Homeಮುಖಪುಟವಯನಾಡ್ ಭೀಕರ ಭೂಕುಸಿತ : ಮತ್ತೆ ಮುನ್ನೆಲೆಗೆ ಬಂದ 'ಗಾಡ್ಗೀಳ್ ಸಮಿತಿ ವರದಿ'

ವಯನಾಡ್ ಭೀಕರ ಭೂಕುಸಿತ : ಮತ್ತೆ ಮುನ್ನೆಲೆಗೆ ಬಂದ ‘ಗಾಡ್ಗೀಳ್ ಸಮಿತಿ ವರದಿ’

ಮೆಪ್ಪಾಡಿಯಲ್ಲಿ ನಡೆಯುತ್ತಿರುವ ಪರಿಸರ ವಿರೋಧಿ ಚಟುವಟಿಕೆಗಳ ವಿರುದ್ಧ ವರದಿಯು ನಿರ್ದಿಷ್ಟವಾಗಿ ಎಚ್ಚರಿಕೆ ನೀಡಿತ್ತು

- Advertisement -
- Advertisement -

ಕೇರಳದ ವಯನಾಡ್‌ ಜಿಲ್ಲೆಯಲ್ಲಿ ಭೀಕರ ಭೂಕುಸಿತ, ಜಲಪ್ರಳಯ ಸಂಭವಿಸಿ ನೂರಾರು ಜನರು ಪ್ರಾಣ ಕಳೆದುಕೊಂಡಿರುವ ನಡುವೆ ‘ಪರಿಸರ ಸೂಕ್ಷ್ಮ ಪ್ರದೇಶಗಳಲ್ಲಿ (ಇಎಸ್‌ಎ) ವಿವೇಚನಾರಹಿತ ಕಲ್ಲುಗಣಿಗಾರಿಕೆ ಮತ್ತು ನಿರ್ಮಾಣ ಚಟುವಟಿಕೆಗಳ ವಿರುದ್ಧ ಎಚ್ಚರಿಕೆ ನೀಡಿದ್ದ 13 ವರ್ಷಗಳ ಹಿಂದಿನ ವರದಿಯೊಂದು ಮುನ್ನೆಲೆಗೆ ಬಂದಿದೆ.

ಮಾಧವ್ ಗಾಡ್ಗೀಳ್ ನೇತೃತ್ವದ ‘ಪಶ್ಚಿಮ ಘಟ್ಟಗಳ ಪರಿಸರ ತಜ್ಞರ ಸಮಿತಿ'(WGEEP) ಯು ಆಗಸ್ಟ್ 2011ರಲ್ಲಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದ ವರದಿಯಲ್ಲಿ ವಯನಾಡ್‌ ಭೂಕುಸಿತ ದುರಂತ ಸಂಭವಿಸಿರುವ ಮೆಪ್ಪಾಡಿಯಲ್ಲಿ ನಡೆಯುತ್ತಿರುವ ಪರಿಸರ ವಿರೋಧಿ ಚಟುವಟಿಕೆಗಳ ವಿರುದ್ಧ ನಿರ್ದಿಷ್ಟವಾಗಿ ಎಚ್ಚರಿಕೆ ನೀಡಿತ್ತು.

ಜುಲೈ 30ರಂದು ಭೀಕರ ಭೂಕುಸಿತ ಸಂಭವಿಸಿ ನರಕ ಸದೃಶ್ಯವಾಗಿ ಮಾರ್ಪಟ್ಟಿರುವ ಮುಂಡಕ್ಕೈ, ಚೂರಲ್ಮಲಾ, ಅಟ್ಟಮಾಲ ಮತ್ತು ನೂಲ್ಪುಝ ಗ್ರಾಮಗಳು ವಯನಾಡ್‌ ಜಿಲ್ಲೆಯ ವೈತಿರಿ ತಾಲೂಕಿನಲ್ಲಿರುವ ಮೆಪ್ಪಾಡಿ ವ್ಯಾಪ್ತಿಯಲ್ಲಿ ಬರುತ್ತವೆ. ಈ ಮೆಪ್ಪಾಡಿ ಗಾಡ್ಗೀಳ್ ಸಮಿತಿ ಗುರುತಿಸಿದ ಕೇರಳದ 18 ಪರಿಸರ ಸೂಕ್ಷ್ಮ ಸ್ಥಳಗಳಲ್ಲಿ (ಇಎಸ್ಎಲ್) ಒಂದಾಗಿದೆ.

