Homeಮುಖಪುಟಮೋದಿಜಿ ಕನಿಷ್ಟ 4ಜಿ ಇಂಟರ್ನೆಟ್‌ ಆದರೂ ಕೊಡಿ: ಭಾವನಾತ್ಮಕ ಪತ್ರ ಬರೆದ ಕಾಶ್ಮೀರದ ಬಾಲಕ

ಮೋದಿಜಿ ಕನಿಷ್ಟ 4ಜಿ ಇಂಟರ್ನೆಟ್‌ ಆದರೂ ಕೊಡಿ: ಭಾವನಾತ್ಮಕ ಪತ್ರ ಬರೆದ ಕಾಶ್ಮೀರದ ಬಾಲಕ

ನಾನು 2019ರ ಆಗಸ್ಟ್‌ನಿಂದಲೇ ಶಾಲೆಯಿಂದ ಹೊರಗುಳಿದಿದ್ದೇನೆ. ( ಕಾರಣ ನಿಮಗೆ ಗೊತ್ತಿದೆ ) ಕೆಲ ದಿನಗಳ ಹಿಂದೆ ನಾನು ಶಾಲೆಗೆ ಹೋಗಲು ಆರಂಭಿಸಿದ್ದೇ ಆದರೆ ಕೊರೊನಾ ವೈರಸ್‌ ಕಾರಣಕ್ಕೆ ಮಾರ್ಚ್‌‌ನಿಂದ ಶಾಲೆಗಳನ್ನು ಮುಚ್ಚಲಾಯಿತು.

- Advertisement -
- Advertisement -

ಕೊರೊನಾ ಮುನ್ನೆಚ್ಚರಿಕೆಯ ಭಾಗವಾಗಿ ನಮ್ಮ ಪ್ರಧಾನಿ ಮೋದಿಯವರು 21 ದಿನಗಳ ಲಾಕ್‌ಡೌನ್‌ ಘೋಷಿಸಿದ್ದಾರೆ. ಅದರಲ್ಲಿ ಒಂದು ವಾರ ಕಳೆದಿದ್ದು ಇಷ್ಟಕ್ಕೆ ಬಹಳಷ್ಟು ಜನ ನಲುಗಿಹೋಗಿದ್ದಾರೆ. ಬಡವರು, ವಲಸೆ ಕಾರ್ಮಿಕರು, ನಿರಾಶ್ರಿತರು ಕಂಗೆಟ್ಟಿದ್ದಾರೆ.

ಇನ್ನು ಮನೆಯಲ್ಲಿರಲಾರದೇ ದಿನಸಿ ತರಲೆಂದೋ ಅಥವಾ ಇನ್ಯಾವುದೋ ಅಗತ್ಯ ಕೆಲಸ ಹೋದವರ ಮೇಲೆಯೂ ಕೂಡ ಪೊಲೀಸರು ಲಾಠಿ ಬೀಸಿ ಕೊರೊನಾಕ್ಕಿಂತ ಹೆಚ್ಚಿನ ಭೀತಿ ಉಂಟು ಮಾಡಿದ್ದಾರೆ. ಹಾಗಾಗಿ ಒಂದು ವಾರದ ಲಾಕ್‌ಡೌನ್‌ ತಡೆದುಕೊಳ್ಳಲು ದೇಶದ ಹಲವಾರು ಜನ ಹೆಣಗಾಡುತ್ತಿದ್ದಾರೆ.

ಇಂತಹ ಸಂದರ್ಭದಲ್ಲಿ ಆಗಸ್ಟ್‌ 05 ರಿಂದ ಎಂಟು ತಿಂಗಳ ಕಾಲ ಲಾಕ್‌ಡೌನ್‌ ಅನುಭವಿಸುತ್ತಿರುವ ಜಮ್ಮು ಕಾಶ್ಮೀರದ ಜನರ ಪರಿಸ್ಥಿತಿ ಹೇಗಿರಬಹುದು ಎಂದಾದರೂ ಊಹಿಸಿದ್ದೀರಾ? ಅಲ್ಲಿನ 5ನೇ ತರಗತಿಯ ಪುಟ್ಟ ಹುಡುಗನೊಬ್ಬ ಬರೆದಿರುವ ಪತ್ರ ಓದಿದರೆ ಅದರ ಭೀಕರತೆ ಅರ್ಥವಾಗಬಹುದು.

ಆ ಬಾಲಕನ ಪತ್ರಕ ಕನ್ನಡ ಅನುವಾದ ಈ ಕೆಳಗಿನಂತಿದೆ.

ಪ್ರಿಯ ಮೋದಿಜಿ,

ನನ್ನ ಪಿ.ಸಿ.ಎಚ್‌.ಎಸ್‌.ಎಸ್‌ ಶಾಲೆಯು ಒದಗಿಸಿರುವ ಆನ್‌ಲೈನ್‌ ತರಗತಿಗಳಲ್ಲಿ ಭಾಗವಹಿಸಲು ಸಾಧ್ಯವಾಗದಿರುವುದಕ್ಕೆ ನನಗೆ ಕೋಪ, ಒತ್ತಡ, ನೋವು ಮತ್ತು ಖಿನ್ನತೆ ಉಂಟಾಗಿದೆ. ಏಕೆಂದರೆ 2ಜಿ ಮೊಬೈಲ್‌ ನೆಟ್‌ವರ್ಕ್‌ ಕೆಲಸ ಮಾಡದ ಕಾರಣ ನಾನು ತರಗತಿಗಳಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ.

