Homeಮುಖಪುಟಮೋದಿಜಿ ಕನಿಷ್ಟ 4ಜಿ ಇಂಟರ್ನೆಟ್‌ ಆದರೂ ಕೊಡಿ: ಭಾವನಾತ್ಮಕ ಪತ್ರ ಬರೆದ ಕಾಶ್ಮೀರದ ಬಾಲಕ

ಮೋದಿಜಿ ಕನಿಷ್ಟ 4ಜಿ ಇಂಟರ್ನೆಟ್‌ ಆದರೂ ಕೊಡಿ: ಭಾವನಾತ್ಮಕ ಪತ್ರ ಬರೆದ ಕಾಶ್ಮೀರದ ಬಾಲಕ

ನಾನು 2019ರ ಆಗಸ್ಟ್‌ನಿಂದಲೇ ಶಾಲೆಯಿಂದ ಹೊರಗುಳಿದಿದ್ದೇನೆ. ( ಕಾರಣ ನಿಮಗೆ ಗೊತ್ತಿದೆ ) ಕೆಲ ದಿನಗಳ ಹಿಂದೆ ನಾನು ಶಾಲೆಗೆ ಹೋಗಲು ಆರಂಭಿಸಿದ್ದೇ ಆದರೆ ಕೊರೊನಾ ವೈರಸ್‌ ಕಾರಣಕ್ಕೆ ಮಾರ್ಚ್‌‌ನಿಂದ ಶಾಲೆಗಳನ್ನು ಮುಚ್ಚಲಾಯಿತು.

- Advertisement -
- Advertisement -

ಕೊರೊನಾ ಮುನ್ನೆಚ್ಚರಿಕೆಯ ಭಾಗವಾಗಿ ನಮ್ಮ ಪ್ರಧಾನಿ ಮೋದಿಯವರು 21 ದಿನಗಳ ಲಾಕ್‌ಡೌನ್‌ ಘೋಷಿಸಿದ್ದಾರೆ. ಅದರಲ್ಲಿ ಒಂದು ವಾರ ಕಳೆದಿದ್ದು ಇಷ್ಟಕ್ಕೆ ಬಹಳಷ್ಟು ಜನ ನಲುಗಿಹೋಗಿದ್ದಾರೆ. ಬಡವರು, ವಲಸೆ ಕಾರ್ಮಿಕರು, ನಿರಾಶ್ರಿತರು ಕಂಗೆಟ್ಟಿದ್ದಾರೆ.

ಇನ್ನು ಮನೆಯಲ್ಲಿರಲಾರದೇ ದಿನಸಿ ತರಲೆಂದೋ ಅಥವಾ ಇನ್ಯಾವುದೋ ಅಗತ್ಯ ಕೆಲಸ ಹೋದವರ ಮೇಲೆಯೂ ಕೂಡ ಪೊಲೀಸರು ಲಾಠಿ ಬೀಸಿ ಕೊರೊನಾಕ್ಕಿಂತ ಹೆಚ್ಚಿನ ಭೀತಿ ಉಂಟು ಮಾಡಿದ್ದಾರೆ. ಹಾಗಾಗಿ ಒಂದು ವಾರದ ಲಾಕ್‌ಡೌನ್‌ ತಡೆದುಕೊಳ್ಳಲು ದೇಶದ ಹಲವಾರು ಜನ ಹೆಣಗಾಡುತ್ತಿದ್ದಾರೆ.

ಇಂತಹ ಸಂದರ್ಭದಲ್ಲಿ ಆಗಸ್ಟ್‌ 05 ರಿಂದ ಎಂಟು ತಿಂಗಳ ಕಾಲ ಲಾಕ್‌ಡೌನ್‌ ಅನುಭವಿಸುತ್ತಿರುವ ಜಮ್ಮು ಕಾಶ್ಮೀರದ ಜನರ ಪರಿಸ್ಥಿತಿ ಹೇಗಿರಬಹುದು ಎಂದಾದರೂ ಊಹಿಸಿದ್ದೀರಾ? ಅಲ್ಲಿನ 5ನೇ ತರಗತಿಯ ಪುಟ್ಟ ಹುಡುಗನೊಬ್ಬ ಬರೆದಿರುವ ಪತ್ರ ಓದಿದರೆ ಅದರ ಭೀಕರತೆ ಅರ್ಥವಾಗಬಹುದು.

ಆ ಬಾಲಕನ ಪತ್ರಕ ಕನ್ನಡ ಅನುವಾದ ಈ ಕೆಳಗಿನಂತಿದೆ.

ಪ್ರಿಯ ಮೋದಿಜಿ,

ನನ್ನ ಪಿ.ಸಿ.ಎಚ್‌.ಎಸ್‌.ಎಸ್‌ ಶಾಲೆಯು ಒದಗಿಸಿರುವ ಆನ್‌ಲೈನ್‌ ತರಗತಿಗಳಲ್ಲಿ ಭಾಗವಹಿಸಲು ಸಾಧ್ಯವಾಗದಿರುವುದಕ್ಕೆ ನನಗೆ ಕೋಪ, ಒತ್ತಡ, ನೋವು ಮತ್ತು ಖಿನ್ನತೆ ಉಂಟಾಗಿದೆ. ಏಕೆಂದರೆ 2ಜಿ ಮೊಬೈಲ್‌ ನೆಟ್‌ವರ್ಕ್‌ ಕೆಲಸ ಮಾಡದ ಕಾರಣ ನಾನು ತರಗತಿಗಳಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ.

