Homeಮುಖಪುಟಮೋದಿಜಿ ಕನಿಷ್ಟ 4ಜಿ ಇಂಟರ್ನೆಟ್‌ ಆದರೂ ಕೊಡಿ: ಭಾವನಾತ್ಮಕ ಪತ್ರ ಬರೆದ ಕಾಶ್ಮೀರದ ಬಾಲಕ

ಮೋದಿಜಿ ಕನಿಷ್ಟ 4ಜಿ ಇಂಟರ್ನೆಟ್‌ ಆದರೂ ಕೊಡಿ: ಭಾವನಾತ್ಮಕ ಪತ್ರ ಬರೆದ ಕಾಶ್ಮೀರದ ಬಾಲಕ

ನಾನು 2019ರ ಆಗಸ್ಟ್‌ನಿಂದಲೇ ಶಾಲೆಯಿಂದ ಹೊರಗುಳಿದಿದ್ದೇನೆ. ( ಕಾರಣ ನಿಮಗೆ ಗೊತ್ತಿದೆ ) ಕೆಲ ದಿನಗಳ ಹಿಂದೆ ನಾನು ಶಾಲೆಗೆ ಹೋಗಲು ಆರಂಭಿಸಿದ್ದೇ ಆದರೆ ಕೊರೊನಾ ವೈರಸ್‌ ಕಾರಣಕ್ಕೆ ಮಾರ್ಚ್‌‌ನಿಂದ ಶಾಲೆಗಳನ್ನು ಮುಚ್ಚಲಾಯಿತು.

- Advertisement -
- Advertisement -

ಕೊರೊನಾ ಮುನ್ನೆಚ್ಚರಿಕೆಯ ಭಾಗವಾಗಿ ನಮ್ಮ ಪ್ರಧಾನಿ ಮೋದಿಯವರು 21 ದಿನಗಳ ಲಾಕ್‌ಡೌನ್‌ ಘೋಷಿಸಿದ್ದಾರೆ. ಅದರಲ್ಲಿ ಒಂದು ವಾರ ಕಳೆದಿದ್ದು ಇಷ್ಟಕ್ಕೆ ಬಹಳಷ್ಟು ಜನ ನಲುಗಿಹೋಗಿದ್ದಾರೆ. ಬಡವರು, ವಲಸೆ ಕಾರ್ಮಿಕರು, ನಿರಾಶ್ರಿತರು ಕಂಗೆಟ್ಟಿದ್ದಾರೆ.

ಇನ್ನು ಮನೆಯಲ್ಲಿರಲಾರದೇ ದಿನಸಿ ತರಲೆಂದೋ ಅಥವಾ ಇನ್ಯಾವುದೋ ಅಗತ್ಯ ಕೆಲಸ ಹೋದವರ ಮೇಲೆಯೂ ಕೂಡ ಪೊಲೀಸರು ಲಾಠಿ ಬೀಸಿ ಕೊರೊನಾಕ್ಕಿಂತ ಹೆಚ್ಚಿನ ಭೀತಿ ಉಂಟು ಮಾಡಿದ್ದಾರೆ. ಹಾಗಾಗಿ ಒಂದು ವಾರದ ಲಾಕ್‌ಡೌನ್‌ ತಡೆದುಕೊಳ್ಳಲು ದೇಶದ ಹಲವಾರು ಜನ ಹೆಣಗಾಡುತ್ತಿದ್ದಾರೆ.

ಇಂತಹ ಸಂದರ್ಭದಲ್ಲಿ ಆಗಸ್ಟ್‌ 05 ರಿಂದ ಎಂಟು ತಿಂಗಳ ಕಾಲ ಲಾಕ್‌ಡೌನ್‌ ಅನುಭವಿಸುತ್ತಿರುವ ಜಮ್ಮು ಕಾಶ್ಮೀರದ ಜನರ ಪರಿಸ್ಥಿತಿ ಹೇಗಿರಬಹುದು ಎಂದಾದರೂ ಊಹಿಸಿದ್ದೀರಾ? ಅಲ್ಲಿನ 5ನೇ ತರಗತಿಯ ಪುಟ್ಟ ಹುಡುಗನೊಬ್ಬ ಬರೆದಿರುವ ಪತ್ರ ಓದಿದರೆ ಅದರ ಭೀಕರತೆ ಅರ್ಥವಾಗಬಹುದು.

ಆ ಬಾಲಕನ ಪತ್ರಕ ಕನ್ನಡ ಅನುವಾದ ಈ ಕೆಳಗಿನಂತಿದೆ.

ಪ್ರಿಯ ಮೋದಿಜಿ,

ನನ್ನ ಪಿ.ಸಿ.ಎಚ್‌.ಎಸ್‌.ಎಸ್‌ ಶಾಲೆಯು ಒದಗಿಸಿರುವ ಆನ್‌ಲೈನ್‌ ತರಗತಿಗಳಲ್ಲಿ ಭಾಗವಹಿಸಲು ಸಾಧ್ಯವಾಗದಿರುವುದಕ್ಕೆ ನನಗೆ ಕೋಪ, ಒತ್ತಡ, ನೋವು ಮತ್ತು ಖಿನ್ನತೆ ಉಂಟಾಗಿದೆ. ಏಕೆಂದರೆ 2ಜಿ ಮೊಬೈಲ್‌ ನೆಟ್‌ವರ್ಕ್‌ ಕೆಲಸ ಮಾಡದ ಕಾರಣ ನಾನು ತರಗತಿಗಳಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ.