ಪರಿಸರ ವಿರೋಧಿ ಚಟುವಟಿಕೆಗಳನ್ನು ತಡೆಯಲು ಮಾಧವ್ ಗಾಡ್ಗೀಳ್ ಸಮಿತಿ ಸಲ್ಲಿಸಿದ್ದ ವರದಿಯಲ್ಲಿನ ಶಿಫಾರಸ್ಸುಗಳನ್ನು ಜಾರಿಗೊಳಿಸುವಲ್ಲಿ ಕೇಂದ್ರ ಮತ್ತು ಕೇರಳ ರಾಜ್ಯ ಸರ್ಕಾರಗಳು ಉತ್ಸಾಹ ತೋರಿಲ್ಲ. ಬದಲಿಗೆ ಅದನ್ನು ದುರ್ಬಲಗೊಳಿಸುವ ಕ್ರಮಗಳಿಗೆ ಮುಂದಾಯಿತು.

ಮಾಧವ್ ಗಾಡ್ಗೀಳ್ ನೇತೃತ್ವದ ಸಮಿತಿಯು ತನ್ನ ವರದಿಯಲ್ಲಿ ಪಶ್ಚಿಮ ಘಟ್ಟಗಳಾದ್ಯಂತ ಪರಿಸರ ಸೂಕ್ಷ್ಮ ಪ್ರದೇಶಗಳು ಮತ್ತು ವಲಯಗಳನ್ನು ವರ್ಗೀಕರಿಸಲು ಪ್ರಸ್ತಾಪಿಸಿತ್ತು.

ಪರಿಸರ ಸೂಕ್ಷ್ಮ ಪ್ರದೇಶ-1(ESZ-I)ಮತ್ತು 2 (ESZ-II)ಎಂದು ವರ್ಗೀಕರಿಸಿ, ಈ ಪ್ರದೇಶಗಳಲ್ಲಿ ನಿರ್ಮಾಣ ಚಟುವಟಿಕೆಗಳ ಮೇಲೆ ಸ್ಪಷ್ಟವಾದ ನಿರ್ಬಂಧಗಳನ್ನು ವಿಧಿಸಲು ಸಮಿತಿಯು ಶಿಫಾರಸು ಮಾಡಿತ್ತು.

“ನಾವು ಪರಿಸರ ಸೂಕ್ಷ್ಮ ಪ್ರದೇಶ -Iರಲ್ಲಿ ಕಲ್ಲುಗಣಿಗಾರಿಕೆ ಮತ್ತು ಕೆಂಪು ವರ್ಗದ ಕೈಗಾರಿಕೆಗಳಿಗೆ ಅವಕಾಶ ನೀಡಬಾರದು ಎಂದು ಪ್ರಸ್ತಾಪಿಸಿದ್ದೆವು. ಹಾಗೆಯೇ, ಕಲ್ಲುಗಣಿಗಾರಿಕೆಗೆ ಅನುಮತಿ ಇರುವ ಪ್ರದೇಶಗಳಲ್ಲಿ, ಕ್ವಾರಿಗಳು ಜನವಸತಿಯಿಂದ ಕನಿಷ್ಠ 100 ಮೀಟರ್ ದೂರದಲ್ಲಿರಬೇಕು ಎಂದು ಸೂಚಿಸಿದ್ದೆವು. ಆದರೆ, ಸರ್ಕಾರ ಕ್ವಾರಿಗಳು ಮತ್ತು ಜನವಸತಿ ಪ್ರದೇಶದ ನಡುವಿನ ಅಂತರವನ್ನು ಕಡಿತಗೊಳಿಸಿ 50 ಮೀಟರ್‌ ಮಾಡಿತು” ಎಂದು ಎಂದು WGEEP ಸದಸ್ಯರಾಗಿದ್ದ ಪರಿಸರವಾದಿ ವಿಎಸ್ ವಿಜಯನ್ ಹೇಳಿದ್ದಾರೆ.