ನಾನು 2019ರ ಆಗಸ್ಟ್‌ನಿಂದಲೇ ಶಾಲೆಯಿಂದ ಹೊರಗುಳಿದಿದ್ದೇನೆ. ( ಕಾರಣ ನಿಮಗೆ ಗೊತ್ತಿದೆ ) ಕೆಲ ದಿನಗಳ ಹಿಂದೆ ನಾನು ಶಾಲೆಗೆ ಹೋಗಲು ಆರಂಭಿಸಿದ್ದೇ ಆದರೆ ಕೊರೊನಾ ವೈರಸ್‌ ಕಾರಣಕ್ಕೆ ಮಾರ್ಚ್‌‌ನಿಂದ ಶಾಲೆಗಳನ್ನು ಮುಚ್ಚಲಾಯಿತು. ಆಗ ನಮ್ಮ ಶಾಲಾ ಶಿಕ್ಷಕರು ಆನ್‌ಲೈನ್‌ ಮೂಲಕ ತರಗತಿಗಳನ್ನು ನಡೆಸಲು ತೀರ್ಮಾನಿಸಿದರು. ಆದರೆ 2ಜಿ ನೆಟ್‌ವರ್ಕ್‌ ಕಾರಣಕ್ಕೆ ಅದು ಸಾಧ್ಯವಾಗಿಲ್ಲ. ಹಾಗಾಗಿ ದಯವಿಟ್ಟು ನಮಗೆ 4ಜಿ ನೆಟ್‌‌ವರ್ಕ್‌ ಅನ್ನು ವಾಪಸ್ ಕೊಡಿ. ನನಗೆ ಕಲಿಕೆಯನ್ನು ಕಳೆದುಕೊಳ್ಳಲು ಇಷ್ಟವಿಲ್ಲ.

ಇಂತಿ

ಪಿ.ಸಿ.ಎಚ್‌.ಎಸ್‌.ಎಸ್‌ ಶಾಲಾ ವಿದ್ಯಾರ್ಥಿ

5ನೇ ತರಗತಿ.

ಈ ಬಾಲಕನ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಒಬ್ಬ ವಿದ್ಯಾರ್ಥಿಯು ತನ್ನ ಕಳವಳವನ್ನು ವ್ಯಕ್ತಪಡಿಸಿ, ಕೆಲವು ಪ್ರಶ್ನೆಗಳನ್ನು ಕೇಳಿದ ಪತ್ರವು ನಮ್ಮೆಲ್ಲ ಭಾರತೀಯರನ್ನು ಯೋಚಿಸುವಂತೆ ಮಾಡಿದೆ. ಇಂದು ದೇಶವು ಈ ಕಷ್ಟಕರ ಪರಿಸ್ಥಿತಿಯನ್ನು ಎದುರಿಸುತ್ತಿರುವಾಗ, ಎಲ್ಲಾ ವಿದ್ಯಾರ್ಥಿಗಳು ಇಂಟರ್ನೆಟ್ ಸಹಾಯದಿಂದ ಅಧ್ಯಯನ ಮಾಡುತ್ತಿದ್ದಾರೆ. ಆದರೆ ಕೆಲವು ವಿದ್ಯಾರ್ಥಿಗಳು ತಮ್ಮ ಅಧ್ಯಯನವನ್ನು ಮುಂದುವರಿಸಲು ಅದೇ ಅವಕಾಶವನ್ನು ಪಡೆಯುತ್ತಿಲ್ಲ. ಏಕೆಂದರೆ ಸರ್ಕಾರವು ಅವರಲ್ಲಿ 4 ಜಿ ಸೌಲಭ್ಯವನ್ನು ರದ್ದುಗೊಳಿಸಿದೆ. ಜಮ್ಮು ಮತ್ತು ಕಾಶ್ಮೀರದ ಸಾವಿರಾರು ವಿದ್ಯಾರ್ಥಿಗಳಿಗೆ ಒಂದೇ ರೀತಿಯ ಶಿಕ್ಷಣದ ಅವಕಾಶ ಸಿಗುತ್ತಿಲ್ಲ ಎಂಬ ಕಾರಣದಿಂದ ತೊಂದರೆಗೀಡಾದ 5 ನೇ ತರಗತಿಯ ವಿದ್ಯಾರ್ಥಿಯು ಪ್ರಧಾನಿಯನ್ನು ಉದ್ದೇಶಿಸಿ ಪತ್ರ ಬರೆದಿದ್ದಾರೆ ಎಂದು ಯೂತ್‌ ಫಾರ್‌ ಸ್ವರಾಜ್‌ ಅಭಿಪ್ರಾಯಪಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...