ನಾನು 2019ರ ಆಗಸ್ಟ್‌ನಿಂದಲೇ ಶಾಲೆಯಿಂದ ಹೊರಗುಳಿದಿದ್ದೇನೆ. ( ಕಾರಣ ನಿಮಗೆ ಗೊತ್ತಿದೆ ) ಕೆಲ ದಿನಗಳ ಹಿಂದೆ ನಾನು ಶಾಲೆಗೆ ಹೋಗಲು ಆರಂಭಿಸಿದ್ದೇ ಆದರೆ ಕೊರೊನಾ ವೈರಸ್‌ ಕಾರಣಕ್ಕೆ ಮಾರ್ಚ್‌‌ನಿಂದ ಶಾಲೆಗಳನ್ನು ಮುಚ್ಚಲಾಯಿತು. ಆಗ ನಮ್ಮ ಶಾಲಾ ಶಿಕ್ಷಕರು ಆನ್‌ಲೈನ್‌ ಮೂಲಕ ತರಗತಿಗಳನ್ನು ನಡೆಸಲು ತೀರ್ಮಾನಿಸಿದರು. ಆದರೆ 2ಜಿ ನೆಟ್‌ವರ್ಕ್‌ ಕಾರಣಕ್ಕೆ ಅದು ಸಾಧ್ಯವಾಗಿಲ್ಲ. ಹಾಗಾಗಿ ದಯವಿಟ್ಟು ನಮಗೆ 4ಜಿ ನೆಟ್‌‌ವರ್ಕ್‌ ಅನ್ನು ವಾಪಸ್ ಕೊಡಿ. ನನಗೆ ಕಲಿಕೆಯನ್ನು ಕಳೆದುಕೊಳ್ಳಲು ಇಷ್ಟವಿಲ್ಲ.

ಇಂತಿ

ಪಿ.ಸಿ.ಎಚ್‌.ಎಸ್‌.ಎಸ್‌ ಶಾಲಾ ವಿದ್ಯಾರ್ಥಿ

5ನೇ ತರಗತಿ.

ಈ ಬಾಲಕನ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಒಬ್ಬ ವಿದ್ಯಾರ್ಥಿಯು ತನ್ನ ಕಳವಳವನ್ನು ವ್ಯಕ್ತಪಡಿಸಿ, ಕೆಲವು ಪ್ರಶ್ನೆಗಳನ್ನು ಕೇಳಿದ ಪತ್ರವು ನಮ್ಮೆಲ್ಲ ಭಾರತೀಯರನ್ನು ಯೋಚಿಸುವಂತೆ ಮಾಡಿದೆ. ಇಂದು ದೇಶವು ಈ ಕಷ್ಟಕರ ಪರಿಸ್ಥಿತಿಯನ್ನು ಎದುರಿಸುತ್ತಿರುವಾಗ, ಎಲ್ಲಾ ವಿದ್ಯಾರ್ಥಿಗಳು ಇಂಟರ್ನೆಟ್ ಸಹಾಯದಿಂದ ಅಧ್ಯಯನ ಮಾಡುತ್ತಿದ್ದಾರೆ. ಆದರೆ ಕೆಲವು ವಿದ್ಯಾರ್ಥಿಗಳು ತಮ್ಮ ಅಧ್ಯಯನವನ್ನು ಮುಂದುವರಿಸಲು ಅದೇ ಅವಕಾಶವನ್ನು ಪಡೆಯುತ್ತಿಲ್ಲ. ಏಕೆಂದರೆ ಸರ್ಕಾರವು ಅವರಲ್ಲಿ 4 ಜಿ ಸೌಲಭ್ಯವನ್ನು ರದ್ದುಗೊಳಿಸಿದೆ. ಜಮ್ಮು ಮತ್ತು ಕಾಶ್ಮೀರದ ಸಾವಿರಾರು ವಿದ್ಯಾರ್ಥಿಗಳಿಗೆ ಒಂದೇ ರೀತಿಯ ಶಿಕ್ಷಣದ ಅವಕಾಶ ಸಿಗುತ್ತಿಲ್ಲ ಎಂಬ ಕಾರಣದಿಂದ ತೊಂದರೆಗೀಡಾದ 5 ನೇ ತರಗತಿಯ ವಿದ್ಯಾರ್ಥಿಯು ಪ್ರಧಾನಿಯನ್ನು ಉದ್ದೇಶಿಸಿ ಪತ್ರ ಬರೆದಿದ್ದಾರೆ ಎಂದು ಯೂತ್‌ ಫಾರ್‌ ಸ್ವರಾಜ್‌ ಅಭಿಪ್ರಾಯಪಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...