Homeಮುಖಪುಟಮೋದಿಜಿ ಕನಿಷ್ಟ 4ಜಿ ಇಂಟರ್ನೆಟ್‌ ಆದರೂ ಕೊಡಿ: ಭಾವನಾತ್ಮಕ ಪತ್ರ ಬರೆದ ಕಾಶ್ಮೀರದ ಬಾಲಕ

ಮೋದಿಜಿ ಕನಿಷ್ಟ 4ಜಿ ಇಂಟರ್ನೆಟ್‌ ಆದರೂ ಕೊಡಿ: ಭಾವನಾತ್ಮಕ ಪತ್ರ ಬರೆದ ಕಾಶ್ಮೀರದ ಬಾಲಕ

ನಾನು 2019ರ ಆಗಸ್ಟ್‌ನಿಂದಲೇ ಶಾಲೆಯಿಂದ ಹೊರಗುಳಿದಿದ್ದೇನೆ. ( ಕಾರಣ ನಿಮಗೆ ಗೊತ್ತಿದೆ ) ಕೆಲ ದಿನಗಳ ಹಿಂದೆ ನಾನು ಶಾಲೆಗೆ ಹೋಗಲು ಆರಂಭಿಸಿದ್ದೇ ಆದರೆ ಕೊರೊನಾ ವೈರಸ್‌ ಕಾರಣಕ್ಕೆ ಮಾರ್ಚ್‌‌ನಿಂದ ಶಾಲೆಗಳನ್ನು ಮುಚ್ಚಲಾಯಿತು.

- Advertisement -
- Advertisement -

ಕೊರೊನಾ ಮುನ್ನೆಚ್ಚರಿಕೆಯ ಭಾಗವಾಗಿ ನಮ್ಮ ಪ್ರಧಾನಿ ಮೋದಿಯವರು 21 ದಿನಗಳ ಲಾಕ್‌ಡೌನ್‌ ಘೋಷಿಸಿದ್ದಾರೆ. ಅದರಲ್ಲಿ ಒಂದು ವಾರ ಕಳೆದಿದ್ದು ಇಷ್ಟಕ್ಕೆ ಬಹಳಷ್ಟು ಜನ ನಲುಗಿಹೋಗಿದ್ದಾರೆ. ಬಡವರು, ವಲಸೆ ಕಾರ್ಮಿಕರು, ನಿರಾಶ್ರಿತರು ಕಂಗೆಟ್ಟಿದ್ದಾರೆ.

ಇನ್ನು ಮನೆಯಲ್ಲಿರಲಾರದೇ ದಿನಸಿ ತರಲೆಂದೋ ಅಥವಾ ಇನ್ಯಾವುದೋ ಅಗತ್ಯ ಕೆಲಸ ಹೋದವರ ಮೇಲೆಯೂ ಕೂಡ ಪೊಲೀಸರು ಲಾಠಿ ಬೀಸಿ ಕೊರೊನಾಕ್ಕಿಂತ ಹೆಚ್ಚಿನ ಭೀತಿ ಉಂಟು ಮಾಡಿದ್ದಾರೆ. ಹಾಗಾಗಿ ಒಂದು ವಾರದ ಲಾಕ್‌ಡೌನ್‌ ತಡೆದುಕೊಳ್ಳಲು ದೇಶದ ಹಲವಾರು ಜನ ಹೆಣಗಾಡುತ್ತಿದ್ದಾರೆ.

ಇಂತಹ ಸಂದರ್ಭದಲ್ಲಿ ಆಗಸ್ಟ್‌ 05 ರಿಂದ ಎಂಟು ತಿಂಗಳ ಕಾಲ ಲಾಕ್‌ಡೌನ್‌ ಅನುಭವಿಸುತ್ತಿರುವ ಜಮ್ಮು ಕಾಶ್ಮೀರದ ಜನರ ಪರಿಸ್ಥಿತಿ ಹೇಗಿರಬಹುದು ಎಂದಾದರೂ ಊಹಿಸಿದ್ದೀರಾ? ಅಲ್ಲಿನ 5ನೇ ತರಗತಿಯ ಪುಟ್ಟ ಹುಡುಗನೊಬ್ಬ ಬರೆದಿರುವ ಪತ್ರ ಓದಿದರೆ ಅದರ ಭೀಕರತೆ ಅರ್ಥವಾಗಬಹುದು.

ಆ ಬಾಲಕನ ಪತ್ರಕ ಕನ್ನಡ ಅನುವಾದ ಈ ಕೆಳಗಿನಂತಿದೆ.

ಪ್ರಿಯ ಮೋದಿಜಿ,

ನನ್ನ ಪಿ.ಸಿ.ಎಚ್‌.ಎಸ್‌.ಎಸ್‌ ಶಾಲೆಯು ಒದಗಿಸಿರುವ ಆನ್‌ಲೈನ್‌ ತರಗತಿಗಳಲ್ಲಿ ಭಾಗವಹಿಸಲು ಸಾಧ್ಯವಾಗದಿರುವುದಕ್ಕೆ ನನಗೆ ಕೋಪ, ಒತ್ತಡ, ನೋವು ಮತ್ತು ಖಿನ್ನತೆ ಉಂಟಾಗಿದೆ. ಏಕೆಂದರೆ 2ಜಿ ಮೊಬೈಲ್‌ ನೆಟ್‌ವರ್ಕ್‌ ಕೆಲಸ ಮಾಡದ ಕಾರಣ ನಾನು ತರಗತಿಗಳಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ.

