವರದಿಯನ್ನು ವಿರೋಧಿಸಿತ್ತು. ಸ್ವತಂತ್ರ ವರದಿ ನೀಡಲು ಉಮ್ಮನ್ ವಿ ಉಮ್ಮನ್ ನೇತೃತ್ವದ ರಾಜ್ಯಮಟ್ಟದ ಮತ್ತೊಂದು ಸಮಿತಿಗೆ ಜವಾಬ್ದಾರಿ ನೀಡಿತ್ತು. ಆ ಸಮಯದಲ್ಲಿ, ಗಾಡ್ಗೀಳ್ ವರದಿಯ ಅನುಷ್ಠಾನಕ್ಕೆ ಒಲವು ತೋರಿದ ಕೆಲವೇ ಕೆಲವು ರಾಜಕಾರಣಿಗಳಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಪಿಟಿ ಥಾಮಸ್ ಕೂಡ ಒಬ್ಬರು.

“ವಾಸ್ತವವಾಗಿ, ಗಾಡ್ಗೀಳ್ ವರದಿಯು ಪಶ್ಚಿಮ ಘಟ್ಟಗಳ ಪರಿಸರ ಪ್ರಾಮುಖ್ಯತೆಯನ್ನು ಗುರುತಿಸಿತ್ತು. ಆದರೆ, ಕ್ಷುಲ್ಲಕ ರಾಜಕೀಯ ಕಾರಣಗಳಿಗಾಗಿ ಸರ್ಕಾರಗಳು ಅದನ್ನು ವಿರೋಧಿಸಿದ್ದವು. ಪರಿಸರ ದುರ್ಬಲ ಪ್ರದೇಶವನ್ನು ಕೇವಲ ಸರ್ಕಾರಿ ಆದೇಶದಿಂದ ದುರ್ಬಲವಲ್ಲ ಎಂದು ಕರೆಯಲು ಹೇಗೆ ಸಾಧ್ಯ? ಈಗಿನ ಕೇರಳದ ಎಡರಂಗ ಸರ್ಕಾರ ಇಡುಕ್ಕಿಯಲ್ಲಿ 1,500 ಚದರ ಅಡಿವರೆಗಿನ ಅನಧಿಕೃತ ನಿರ್ಮಾಣಗಳನ್ನು ಕ್ರಮಬದ್ಧಗೊಳಿಸಿದ ನಂತರ, ಅಕ್ರಮ ಕಲ್ಲುಗಣಿಗಾರಿಕೆಯನ್ನು ಕೂಡ ಸಕ್ರಮಗೊಳಿಸುವ ಪ್ರಯತ್ನ ಮಾಡಿರುವುದು ವಿಷಾದಕರ” ಎಂದು ಪಿಟಿ ಥಾಮಸ್ ಹೇಳಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕೇರಳದ ಪರಿಸರ ಸೂಕ್ಷ್ಮ ಪ್ರದೇಶಗಳು (ESZ-I,II)

ಗಾಡ್ಗೀಳ್ ನೇತೃತ್ವದ ಸಮಿತಿಯ ವರದಿಯ ಪ್ರಕಾರ, ವಯನಾಡ್‌ ಜಿಲ್ಲೆಯ ವೈತಿರಿ, ಮಾನಂತವಾಡಿ ಮತ್ತು ಸುಲ್ತಾನ್ ಬತ್ತೇರಿಗಳು ಪರಿಸರ ಸೂಕ್ಷ್ಮ ಪ್ರದೇಶ- Iರಲ್ಲಿ ಬರುತ್ತವೆ.

ಅದೇ ರೀತಿ ಮಲಪ್ಪುರಂನ ಪೆರಿಂದಲ್ಮನ್ನಾ ಮತ್ತು ತಿರೂರ್ ತಾಲೂಕುಗಳು ಪರಿಸರ ಸೂಕ್ಷ್ಮ ಪ್ರದೇಶ- IIರಲ್ಲಿ ಬರುವ ತಾಲೂಕುಗಳಲ್ಲಿ ಸೇರಿವೆ.

WGEEP ಸಮಿತಿ ಗುರುತಿಸಿದ ಕೇರಳದ ಪರಿಸರ ಸೂಕ್ಷ್ಮ ಸ್ಥಳಗಳು :

ಮಂಡಕೋಲ್, ಪಣತ್ತಡಿ, ಪೈದಲ್ಮಲ, ಬ್ರಹ್ಮಗಿರಿ- ತಿರುನೆಲ್ಲಿ, ವಯನಾಡ್, ಬಾಣಾಸುರ ಸಾಗರ್ – ಕುಟ್ಯಾಡಿ, ನಿಲಂಬೂರ್ – ಮೇಪ್ಪಾಡಿ, ಸೈಲೆಂಟ್ ವ್ಯಾಲಿ – ನ್ಯೂ ಅಮರಂಬಲಂ, ಸಿರುವಣಿ, ನೆಲ್ಲಿಯಂಪದಿ, ಪೀಚಿ – ವಝನಿ, ಅದಿರಪಲ್ಲಿ – ವಝಚಲ್, ಪೂಯಂಕುಟ್ಟಿ – ಮುನ್ನಾರ್, ಏಲಕ್ಕಿ ಬೆಟ್ಟಗಳು, ಪೆರಿಯಾರ್, ಕುಲತುಪುಝ, ಅಗಸ್ತ್ಯ ಮಾಲಾ, ಸಂರಕ್ಷಿತ ಪ್ರದೇಶಗಳ ಸುತ್ತಮುತ್ತಲಿನ ಪರಿಸರ ಸೂಕ್ಷ್ಮ ಪ್ರದೇಶಗಳು.

ಇದನ್ನೂ ಓದಿ : ವಯನಾಡ್ ಭೂಕುಸಿತ ದುರಂತ: 143 ಕ್ಕೆ ತಲುಪಿದ ಸಾವಿನ ಸಂಖ್ಯೆ, 186 ಜನರು ಪ್ರಾಣಾಪಾಯದಿಂದ ಪಾರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...