ನಾನು 2019ರ ಆಗಸ್ಟ್‌ನಿಂದಲೇ ಶಾಲೆಯಿಂದ ಹೊರಗುಳಿದಿದ್ದೇನೆ. ( ಕಾರಣ ನಿಮಗೆ ಗೊತ್ತಿದೆ ) ಕೆಲ ದಿನಗಳ ಹಿಂದೆ ನಾನು ಶಾಲೆಗೆ ಹೋಗಲು ಆರಂಭಿಸಿದ್ದೇ ಆದರೆ ಕೊರೊನಾ ವೈರಸ್‌ ಕಾರಣಕ್ಕೆ ಮಾರ್ಚ್‌‌ನಿಂದ ಶಾಲೆಗಳನ್ನು ಮುಚ್ಚಲಾಯಿತು. ಆಗ ನಮ್ಮ ಶಾಲಾ ಶಿಕ್ಷಕರು ಆನ್‌ಲೈನ್‌ ಮೂಲಕ ತರಗತಿಗಳನ್ನು ನಡೆಸಲು ತೀರ್ಮಾನಿಸಿದರು. ಆದರೆ 2ಜಿ ನೆಟ್‌ವರ್ಕ್‌ ಕಾರಣಕ್ಕೆ ಅದು ಸಾಧ್ಯವಾಗಿಲ್ಲ. ಹಾಗಾಗಿ ದಯವಿಟ್ಟು ನಮಗೆ 4ಜಿ ನೆಟ್‌‌ವರ್ಕ್‌ ಅನ್ನು ವಾಪಸ್ ಕೊಡಿ. ನನಗೆ ಕಲಿಕೆಯನ್ನು ಕಳೆದುಕೊಳ್ಳಲು ಇಷ್ಟವಿಲ್ಲ.

ಇಂತಿ

ಪಿ.ಸಿ.ಎಚ್‌.ಎಸ್‌.ಎಸ್‌ ಶಾಲಾ ವಿದ್ಯಾರ್ಥಿ

5ನೇ ತರಗತಿ.

ಈ ಬಾಲಕನ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಒಬ್ಬ ವಿದ್ಯಾರ್ಥಿಯು ತನ್ನ ಕಳವಳವನ್ನು ವ್ಯಕ್ತಪಡಿಸಿ, ಕೆಲವು ಪ್ರಶ್ನೆಗಳನ್ನು ಕೇಳಿದ ಪತ್ರವು ನಮ್ಮೆಲ್ಲ ಭಾರತೀಯರನ್ನು ಯೋಚಿಸುವಂತೆ ಮಾಡಿದೆ. ಇಂದು ದೇಶವು ಈ ಕಷ್ಟಕರ ಪರಿಸ್ಥಿತಿಯನ್ನು ಎದುರಿಸುತ್ತಿರುವಾಗ, ಎಲ್ಲಾ ವಿದ್ಯಾರ್ಥಿಗಳು ಇಂಟರ್ನೆಟ್ ಸಹಾಯದಿಂದ ಅಧ್ಯಯನ ಮಾಡುತ್ತಿದ್ದಾರೆ. ಆದರೆ ಕೆಲವು ವಿದ್ಯಾರ್ಥಿಗಳು ತಮ್ಮ ಅಧ್ಯಯನವನ್ನು ಮುಂದುವರಿಸಲು ಅದೇ ಅವಕಾಶವನ್ನು ಪಡೆಯುತ್ತಿಲ್ಲ. ಏಕೆಂದರೆ ಸರ್ಕಾರವು ಅವರಲ್ಲಿ 4 ಜಿ ಸೌಲಭ್ಯವನ್ನು ರದ್ದುಗೊಳಿಸಿದೆ. ಜಮ್ಮು ಮತ್ತು ಕಾಶ್ಮೀರದ ಸಾವಿರಾರು ವಿದ್ಯಾರ್ಥಿಗಳಿಗೆ ಒಂದೇ ರೀತಿಯ ಶಿಕ್ಷಣದ ಅವಕಾಶ ಸಿಗುತ್ತಿಲ್ಲ ಎಂಬ ಕಾರಣದಿಂದ ತೊಂದರೆಗೀಡಾದ 5 ನೇ ತರಗತಿಯ ವಿದ್ಯಾರ್ಥಿಯು ಪ್ರಧಾನಿಯನ್ನು ಉದ್ದೇಶಿಸಿ ಪತ್ರ ಬರೆದಿದ್ದಾರೆ ಎಂದು ಯೂತ್‌ ಫಾರ್‌ ಸ್ವರಾಜ್‌ ಅಭಿಪ್ರಾಯಪಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...