ನಾನು 2019ರ ಆಗಸ್ಟ್‌ನಿಂದಲೇ ಶಾಲೆಯಿಂದ ಹೊರಗುಳಿದಿದ್ದೇನೆ. ( ಕಾರಣ ನಿಮಗೆ ಗೊತ್ತಿದೆ ) ಕೆಲ ದಿನಗಳ ಹಿಂದೆ ನಾನು ಶಾಲೆಗೆ ಹೋಗಲು ಆರಂಭಿಸಿದ್ದೇ ಆದರೆ ಕೊರೊನಾ ವೈರಸ್‌ ಕಾರಣಕ್ಕೆ ಮಾರ್ಚ್‌‌ನಿಂದ ಶಾಲೆಗಳನ್ನು ಮುಚ್ಚಲಾಯಿತು. ಆಗ ನಮ್ಮ ಶಾಲಾ ಶಿಕ್ಷಕರು ಆನ್‌ಲೈನ್‌ ಮೂಲಕ ತರಗತಿಗಳನ್ನು ನಡೆಸಲು ತೀರ್ಮಾನಿಸಿದರು. ಆದರೆ 2ಜಿ ನೆಟ್‌ವರ್ಕ್‌ ಕಾರಣಕ್ಕೆ ಅದು ಸಾಧ್ಯವಾಗಿಲ್ಲ. ಹಾಗಾಗಿ ದಯವಿಟ್ಟು ನಮಗೆ 4ಜಿ ನೆಟ್‌‌ವರ್ಕ್‌ ಅನ್ನು ವಾಪಸ್ ಕೊಡಿ. ನನಗೆ ಕಲಿಕೆಯನ್ನು ಕಳೆದುಕೊಳ್ಳಲು ಇಷ್ಟವಿಲ್ಲ.

ಇಂತಿ

ಪಿ.ಸಿ.ಎಚ್‌.ಎಸ್‌.ಎಸ್‌ ಶಾಲಾ ವಿದ್ಯಾರ್ಥಿ

5ನೇ ತರಗತಿ.

ಈ ಬಾಲಕನ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಒಬ್ಬ ವಿದ್ಯಾರ್ಥಿಯು ತನ್ನ ಕಳವಳವನ್ನು ವ್ಯಕ್ತಪಡಿಸಿ, ಕೆಲವು ಪ್ರಶ್ನೆಗಳನ್ನು ಕೇಳಿದ ಪತ್ರವು ನಮ್ಮೆಲ್ಲ ಭಾರತೀಯರನ್ನು ಯೋಚಿಸುವಂತೆ ಮಾಡಿದೆ. ಇಂದು ದೇಶವು ಈ ಕಷ್ಟಕರ ಪರಿಸ್ಥಿತಿಯನ್ನು ಎದುರಿಸುತ್ತಿರುವಾಗ, ಎಲ್ಲಾ ವಿದ್ಯಾರ್ಥಿಗಳು ಇಂಟರ್ನೆಟ್ ಸಹಾಯದಿಂದ ಅಧ್ಯಯನ ಮಾಡುತ್ತಿದ್ದಾರೆ. ಆದರೆ ಕೆಲವು ವಿದ್ಯಾರ್ಥಿಗಳು ತಮ್ಮ ಅಧ್ಯಯನವನ್ನು ಮುಂದುವರಿಸಲು ಅದೇ ಅವಕಾಶವನ್ನು ಪಡೆಯುತ್ತಿಲ್ಲ. ಏಕೆಂದರೆ ಸರ್ಕಾರವು ಅವರಲ್ಲಿ 4 ಜಿ ಸೌಲಭ್ಯವನ್ನು ರದ್ದುಗೊಳಿಸಿದೆ. ಜಮ್ಮು ಮತ್ತು ಕಾಶ್ಮೀರದ ಸಾವಿರಾರು ವಿದ್ಯಾರ್ಥಿಗಳಿಗೆ ಒಂದೇ ರೀತಿಯ ಶಿಕ್ಷಣದ ಅವಕಾಶ ಸಿಗುತ್ತಿಲ್ಲ ಎಂಬ ಕಾರಣದಿಂದ ತೊಂದರೆಗೀಡಾದ 5 ನೇ ತರಗತಿಯ ವಿದ್ಯಾರ್ಥಿಯು ಪ್ರಧಾನಿಯನ್ನು ಉದ್ದೇಶಿಸಿ ಪತ್ರ ಬರೆದಿದ್ದಾರೆ ಎಂದು ಯೂತ್‌ ಫಾರ್‌ ಸ್ವರಾಜ್‌ ಅಭಿಪ್ರಾಯಪಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...