ಕೇಂದ್ರ ಸರ್ಕಾರವು ನಂತರ ಗಾಡ್ಗೀಳ್ ವರದಿಯನ್ನು ತಿರಸ್ಕರಿಸಿತ್ತು. ಮತ್ತೊಂದು ವರದಿ ನೀಡಲು ಕಸ್ತೂರಿರಂಗನ್ ನೇತೃತ್ವದ ಹೊಸ ಸಮಿತಿಯನ್ನು ನೇಮಿಸಿತ್ತು. ಗಾಡ್ಗೀಳ್ ಸಮಿತಿಯು ಸಂಪೂರ್ಣ ಪಶ್ಚಿಮ ಘಟ್ಟಗಳನ್ನು ಪರಿಸರ ಸೂಕ್ಷ್ಮ ಪ್ರದೇಶ (ಇಎಸ್‌ಎ) ಎಂದು ಸೂಚಿಸಲು ಶಿಫಾರಸು ಮಾಡಿತ್ತು. ಆದರೆ, ಕಸ್ತೂರಿರಂಗನ್ ಸಮಿತಿಯು ಇಎಸ್ಎಗಳ ವ್ಯಾಪ್ತಿಯನ್ನು ಪಶ್ಚಿಮ ಘಟ್ಟಗಳ ಶೇ. 37ಕ್ಕೆಇಳಿಸಿತು.

ಕೇರಳದಲ್ಲಿ ಮಾಜಿ ಸಿಎಂ ದಿವಂಗತ ಉಮ್ಮನ್ ಚಾಂಡಿ ನೇತೃತ್ವದ ರಾಜ್ಯ ಸರ್ಕಾರವು WGEEP ವರದಿಯನ್ನು ವಿರೋಧಿಸಿತ್ತು. ಸ್ವತಂತ್ರ ವರದಿ ನೀಡಲು ಉಮ್ಮನ್ ವಿ ಉಮ್ಮನ್ ನೇತೃತ್ವದ ರಾಜ್ಯಮಟ್ಟದ ಮತ್ತೊಂದು ಸಮಿತಿಗೆ ಜವಾಬ್ದಾರಿ ನೀಡಿತ್ತು. ಆ ಸಮಯದಲ್ಲಿ, ಗಾಡ್ಗೀಳ್ ವರದಿಯ ಅನುಷ್ಠಾನಕ್ಕೆ ಒಲವು ತೋರಿದ ಕೆಲವೇ ಕೆಲವು ರಾಜಕಾರಣಿಗಳಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಪಿಟಿ ಥಾಮಸ್ ಕೂಡ ಒಬ್ಬರು.

“ವಾಸ್ತವವಾಗಿ, ಗಾಡ್ಗೀಳ್ ವರದಿಯು ಪಶ್ಚಿಮ ಘಟ್ಟಗಳ ಪರಿಸರ ಪ್ರಾಮುಖ್ಯತೆಯನ್ನು ಗುರುತಿಸಿತ್ತು. ಆದರೆ, ಕ್ಷುಲ್ಲಕ ರಾಜಕೀಯ ಕಾರಣಗಳಿಗಾಗಿ ಸರ್ಕಾರಗಳು ಅದನ್ನು ವಿರೋಧಿಸಿದ್ದವು. ಪರಿಸರ ದುರ್ಬಲ ಪ್ರದೇಶವನ್ನು ಕೇವಲ ಸರ್ಕಾರಿ ಆದೇಶದಿಂದ ದುರ್ಬಲವಲ್ಲ ಎಂದು ಕರೆಯಲು ಹೇಗೆ ಸಾಧ್ಯ? ಈಗಿನ ಕೇರಳದ ಎಡರಂಗ ಸರ್ಕಾರ ಇಡುಕ್ಕಿಯಲ್ಲಿ 1,500 ಚದರ ಅಡಿವರೆಗಿನ ಅನಧಿಕೃತ ನಿರ್ಮಾಣಗಳನ್ನು ಕ್ರಮಬದ್ಧಗೊಳಿಸಿದ ನಂತರ, ಅಕ್ರಮ ಕಲ್ಲುಗಣಿಗಾರಿಕೆಯನ್ನು ಕೂಡ ಸಕ್ರಮಗೊಳಿಸುವ ಪ್ರಯತ್ನ ಮಾಡಿರುವುದು ವಿಷಾದಕರ” ಎಂದು ಪಿಟಿ ಥಾಮಸ್ ಹೇಳಿರುವುದಾಗಿ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಕೇರಳದ ಪರಿಸರ ಸೂಕ್ಷ್ಮ ಪ್ರದೇಶಗಳು (ESZ-I,II)

ಗಾಡ್ಗೀಳ್ ನೇತೃತ್ವದ ಸಮಿತಿಯ ವರದಿಯ ಪ್ರಕಾರ, ವಯನಾಡ್‌ ಜಿಲ್ಲೆಯ ವೈತಿರಿ, ಮಾನಂತವಾಡಿ ಮತ್ತು ಸುಲ್ತಾನ್ ಬತ್ತೇರಿಗಳು ಪರಿಸರ ಸೂಕ್ಷ್ಮ ಪ್ರದೇಶ- Iರಲ್ಲಿ ಬರುತ್ತವೆ.

ಅದೇ ರೀತಿ ಮಲಪ್ಪುರಂನ ಪೆರಿಂದಲ್ಮನ್ನಾ ಮತ್ತು ತಿರೂರ್ ತಾಲೂಕುಗಳು ಪರಿಸರ ಸೂಕ್ಷ್ಮ ಪ್ರದೇಶ- IIರಲ್ಲಿ ಬರುವ ತಾಲೂಕುಗಳಲ್ಲಿ ಸೇರಿವೆ.

WGEEP ಸಮಿತಿ ಗುರುತಿಸಿದ ಕೇರಳದ ಪರಿಸರ ಸೂಕ್ಷ್ಮ ಸ್ಥಳಗಳು :

ಮಂಡಕೋಲ್, ಪಣತ್ತಡಿ, ಪೈದಲ್ಮಲ, ಬ್ರಹ್ಮಗಿರಿ- ತಿರುನೆಲ್ಲಿ, ವಯನಾಡ್, ಬಾಣಾಸುರ ಸಾಗರ್ – ಕುಟ್ಯಾಡಿ, ನಿಲಂಬೂರ್ – ಮೇಪ್ಪಾಡಿ, ಸೈಲೆಂಟ್ ವ್ಯಾಲಿ – ನ್ಯೂ ಅಮರಂಬಲಂ, ಸಿರುವಣಿ, ನೆಲ್ಲಿಯಂಪದಿ, ಪೀಚಿ – ವಝನಿ, ಅದಿರಪಲ್ಲಿ – ವಝಚಲ್, ಪೂಯಂಕುಟ್ಟಿ – ಮುನ್ನಾರ್, ಏಲಕ್ಕಿ ಬೆಟ್ಟಗಳು, ಪೆರಿಯಾರ್, ಕುಲತುಪುಝ, ಅಗಸ್ತ್ಯ ಮಾಲಾ, ಸಂರಕ್ಷಿತ ಪ್ರದೇಶಗಳ ಸುತ್ತಮುತ್ತಲಿನ ಪರಿಸರ ಸೂಕ್ಷ್ಮ ಪ್ರದೇಶಗಳು.

ಇದನ್ನೂ ಓದಿ : ವಯನಾಡ್ ಭೂಕುಸಿತ ದುರಂತ: 143 ಕ್ಕೆ ತಲುಪಿದ ಸಾವಿನ ಸಂಖ್ಯೆ, 186 ಜನರು ಪ್ರಾಣಾಪಾಯದಿಂದ ಪಾರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...